Homeಮುಖಪುಟಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ರಾಜಕೀಯ ಮುಖಂಡರು ಮತ್ತು ಅವರ ಕುಟುಂಬಗಳ ವಿರುದ್ಧ ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ, ಮಹಿಳೆಯರ ವಿರುದ್ಧವೇ ಸೆಕ್ಸಿಸ್ಟ್ ಮತ್ತು ದ್ವೇಷಪೂರಿತ, ನಿಂದನಾತ್ಮಕ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ

- Advertisement -
- Advertisement -

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ನಿನ್ನೆ(ಅ.20) ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ, ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಏರಿಕೆಯಾತ್ತಿವೆ ಎಂದು ಆರೋಪಿಸಿದ್ದರು.

ರಾಜ್ಯಪಾಲರೊಂದಿಗೆ ಲವ್ ಜಿಹಾದ್ ಪ್ರಕರಣಗಳ ಏರಿಕೆಯ ಬಗ್ಗೆ ಚರ್ಚಿಸಿದ ನಂತರ ರೇಖಾ ಶರ್ಮಾ ಟ್ವಿಟ್ಟರ್‌ನಲ್ಲಿ ಭಾರಿ ಟೀಕೆ ಮತ್ತು ಟ್ರೋಲ್‌ಗೆ ಒಳಗಾಗಿದ್ದಾರೆ. ರೇಖಾ ಶರ್ಮಾ ಅವರ ಹಳೆಯ ಟ್ವಿಟ್‌ಗಳನ್ನು ಮತ್ತೆ ಪೋಸ್ಟ್ ಮಾಡುತ್ತಾ ಹಲವು ಮಂದಿ ಆಕ್ರೋಶ ಹೊರಹಾಕಿದ್ದಾರೆ.

NCW ಟ್ವೀಟ್ ಮಾಡಿ, “ನಮ್ಮ ಅಧ್ಯಕ್ಷೆ ರೇಖಾ ಶರ್ಮಾ ಅವರು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ ರಾಜ್ಯದ ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು. ಕಾರ್ಯ ನಿರ್ವಹಿಸದೇ ಇರುವ ಒನ್ ಸ್ಟಾಪ್ ಕೇಂದ್ರಗಳು, ಕೊರೊನಾ ಆರೈಕೆ ಕೇಂದ್ರಗಳಲ್ಲಿ ಮಹಿಳಾ ರೋಗಿಗಳ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರದ ಬಗ್ಗೆ ಚರ್ಚೆಸಿದ್ದಾರೆ. ಜೊತೆಗೆ ಲವ್ ಜಿಹಾದ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಬಗ್ಗೆ ಮಾತನಾಡಿದ್ದಾರೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿತ್ತು.

ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ಇದರ ಆರ್ಕೈವ್ ಆವೃತ್ತಿ ಇಲ್ಲಿದೆ.

NCW ಮುಖ್ಯಸ್ಥೆಯ ಭೇಟಿ ಮತ್ತು ‘ಲವ್ ಜಿಹಾದ್’ ಪದದ ಉಲ್ಲೇಖ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಲವ್ ಜಿಹಾದ್ ಹಿಂದೂ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುವ ಉದ್ದೇಶದಿಂದ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಮದುವೆಯಾಗುವಂತೆ ನಡೆಸುವ ಪಿತೂರಿ ಎಂದು ಬಲಪಂಥೀಯ ಗುಂಪುಗಳು ವಾದಿಸುತ್ತಿವೆ.

ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿ, ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲ ಎಂದು ಹೇಳಿದ್ದು, ಕಾನೂನಿನಡಿಯಲ್ಲಿ ಈ ಪದವನ್ನು ವ್ಯಾಖ್ಯಾನಿಸಿಲ್ಲ ಎಂದು ಹೇಳಿದೆ.

ಇತ್ತಿಚಿಗಷ್ಟೇ ತನಿಷ್ಕ್ ಆಭರಣ ಜಾಹೀರಾತನ್ನು ಲವ್ ಜಿಹಾದ್‌ಗೆ ಹೋಲಿಸಿ ಅನೇಕ ಮಂದಿ ಕೆಟ್ಟ ಕಾಮೆಂಟ್‌ಗಳ ಮೂಲಕ ಟ್ರೋಲ್ ಮಾಡಿದ್ದರು. ಈಗ ಜಾಹೀರಾತನ್ನು ಹಿಂಪಡೆಯಲಾಗಿದೆ. ಇದರ ಬಗ್ಗೆಯೂ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗಾಗಿ ‘ಲವ್ ಜಿಹಾದ್’ ಪದವು ಈಗ ಮತ್ತೊಮ್ಮೆ ಚರ್ಚೆಯ ಕೇಂದ್ರವಾಗಿದೆ.

