Homeಅಂತರಾಷ್ಟ್ರೀಯಚಿಲಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

ಚಿಲಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

- Advertisement -
- Advertisement -

ಚಿಲಿ ರಾಜಧಾನಿ ಸ್ಯಾಂಟಿಯಾಗೋದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಿಭಟನಾಕಾರರು 19 ನೇ ಶತಮಾನದ ಹಳೆಯ ಚರ್ಚು ಸೇರಿದಂತೆ ಎರಡು ಚರ್ಚುಗಳನ್ನು ಸುಟ್ಟುಹಾಕಿದ್ದಾರೆ. ಭಾನುವಾರ ಶಾಂತಿಯುತವಾಗಿ ರ್‍ಯಾಲಿಗಳು ನಡೆದಿದ್ದು, ನಂತರ ಈ ಪ್ರತಿಭಟನೆ ಗಲಭೆಗೆ ತಿರುಗಿದೆ. ಕಳೆದ ವರ್ಷ ನಡೆದ ಪ್ರತಿಭಟನೆಯಲ್ಲಿ 30 ಜನರು ಮೃತಪಟ್ಟಿದ್ದು ಸಾವಿರಾರು ಜನರು ಗಾಯಗೊಂಡಿದ್ದರು. ಈಗ ಈ ಪ್ರತಿಭಟನೆಯ ವರ್ಷಾಚರಣೆಯಲ್ಲಿ ಮತ್ತೆ ಗಲಭೆ ಭುಗಿಲೆದ್ದಿದೆ.

2019 ರ ಪ್ರತಿಭಟನೆಯ ಪ್ರಮುಖ ಬೇಡಿಕೆಯಾದ ದೇಶದ ಸರ್ವಾಧಿಕಾರ-ಯುಗದ ಸಂವಿಧಾನವನ್ನು ರದ್ದುಗೊಳಿಸಬೇಕೆ ಎಂಬ ಜನಾಭಿಪ್ರಾಯ ಸಂಗ್ರಹಣೆಯಲ್ಲಿ “ಹೌದು” ಎಂದು ಮತ ಚಲಾಯಿಸುಂತೆ ಕರೆ ಕೊಡುವ ಘೋಷಣಾ ಪತ್ರವನ್ನು ಪ್ರತಿಭಟನಾಗಾರರು ಹಿಡಿದಿದ್ದರು. ಅಕ್ಟೋಬರ್ 25 ರ ರಂದು ಅಲ್ಲಿ ಜನಾಭಿಪ್ರಾಯ ಸಂಗ್ರಹಣೆ ನಡೆಯಲಿದೆ.

ಇದನ್ನೂ ಓದಿ: ಬೊಲಿವಿಯಾ ಚುನಾವಣೆ: ಅಮೆರಿಕಾ ಪ್ರೇರಿತ ದಂಗೆಯ ಹೊರತಾಗಿಯೂ ಎಡಪಕ್ಷಕ್ಕೆ ಭರ್ಜರಿ ಜಯ!

PC: AFP

ಪ್ರತಿಭಟನೆಗಳು ಆರಂಭದಲ್ಲಿ ಶಾಂತಿಯುತವಾಗಿದ್ದರೂ ನಂತರ ಹಿಂಸಾಚಾರ ಘಟನೆಗಳು ನಡೆದವು, ಸೂಪರ್‌ರ್ಮಾರ್ಕೆಟ್‌‌ಗಳನ್ನು ಲೂಟಿ ಮಾಡುವುದು ಸೇರಿದಂತೆ ರಾಜಧಾನಿಯಾದ್ಯಂತ ಪೊಲೀಸರೊಂದಿಗೆ ಘರ್ಷಣೆಗಳು ಸಂಭವಿಸಿದವು.

ಹಿಂಸಾಚಾರಗಳು ಭುಗಿಲೇಳುವ ಮೊದಲು ಮಾತನಾಡಿದ ಆಂತರಿಕ ವ್ಯವಹಾರಗಳ ಸಚಿವ ವಿಕ್ಟರ್ ಪೆರೆಜ್ ಮಾತನಾಡಿ, ಶಾಂತಿಯುತ ರ್‍ಯಾಲಿಗಳನ್ನು ಶ್ಲಾಘಿಸಿದ್ದರು. ಮುಂಬರುವ ಅಕ್ಟೋಬರ್ 25 ರ ಸಾಂವಿಧಾನಿಕ ಜನಾಭಿಪ್ರಾಯ ಸಂಗ್ರಹಣೆಯಲ್ಲಿ ಮತದಾನ ಮಾಡುವ ಮೂಲಕ ತಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಬೇಕೆಂದು ಅವರು ಚಿಲಿಯನ್ನರಿಗೆ ಕರೆ ನೀಡಿದ್ದರು.

