Homeಮುಖಪುಟಹತ್ರಾಸ್: ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿತ್ತು-ಸತ್ಯಶೋಧನಾ ಸಮಿತಿ ವರದಿ

ಹತ್ರಾಸ್: ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿತ್ತು-ಸತ್ಯಶೋಧನಾ ಸಮಿತಿ ವರದಿ

ಯುವತಿಯ ಕುಟುಂಬಕ್ಕೆ ಕಿರುಕುಳ ನೀಡಿರುವ ಉತ್ತರಪ್ರದೇಶ ಪೊಲೀಸರು ಅನುಮಾನಾಸ್ಪದವಾಗಿ ಮತ್ತು ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌‌ನಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ದಲಿತ ಯುವತಿಯ ಕುಟುಂಬಕ್ಕೆ ಕಿರುಕುಳ ನೀಡಿರುವ ಉತ್ತರಪ್ರದೇಶ ಪೊಲೀಸರು ಅನುಮಾನಾಸ್ಪದವಾಗಿ ಮತ್ತು ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಸತ್ಯ ಶೋಧನಾ ಸಮಿತಿ ಆರೋಪಿಸಿದೆ.

’ಫ್ಯಾಕ್ಟ್ ಫೈಂಡಿಂಗ್ ರಿಪೋರ್ಟ್ ಆನ್ ಬ್ರೂಟಲ್ ಗ್ಯಾಂಗ್ ರೇಪ್, ಅಸಾಲ್ಟ್ ಆ್ಯಂಡ್ ಮರ್ಡರ್ ಆಫ್ ಎ ದಲಿತ್ ಗರ್ಲ್ ಬೈ ಅಪ್ಪರ್ ಕಾಸ್ಟ್ ಠಾಕೂರ್ ಮೆನ್ ಇನ್ ಬುಲ್‌ಗರ್ಹಿ ವಿಲೇಜ್, ಹತ್ರಾಸ್’ ಎಂಬ ಹೆಸರಿನ ಸಾಮಾಜಿಕ ಹೋರಾಟಗಾರರು ನಡೆಸಿರುವ ಸತ್ಯಶೋಧನಾ ವರದಿಯಲ್ಲಿ, ತಡವಾಗಿ ಪರೀಕ್ಷೆ ನಡೆಸುವುದು ಅತ್ಯಾಚಾರವನ್ನು ಸಾಬೀತುಪಡಿಸಲು ಅಸಾಧ್ಯವಾಗಿರುವುದರಿಂದ, ದೌರ್ಜನ್ಯದ ವೈದ್ಯಕೀಯ ತನಿಖೆ ನಡೆಸಲು ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ ಮಾಡಲಾಗಿದೆ. ಶಾಶ್ವತವಾಗಿ ಪುರಾವೆಯನ್ನು ನಾಶಮಾಡುವುದು ಇದರ ಉದ್ದೇಶ ಎಂದು ಸಮಿತಿ ಹೇಳಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ ತನಿಖೆ: CBI ತಂಡದಲ್ಲಿ SC/ST/OBC ಸಮುದಾಯದವರಿಲ್ಲ- ಚಂದ್ರಶೇಖರ್ ಆಜಾದ್

ಅಲ್ಲದೆ ದೌರ್ಜನ್ಯಕ್ಕೊಳಗಾದ ಯುವತಿಯ ತಂದೆಗೆ ತನಿಖೆ ಹಾಗೂ ಚಿಕಿತ್ಸೆಯಿಂದ ತಾನು ಮತ್ತು ಕುಟುಂಬ ಸಂತೃಪ್ತರಾಗಿದ್ದೇವೆಂದು ಎಲ್ಲರಿಗೂ ತಿಳಿಸುವಂತೆ ಜಿಲ್ಲಾಡಳಿತ ಒತ್ತಡ ಹೇರಿತ್ತು ಎಂದು ಸಮಿತಿ ಹೇಳಿದೆ. ಇದು ಸತ್ಯವನ್ನು ಮುಚ್ಚಿಡಲು ಹಾಗೂ ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರಕಾರ ನಡೆಸಿದ ಸಿದ್ಧತೆ ಎಂಬುದನ್ನು ತಿಳಿಸುತ್ತದೆ ಎಂದು ವರದಿ ಹೇಳಿದೆ.

