Homeಅಂತರಾಷ್ಟ್ರೀಯಚಿಲಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

ಚಿಲಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

- Advertisement -
- Advertisement -

ಚಿಲಿ ರಾಜಧಾನಿ ಸ್ಯಾಂಟಿಯಾಗೋದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಿಭಟನಾಕಾರರು 19 ನೇ ಶತಮಾನದ ಹಳೆಯ ಚರ್ಚು ಸೇರಿದಂತೆ ಎರಡು ಚರ್ಚುಗಳನ್ನು ಸುಟ್ಟುಹಾಕಿದ್ದಾರೆ. ಭಾನುವಾರ ಶಾಂತಿಯುತವಾಗಿ ರ್‍ಯಾಲಿಗಳು ನಡೆದಿದ್ದು, ನಂತರ ಈ ಪ್ರತಿಭಟನೆ ಗಲಭೆಗೆ ತಿರುಗಿದೆ. ಕಳೆದ ವರ್ಷ ನಡೆದ ಪ್ರತಿಭಟನೆಯಲ್ಲಿ 30 ಜನರು ಮೃತಪಟ್ಟಿದ್ದು ಸಾವಿರಾರು ಜನರು ಗಾಯಗೊಂಡಿದ್ದರು. ಈಗ ಈ ಪ್ರತಿಭಟನೆಯ ವರ್ಷಾಚರಣೆಯಲ್ಲಿ ಮತ್ತೆ ಗಲಭೆ ಭುಗಿಲೆದ್ದಿದೆ.

2019 ರ ಪ್ರತಿಭಟನೆಯ ಪ್ರಮುಖ ಬೇಡಿಕೆಯಾದ ದೇಶದ ಸರ್ವಾಧಿಕಾರ-ಯುಗದ ಸಂವಿಧಾನವನ್ನು ರದ್ದುಗೊಳಿಸಬೇಕೆ ಎಂಬ ಜನಾಭಿಪ್ರಾಯ ಸಂಗ್ರಹಣೆಯಲ್ಲಿ “ಹೌದು” ಎಂದು ಮತ ಚಲಾಯಿಸುಂತೆ ಕರೆ ಕೊಡುವ ಘೋಷಣಾ ಪತ್ರವನ್ನು ಪ್ರತಿಭಟನಾಗಾರರು ಹಿಡಿದಿದ್ದರು. ಅಕ್ಟೋಬರ್ 25 ರ ರಂದು ಅಲ್ಲಿ ಜನಾಭಿಪ್ರಾಯ ಸಂಗ್ರಹಣೆ ನಡೆಯಲಿದೆ.

ಇದನ್ನೂ ಓದಿ: ಬೊಲಿವಿಯಾ ಚುನಾವಣೆ: ಅಮೆರಿಕಾ ಪ್ರೇರಿತ ದಂಗೆಯ ಹೊರತಾಗಿಯೂ ಎಡಪಕ್ಷಕ್ಕೆ ಭರ್ಜರಿ ಜಯ!

PC: AFP

ಪ್ರತಿಭಟನೆಗಳು ಆರಂಭದಲ್ಲಿ ಶಾಂತಿಯುತವಾಗಿದ್ದರೂ ನಂತರ ಹಿಂಸಾಚಾರ ಘಟನೆಗಳು ನಡೆದವು, ಸೂಪರ್‌ರ್ಮಾರ್ಕೆಟ್‌‌ಗಳನ್ನು ಲೂಟಿ ಮಾಡುವುದು ಸೇರಿದಂತೆ ರಾಜಧಾನಿಯಾದ್ಯಂತ ಪೊಲೀಸರೊಂದಿಗೆ ಘರ್ಷಣೆಗಳು ಸಂಭವಿಸಿದವು.

ಹಿಂಸಾಚಾರಗಳು ಭುಗಿಲೇಳುವ ಮೊದಲು ಮಾತನಾಡಿದ ಆಂತರಿಕ ವ್ಯವಹಾರಗಳ ಸಚಿವ ವಿಕ್ಟರ್ ಪೆರೆಜ್ ಮಾತನಾಡಿ, ಶಾಂತಿಯುತ ರ್‍ಯಾಲಿಗಳನ್ನು ಶ್ಲಾಘಿಸಿದ್ದರು. ಮುಂಬರುವ ಅಕ್ಟೋಬರ್ 25 ರ ಸಾಂವಿಧಾನಿಕ ಜನಾಭಿಪ್ರಾಯ ಸಂಗ್ರಹಣೆಯಲ್ಲಿ ಮತದಾನ ಮಾಡುವ ಮೂಲಕ ತಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಬೇಕೆಂದು ಅವರು ಚಿಲಿಯನ್ನರಿಗೆ ಕರೆ ನೀಡಿದ್ದರು.

PC: Getty

“ಹಿಂಸಾಚಾರ ನಡೆಸುವವರು ಚಿಲಿಯ ಸಮಸ್ಯೆಗಳನ್ನು ಪ್ರಜಾಪ್ರಭುತ್ವದ ವಿಧಾನಗಳ ಮೂಲಕ ಪರಿಹರಿಸುವುದನ್ನು ಬಯಸುವುದಿಲ್ಲ” ಎಂದು ಪೆರೆಜ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದು, ಭಾನುವಾರ ನಡೆಯುವ ಜನಾಭಿಪ್ರಾಯ ಸಂಗ್ರಹಣಾ ಸಮಯದಲ್ಲಿ ಕಾನೂನು ಉಲ್ಲಂಘಿಸಿದರೆ ಶಿಕ್ಷೆ ವಿಧಿಸುವುದಾಗಿ ಹೇಳಿದರು.

