HomeUncategorizedಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ಭ್ರಷ್ಟಾಚಾರದ ಆರೋಪದಲ್ಲಿರುವ ಸಿಎಂ ಮಗ ವಿಜಯೇಂದ್ರ ಮೇಲೆ ಎಫ್ಐಆರ್ ದಾಖಲಾಗಿದ್ದು, ಇತ್ತೀಚೆಗೆ ಡಿ.ಕೆ.ಶಿವಕುಮಾರ್ ಮನೆ, ಕಛೇರಿಗಳ ಮೇಲೆ ಸಿಬಿಐ ದಾಳಿಯಾಗಿತ್ತು. ಇನ್ನು ಕುಮಾರಸ್ವಾಮಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರು ಎಂದು ಇತ್ತೀಚೆಗೆ ಟೀಕೆಗೆ ಗುರಿಯಾಗಿದ್ದರು.

- Advertisement -
- Advertisement -

ವಿಧಾನಸಭೆಯಲ್ಲಿ 224ರಲ್ಲಿ 116 ಸ್ಥಾನಗಳನ್ನು ಹೊಂದಿರುವ ಬಿಜೆಪಿಗೆ ಕರ್ನಾಟಕದ ಎರಡು ವಿಧಾನಸಭಾ ಸ್ಥಾನಗಳಿಗೆ ಮುಂಬರುವ ಉಪಚುನಾವಣೆಗಳಲ್ಲಿನ ಸೋಲು ಗೆಲುವು ಒಟ್ಟು ಸ್ಥಾನಗಳ ಮೇಲೆ ದೊಡ್ಡ ಪ್ರಭಾವ ಬೀರುವುದಿಲ್ಲ. ಆದರೂ ಅವು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಪ್ರತಿಷ್ಠೆಯ ವಿಷಯವಾಗಿದೆ.

ಮುಖ್ಯಮಂತ್ರಿ ಅವರ ಕುಟುಂಬದ ಸದಸ್ಯರಿಂದ ಭ್ರಷ್ಟಾಚಾರ ಮತ್ತು ಆಡಳಿತದಲ್ಲಿ ಹಸ್ತಕ್ಷೇಪದ ಆರೋಪ ಎದುರಿಸುತ್ತಿರುವ ಈ ಸಮಯದಲ್ಲಿ, ನವೆಂಬರ್ 3 ರಂದು ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆಯುವ ಉಪಚುನಾವಣೆಗಳು ಅತ್ಯಂತ ಮಹತ್ವದ್ದೆನಿಸಿವೆ.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಈ ಉಪಚುನಾವಣೆಗಳು ಮಹತ್ವದ್ದಾಗಿವೆ. ಡಿ.ಕೆ.ಶಿವಕುಮಾರ್ ಅವರನ್ನು ಭ್ರಷ್ಟಾಚಾರದ ಆರೋಪದ ಮೇಲೆ ಸಿಬಿಐ ತನಿಖೆ ನಡೆಸುತ್ತಿದೆ. ಕಳೆದ ವರ್ಷ ಅವರು ಬಂಧನಕ್ಕೂ ಒಳಗಾಗಿದ್ದರು. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಬಗ್ಗೆ ಜನಾಭಿಪ್ರಾಯ ಸಂಗ್ರಹವೇ ಈ ಉಪಚುನಾವಣೆ ಎಂದು ಡಿ.ಕೆ.ಶಿವಕುಮಾರ್ ಬಣ್ಣಿಸಿದ್ದಾರೆ.

ಭ್ರಷ್ಟಾಚಾರದ ಆರೋಪದಲ್ಲಿರುವ ಸಿಎಂ ಮಗ ವಿಜಯೇಂದ್ರ ಮೇಲೆ ಎಫ್ಐಆರ್ ದಾಖಲಾಗಿದ್ದು, ಇತ್ತೀಚೆಗೆ ಡಿ.ಕೆ.ಶಿವಕುಮಾರ್ ಮನೆ, ಕಛೇರಿಗಳ ಮೇಲೆ ಸಿಬಿಐ ದಾಳಿಯಾಗಿತ್ತು. ಇನ್ನು ಕೆಪಿಎಸ್‌ಸಿ ಉದ್ಯೋಗಗಳಲ್ಲಿ ಅಕ್ರಮ ಎಸಗಿ ಕುಮಾರಸ್ವಾಮಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರು ಎಂದು ಇತ್ತೀಚೆಗೆ ಟೀಕೆಗೆ ಗುರಿಯಾಗಿದ್ದರು.

ಇದನ್ನೂ ಓದಿ:ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ಜೆಡಿಎಸ್ ಶಾಸಕ ಬಿ ಸತ್ಯನಾರಾಯಣ ನಿಧನರಾದ ನಂತರ ಶಿರಾ ಸ್ಥಾನ ಖಾಲಿ ಬಿದ್ದಿದೆ. ಕಾಂಗ್ರೆಸ್ ಶಾಸಕ ಮುನಿರತ್ನ ನಾಯ್ಡು ಬಿಜೆಪಿಗೆ ಪಕ್ಷಾಂತರವಾದ ನಂತರ 2019 ರ ಜುಲೈನಲ್ಲಿ ಆರ್.ಆರ್.ನಗರ ಸ್ಥಾನ ಖಾಲಿ ಇತ್ತು.

