Homeಮುಖಪುಟಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ಒಂದು ಹಂತದಲ್ಲಿ ಲೈಕ್‌ಗಳ ಸಂಖ್ಯೆ 2.8 ಸಾವಿರ ಇದ್ದರೆ ಡಿಸ್‌ಲೈಕ್‌ಗಳ ಸಂಖ್ಯೆ 4.5 ಸಾವಿರಕ್ಕೆರಿತ್ತು. ಇದರಿಂದ ಮುಖಭಂಗಕ್ಕೊಳಗಾದ ಬಿಜೆಪಿ ಪಕ್ಷವು ಕೂಡಲೇ ಲೈಕ್ ಮತ್ತು ಡಿಸ್‌ಲೈಕ್‌ಗಳ ಸಂಖ್ಯೆ ವೀಕ್ಷಕರಿಗೆ ಕಾಣದಂತೆ ತಡೆಹಿಡಿಯಿತು.

- Advertisement -
- Advertisement -

ಇಂದು ಪ್ರಧಾನಿ ದೇಶವನ್ನುದ್ದೇಶಿಸಿ ಮಾತನಾಡಿದರು. ಹಬ್ಬಗಳ ಹಿನ್ನೆಲೆಯಲ್ಲಿ ಕೊರೊನಾ ಕುರಿತು ಹೆಚ್ಚು ಜಾಗೃತರಾಗಬೇಕೆಂದು ಕರೆ ನೀಡಿದರು. ಆದರೆ ಮೋದಿಯವರ ಮಾತು ಮತ್ತು ನೀತಿಗಳ ಕುರಿತು ಸಿಟ್ಟಿಗೆದ್ದಿರುವ ಸಾಮಾಜಿಕ ಜಾಲತಾಣಿಗರು ಯೂಟ್ಯೂಬ್‌ನಲ್ಲಿ ಮೋದಿ ಭಾಷಣಕ್ಕೆ ಡಿಸ್‌ಲೈಕ್ ಒತ್ತುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಭಾರತೀಯ ಜನತಾ ಪಕ್ಷದ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿಯೂ ಸಹ ಮೋದಿಯವರ ಭಾಷಣ ಬಿತ್ತರವಾಯಿತು. ಮೋದಿಯವರ ಲೈವ್ ಭಾಷಣ ಆರಂಭವಾದೊಡನೆ ಡಿಸ್‌ಲೈಕ್‌ಗಳ ಸಂಖ್ಯೆ ಏರುತ್ತಲೇ ಹೋಯಿತು. ಒಂದು ಹಂತದಲ್ಲಿ ಲೈಕ್‌ಗಳ ಸಂಖ್ಯೆ 2.8 ಸಾವಿರ ಇದ್ದರೆ ಡಿಸ್‌ಲೈಕ್‌ಗಳ ಸಂಖ್ಯೆ 4.5 ಸಾವಿರಕ್ಕೆರಿತ್ತು. ಮಾತ್ರವಲ್ಲದೇ ಡಿಸ್‌ಲೈಕ್‌ಗಳು ಒಂದೇ ಸಮನೆ ಏರುವುದನ್ನು ತಡೆಯಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಯಿತು. ಇದರಿಂದ ಮುಖಭಂಗಕ್ಕೊಳಗಾದ ಬಿಜೆಪಿ ಪಕ್ಷವು ಕೂಡಲೇ ಲೈಕ್ ಮತ್ತು ಡಿಸ್‌ಲೈಕ್‌ಗಳ ಸಂಖ್ಯೆ ವೀಕ್ಷಕರಿಗೆ ಕಾಣದಂತೆ ತಡೆಹಿಡಿಯಿತು.


ಇದನ್ನೂ ಓದಿ: ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!


