Homeಮುಖಪುಟಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ಬೀಜೋತ್ಪಾದನೆಗಾಗಿ ಹತ್ತಿ ಕೃಷಿ ಮಾಡುವವರು, ತಮ್ಮ ಹೊಲಗಳಲ್ಲಿ ದುಡಿಯುವ ಕಾರ್ಮಿಕರಿಗೆ ಬಹಳ ಕಡಿಮೆ ಕೂಲಿ ನೀಡುತ್ತಾರೆ. ಈ ಹೊಲಗಳಲ್ಲಿ ಕೆಲಸ ಮಾಡುವ ಮಕ್ಕಳಿಗೆ ದಿನಕ್ಕೆ 150 ರೂಪಾಯಿ ಕೂಲಿ ನೀಡಲಾಗುತ್ತದೆ.

- Advertisement -
- Advertisement -

ಗುಜರಾತ್‌ನ ಬುಡಕಟ್ಟು ಪ್ರದೇಶಗಳಲ್ಲಿನ ಹತ್ತಿ ಬೀಜೋತ್ಪಾದನೆ ಕೇಂದ್ರಗಳಲ್ಲಿ ಬಾಲ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸ ಮುಂದುವರಿಸಿದ್ದಾರೆ ಎಂದು ಸೆಂಟರ್‌ ಫಾರ್ ಲೇಬರ್‌ ರಿಸರ್ಚ್‌ ಆ್ಯಂಡ್ ಆ್ಯಕ್ಷನ್ ಎಂಬ ಎನ್‌ಜಿಒ ವರದಿ ಬಿಡುಗಡೆ ಮಾಡಿದೆ.

ಅಹಮದಾಬಾದ್‌ ಮೂಲದ ಈ ಎನ್‌ಜಿಒ ಆದಿವಾಸಿ ಸರ್ವಾಂಗಿ ವಿಕಾಸ್ ಸಂಘದ ಜೊತೆ ಸೇರಿ ಬನಸ್‌ಕಂಠ ಜಿಲ್ಲೆಯ ದಂತಾ ತಾಲೂಕಿನಲ್ಲಿನ ಹೊಲಗಳ ಸಮೀಕ್ಷೆಯನ್ನು ಕೈಗೊಂಡಿದೆ.

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಬನಸ್‌ಕಂಠ ಜಿಲ್ಲೆಯ ದಂತಾ ಮತ್ತು ದೇವಧರ್ ತಾಲ್ಲೂಕುಗಳು ಮತ್ತು ನೆರೆಯ ರಾಜ್ಯವಾದ ರಾಜಸ್ಥಾನದ ಕೊಟಡಾದಲ್ಲಿ 17 ಬೀಜೋತ್ಪಾದನೆಗೆ ಸಂಬಂಧಿಸಿದ ಕೇಂದ್ರಗಳಿಗೆ ಭೇಟಿ ನೀಡಿದ್ದೇವೆ ಎಂದು ಎನ್‌ಜಿಒದ ಸುಧೀರ್ ಕಟಿಯಾರ್ ತಿಳಿಸಿದ್ದಾರೆ.

“ಹತ್ತಿ ಬೀಜಗಳ ಮಾರಾಟ ಮತ್ತು ಮಾರಾಟದಲ್ಲಿ ತೊಡಗಿರುವ ದೊಡ್ಡ ಕಾರ್ಪೊರೇಟ್ ಕಂಪನಿಗಳಿಗೆ ಹತ್ತಿ ಬೀಜಗಳನ್ನು ಉತ್ಪಾದಿಸುವ ಹೊಲಗಳಲ್ಲಿ, ಪರಾಗಸ್ಪರ್ಶ ಮಾಡಲು ಈ ಮಕ್ಕಳನ್ನು ನೇಮಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನರೇಗಾ: ವಲಸೆ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ?

