HomeಮುಖಪುಟMSP ಉಲ್ಲಂಘಿಸಿದರೆ ಜೈಲು; ಹೊಸ ಪರ್ಯಾಯ ಮಸೂದೆ ಅಂಗೀಕರಿಸಿದ ಪಂಜಾಬ್!

MSP ಉಲ್ಲಂಘಿಸಿದರೆ ಜೈಲು; ಹೊಸ ಪರ್ಯಾಯ ಮಸೂದೆ ಅಂಗೀಕರಿಸಿದ ಪಂಜಾಬ್!

ಹೊಸ ಮಸೂದೆಯ ಪ್ರಕಾರ, ಕನಿಷ್ಠ ಬೆಂಬಲ ಬೆಲೆಯನ್ನು (MSP) ಉಲ್ಲಂಘಿಸಿ, ಅದಕ್ಕಿಂತಲೂ ಕಡಿಮೆ ಬೆಲೆಗೆ ಗೋಧಿ ಅಥವಾ ಭತ್ತವನ್ನು ಖರೀದಿಸುವ/ಮಾರಾಟಮಾಡುವ ಯಾವುದೇ ವ್ಯಕ್ತಿಯ ಮೇಲೆ ದಂಡ ಮತ್ತು 3 ವರ್ಷ ಮೀರದಂತೆ ಶಿಕ್ಷೆ ವಿಧಿಸಬಹುದು.

- Advertisement -
- Advertisement -

ಸಂಸತ್ತಿನಲ್ಲಿ ವಿರೋಧದ ಮಧ್ಯೆ ಕೇಂದ್ರ ಕಳೆದ ತಿಂಗಳು ಅಂಗೀಕರಿಸಿದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಔಪಚಾರಿಕವಾಗಿ ತಿರಸ್ಕರಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಂಜಾಬ್ ಪಾತ್ರವಾಗಿದೆ. ಇಂದು ರಾಜ್ಯದ ಅಸೆಂಬ್ಲಿಯಲ್ಲಿ, ಕೇಂದ್ರದ ಕಾನೂನುಗಳ ವಿರುದ್ಧದ 3 ಪರ್ಯಾಯ ಮಸೂದೆಯನ್ನು ರಾಜ್ಯವು ಅಂಗೀಕರಿಸಿತು.

ಕೇಂದ್ರ ಸರ್ಕಾರದ ಮಸೂದೆಗಳಿಗೆ ವಿರುದ್ಧವಾಗಿ ಪಂಜಾಬ್ ಸರ್ಕಾರ 3 ಪರ್ಯಾಯ ಮಸೂದೆಗಳನ್ನು ಪರಿಚಯಿಸಿದ್ದು, ಕನಿಷ್ಠ ಬೆಂಬಲ ಬೆಲೆಯನ್ನು (MSP) ಉಲ್ಲಂಘಿಸಿ, ಅದಕ್ಕಿಂತಲೂ ಕಡಿಮೆ ಬೆಲೆಗೆ ಗೋಧಿ ಅಥವಾ ಭತ್ತವನ್ನು ಖರೀದಿಸುವ/ಮಾರಾಟಮಾಡುವ ಯಾವುದೇ ವ್ಯಕ್ತಿಯ ಮೇಲೆ ದಂಡ ಮತ್ತು 3 ವರ್ಷ ಮೀರದಂತೆ ಶಿಕ್ಷೆ ವಿಧಿಸಲು ಇವುಗಳಲ್ಲಿ ಒಂದು ಮಸೂದೆ ಅವಕಾಶ ನಿಡುತ್ತದೆ.