ಸತ್ಯಶೋಧನಾ ಸಮಿತಿಯಲ್ಲಿ, ‘ನರ್ಮದಾ ಬಚಾವೊ’ ಆಂದೋಲನದ ಮೇಧಾ ಪಾಟ್ಕರ್, ಮ್ಯಾಗ್ಸಸೆ ಪ್ರಶಸ್ತಿ ಪುರಷ್ಕೃತ ಸಂದೀಪ್ ಪಾಂಡೆ, ಆರ್‌ಟಿಐ ಕಾರ್ಯಕರ್ತೆ ಹಾಗೂ ಲೇಖಕಿ ಮಣಿಮಾಲಾ, ‘ದಿಲ್ಲಿ ಏಕತಾ’ ಗುಂಪಿನ ಇಬ್ಬರು ಸದಸ್ಯರು ಸೇರಿದಂತೆ 9 ಸದಸ್ಯರಿದ್ದು ಸಂತ್ರಸ್ಥ ಯುವತಿಯ ಮನೆಗೆ ಅಕ್ಟೋಬರ್ 9 ರಂದು ಭೇಟಿ ನೀಡಿತ್ತು.

ವರದಿಯಲ್ಲಿ, ಪ್ರಜ್ಞೆ ಮರುಕಳಿಸುವವರೆಗೆ ಯುವತಿಯನ್ನು ಬೇರೆ ಆಸ್ಪತ್ರೆಗೆ ವರ್ಗಾಯಿಸಬಾರದು ಎಂದು ಕೆಲವು ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದರೂ, ಅನಗತ್ಯ ಆತುರ ತೋರಿಸಿ ಅಲಿಗಢದ ಜವಾಹರ್‌ಲಾಲ್ ನೆಹರೂ ವೈದ್ಯಕೀಯ ಕಾಲೇಜಿನಿಂದ ದಿಲ್ಲಿಗೆ ವರ್ಗಾಯಿಸಲಾಗಿದೆ ಎಂದು ಹೇಳಿದೆ.

‘‘ಈ ಪರಿಸ್ಥಿತಿಯಲ್ಲಿ ಯುವತಿಯನ್ನು ವರ್ಗಾಯಿಸುವುದು ಅಪಾಯಕಾರಿ ಎಂದು ಅರಿತ ಕುಟುಂಬ ವರ್ಗಾವಣೆಗೆ ಒಪ್ಪಿಗೆ ನೀಡಲು ನಿರಾಕರಿಸಿತ್ತು. ಸಂತ್ರಸ್ಥೆಗೆ ತೀವ್ರ ನೋವು ಸೇರಿದಂತೆ ನರಕ್ಕೆ ಆದ ಘಾಸಿಯಿಂದ ಬೆನ್ನು ಹುರಿಯ ಮೇಲೆ ಪರಿಣಾಮ ಉಂಟಾಗಿರುವುದು ಹಾಗೂ ಕತ್ತು ಮತ್ತು ಹಿಂಭಾಗದ ಚಲನೆ ಸಾಧ್ಯವಾಗುತ್ತಿರಲಿಲ್ಲ. ಸಂತ್ರಸ್ಥೆಯನ್ನು ದಿಲ್ಲಿ ಏಮ್ಸ್‌ಗೆ ವರ್ಗಾಯಿಸಲು ಕುಟುಂಬವು ಜಿಲ್ಲಾಡಳಿತಕ್ಕೆ ಅನುಮತಿ ನೀಡಿಲ್ಲ ಎಂಬುವುದು ಸುಳ್ಳಾಗಿದ್ದು, ಈಗ ಬಹಿರಂಗಗೊಂಡಿದೆ’’ ಎಂದು ವರದಿ ಹೇಳಿದೆ.

ವಾಸ್ತವವಾಗಿ ಸಂತ್ರಸ್ಥೆಯನ್ನು ಏಮ್ಸ್‌ನ ಸನಿಹದಲ್ಲಿರುವ ಕೇಂದ್ರ ಸರಕಾರದ ಸ್ವಾಮ್ಯದ ಸಪ್ಧರಂಜಂಗ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಈ ಬಗ್ಗೆ ಆಕೆಯ ಕುಟುಂಬ ಪ್ರಶ್ನಿಸಿದಾಗ, ಎರಡೂ ಆಸ್ಪತ್ರೆ ಒಂದೇ ಎಂದು ಜಿಲ್ಲಾಡಳಿತ ಹೇಳಿತ್ತು ಎಂದು ಸತ್ಯಶೋಧನ ವರದಿಯು ಆರೋಪಿಸಿದೆ.

ಇದನ್ನೂ ಓದಿ: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...