Homeಮುಖಪುಟವರ್ಷಕ್ಕೆ 10 ಲಕ್ಷ ಉದ್ಯೋಗ ಸೃಷ್ಟಿ: ತೇಜಸ್ವಿ ಯಾದವ್ ಭರವಸೆ; ನಿತೀಶ್ ಕಂಗಾಲು!

ವರ್ಷಕ್ಕೆ 10 ಲಕ್ಷ ಉದ್ಯೋಗ ಸೃಷ್ಟಿ: ತೇಜಸ್ವಿ ಯಾದವ್ ಭರವಸೆ; ನಿತೀಶ್ ಕಂಗಾಲು!

ಮುಖ್ಯಮಂತ್ರಿ ನಿತೀಶ್ ಕುಮಾರ್‌ ದೈಹಿಕವಾಗಿ ಮತ್ತು ಮಾನಸಿಕವಾಗಿ ದಣಿದಿದ್ದಾರೆ. ಅವರು 15 ವರ್ಷಗಳು ಆಡಳಿತ ನಡೆಸಿದ ನಂತರವೂ, ಉದ್ಯೋಗ ಸೃಷ್ಟಿಸಲು ಹಣ ಎಲ್ಲಿದೆ ಎಂದು ಕೇಳುತ್ತಿದ್ದಾರೆ. ಬಿಹಾರದ ಬಜೆಟ್ 30,000 ಕೋಟಿ ರೂಪಾಯಿ. ಈ ಹಣ ಎಲ್ಲಿದೆ..? ಎಲ್ಲವೂ ಅವರ ಹಗರಣಗಳಲ್ಲಿ ಕಳೆದು ಹೋಗಿದೆ

- Advertisement -
- Advertisement -

ಬಿಹಾರ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎಲ್ಲಾ ಪಕ್ಷಗಳು ಚುನಾವಣಾ ರ್‍ಯಾಲಿಗಳನ್ನು ನಡೆಸುತ್ತಿವೆ. ಚುನಾವಣಾ ಪ್ರಚಾರದಲ್ಲಿ ಜನರಿಗೆ ನೀಡುತ್ತಿರುವ ಭರವಸೆ, ಪ್ರಣಾಳಿಕೆಗಳ ಬಗ್ಗೆ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆಯೇ ಆಗುತ್ತಿದೆ.

ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ ಯಾದವ್ ವರ್ಷಕ್ಕೆ 10 ಲಕ್ಷ ಉದ್ಯೋಗಗಳ ಭರವಸೆಯನ್ನು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದು, ಇದು ಅಸಾಧ್ಯ, ಇದನ್ನೂ ಯಾವ ನಾಯಕರು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

’ಅಷ್ಟು ಉದ್ಯೋಗಿಗಳಿಗೆ ಎಲ್ಲಿಂದ ಸಂಬಳ ನೀಡುತ್ತೀರಿ..? ನೀವು ನಕಲಿ ಹಣವನ್ನು ಮುದ್ರಿಸುತ್ತೀರಾ ಅಥವಾ ಯಾವ ಹಗರಣದಿಂದ ಜೈಲಿಗೆ ಹೋಗಬೇಕಾಯಿತೋ ಅಂತಹದ್ದೇ ಕೆಲಸ ಮಾಡುತ್ತೀರಾ..?’ ಎಂದು ಗೋಪಾಲಗಂಜ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ನಿತೀಶ್ ಕುಮಾರ್ ವ್ಯಂಗ್ಯವಾಡಿದ್ದಾರೆ. ತೇಜಶ್ವಿ ಯಾದವ್ ಅವರ ತಂದೆ ಲಾಲು ಯಾದವ್ ಹೆಸರು ಹೇಳದೆ ಮೇವು ಹಗರಣದ ಪ್ರಸ್ತಾಪ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ತೇಜಶ್ವಿ ಯಾದವ್ ಅನಾನುಭವಿ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. “ಉದ್ಯೋಗಗಳ ಬಗ್ಗೆ ಭರವಸೆ ನೀಡಿದ್ದಾರೆ. ಆದರೆ ಈ ಭರವಸೆ ಈಡೇರಿಸಲು ಜ್ಞಾನ ಅಥವಾ ಅನುಭವ ಅವರಿಗಿಲ್ಲ ಎಂದಿದ್ದಾರೆ. ಉದ್ಯೋಗ ಕೊಡುವುದಾದರೆ, ಕೇವಲ 10 ಲಕ್ಷ ಏಕೆ? ಎಲ್ಲರಿಗೂ ಉದ್ಯೋಗ ನೀಡಿ ಎಂದು ಉಚಿತ ಸಲಹೆಯನ್ನು ನೀಡಿದ್ದಾರೆ.

ನಿತೀಶ್ ಕುಮಾರ್ ಮಾತಿಗೆ ತಿರುಗೇಟು ನೀಡಿರುವ ತೇಜಸ್ವಿ ಯಾದವ್, ’ನಾನು ಅಷ್ಟು ಅನಾನುಭವಿಯಲ್ಲ. ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದೆ. ನಾನು ಅಷ್ಟು ಅನಾನುಭವಿ ಮತ್ತು ಅಪಕ್ವವಾಗಿದ್ದರೆ, ಬಿಜೆಪಿ ನಾಯಕರು ನನ್ನನ್ನು 20 ಹೆಲಿಕಾಪ್ಟರ್‌ಗಳೊಂದಿಗೆ ಏಕೆ ಬೆನ್ನಟ್ಟುತ್ತಿದ್ದಾರೆ..? ಎಂದು ಚಾಟಿ ಬೀಸಿದ್ದಾರೆ.

