Homeಮುಖಪುಟಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ಒಂದು ಹಂತದಲ್ಲಿ ಲೈಕ್‌ಗಳ ಸಂಖ್ಯೆ 2.8 ಸಾವಿರ ಇದ್ದರೆ ಡಿಸ್‌ಲೈಕ್‌ಗಳ ಸಂಖ್ಯೆ 4.5 ಸಾವಿರಕ್ಕೆರಿತ್ತು. ಇದರಿಂದ ಮುಖಭಂಗಕ್ಕೊಳಗಾದ ಬಿಜೆಪಿ ಪಕ್ಷವು ಕೂಡಲೇ ಲೈಕ್ ಮತ್ತು ಡಿಸ್‌ಲೈಕ್‌ಗಳ ಸಂಖ್ಯೆ ವೀಕ್ಷಕರಿಗೆ ಕಾಣದಂತೆ ತಡೆಹಿಡಿಯಿತು.

- Advertisement -
- Advertisement -

ಇಂದು ಪ್ರಧಾನಿ ದೇಶವನ್ನುದ್ದೇಶಿಸಿ ಮಾತನಾಡಿದರು. ಹಬ್ಬಗಳ ಹಿನ್ನೆಲೆಯಲ್ಲಿ ಕೊರೊನಾ ಕುರಿತು ಹೆಚ್ಚು ಜಾಗೃತರಾಗಬೇಕೆಂದು ಕರೆ ನೀಡಿದರು. ಆದರೆ ಮೋದಿಯವರ ಮಾತು ಮತ್ತು ನೀತಿಗಳ ಕುರಿತು ಸಿಟ್ಟಿಗೆದ್ದಿರುವ ಸಾಮಾಜಿಕ ಜಾಲತಾಣಿಗರು ಯೂಟ್ಯೂಬ್‌ನಲ್ಲಿ ಮೋದಿ ಭಾಷಣಕ್ಕೆ ಡಿಸ್‌ಲೈಕ್ ಒತ್ತುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಭಾರತೀಯ ಜನತಾ ಪಕ್ಷದ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿಯೂ ಸಹ ಮೋದಿಯವರ ಭಾಷಣ ಬಿತ್ತರವಾಯಿತು. ಮೋದಿಯವರ ಲೈವ್ ಭಾಷಣ ಆರಂಭವಾದೊಡನೆ ಡಿಸ್‌ಲೈಕ್‌ಗಳ ಸಂಖ್ಯೆ ಏರುತ್ತಲೇ ಹೋಯಿತು. ಒಂದು ಹಂತದಲ್ಲಿ ಲೈಕ್‌ಗಳ ಸಂಖ್ಯೆ 2.8 ಸಾವಿರ ಇದ್ದರೆ ಡಿಸ್‌ಲೈಕ್‌ಗಳ ಸಂಖ್ಯೆ 4.5 ಸಾವಿರಕ್ಕೆರಿತ್ತು. ಮಾತ್ರವಲ್ಲದೇ ಡಿಸ್‌ಲೈಕ್‌ಗಳು ಒಂದೇ ಸಮನೆ ಏರುವುದನ್ನು ತಡೆಯಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಯಿತು. ಇದರಿಂದ ಮುಖಭಂಗಕ್ಕೊಳಗಾದ ಬಿಜೆಪಿ ಪಕ್ಷವು ಕೂಡಲೇ ಲೈಕ್ ಮತ್ತು ಡಿಸ್‌ಲೈಕ್‌ಗಳ ಸಂಖ್ಯೆ ವೀಕ್ಷಕರಿಗೆ ಕಾಣದಂತೆ ತಡೆಹಿಡಿಯಿತು.


ಇದನ್ನೂ ಓದಿ: ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!


