Homeಮುಖಪುಟಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ಬೀಜೋತ್ಪಾದನೆಗಾಗಿ ಹತ್ತಿ ಕೃಷಿ ಮಾಡುವವರು, ತಮ್ಮ ಹೊಲಗಳಲ್ಲಿ ದುಡಿಯುವ ಕಾರ್ಮಿಕರಿಗೆ ಬಹಳ ಕಡಿಮೆ ಕೂಲಿ ನೀಡುತ್ತಾರೆ. ಈ ಹೊಲಗಳಲ್ಲಿ ಕೆಲಸ ಮಾಡುವ ಮಕ್ಕಳಿಗೆ ದಿನಕ್ಕೆ 150 ರೂಪಾಯಿ ಕೂಲಿ ನೀಡಲಾಗುತ್ತದೆ.

- Advertisement -
- Advertisement -

ಗುಜರಾತ್‌ನ ಬುಡಕಟ್ಟು ಪ್ರದೇಶಗಳಲ್ಲಿನ ಹತ್ತಿ ಬೀಜೋತ್ಪಾದನೆ ಕೇಂದ್ರಗಳಲ್ಲಿ ಬಾಲ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸ ಮುಂದುವರಿಸಿದ್ದಾರೆ ಎಂದು ಸೆಂಟರ್‌ ಫಾರ್ ಲೇಬರ್‌ ರಿಸರ್ಚ್‌ ಆ್ಯಂಡ್ ಆ್ಯಕ್ಷನ್ ಎಂಬ ಎನ್‌ಜಿಒ ವರದಿ ಬಿಡುಗಡೆ ಮಾಡಿದೆ.

ಅಹಮದಾಬಾದ್‌ ಮೂಲದ ಈ ಎನ್‌ಜಿಒ ಆದಿವಾಸಿ ಸರ್ವಾಂಗಿ ವಿಕಾಸ್ ಸಂಘದ ಜೊತೆ ಸೇರಿ ಬನಸ್‌ಕಂಠ ಜಿಲ್ಲೆಯ ದಂತಾ ತಾಲೂಕಿನಲ್ಲಿನ ಹೊಲಗಳ ಸಮೀಕ್ಷೆಯನ್ನು ಕೈಗೊಂಡಿದೆ.

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಬನಸ್‌ಕಂಠ ಜಿಲ್ಲೆಯ ದಂತಾ ಮತ್ತು ದೇವಧರ್ ತಾಲ್ಲೂಕುಗಳು ಮತ್ತು ನೆರೆಯ ರಾಜ್ಯವಾದ ರಾಜಸ್ಥಾನದ ಕೊಟಡಾದಲ್ಲಿ 17 ಬೀಜೋತ್ಪಾದನೆಗೆ ಸಂಬಂಧಿಸಿದ ಕೇಂದ್ರಗಳಿಗೆ ಭೇಟಿ ನೀಡಿದ್ದೇವೆ ಎಂದು ಎನ್‌ಜಿಒದ ಸುಧೀರ್ ಕಟಿಯಾರ್ ತಿಳಿಸಿದ್ದಾರೆ.

“ಹತ್ತಿ ಬೀಜಗಳ ಮಾರಾಟ ಮತ್ತು ಮಾರಾಟದಲ್ಲಿ ತೊಡಗಿರುವ ದೊಡ್ಡ ಕಾರ್ಪೊರೇಟ್ ಕಂಪನಿಗಳಿಗೆ ಹತ್ತಿ ಬೀಜಗಳನ್ನು ಉತ್ಪಾದಿಸುವ ಹೊಲಗಳಲ್ಲಿ, ಪರಾಗಸ್ಪರ್ಶ ಮಾಡಲು ಈ ಮಕ್ಕಳನ್ನು ನೇಮಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನರೇಗಾ: ವಲಸೆ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ?

