Homeಕರ್ನಾಟಕಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ಕೊರೊನಾ ಪರಿಹಾರದ ರೂ.20 ಲಕ್ಷ ಕೋಟಿ ಪ್ಯಾಕೇಜ್ ಏನಾಯಿತು? ಯಾರಿಗೆ ಎಷ್ಟು ತಲುಪಿದೆ? ಪಿ.ಎಂ. ಕೇರ್ಸ್ ನಿಧಿಗೆ ಬಂದ ದುಡ್ಡೆಷ್ಟು? ಖರ್ಚಿನ ವಿವರಗಳೇನು?

- Advertisement -
- Advertisement -

ಜನತೆಗೆ ಕರ್ತವ್ಯಪಾಲನೆಯ ಪಾಠ ಮಾಡುವ ಮೊದಲು ಪ್ರಧಾನಿ ನರೇಂದ್ರ ಮೋದಿಯವರು ತನ್ನ ಕರ್ತವ್ಯಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ಕೊರೊನಾ ಸೋಂಕಿನ ನಿಯಂತ್ರಣ ಮತ್ತು ಅದರಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ಜನತೆಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಏನು ಮಾಡಿದೆ ಮತ್ತು ಮುಂದಿನ ದಿನಗಳಲ್ಲಿ ಏನು ಮಾಡಲಿದೆ ಎನ್ನುವುದನ್ನು ಮೋದಿಯವರು ಇಂದಿನ ತಮ್ಮ ಭಾಷಣದಲ್ಲಿ ದೇಶದ ಜನತೆಗೆ ತಿಳಿಸಬೇಕಾಗಿತ್ತು” ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇಶದ ಜನತೆಗೆ ಬುದ್ದಿವಾದ ಹೇಳುವ ಮೂಲಕ ಪ್ರಧಾನಿಯವರು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ಹತಾಶ ಪ್ರಯತ್ನವನ್ನಷ್ಟೇ ಮಾಡಿದ್ದಾರೆ. ಕೊರೊನಾ ಸೋಂಕು ಉಲ್ಬಣಕ್ಕೆ ಜನರ ನಿರ್ಲಕ್ಷಕ್ಕಿಂತಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆಗೇಡಿತನ ಕಾರಣ ಎನ್ನುವುದನ್ನು ಪ್ರಧಾನಿಯವರು ಒಪ್ಪಿಕೊಂಡು ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕಾಗಿತ್ತು ಎಂದು ಸಿದ್ದು ಹೇಳಿದ್ದಾರೆ.

ಜಾಗಟೆ ಬಾರಿಸಿ, ದೀಪ ಹಚ್ಚಿ ಕೊರೊನಾ ಎದುರಿಸಲು ಕರೆನೀಡಿದ ಪ್ರಧಾನ ಮಂತ್ರಿಯವರ ಮೂಢತನದ ಭಾಷಣಗಳೇ ಕೊರೊನಾ ಸೋಂಕಿನ ಬಗ್ಗೆ ಜನರ ನಿರ್ಲಕ್ಷಕ್ಕೆ ಮುಖ್ಯ ಕಾರಣ. ರೋಗವನ್ನು ವೈಜ್ಞಾನಿಕವಾಗಿ ಎದುರಿಸಲು ಕರೆನೀಡಬೇಕಾದ ಪ್ರಧಾನಿ, ಟಿವಿ ಜ್ಯೋತಿಷಿಗಳ ರೀತಿಯಲ್ಲಿ ಪ್ರವಚನ ನೀಡಿದರೆ ಜನ ಮೂಢಮತಿಗಳಾಗದೆ ಇನ್ನೇನು ಆಗಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ದೇಶದ ಜನತೆಗೆ ಕರ್ತವ್ಯಪಾಲನೆಯ ಪ್ರವಚನ ನೀಡಿದ ಪ್ರಧಾನಿಗಳು ಅದರ ಜೊತೆಗೆ ಕೊರೊನಾ ಪರಿಹಾರದ ರೂ.20 ಲಕ್ಷ ಕೋಟಿ ಪ್ಯಾಕೇಜ್ ಏನಾಯಿತು? ಯಾರಿಗೆ ಎಷ್ಟು ತಲುಪಿದೆ? ಪಿ.ಎಂ. ಕೇರ್ಸ್ ನಿಧಿಗೆ ಬಂದ ದುಡ್ಡೆಷ್ಟು? ಕೊರೊನಾ ನಿಯಂತ್ರಣ ಮತ್ತು ಪರಿಹಾರಕ್ಕಾಗಿ ಆ ನಿಧಿಯಿಂದ ಬಳಕೆಯಾದ ದುಡ್ಡಿನ ಮೊತ್ತವೆಷ್ಟು? ಎಂಬುದನ್ನೂ ತಿಳಿಸಬೇಕಿತ್ತು ಎಂದಿದ್ದಾರೆ.

ಕೊರೊನಾ ಸೋಂಕು ಪ್ರಾರಂಭಗೊಂಡಾಗ ಪ್ರಧಾನಿಯವರು ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಜೂನ್ ನಲ್ಲಿ ಪ್ರಕಟಿಸಿದ್ದರು. ಅದು ಎಷ್ಟು ಜನರಿಗೆ ತಲುಪಿದೆ? ರಾಜ್ಯದ ಬಿಜೆಪಿ ಸರ್ಕಾರ ಅನ್ನಭಾಗ್ಯದಲ್ಲಿ ನೀಡಲಾಗುತ್ತಿದ್ದ ಅಕ್ಕಿಯನ್ನು 7 ರಿಂದ 5 ಕಿಲೋಗೆ ಇಳಿಸಿದೆ, ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

ಮಿತವ್ಯಯ ಪಾಲನೆ ಮಾಡಿ ಲಭ್ಯ ಇರುವ ಸಂಪನ್ಮೂಲವನ್ನು ಕೊರೊನಾ ನಿಯಂತ್ರಣಕ್ಕಾಗಿ ಬಳಸಬೇಕಾದ ರಾಜ್ಯ ಬಿಜೆಪಿ ಸರ್ಕಾರ ಕೊರೊನಾ ಕಾಯಿಲೆಯ ಪರಿಹಾರದ ನೆಪದಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ಇದೇನಾದರೂ ಪ್ರಧಾನಿ ಮೋದಿಯವರ ಗಮನಕ್ಕೆ ಬಂದಿದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಲಾಕ್‌ಡೌನ್‌ ಮುಗಿದಿದೆ, ಆದರೆ ಕೊರೊನಾ ಮುಗಿದಿಲ್ಲ: ಪ್ರಧಾನಿ ಮೋದಿ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...