Homeಮುಖಪುಟಹತ್ರಾಸ್: ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿತ್ತು-ಸತ್ಯಶೋಧನಾ ಸಮಿತಿ ವರದಿ

ಹತ್ರಾಸ್: ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿತ್ತು-ಸತ್ಯಶೋಧನಾ ಸಮಿತಿ ವರದಿ

ಯುವತಿಯ ಕುಟುಂಬಕ್ಕೆ ಕಿರುಕುಳ ನೀಡಿರುವ ಉತ್ತರಪ್ರದೇಶ ಪೊಲೀಸರು ಅನುಮಾನಾಸ್ಪದವಾಗಿ ಮತ್ತು ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌‌ನಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ದಲಿತ ಯುವತಿಯ ಕುಟುಂಬಕ್ಕೆ ಕಿರುಕುಳ ನೀಡಿರುವ ಉತ್ತರಪ್ರದೇಶ ಪೊಲೀಸರು ಅನುಮಾನಾಸ್ಪದವಾಗಿ ಮತ್ತು ಕೆಟ್ಟ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಸತ್ಯ ಶೋಧನಾ ಸಮಿತಿ ಆರೋಪಿಸಿದೆ.

’ಫ್ಯಾಕ್ಟ್ ಫೈಂಡಿಂಗ್ ರಿಪೋರ್ಟ್ ಆನ್ ಬ್ರೂಟಲ್ ಗ್ಯಾಂಗ್ ರೇಪ್, ಅಸಾಲ್ಟ್ ಆ್ಯಂಡ್ ಮರ್ಡರ್ ಆಫ್ ಎ ದಲಿತ್ ಗರ್ಲ್ ಬೈ ಅಪ್ಪರ್ ಕಾಸ್ಟ್ ಠಾಕೂರ್ ಮೆನ್ ಇನ್ ಬುಲ್‌ಗರ್ಹಿ ವಿಲೇಜ್, ಹತ್ರಾಸ್’ ಎಂಬ ಹೆಸರಿನ ಸಾಮಾಜಿಕ ಹೋರಾಟಗಾರರು ನಡೆಸಿರುವ ಸತ್ಯಶೋಧನಾ ವರದಿಯಲ್ಲಿ, ತಡವಾಗಿ ಪರೀಕ್ಷೆ ನಡೆಸುವುದು ಅತ್ಯಾಚಾರವನ್ನು ಸಾಬೀತುಪಡಿಸಲು ಅಸಾಧ್ಯವಾಗಿರುವುದರಿಂದ, ದೌರ್ಜನ್ಯದ ವೈದ್ಯಕೀಯ ತನಿಖೆ ನಡೆಸಲು ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ ಮಾಡಲಾಗಿದೆ. ಶಾಶ್ವತವಾಗಿ ಪುರಾವೆಯನ್ನು ನಾಶಮಾಡುವುದು ಇದರ ಉದ್ದೇಶ ಎಂದು ಸಮಿತಿ ಹೇಳಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ ತನಿಖೆ: CBI ತಂಡದಲ್ಲಿ SC/ST/OBC ಸಮುದಾಯದವರಿಲ್ಲ- ಚಂದ್ರಶೇಖರ್ ಆಜಾದ್

ಅಲ್ಲದೆ ದೌರ್ಜನ್ಯಕ್ಕೊಳಗಾದ ಯುವತಿಯ ತಂದೆಗೆ ತನಿಖೆ ಹಾಗೂ ಚಿಕಿತ್ಸೆಯಿಂದ ತಾನು ಮತ್ತು ಕುಟುಂಬ ಸಂತೃಪ್ತರಾಗಿದ್ದೇವೆಂದು ಎಲ್ಲರಿಗೂ ತಿಳಿಸುವಂತೆ ಜಿಲ್ಲಾಡಳಿತ ಒತ್ತಡ ಹೇರಿತ್ತು ಎಂದು ಸಮಿತಿ ಹೇಳಿದೆ. ಇದು ಸತ್ಯವನ್ನು ಮುಚ್ಚಿಡಲು ಹಾಗೂ ಪ್ರಕರಣವನ್ನು ಶಾಶ್ವತವಾಗಿ ಮುಗಿಸಲು ರಾಜ್ಯ ಸರಕಾರ ನಡೆಸಿದ ಸಿದ್ಧತೆ ಎಂಬುದನ್ನು ತಿಳಿಸುತ್ತದೆ ಎಂದು ವರದಿ ಹೇಳಿದೆ.