ಈಗಲೂ ಬಿಜೆಪಿ ಯೂಟ್ಯೂಬ್‌ ಚಾನೆಲ್‌ನಲ್ಲಿ ಮೋದಿ ವಿಡಿಯೋಗೆ ಲೈಕ್ ಮತ್ತು ಡಿಸ್‌ಲೈಕ್‌ಗಳ ಸಂಖ್ಯೆ ಕಾಣದಂತೆ ತಡೆಹಿಡಿಯಲಾಗಿದೆ. ಅಲ್ಲದೇ ಅದೇ ಭಾಷಣದ ಮೂರು ವಿಡಿಯೋ ತುಣುಕುಗಳನ್ನು ಬಿಜೆಪಿ ಅಪ್‌ಲೋಡ್‌ ಮಾಡಿದ್ದು ಅಲ್ಲಿಯೂ ಸಹ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳ ಸಂಖ್ಯೆ ಅಧಿಕವಾಗಿರುವುದನ್ನು ನೋಡಬಹುದಾಗಿದೆ.

ಇನ್ನು ನರೇಂದ್ರ ಮೋದಿಯವರ ಯೂಟ್ಯೂಬ್ ಚಾನೆಲ್‌ನಲ್ಲಿ ನೇರ ಪ್ರಸಾರದ ಭಾಷಣಕ್ಕೆ 6.6 ಸಾವಿರ ಜನ ಡಿಸ್‌ಲೈಕ್ ಮಾಡಿದ್ದಾರೆ. ಮಾಧ್ಯಮಗಳಿಗೆ ಮನವಿ ಸೇರಿ ಚಿಕ್ಕ ಚಿಕ್ಕ ವಿಡಿಯೋಗಳಲ್ಲಿ ಲೈಕ್‌ಗಿಂತ ಡಿಸ್‌ಲೈಕ್‌ಗಳ ಸಂಖ್ಯೆ ಹೆಚ್ಚಾಗಿದೆ.

ಒಟ್ಟಿನಲ್ಲಿ ಕಳೆದ ಮೂರು ತಿಂಗಳಿನಿಂದ ವಿಶೇ‍ಷವಾಗಿ ಯುವಜನರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಿರುಗಿಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ವಿದ್ಯಾರ್ಥಿಗಳ ವಿರೋಧದ ನಡುವೆಯೂ ನೀಟ್ ಮತ್ತು ಜೆಇಇ ಪರೀಕ್ಷೆ ನಡೆಸಿದ್ದು, ಉದ್ಯೋಗ ಕುಸಿತ ತಡೆಯಲು ವಿಫಲವಾಗಿದ್ದು ಇದಕ್ಕೆ ಕಾರಣ ಎನ್ನಲಾಗುತ್ತಿದೆ.

ಇನ್ನು ಇಂದಿನ ಮೋದಿ ಭಾಷಣಕ್ಕೆ ಹಲವರು ನೀರಸ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಹಬ್ಬಗಳ ಹಿನ್ನೆಲೆಯಲ್ಲಿ ಮಾಸ್ಕ್ ಹಾಕಿಕೊಳ್ಳಿ, ಸಾಮಾಜಿಕ ಅಂತರ ಕಾಪಾಡಿ ಎಂದು ಹೇಳಿಕೊಡಲು ಮೋದಿಯವರೇ ಬೇಕಾಗಿತ್ತೇ? ನಮಗದು ತಿಳಿದಿರಲಿಲ್ಲವೇ? ಅದರ ಬದಲು ಜಿಡಿಪಿ, ಉದ್ಯೋಗ ಕುಸಿತ, ಪ್ರವಾಹ ಪರಿಹಾರ, ಜಿಎಸ್‌ಟಿ ಪರಿಹಾರದ ಬಗ್ಗೆ ಮಾತನಾಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: #StudentsDislikePMModi: ವಿದ್ಯಾರ್ಥಿಗಳಿಂದ ಟ್ವಿಟರ್ ನಲ್ಲಿ ಅಭಿಯಾನ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...