Homeಮುಖಪುಟಹತ್ರಾಸ್: ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿತ್ತು-ಸತ್ಯಶೋಧನಾ ಸಮಿತಿ ವರದಿ

ಹತ್ರಾಸ್: ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿತ್ತು-ಸತ್ಯಶೋಧನಾ ಸಮಿತಿ ವರದಿ

ಯುವತಿಯ ಕುಟುಂಬಕ್ಕೆ ಕಿರುಕುಳ ನೀಡಿರುವ ಉತ್ತರಪ್ರದೇಶ ಪೊಲೀಸರು ಅನುಮಾನಾಸ್ಪದವಾಗಿ ಮತ್ತು ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌‌ನಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ದಲಿತ ಯುವತಿಯ ಕುಟುಂಬಕ್ಕೆ ಕಿರುಕುಳ ನೀಡಿರುವ ಉತ್ತರಪ್ರದೇಶ ಪೊಲೀಸರು ಅನುಮಾನಾಸ್ಪದವಾಗಿ ಮತ್ತು ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಸತ್ಯ ಶೋಧನಾ ಸಮಿತಿ ಆರೋಪಿಸಿದೆ.

’ಫ್ಯಾಕ್ಟ್ ಫೈಂಡಿಂಗ್ ರಿಪೋರ್ಟ್ ಆನ್ ಬ್ರೂಟಲ್ ಗ್ಯಾಂಗ್ ರೇಪ್, ಅಸಾಲ್ಟ್ ಆ್ಯಂಡ್ ಮರ್ಡರ್ ಆಫ್ ಎ ದಲಿತ್ ಗರ್ಲ್ ಬೈ ಅಪ್ಪರ್ ಕಾಸ್ಟ್ ಠಾಕೂರ್ ಮೆನ್ ಇನ್ ಬುಲ್‌ಗರ್ಹಿ ವಿಲೇಜ್, ಹತ್ರಾಸ್’ ಎಂಬ ಹೆಸರಿನ ಸಾಮಾಜಿಕ ಹೋರಾಟಗಾರರು ನಡೆಸಿರುವ ಸತ್ಯಶೋಧನಾ ವರದಿಯಲ್ಲಿ, ತಡವಾಗಿ ಪರೀಕ್ಷೆ ನಡೆಸುವುದು ಅತ್ಯಾಚಾರವನ್ನು ಸಾಬೀತುಪಡಿಸಲು ಅಸಾಧ್ಯವಾಗಿರುವುದರಿಂದ, ದೌರ್ಜನ್ಯದ ವೈದ್ಯಕೀಯ ತನಿಖೆ ನಡೆಸಲು ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ ಮಾಡಲಾಗಿದೆ. ಶಾಶ್ವತವಾಗಿ ಪುರಾವೆಯನ್ನು ನಾಶಮಾಡುವುದು ಇದರ ಉದ್ದೇಶ ಎಂದು ಸಮಿತಿ ಹೇಳಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ ತನಿಖೆ: CBI ತಂಡದಲ್ಲಿ SC/ST/OBC ಸಮುದಾಯದವರಿಲ್ಲ- ಚಂದ್ರಶೇಖರ್ ಆಜಾದ್

ಅಲ್ಲದೆ ದೌರ್ಜನ್ಯಕ್ಕೊಳಗಾದ ಯುವತಿಯ ತಂದೆಗೆ ತನಿಖೆ ಹಾಗೂ ಚಿಕಿತ್ಸೆಯಿಂದ ತಾನು ಮತ್ತು ಕುಟುಂಬ ಸಂತೃಪ್ತರಾಗಿದ್ದೇವೆಂದು ಎಲ್ಲರಿಗೂ ತಿಳಿಸುವಂತೆ ಜಿಲ್ಲಾಡಳಿತ ಒತ್ತಡ ಹೇರಿತ್ತು ಎಂದು ಸಮಿತಿ ಹೇಳಿದೆ. ಇದು ಸತ್ಯವನ್ನು ಮುಚ್ಚಿಡಲು ಹಾಗೂ ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರಕಾರ ನಡೆಸಿದ ಸಿದ್ಧತೆ ಎಂಬುದನ್ನು ತಿಳಿಸುತ್ತದೆ ಎಂದು ವರದಿ ಹೇಳಿದೆ.

