Homeಮುಖಪುಟವರ್ಷಕ್ಕೆ 10 ಲಕ್ಷ ಉದ್ಯೋಗ ಸೃಷ್ಟಿ: ತೇಜಸ್ವಿ ಯಾದವ್ ಭರವಸೆ; ನಿತೀಶ್ ಕಂಗಾಲು!

ವರ್ಷಕ್ಕೆ 10 ಲಕ್ಷ ಉದ್ಯೋಗ ಸೃಷ್ಟಿ: ತೇಜಸ್ವಿ ಯಾದವ್ ಭರವಸೆ; ನಿತೀಶ್ ಕಂಗಾಲು!

ಮುಖ್ಯಮಂತ್ರಿ ನಿತೀಶ್ ಕುಮಾರ್‌ ದೈಹಿಕವಾಗಿ ಮತ್ತು ಮಾನಸಿಕವಾಗಿ ದಣಿದಿದ್ದಾರೆ. ಅವರು 15 ವರ್ಷಗಳು ಆಡಳಿತ ನಡೆಸಿದ ನಂತರವೂ, ಉದ್ಯೋಗ ಸೃಷ್ಟಿಸಲು ಹಣ ಎಲ್ಲಿದೆ ಎಂದು ಕೇಳುತ್ತಿದ್ದಾರೆ. ಬಿಹಾರದ ಬಜೆಟ್ 30,000 ಕೋಟಿ ರೂಪಾಯಿ. ಈ ಹಣ ಎಲ್ಲಿದೆ..? ಎಲ್ಲವೂ ಅವರ ಹಗರಣಗಳಲ್ಲಿ ಕಳೆದು ಹೋಗಿದೆ

- Advertisement -
- Advertisement -

ಬಿಹಾರ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎಲ್ಲಾ ಪಕ್ಷಗಳು ಚುನಾವಣಾ ರ್‍ಯಾಲಿಗಳನ್ನು ನಡೆಸುತ್ತಿವೆ. ಚುನಾವಣಾ ಪ್ರಚಾರದಲ್ಲಿ ಜನರಿಗೆ ನೀಡುತ್ತಿರುವ ಭರವಸೆ, ಪ್ರಣಾಳಿಕೆಗಳ ಬಗ್ಗೆ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆಯೇ ಆಗುತ್ತಿದೆ.

ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ ಯಾದವ್ ವರ್ಷಕ್ಕೆ 10 ಲಕ್ಷ ಉದ್ಯೋಗಗಳ ಭರವಸೆಯನ್ನು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದು, ಇದು ಅಸಾಧ್ಯ, ಇದನ್ನೂ ಯಾವ ನಾಯಕರು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

’ಅಷ್ಟು ಉದ್ಯೋಗಿಗಳಿಗೆ ಎಲ್ಲಿಂದ ಸಂಬಳ ನೀಡುತ್ತೀರಿ..? ನೀವು ನಕಲಿ ಹಣವನ್ನು ಮುದ್ರಿಸುತ್ತೀರಾ ಅಥವಾ ಯಾವ ಹಗರಣದಿಂದ ಜೈಲಿಗೆ ಹೋಗಬೇಕಾಯಿತೋ ಅಂತಹದ್ದೇ ಕೆಲಸ ಮಾಡುತ್ತೀರಾ..?’ ಎಂದು ಗೋಪಾಲಗಂಜ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ನಿತೀಶ್ ಕುಮಾರ್ ವ್ಯಂಗ್ಯವಾಡಿದ್ದಾರೆ. ತೇಜಶ್ವಿ ಯಾದವ್ ಅವರ ತಂದೆ ಲಾಲು ಯಾದವ್ ಹೆಸರು ಹೇಳದೆ ಮೇವು ಹಗರಣದ ಪ್ರಸ್ತಾಪ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ತೇಜಶ್ವಿ ಯಾದವ್ ಅನಾನುಭವಿ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. “ಉದ್ಯೋಗಗಳ ಬಗ್ಗೆ ಭರವಸೆ ನೀಡಿದ್ದಾರೆ. ಆದರೆ ಈ ಭರವಸೆ ಈಡೇರಿಸಲು ಜ್ಞಾನ ಅಥವಾ ಅನುಭವ ಅವರಿಗಿಲ್ಲ ಎಂದಿದ್ದಾರೆ. ಉದ್ಯೋಗ ಕೊಡುವುದಾದರೆ, ಕೇವಲ 10 ಲಕ್ಷ ಏಕೆ? ಎಲ್ಲರಿಗೂ ಉದ್ಯೋಗ ನೀಡಿ ಎಂದು ಉಚಿತ ಸಲಹೆಯನ್ನು ನೀಡಿದ್ದಾರೆ.

ನಿತೀಶ್ ಕುಮಾರ್ ಮಾತಿಗೆ ತಿರುಗೇಟು ನೀಡಿರುವ ತೇಜಸ್ವಿ ಯಾದವ್, ’ನಾನು ಅಷ್ಟು ಅನಾನುಭವಿಯಲ್ಲ. ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದೆ. ನಾನು ಅಷ್ಟು ಅನಾನುಭವಿ ಮತ್ತು ಅಪಕ್ವವಾಗಿದ್ದರೆ, ಬಿಜೆಪಿ ನಾಯಕರು ನನ್ನನ್ನು 20 ಹೆಲಿಕಾಪ್ಟರ್‌ಗಳೊಂದಿಗೆ ಏಕೆ ಬೆನ್ನಟ್ಟುತ್ತಿದ್ದಾರೆ..? ಎಂದು ಚಾಟಿ ಬೀಸಿದ್ದಾರೆ.