‘ಬೀಜೋತ್ಪಾದನೆಗಾಗಿ ಹತ್ತಿ ಕೃಷಿ ಕೈಗೊಂಡವರು ತಮ್ಮ ಹೊಲಗಳಲ್ಲಿ ದುಡಿಯುವ ಕಾರ್ಮಿಕರಿಗೆ ಬಹಳ ಕಡಿಮೆ ಕೂಲಿ ನೀಡುತ್ತಾರೆ. ಈ ಹೊಲಗಳಲ್ಲಿ ಕೆಲಸ ಮಾಡುವ ಮಕ್ಕಳಿಗೆ ದಿನಕ್ಕೆ 150 ರೂಪಾಯಿ ಕೂಲಿ ನೀಡಲಾಗುತ್ತದೆ. ಇಷ್ಟು ಕೂಲಿಗೆ ಕೆಲಸ ಮಾಡಲು ದೊಡ್ಡವರು ಒಪ್ಪುವುದಿಲ್ಲ’ ಎಂದು ಆದಿವಾಸಿ ಸರ್ವಾಂಗಿ ವಿಕಾಸ್ ಸಂಘದ ದೀಪಕ್ ದಾಬಿ ಹೇಳಿದ್ದಾರೆ.

’ಗುಜರಾತ್‌ನಲ್ಲಿ ಹತ್ತಿ ಬೀಜೋತ್ಪಾದನೆ ಕೇಂದ್ರಗಳಲ್ಲಿ ಬಾಲ ಕಾರ್ಮಿಕರು ತೊಡಗಿಸಿಕೊಂಡಿರುವ ವಿಷಯ 2007 -08ರಲ್ಲಿ ಬೆಳಕಿಗೆ ಬಂದಿತ್ತು. ಅಂದಿನಿಂದ ಇದು ಮುಂದುವರೆದಿದೆ. ಮಕ್ಕಳ ವಲಸೆ ಮತ್ತು ಕಳ್ಳಸಾಗಣೆ ತೀವ್ರವಾಗಿ ಕಡಿಮೆಯಾಗಿದೆ. ಆದರೆ ಬೀಜ ಉತ್ಪಾದನೆಯು ಉತ್ತರ ಗುಜರಾತ್ ಮತ್ತು ದಕ್ಷಿಣ ರಾಜಸ್ಥಾನದ ಬುಡಕಟ್ಟು ಜಮೀನುಗಳಿಗೆ ಸ್ಥಳಾಂತರಗೊಂಡಿದೆ’ ಎಂದು ಕಟಿಯಾರ್ ತಿಳಿಸುತ್ತಾರೆ.

ಎನ್‌ಜಿಒ ಪ್ರಕಟಿಸಿರುವ ವರದಿಗೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಉಪ ಕಾರ್ಮಿಕ ಆಯುಕ್ತ ಎಂ.ಸಿ.ಕರಿಯಾ, ’ಗುಜರಾತ್‌ನಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಮೊಟಕುಗೊಳಿಸಲು ಗುಜರಾತ್ ಮತ್ತು ರಾಜಸ್ಥಾನ ಸರ್ಕಾರಗಳು ಈ ಹಿಂದೆ ಸಾಕಷ್ಟು ಕೆಲಸಗಳನ್ನು ಮಾಡಿವೆ. ಕೊರೊನಾ ಲಾಕ್‌ಡೌನ್ ತೆಗೆದು ಹಾಕಿದ ನಂತರ ಆಗಸ್ಟ್‌ನಿಂದ ನಾವು ಮತ್ತೆ ಪ್ರತಿ ಜಿಲ್ಲೆಯಲ್ಲೂ ದಾಳಿ ನಡೆಸುತ್ತಿದ್ದೇವೆ. ವಸ್ತುಸ್ಥಿತಿ ಅಧ್ಯಯನಕ್ಕಾಗಿ ಇಲಾಖೆಯ ಸಿಬ್ಬಂದಿ ಒಳಗೊಂಡ ತಂಡಗಳನ್ನು ಕಳುಹಿಸಲಾಗಿದೆ. ತಂಡಗಳು ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.


ಇದನ್ನೂ ಓದಿ: ಜಿಗ್ನೇಶ್ ಮೇವಾನಿ ಸಂಘಟನೆಯ ನೇತೃತ್ವದಲ್ಲಿ ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...