ಸತ್ಯಶೋಧನಾ ಸಮಿತಿಯಲ್ಲಿ, ‘ನರ್ಮದಾ ಬಚಾವೊ’ ಆಂದೋಲನದ ಮೇಧಾ ಪಾಟ್ಕರ್, ಮ್ಯಾಗ್ಸಸೆ ಪ್ರಶಸ್ತಿ ಪುರಷ್ಕೃತ ಸಂದೀಪ್ ಪಾಂಡೆ, ಆರ್‌ಟಿಐ ಕಾರ್ಯಕರ್ತೆ ಹಾಗೂ ಲೇಖಕಿ ಮಣಿಮಾಲಾ, ‘ದಿಲ್ಲಿ ಏಕತಾ’ ಗುಂಪಿನ ಇಬ್ಬರು ಸದಸ್ಯರು ಸೇರಿದಂತೆ 9 ಸದಸ್ಯರಿದ್ದು ಸಂತ್ರಸ್ಥ ಯುವತಿಯ ಮನೆಗೆ ಅಕ್ಟೋಬರ್ 9 ರಂದು ಭೇಟಿ ನೀಡಿತ್ತು.

ವರದಿಯಲ್ಲಿ, ಪ್ರಜ್ಞೆ ಮರುಕಳಿಸುವವರೆಗೆ ಯುವತಿಯನ್ನು ಬೇರೆ ಆಸ್ಪತ್ರೆಗೆ ವರ್ಗಾಯಿಸಬಾರದು ಎಂದು ಕೆಲವು ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದರೂ, ಅನಗತ್ಯ ಆತುರ ತೋರಿಸಿ ಅಲಿಗಢದ ಜವಾಹರ್‌ಲಾಲ್ ನೆಹರೂ ವೈದ್ಯಕೀಯ ಕಾಲೇಜಿನಿಂದ ದಿಲ್ಲಿಗೆ ವರ್ಗಾಯಿಸಲಾಗಿದೆ ಎಂದು ಹೇಳಿದೆ.

‘‘ಈ ಪರಿಸ್ಥಿತಿಯಲ್ಲಿ ಯುವತಿಯನ್ನು ವರ್ಗಾಯಿಸುವುದು ಅಪಾಯಕಾರಿ ಎಂದು ಅರಿತ ಕುಟುಂಬ ವರ್ಗಾವಣೆಗೆ ಒಪ್ಪಿಗೆ ನೀಡಲು ನಿರಾಕರಿಸಿತ್ತು. ಸಂತ್ರಸ್ಥೆಗೆ ತೀವ್ರ ನೋವು ಸೇರಿದಂತೆ ನರಕ್ಕೆ ಆದ ಘಾಸಿಯಿಂದ ಬೆನ್ನು ಹುರಿಯ ಮೇಲೆ ಪರಿಣಾಮ ಉಂಟಾಗಿರುವುದು ಹಾಗೂ ಕತ್ತು ಮತ್ತು ಹಿಂಭಾಗದ ಚಲನೆ ಸಾಧ್ಯವಾಗುತ್ತಿರಲಿಲ್ಲ. ಸಂತ್ರಸ್ಥೆಯನ್ನು ದಿಲ್ಲಿ ಏಮ್ಸ್‌ಗೆ ವರ್ಗಾಯಿಸಲು ಕುಟುಂಬವು ಜಿಲ್ಲಾಡಳಿತಕ್ಕೆ ಅನುಮತಿ ನೀಡಿಲ್ಲ ಎಂಬುವುದು ಸುಳ್ಳಾಗಿದ್ದು, ಈಗ ಬಹಿರಂಗಗೊಂಡಿದೆ’’ ಎಂದು ವರದಿ ಹೇಳಿದೆ.

ವಾಸ್ತವವಾಗಿ ಸಂತ್ರಸ್ಥೆಯನ್ನು ಏಮ್ಸ್‌ನ ಸನಿಹದಲ್ಲಿರುವ ಕೇಂದ್ರ ಸರಕಾರದ ಸ್ವಾಮ್ಯದ ಸಪ್ಧರಂಜಂಗ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಈ ಬಗ್ಗೆ ಆಕೆಯ ಕುಟುಂಬ ಪ್ರಶ್ನಿಸಿದಾಗ, ಎರಡೂ ಆಸ್ಪತ್ರೆ ಒಂದೇ ಎಂದು ಜಿಲ್ಲಾಡಳಿತ ಹೇಳಿತ್ತು ಎಂದು ಸತ್ಯಶೋಧನ ವರದಿಯು ಆರೋಪಿಸಿದೆ.

ಇದನ್ನೂ ಓದಿ: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...