ಸತ್ಯಶೋಧನಾ ಸಮಿತಿಯಲ್ಲಿ, ‘ನರ್ಮದಾ ಬಚಾವೊ’ ಆಂದೋಲನದ ಮೇಧಾ ಪಾಟ್ಕರ್, ಮ್ಯಾಗ್ಸಸೆ ಪ್ರಶಸ್ತಿ ಪುರಷ್ಕೃತ ಸಂದೀಪ್ ಪಾಂಡೆ, ಆರ್‌ಟಿಐ ಕಾರ್ಯಕರ್ತೆ ಹಾಗೂ ಲೇಖಕಿ ಮಣಿಮಾಲಾ, ‘ದಿಲ್ಲಿ ಏಕತಾ’ ಗುಂಪಿನ ಇಬ್ಬರು ಸದಸ್ಯರು ಸೇರಿದಂತೆ 9 ಸದಸ್ಯರಿದ್ದು ಸಂತ್ರಸ್ಥ ಯುವತಿಯ ಮನೆಗೆ ಅಕ್ಟೋಬರ್ 9 ರಂದು ಭೇಟಿ ನೀಡಿತ್ತು.

ವರದಿಯಲ್ಲಿ, ಪ್ರಜ್ಞೆ ಮರುಕಳಿಸುವವರೆಗೆ ಯುವತಿಯನ್ನು ಬೇರೆ ಆಸ್ಪತ್ರೆಗೆ ವರ್ಗಾಯಿಸಬಾರದು ಎಂದು ಕೆಲವು ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದರೂ, ಅನಗತ್ಯ ಆತುರ ತೋರಿಸಿ ಅಲಿಗಢದ ಜವಾಹರ್‌ಲಾಲ್ ನೆಹರೂ ವೈದ್ಯಕೀಯ ಕಾಲೇಜಿನಿಂದ ದಿಲ್ಲಿಗೆ ವರ್ಗಾಯಿಸಲಾಗಿದೆ ಎಂದು ಹೇಳಿದೆ.

‘‘ಈ ಪರಿಸ್ಥಿತಿಯಲ್ಲಿ ಯುವತಿಯನ್ನು ವರ್ಗಾಯಿಸುವುದು ಅಪಾಯಕಾರಿ ಎಂದು ಅರಿತ ಕುಟುಂಬ ವರ್ಗಾವಣೆಗೆ ಒಪ್ಪಿಗೆ ನೀಡಲು ನಿರಾಕರಿಸಿತ್ತು. ಸಂತ್ರಸ್ಥೆಗೆ ತೀವ್ರ ನೋವು ಸೇರಿದಂತೆ ನರಕ್ಕೆ ಆದ ಘಾಸಿಯಿಂದ ಬೆನ್ನು ಹುರಿಯ ಮೇಲೆ ಪರಿಣಾಮ ಉಂಟಾಗಿರುವುದು ಹಾಗೂ ಕತ್ತು ಮತ್ತು ಹಿಂಭಾಗದ ಚಲನೆ ಸಾಧ್ಯವಾಗುತ್ತಿರಲಿಲ್ಲ. ಸಂತ್ರಸ್ಥೆಯನ್ನು ದಿಲ್ಲಿ ಏಮ್ಸ್‌ಗೆ ವರ್ಗಾಯಿಸಲು ಕುಟುಂಬವು ಜಿಲ್ಲಾಡಳಿತಕ್ಕೆ ಅನುಮತಿ ನೀಡಿಲ್ಲ ಎಂಬುವುದು ಸುಳ್ಳಾಗಿದ್ದು, ಈಗ ಬಹಿರಂಗಗೊಂಡಿದೆ’’ ಎಂದು ವರದಿ ಹೇಳಿದೆ.

ವಾಸ್ತವವಾಗಿ ಸಂತ್ರಸ್ಥೆಯನ್ನು ಏಮ್ಸ್‌ನ ಸನಿಹದಲ್ಲಿರುವ ಕೇಂದ್ರ ಸರಕಾರದ ಸ್ವಾಮ್ಯದ ಸಪ್ಧರಂಜಂಗ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಈ ಬಗ್ಗೆ ಆಕೆಯ ಕುಟುಂಬ ಪ್ರಶ್ನಿಸಿದಾಗ, ಎರಡೂ ಆಸ್ಪತ್ರೆ ಒಂದೇ ಎಂದು ಜಿಲ್ಲಾಡಳಿತ ಹೇಳಿತ್ತು ಎಂದು ಸತ್ಯಶೋಧನ ವರದಿಯು ಆರೋಪಿಸಿದೆ.

ಇದನ್ನೂ ಓದಿ: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...