“ಮುಖ್ಯಮಂತ್ರಿ ನಿತೀಶ್ ಕುಮಾರ್‌ ದೈಹಿಕವಾಗಿ ಮತ್ತು ಮಾನಸಿಕವಾಗಿ ದಣಿದಿದ್ದಾರೆ. ಅವರು 15 ವರ್ಷಗಳು ಆಡಳಿತ ನಡೆಸಿದ ನಂತರವೂ, ಉದ್ಯೋಗ ಸೃಷ್ಟಿಸಲು ಹಣ ಎಲ್ಲಿದೆ ಎಂದು ಕೇಳುತ್ತಿದ್ದಾರೆ. ಬಿಹಾರದ ಬಜೆಟ್ 30,000 ಕೋಟಿ ರೂಪಾಯಿ. ಈ ಹಣ ಎಲ್ಲಿದೆ..? ಎಲ್ಲವೂ ಅವರ ಹಗರಣಗಳಲ್ಲಿ ಕಳೆದು ಹೋಗಿದೆ ಎಂದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

“ಅವರು ಜಲ-ಜೀವನ್-ಹರಿಯಾಲಿ ನೀತಿಗೆ, ಜಾಹೀರಾತುಗಳಿಗೆ ಕೋಟಿ ಕೋಟಿ ಹಣ ಖರ್ಚು ಮಾಡಿದ್ದಾರೆ. ಇವುಗಳ ನಂತರ ಅವರು ಉದ್ಯೋಗ ನೀಡಲು ಹಣ ಎಲ್ಲಿದೆ ಎಂಬ ವ್ಯಂಗ್ಯದ ಕಾಮೆಂಟ್ ಮಾಡುತ್ತಾರೆ” ಎಂದು ತೇಜಶ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ.

“4.5 ಲಕ್ಷ ಉದ್ಯೋಗಗಳಿಗೆ ರಾಜ್ಯದ ಬಜೆಟ್‌ನಲ್ಲಿ ಅವಕಾಶವಿದೆ. ನೀತಿ ಆಯೋಗದ ಪ್ರಕಾರ ಬಿಹಾರದ ಪ್ರಗತಿಗೆ ಇನ್ನೂ 5.5 ಲಕ್ಷಕ್ಕಿಂತಲೂ ಅಧಿಕ ಉದ್ಯೋಗಗಳ ಅಗತ್ಯವಿದೆ. ಇಚ್ಛಾಶಕ್ತಿ ಇದ್ದರೆ ಎಲ್ಲವೂ ಸಾಧ್ಯ” ಎಂದು ತೇಜಸ್ವಿ ಯಾದವ್ ತೀಕ್ಷ ಪ್ರತಿಕ್ರಿಯೆ ನೀಡಿದ್ದಾರೆ.

ಇತ್ತ ತೇಜಶ್ವಿ ಯಾದವ್ ಅವರ “10 ಲಕ್ಷ ಉದ್ಯೋಗಗಳು” ಎಂಬ ಭರವಸೆ ಬಗ್ಗೆ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಕೂಡ ಅಪಹಾಸ್ಯ ಮಾಡಿದ್ದಾರೆ.

ಆದರೆ ತೇಜಸ್ವಿ ಯಾದವ್ ಅವರ ಈ ಭರವಸೆ ಯುವಜನತೆಯಲ್ಲಿ ಉದ್ಯೋಗ ಸೃಷ್ಟಿಯ ಬಗ್ಗೆ ಹೊಸ ವಿಶ್ವಾಸ ಹುಟ್ಟಿಸಿದೆ. ಇದರಿಂದ ಕಂಗಾಲಾಗಿರುವ ನಿತೀಶ್ ಕುಮಾರ್‌ ತಮ್ಮ ರ್‍ಯಾಲಿಗಳಲ್ಲಿ ಇದೇ ವಿಷಯದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಅಸಾಧ್ಯವೆಂಬುದಿಲ್ಲ, ಚುನಾವಣೆಯಲ್ಲಿ ಗೆದ್ದರೆ ವರ್ಷಕ್ಕೆ 10 ಲಕ್ಷ ಉದ್ಯೋಗ ನೀಡುವುದಾಗಿ ತೇಜಸ್ವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಹೊಸ 243 ಸದಸ್ಯರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ನವೆಂಬರ್ 10 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.


ಇದನ್ನೂ ಓದಿ: ಬಿಹಾರ: ಟ್ರಂಪ್ ಬಂದು ವಿಶೇಷ ಸ್ಥಾನಮಾನ ನೀಡುತ್ತಾರಾ?- ನಿತೀಶ್‌ಗೆ ತೇಜಸ್ವಿ ಯಾದವ್ ಪ್ರಶ್ನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...