ಈಗಲೂ ಬಿಜೆಪಿ ಯೂಟ್ಯೂಬ್‌ ಚಾನೆಲ್‌ನಲ್ಲಿ ಮೋದಿ ವಿಡಿಯೋಗೆ ಲೈಕ್ ಮತ್ತು ಡಿಸ್‌ಲೈಕ್‌ಗಳ ಸಂಖ್ಯೆ ಕಾಣದಂತೆ ತಡೆಹಿಡಿಯಲಾಗಿದೆ. ಅಲ್ಲದೇ ಅದೇ ಭಾಷಣದ ಮೂರು ವಿಡಿಯೋ ತುಣುಕುಗಳನ್ನು ಬಿಜೆಪಿ ಅಪ್‌ಲೋಡ್‌ ಮಾಡಿದ್ದು ಅಲ್ಲಿಯೂ ಸಹ ಲೈಕ್‌ಗಳಿಗಿಂತ ಡಿಸ್‌ಲೈಕ್‌ಗಳ ಸಂಖ್ಯೆ ಅಧಿಕವಾಗಿರುವುದನ್ನು ನೋಡಬಹುದಾಗಿದೆ.

ಇನ್ನು ನರೇಂದ್ರ ಮೋದಿಯವರ ಯೂಟ್ಯೂಬ್ ಚಾನೆಲ್‌ನಲ್ಲಿ ನೇರ ಪ್ರಸಾರದ ಭಾಷಣಕ್ಕೆ 6.6 ಸಾವಿರ ಜನ ಡಿಸ್‌ಲೈಕ್ ಮಾಡಿದ್ದಾರೆ. ಮಾಧ್ಯಮಗಳಿಗೆ ಮನವಿ ಸೇರಿ ಚಿಕ್ಕ ಚಿಕ್ಕ ವಿಡಿಯೋಗಳಲ್ಲಿ ಲೈಕ್‌ಗಿಂತ ಡಿಸ್‌ಲೈಕ್‌ಗಳ ಸಂಖ್ಯೆ ಹೆಚ್ಚಾಗಿದೆ.

ಒಟ್ಟಿನಲ್ಲಿ ಕಳೆದ ಮೂರು ತಿಂಗಳಿನಿಂದ ವಿಶೇ‍ಷವಾಗಿ ಯುವಜನರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಿರುಗಿಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ವಿದ್ಯಾರ್ಥಿಗಳ ವಿರೋಧದ ನಡುವೆಯೂ ನೀಟ್ ಮತ್ತು ಜೆಇಇ ಪರೀಕ್ಷೆ ನಡೆಸಿದ್ದು, ಉದ್ಯೋಗ ಕುಸಿತ ತಡೆಯಲು ವಿಫಲವಾಗಿದ್ದು ಇದಕ್ಕೆ ಕಾರಣ ಎನ್ನಲಾಗುತ್ತಿದೆ.

ಇನ್ನು ಇಂದಿನ ಮೋದಿ ಭಾಷಣಕ್ಕೆ ಹಲವರು ನೀರಸ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಹಬ್ಬಗಳ ಹಿನ್ನೆಲೆಯಲ್ಲಿ ಮಾಸ್ಕ್ ಹಾಕಿಕೊಳ್ಳಿ, ಸಾಮಾಜಿಕ ಅಂತರ ಕಾಪಾಡಿ ಎಂದು ಹೇಳಿಕೊಡಲು ಮೋದಿಯವರೇ ಬೇಕಾಗಿತ್ತೇ? ನಮಗದು ತಿಳಿದಿರಲಿಲ್ಲವೇ? ಅದರ ಬದಲು ಜಿಡಿಪಿ, ಉದ್ಯೋಗ ಕುಸಿತ, ಪ್ರವಾಹ ಪರಿಹಾರ, ಜಿಎಸ್‌ಟಿ ಪರಿಹಾರದ ಬಗ್ಗೆ ಮಾತನಾಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: #StudentsDislikePMModi: ವಿದ್ಯಾರ್ಥಿಗಳಿಂದ ಟ್ವಿಟರ್ ನಲ್ಲಿ ಅಭಿಯಾನ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...