“ಮುಖ್ಯಮಂತ್ರಿ ನಿತೀಶ್ ಕುಮಾರ್‌ ದೈಹಿಕವಾಗಿ ಮತ್ತು ಮಾನಸಿಕವಾಗಿ ದಣಿದಿದ್ದಾರೆ. ಅವರು 15 ವರ್ಷಗಳು ಆಡಳಿತ ನಡೆಸಿದ ನಂತರವೂ, ಉದ್ಯೋಗ ಸೃಷ್ಟಿಸಲು ಹಣ ಎಲ್ಲಿದೆ ಎಂದು ಕೇಳುತ್ತಿದ್ದಾರೆ. ಬಿಹಾರದ ಬಜೆಟ್ 30,000 ಕೋಟಿ ರೂಪಾಯಿ. ಈ ಹಣ ಎಲ್ಲಿದೆ..? ಎಲ್ಲವೂ ಅವರ ಹಗರಣಗಳಲ್ಲಿ ಕಳೆದು ಹೋಗಿದೆ ಎಂದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

“ಅವರು ಜಲ-ಜೀವನ್-ಹರಿಯಾಲಿ ನೀತಿಗೆ, ಜಾಹೀರಾತುಗಳಿಗೆ ಕೋಟಿ ಕೋಟಿ ಹಣ ಖರ್ಚು ಮಾಡಿದ್ದಾರೆ. ಇವುಗಳ ನಂತರ ಅವರು ಉದ್ಯೋಗ ನೀಡಲು ಹಣ ಎಲ್ಲಿದೆ ಎಂಬ ವ್ಯಂಗ್ಯದ ಕಾಮೆಂಟ್ ಮಾಡುತ್ತಾರೆ” ಎಂದು ತೇಜಶ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ.

“4.5 ಲಕ್ಷ ಉದ್ಯೋಗಗಳಿಗೆ ರಾಜ್ಯದ ಬಜೆಟ್‌ನಲ್ಲಿ ಅವಕಾಶವಿದೆ. ನೀತಿ ಆಯೋಗದ ಪ್ರಕಾರ ಬಿಹಾರದ ಪ್ರಗತಿಗೆ ಇನ್ನೂ 5.5 ಲಕ್ಷಕ್ಕಿಂತಲೂ ಅಧಿಕ ಉದ್ಯೋಗಗಳ ಅಗತ್ಯವಿದೆ. ಇಚ್ಛಾಶಕ್ತಿ ಇದ್ದರೆ ಎಲ್ಲವೂ ಸಾಧ್ಯ” ಎಂದು ತೇಜಸ್ವಿ ಯಾದವ್ ತೀಕ್ಷ ಪ್ರತಿಕ್ರಿಯೆ ನೀಡಿದ್ದಾರೆ.

ಇತ್ತ ತೇಜಶ್ವಿ ಯಾದವ್ ಅವರ “10 ಲಕ್ಷ ಉದ್ಯೋಗಗಳು” ಎಂಬ ಭರವಸೆ ಬಗ್ಗೆ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಕೂಡ ಅಪಹಾಸ್ಯ ಮಾಡಿದ್ದಾರೆ.

ಆದರೆ ತೇಜಸ್ವಿ ಯಾದವ್ ಅವರ ಈ ಭರವಸೆ ಯುವಜನತೆಯಲ್ಲಿ ಉದ್ಯೋಗ ಸೃಷ್ಟಿಯ ಬಗ್ಗೆ ಹೊಸ ವಿಶ್ವಾಸ ಹುಟ್ಟಿಸಿದೆ. ಇದರಿಂದ ಕಂಗಾಲಾಗಿರುವ ನಿತೀಶ್ ಕುಮಾರ್‌ ತಮ್ಮ ರ್‍ಯಾಲಿಗಳಲ್ಲಿ ಇದೇ ವಿಷಯದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಅಸಾಧ್ಯವೆಂಬುದಿಲ್ಲ, ಚುನಾವಣೆಯಲ್ಲಿ ಗೆದ್ದರೆ ವರ್ಷಕ್ಕೆ 10 ಲಕ್ಷ ಉದ್ಯೋಗ ನೀಡುವುದಾಗಿ ತೇಜಸ್ವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಹೊಸ 243 ಸದಸ್ಯರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ನವೆಂಬರ್ 10 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.


ಇದನ್ನೂ ಓದಿ: ಬಿಹಾರ: ಟ್ರಂಪ್ ಬಂದು ವಿಶೇಷ ಸ್ಥಾನಮಾನ ನೀಡುತ್ತಾರಾ?- ನಿತೀಶ್‌ಗೆ ತೇಜಸ್ವಿ ಯಾದವ್ ಪ್ರಶ್ನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...