ಇದನ್ನೂ ಓದಿ: ಸೋಶಿಯಲಿಸಂ-ಕಮ್ಯುನಿಸಂ ವಿರುದ್ಧದ ಹೋರಾಟದಲ್ಲಿ ಭಾರತ-ಅಮೇರಿಕಾ ಒಂದಾಗಬೇಕು: Jr. ಟ್ರಂಪ್

ಮುಂಜಾನೆ ಉದ್ರಿಕ್ತ ಜನರ ಗುಂಪು ಕಮ್ಯುನಿಸ್ಟ್ ಪಕ್ಷದ ಮೇಯರ್‌ಗೆ ಬೆದರಿಕೆ ಹಾಕಿದ್ದರು. ನಂತರ ಮುಖವಾಡ ಧರಿಸಿದ ವ್ಯಕ್ತಿಗಳು ಪೊಲೀಸ್ ಪ್ರಧಾನ ಕಚೇರಿ ಮತ್ತು ಚರ್ಚ್‌ಗೆ ಬೆಂಕಿ ಹಚ್ಚಿದರು. ಈ ಅಶಾಂತಿಯಿಂದಾಗಿ 15 ಕ್ಕೂ ಹೆಚ್ಚು ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಕಳೆದ ವರ್ಷ ಅಕ್ಟೋಬರ್ 18 ರಿಂದ ಪ್ರಾರಂಭವಾದ ಪ್ರತಿಭಟನೆಗಳು ಡಿಸೆಂಬರ್ ಮಧ್ಯಭಾಗದವರೆಗೆ ಚಿಲಿ ದೇಶಾದ್ಯಂತ ಪಿಂಚಣಿ, ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಗಳಲ್ಲಿ ಸುಧಾರಣೆಗಳನ್ನು ತರಲು ಒತ್ತಾಯಿಸುತ್ತಿದ್ದವು. ಅಂದು ನಡೆದಿದ್ದ ಗಲಭೆ ಮತ್ತು ಲೂಟಿಯಿಂದಾಗಿ ದೇಶದ ವ್ಯವಹಾರಗಳು ಮತ್ತು ಮೂಲಸೌಕರ್ಯಗಳಿಗೆ ಶತಕೋಟಿ ಡಾಲರ್ ನಷ್ಟ ಉಂಟಾಗಿತ್ತು.

ಸ್ಯಾಂಟಿಯಾಗೊದಲ್ಲಿ ನಡೆದ ಭಾನುವಾರದ ರ್‍ಯಾಲಿಯಲ್ಲಿ ಸಂಜೆ 6 ರ ಹೊತ್ತಿಗೆ ಸುಮಾರು 25 ಸಾವಿರ ಜನರು ಸೇರಿದ್ದರು ಎಂದು ಪೊಲೀಸರು ಅಂದಾಜಿಸಿದ್ದಾರೆ. ಇದು 2019 ರ ಪ್ರತಿಭಟನೆಗಿಂತ ಚಿಕ್ಕ ಪ್ರತಿಭಟನೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ಇದನ್ನೂ ಓದಿ: ನ್ಯೂಜಿಲೆಂಡ್ ಚುನಾವಣೆ: ಪ್ರಧಾನಿ ಜಸಿಂಡಾ ಅರ್ಡೆರ್ನ್‌ರ ಲೇಬರ್ ಪಕ್ಷಕ್ಕೆ ಭರ್ಜರಿ ಜಯ!

ಕಳೆದ ಕೆಲವು ದಿನಗಳಿಂದ ಸಣ್ಣಪುಟ್ಟ ಪ್ರತಿಭಟನೆಗಳು ಸೇರಿದಂತೆ ಹಲವು ಹಿಂಸಾಚಾರಗಳು ಚಿಲಿಯಲ್ಲಿ ಪ್ರಾರಂಭವಾಗಿದೆ. 60 ಲಕ್ಷ ಜನಸಂಖ್ಯೆಯಿರುವ ರಾಜಧಾನಿಯು ಕೊರೊನಾದಿಂದ ತಿಂಗಳುಗಳ ಕಾಲ ಲಾಕ್‌ಡೌನ್ ಆಗಿತ್ತು. ಭಾನುವಾರದ ಪ್ರತಿಭಟನೆಯಲ್ಲಿ ಹೆಚ್ಚಿನ ಪ್ರತಿಭಟನಾಕಾರರು ಮುಖವಾಡಗಳನ್ನು ಧರಿಸಿದ್ದರು ಎಂದು ಟೆಲಿಗ್ರಾಫ್ ಬರೆದಿದೆ.

ಇದನ್ನೂ ಓದಿ: ಪೋಲೆಂಡ್: 2ನೇ ಮಹಾಯುದ್ಧದ ಅತಿದೊಡ್ಡ ಬಾಂಬ್ ಸ್ಫೋಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...