ದೇಶದಾದ್ಯಂತ ಕೇಂದ್ರದ ಕಾನೂನುಗಳ ವಿಮರ್ಶಕರು ಉಲ್ಲೇಖಿಸಿದ್ದ ಪ್ರಮುಖ ಅಂಶಗಳಲ್ಲಿ MSPಯನ್ನು ತೆಗೆದುಹಾಗಲಾಗುತ್ತದೆ ಎಂಬುದು ಒಂದಾಗಿತ್ತು. ಬರಗಾಲ ಮತ್ತು ಬೆಳೆ ವೈಫಲ್ಯದಂತಹ ಕಠಿಣ ಕಾಲದಲ್ಲಿ ಸಾಲದ ಮೂಲವಾಗಿರುವ ಖಾತರಿಪಡಿಸಿದ ಮಾರಾಟದ ಬೆಲೆಗಳು ಮತ್ತು ಅದನ್ನು ತೆಗೆದುಹಾಕುವುದರಿಂದ ಸಣ್ಣ ಮತ್ತು ಅಲ್ಪ ರೈತರ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಸರ್ಕಾರಿ ನಿಯಂತ್ರಿತ ಸಗಟು ಮಾರುಕಟ್ಟೆಯಲ್ಲಿ ಮಧ್ಯವರ್ತಿಗಿಂತ ಹೆಚ್ಚಾಗಿ ಸಾಂಸ್ಥಿಕ ಖರೀದಿದಾರರಿಗೆ ಮಾರಾಟ ಮಾಡಲು ರೈತರಿಗೆ ಅವಕಾಶ ನೀಡುವ ಕೇಂದ್ರದ ಕಾನೂನುಗಳಿಂದ ಖಾಸಗಿ ವ್ಯಕ್ತಿಗಳ ಪ್ರವೇಶವು ರೈತರ ಬೆಲೆ ನಿರ್ಣಯ ಶಕ್ತಿಯನ್ನು ದುರ್ಬಲಗೊಳಿಸುತ್ತದೆ ಎಂದು ಕೇಂದ್ರದ ಕಾನೂನುಗಳ ವಿಮರ್ಶಕರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಇದು ಮಹತ್ವದ ಮಸೂದೆಯಾಗಿದೆ.

ಇದನ್ನೂ ಓದಿ: 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ: ಖಾಸಗೀ ಶಾಲಾ ಶಿಕ್ಷಕನ ಬಂಧನ!

ಕೇಂದ್ರದ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗಳ ಕೇಂದ್ರಬಿಂದುವಾಗಿ ಪಂಜಾಬ್ ಹೊರಹೊಮ್ಮಿದ್ದು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೃಷಿ ಕಾನೂನುಗಳ ವಿರುದ್ಧ ರಾಜ್ಯದಲ್ಲಿ ಪ್ರಮುಖ ಟ್ರಾಕ್ಟರ್ ರ್ಯಾಲಿಗಳನ್ನು ನಡೆಸಿದ್ದರು.

ಕಳೆದ ತಿಂಗಳು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಕೇಂದ್ರದ ಈ ಕಾನೂನುಗಳನ್ನು ಜಾರಿ ಮಾಡಬಾರದು ಎಂದು ಹೇಳಿದ್ದರು.

ಇಂದು ಪಂಜಾಬ್ ವಿಧಾನಸಭೆಯಲ್ಲಿ ಅಂಗೀಕರಿಸಿದ ಮೂರು ಪರ್ಯಾಯ-ಮಸೂದೆಗಳು ಈಗ ಕಾನೂನು ಆಗುವ ಮೊದಲು ರಾಜ್ಯಪಾಲ ವಿ.ಪಿ.ಸಿಂಗ್ ಬದ್ನೋರ್ ಅವರ ಒಪ್ಪಿಗೆಯನ್ನು ಪಡೆಯುವ ಅಗತ್ಯವಿದೆ.

ಇದನ್ನೂ ಓದಿ: ಬಸನಗೌಡ ಪಾಟೀಲ್ ಹೇಳಿಕೆ ಬಿಜೆಪಿ ಸರ್ಕಾರದ ಬಣ್ಣ ಬಯಲು ಮಾಡಿದೆ: ಡಿ.ಕೆ ಶಿವಕುಮಾರ್

MSPಯನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಪದೇ ಪದೇ ಭರವಸೆ ನೀಡಿದ್ದಾರೆ. ಆದರೆ ಈ ಮೌಖಿಕ ಆಶ್ವಾಸನೆಗಳು ರೈತರ ಕಳವಳವನ್ನು ಕಡಿಮೆ ಮಾಡಿಲ್ಲ.

ಇಂದು ಪಂಜಾಬ್ ಅಸೆಂಬ್ಲಿಯಿಂದ ಅಂಗೀಕಾರವಾದ ಮೂರು ಮಸೂದೆಗಳು ಇಂತಿವೆ;

  1. ರೈತರ ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆಯ ವಿಶೇಷ ನಿಬಂಧನೆಗಳು (ಪ್ರಚಾರ ಮತ್ತು ಸೌಲಭ್ಯ) ಮತ್ತು ಪಂಜಾಬ್ ತಿದ್ದುಪಡಿ ಮಸೂದೆ 2020.
  2. ಅಗತ್ಯ ಸರಕುಗಳು (ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ) ಮಸೂದೆ 2020, ಮತ್ತು
  3. ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ರೈತ ಒಪ್ಪಂದ (ಸಬಲೀಕರಣ ಮತ್ತು ಸಂರಕ್ಷಣೆ) ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ ಮಸೂದೆ 2020.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...