‘ಬೀಜೋತ್ಪಾದನೆಗಾಗಿ ಹತ್ತಿ ಕೃಷಿ ಕೈಗೊಂಡವರು ತಮ್ಮ ಹೊಲಗಳಲ್ಲಿ ದುಡಿಯುವ ಕಾರ್ಮಿಕರಿಗೆ ಬಹಳ ಕಡಿಮೆ ಕೂಲಿ ನೀಡುತ್ತಾರೆ. ಈ ಹೊಲಗಳಲ್ಲಿ ಕೆಲಸ ಮಾಡುವ ಮಕ್ಕಳಿಗೆ ದಿನಕ್ಕೆ 150 ರೂಪಾಯಿ ಕೂಲಿ ನೀಡಲಾಗುತ್ತದೆ. ಇಷ್ಟು ಕೂಲಿಗೆ ಕೆಲಸ ಮಾಡಲು ದೊಡ್ಡವರು ಒಪ್ಪುವುದಿಲ್ಲ’ ಎಂದು ಆದಿವಾಸಿ ಸರ್ವಾಂಗಿ ವಿಕಾಸ್ ಸಂಘದ ದೀಪಕ್ ದಾಬಿ ಹೇಳಿದ್ದಾರೆ.

’ಗುಜರಾತ್‌ನಲ್ಲಿ ಹತ್ತಿ ಬೀಜೋತ್ಪಾದನೆ ಕೇಂದ್ರಗಳಲ್ಲಿ ಬಾಲ ಕಾರ್ಮಿಕರು ತೊಡಗಿಸಿಕೊಂಡಿರುವ ವಿಷಯ 2007 -08ರಲ್ಲಿ ಬೆಳಕಿಗೆ ಬಂದಿತ್ತು. ಅಂದಿನಿಂದ ಇದು ಮುಂದುವರೆದಿದೆ. ಮಕ್ಕಳ ವಲಸೆ ಮತ್ತು ಕಳ್ಳಸಾಗಣೆ ತೀವ್ರವಾಗಿ ಕಡಿಮೆಯಾಗಿದೆ. ಆದರೆ ಬೀಜ ಉತ್ಪಾದನೆಯು ಉತ್ತರ ಗುಜರಾತ್ ಮತ್ತು ದಕ್ಷಿಣ ರಾಜಸ್ಥಾನದ ಬುಡಕಟ್ಟು ಜಮೀನುಗಳಿಗೆ ಸ್ಥಳಾಂತರಗೊಂಡಿದೆ’ ಎಂದು ಕಟಿಯಾರ್ ತಿಳಿಸುತ್ತಾರೆ.

ಎನ್‌ಜಿಒ ಪ್ರಕಟಿಸಿರುವ ವರದಿಗೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಉಪ ಕಾರ್ಮಿಕ ಆಯುಕ್ತ ಎಂ.ಸಿ.ಕರಿಯಾ, ’ಗುಜರಾತ್‌ನಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಮೊಟಕುಗೊಳಿಸಲು ಗುಜರಾತ್ ಮತ್ತು ರಾಜಸ್ಥಾನ ಸರ್ಕಾರಗಳು ಈ ಹಿಂದೆ ಸಾಕಷ್ಟು ಕೆಲಸಗಳನ್ನು ಮಾಡಿವೆ. ಕೊರೊನಾ ಲಾಕ್‌ಡೌನ್ ತೆಗೆದು ಹಾಕಿದ ನಂತರ ಆಗಸ್ಟ್‌ನಿಂದ ನಾವು ಮತ್ತೆ ಪ್ರತಿ ಜಿಲ್ಲೆಯಲ್ಲೂ ದಾಳಿ ನಡೆಸುತ್ತಿದ್ದೇವೆ. ವಸ್ತುಸ್ಥಿತಿ ಅಧ್ಯಯನಕ್ಕಾಗಿ ಇಲಾಖೆಯ ಸಿಬ್ಬಂದಿ ಒಳಗೊಂಡ ತಂಡಗಳನ್ನು ಕಳುಹಿಸಲಾಗಿದೆ. ತಂಡಗಳು ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.


ಇದನ್ನೂ ಓದಿ: ಜಿಗ್ನೇಶ್ ಮೇವಾನಿ ಸಂಘಟನೆಯ ನೇತೃತ್ವದಲ್ಲಿ ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...