ಕಾಂಗ್ರೆಸ್ ಮತ್ತು ಬಿಜೆಪಿ ಗೆಲುವು ಸಾಧಿಸಲು ಶ್ರಮಿಸುತ್ತಿದ್ದರೆ, ಜೆಡಿಎಸ್ ಕೂಡ ಈ ಪ್ರದೇಶಗಳಲ್ಲಿ ಪ್ರಬಲ ಬೆಂಬಲವನ್ನು ಹೊಂದಿರುವ ಸ್ಪರ್ಧಿಯಾಗಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಭ್ರಷ್ಟಾಚಾರ ಆರೋಪದ ಕೇಂದ್ರಬಿಂದುವಾಗಿರುವ ಯಡಿಯೂರಪ್ಪ ಅವರ ಮಗ ಬಿ ವೈ ವಿಜಯೇಂದ್ರ ಅವರನ್ನು ಶಿರಾ ಉಪಚುನಾವಣೆಯ ಬಿಜೆಪಿಯ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಇಲ್ಲಿ ಡಾ.ರಾಜೇಶ್ ಗೌಡರನ್ನು ಬಿಜೆಪಿ ಕಣಕ್ಕಿಳಿಸಿದ್ದು, ಕಾಂಗ್ರೆಸ್ ಪಕ್ಷವು ತನ್ನ ಹಿರಿಯ ನಾಯಕ ಮತ್ತು ಮಾಜಿ ಸಚಿವ ಟಿ ಬಿ ಜಯಚಂದ್ರ ಅವರನ್ನು ಕಣಕ್ಕಿಳಿಸಿದೆ. ಸಹಾನುಭೂತಿಯ ಅಲೆಯನ್ನು ಸದುಪಯೋಗಪಡಿಸಿಕೊಳ್ಳುವ ಪ್ರಯತ್ನದಲ್ಲಿ ಜೆಡಿಎಸ್ ಮಾಜಿ ಶಾಸಕ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರನ್ನು ಕಣಕ್ಕಿಳಿಸಿದೆ.

ಆರ್‌.ಆರ್.ನಗರದಲ್ಲಿ ಜೆಡಿಎಸ್‌ನಿಂದ ವಿ.ಕೃಷ್ಣಮೂರ್ತಿ ಸ್ಪರ್ಧಿಸುತ್ತಿದ್ದು, ಬಿಜೆಪಿಗೆ ಪಕ್ಷಾಂತರವಾಗಿದ್ದ ಮುನಿರತ್ನ ಈ ಭಾರಿ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ಇನ್ನು ಕಾಂಗ್ರೆಸ್‌ನಿಂದ ಐಎಎಸ್ ಅಧಿಕಾರಿ ದಿವಂಗತ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಕಣದಲ್ಲಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ ಭ್ರಷ್ಟ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಆಗಬೇಕು – ಸಿದ್ದರಾಮಯ್ಯ

ಈ ಉಪಚುನಾವಣೆಯ ಸೋಲು-ಗೆಲುವು ಯಾವುದೇ ಪಕ್ಷದ ಮೇಲೆ ಅಧಿಕಾರದ ದೃಷ್ಟಿಯಿಂದ ದೊಡ್ಡ ಪರಿಣಾಮ ಬೀರುವುದಿಲ್ಲ. ಅದಾಗ್ಯೂ, ಪ್ರತಿ ಪಕ್ಷಕ್ಕೂ ತಮ್ಮ ಪ್ರತಿಷ್ಠೆಯ ವಿಷಯದ ಸಾವಾಲಾಗಿ ಈ ಚುನಾವಣೆಗಳು ಪರಿಣಮಿಸಿವೆ. ಹಾಗಾಗಿಯೇ ಸ್ಪರ್ಧೆಯಲ್ಲಿರುವ ಪಕ್ಷಗಳು ಸಾಕಷ್ಟು ಅಬ್ಬರದ ಪ್ರಚಾರ ಮತ್ತು ಹಣದಹೊಳೆಯನ್ನು ಹರಿಸುತ್ತಿವೆ. ಇದರಲ್ಲಿ ಯಾರಿಗೆ ಗೆಲುವು ಎಂಬುದನ್ನು ಕಾದು ನೋಡಬೇಕಿದೆ.


ಇದನ್ನೂ ಓದಿ: ಉಪಚುನಾವಣೆ: 2 ವರ್ಷದಲ್ಲಿ BJP ಅಭ್ಯರ್ಥಿ ಮುನಿರತ್ನ ಆಸ್ತಿ ದುಪ್ಪಟ್ಟು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...