ರಾಜಕೀಯ ಮುಖಂಡರು ಮತ್ತು ಅವರ ಕುಟುಂಬಗಳ ವಿರುದ್ಧ ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ, ಮಹಿಳೆಯರ ವಿರುದ್ಧವೇ ಸೆಕ್ಸಿಸ್ಟ್ ಮತ್ತು ದ್ವೇಷಪೂರಿತ, ನಿಂದನಾತ್ಮಕ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’

ಇಂತಹ ಅತಿರೇಕದ ಟ್ವೀಟ್‌ಗಳನ್ನು ಮಾಡಿದ್ದವರು ಇಂದು ಮಹಿಳೆಯರ ಸುರಕ್ಷತೆ ಬಗ್ಗೆ, ಲವ್ ಜಿಹಾದ್ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದೂ, ಅವರು ಈ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದೂ ಹಲವು ಮಂದಿ ಒತ್ತಾಯಿಸಿದ್ದಾರೆ. #SackRekhaSharma ಎಂಬ ಹ್ಯಾಶ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ಮಹಿಳಾ ಆಯೋಗದ ಅಧ್ಯಕ್ಷರ ಹಳೆಯ ಟ್ವೀಟ್‌ಗಳು ನಾಚಿಕೆ ತರಿಸುವಂತಹದು. ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಹಲವು ಟ್ವಿಟ್ಟರ್‌ ಬಳಕೆದಾರರು ಆಗ್ರಹಿಸಿದ್ದಾರೆ.

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಈಕೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾಗಿದ್ದಾದರೂ ಹೇಗೆ?” ಎಂದು ಪ್ರಶ್ನಿಸಿ, ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಟ್ವೀಟ್ ಒಂದನ್ನು ಹಂಚಿಕೊಂಡಿದ್ದಾರೆ.

ರೇಖಾ ಶರ್ಮಾ ತಮ್ಮ ಹಳೆಯ ಟ್ವೀಟ್‌ಗಳಲ್ಲಿ ಮಾಜಿ ಪ್ರಧಾನಿ ನೆಹರೂ, ಕಾಂಗ್ರೆಸ್ ಮುಖ್ಯಸ್ಥೆ ಪ್ರಿಯಾಂಕಾ ಗಾಂಧಿ, ಆಪ್ ಮುಖಂಡರು ಸೇರಿದಂತೆ ಹಲವರ ಬಗ್ಗೆ ತುಂಬಾ ಕೀಳು ಮಟ್ಟದ ಕಾಮೆಂಟ್‌ಗಳನ್ನು ಹಾಕಿದ್ದರು.

 

“ಇದು ಅತಿರೇಕದ ಸಂಗತಿ. ಮಹಿಳೆಯರು ಮತ್ತು ಅಲ್ಪಸಂಖ್ಯಾತರ ವಿರುದ್ಧದ ಅಪರಾಧಗಳ ಬಗ್ಗೆ ರಾಜ್ಯವು ಉದಾಸೀನತೆಯ ಜೊತೆಗೆ ಉಗ್ರವಾದ ಮತ್ತು ಅಸಹಿಷ್ಣುತೆ ಬೆಳೆಯುತ್ತಿದೆ. ಒಂದು ಧರ್ಮವನ್ನು ಗುರಿಯಾಗಿಸಲು ‘ಲವ್ ಜಿಹಾದ್’ ಎಂಬ ಪದವನ್ನು ಬಳಸುವುದು ನಿಜವಾಗಿಯೂ ಸಾಂವಿಧಾನಿಕವೇ?” ಎಂದು ಟ್ವಿಟ್ಟರ್‌ ಬಳಕೆದಾರರು ಪ್ರಶ್ನಿಸಿದ್ದಾರೆ.

ಮತ್ತೊಬ್ಬ ಬಳಕೆದಾರರು, “ಎನ್‌ಸಿಡಬ್ಲ್ಯೂ ಮತ್ತು ಅದರ ಅಧ್ಯಕ್ಷರು ‘ಲವ್ ಜಿಹಾದ್’ ಎಂದರೇನು ಎಂಬುದನ್ನು ಸ್ಪಷ್ಟಪಡಿಸುತ್ತಾರೆಯೇ? ಕೆಲವು ಉಗ್ರಗಾಮಿ ಗುಂಪುಗಳು ಈ ಪದವನ್ನು ಬಳಸುತ್ತಿರುವ ಅದೇ ಅರ್ಥದಲ್ಲಿ ನೀವು ಬಳಸುತ್ತಿದ್ದೀರಾ? ಎಂದು ಕೇಳಿದ್ದಾರೆ.

ತನ್ನ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿರುವ ರೇಖಾ ಶರ್ಮಾ, “ನನ್ನ ಖಾತೆಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದರಿಂದ ನಾನು ಟ್ವಿಟ್ಟರ್‌ಗೆ ದೂರು ನೀಡಿದ್ದೇನೆ ಮತ್ತು ಅದರ ಬಗ್ಗೆ ತನಿಖೆ ನಡೆಯುತ್ತಿದೆ. ಟ್ರೋಲ್‌ಗಳಿಗೆ ಉತ್ತರಿಸಲು ಇಷ್ಟಪಡುವುದಿಲ್ಲ” ಎಂದಿದ್ದಾರೆ.

ಸದ್ಯ ಮಹಿಳಾ ಆಯೋಗದ ಮುಖ್ಯಸ್ಥೆ ತನ್ನ ಟ್ವಿಟ್ಟರ್ ಖಾತೆಯನ್ನು ಲಾಕ್ ಮಾಡಿದ್ದರೂ ಸಹ ಅವರ ಹಳೆಯ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.


ಇದನ್ನೂ ಓದಿ: ಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...