PC: Getty

“ಹಿಂಸಾಚಾರ ನಡೆಸುವವರು ಚಿಲಿಯ ಸಮಸ್ಯೆಗಳನ್ನು ಪ್ರಜಾಪ್ರಭುತ್ವದ ವಿಧಾನಗಳ ಮೂಲಕ ಪರಿಹರಿಸುವುದನ್ನು ಬಯಸುವುದಿಲ್ಲ” ಎಂದು ಪೆರೆಜ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದು, ಭಾನುವಾರ ನಡೆಯುವ ಜನಾಭಿಪ್ರಾಯ ಸಂಗ್ರಹಣಾ ಸಮಯದಲ್ಲಿ ಕಾನೂನು ಉಲ್ಲಂಘಿಸಿದರೆ ಶಿಕ್ಷೆ ವಿಧಿಸುವುದಾಗಿ ಹೇಳಿದರು.

ಇದನ್ನೂ ಓದಿ: ಸೋಶಿಯಲಿಸಂ-ಕಮ್ಯುನಿಸಂ ವಿರುದ್ಧದ ಹೋರಾಟದಲ್ಲಿ ಭಾರತ-ಅಮೇರಿಕಾ ಒಂದಾಗಬೇಕು: Jr. ಟ್ರಂಪ್

ಮುಂಜಾನೆ ಉದ್ರಿಕ್ತ ಜನರ ಗುಂಪು ಕಮ್ಯುನಿಸ್ಟ್ ಪಕ್ಷದ ಮೇಯರ್‌ಗೆ ಬೆದರಿಕೆ ಹಾಕಿದ್ದರು. ನಂತರ ಮುಖವಾಡ ಧರಿಸಿದ ವ್ಯಕ್ತಿಗಳು ಪೊಲೀಸ್ ಪ್ರಧಾನ ಕಚೇರಿ ಮತ್ತು ಚರ್ಚ್‌ಗೆ ಬೆಂಕಿ ಹಚ್ಚಿದರು. ಈ ಅಶಾಂತಿಯಿಂದಾಗಿ 15 ಕ್ಕೂ ಹೆಚ್ಚು ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಕಳೆದ ವರ್ಷ ಅಕ್ಟೋಬರ್ 18 ರಿಂದ ಪ್ರಾರಂಭವಾದ ಪ್ರತಿಭಟನೆಗಳು ಡಿಸೆಂಬರ್ ಮಧ್ಯಭಾಗದವರೆಗೆ ಚಿಲಿ ದೇಶಾದ್ಯಂತ ಪಿಂಚಣಿ, ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಗಳಲ್ಲಿ ಸುಧಾರಣೆಗಳನ್ನು ತರಲು ಒತ್ತಾಯಿಸುತ್ತಿದ್ದವು. ಅಂದು ನಡೆದಿದ್ದ ಗಲಭೆ ಮತ್ತು ಲೂಟಿಯಿಂದಾಗಿ ದೇಶದ ವ್ಯವಹಾರಗಳು ಮತ್ತು ಮೂಲಸೌಕರ್ಯಗಳಿಗೆ ಶತಕೋಟಿ ಡಾಲರ್ ನಷ್ಟ ಉಂಟಾಗಿತ್ತು.

ಸ್ಯಾಂಟಿಯಾಗೊದಲ್ಲಿ ನಡೆದ ಭಾನುವಾರದ ರ್‍ಯಾಲಿಯಲ್ಲಿ ಸಂಜೆ 6 ರ ಹೊತ್ತಿಗೆ ಸುಮಾರು 25 ಸಾವಿರ ಜನರು ಸೇರಿದ್ದರು ಎಂದು ಪೊಲೀಸರು ಅಂದಾಜಿಸಿದ್ದಾರೆ. ಇದು 2019 ರ ಪ್ರತಿಭಟನೆಗಿಂತ ಚಿಕ್ಕ ಪ್ರತಿಭಟನೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ಇದನ್ನೂ ಓದಿ: ನ್ಯೂಜಿಲೆಂಡ್ ಚುನಾವಣೆ: ಪ್ರಧಾನಿ ಜಸಿಂಡಾ ಅರ್ಡೆರ್ನ್‌ರ ಲೇಬರ್ ಪಕ್ಷಕ್ಕೆ ಭರ್ಜರಿ ಜಯ!

ಕಳೆದ ಕೆಲವು ದಿನಗಳಿಂದ ಸಣ್ಣಪುಟ್ಟ ಪ್ರತಿಭಟನೆಗಳು ಸೇರಿದಂತೆ ಹಲವು ಹಿಂಸಾಚಾರಗಳು ಚಿಲಿಯಲ್ಲಿ ಪ್ರಾರಂಭವಾಗಿದೆ. 60 ಲಕ್ಷ ಜನಸಂಖ್ಯೆಯಿರುವ ರಾಜಧಾನಿಯು ಕೊರೊನಾದಿಂದ ತಿಂಗಳುಗಳ ಕಾಲ ಲಾಕ್‌ಡೌನ್ ಆಗಿತ್ತು. ಭಾನುವಾರದ ಪ್ರತಿಭಟನೆಯಲ್ಲಿ ಹೆಚ್ಚಿನ ಪ್ರತಿಭಟನಾಕಾರರು ಮುಖವಾಡಗಳನ್ನು ಧರಿಸಿದ್ದರು ಎಂದು ಟೆಲಿಗ್ರಾಫ್ ಬರೆದಿದೆ.

ಇದನ್ನೂ ಓದಿ: ಪೋಲೆಂಡ್: 2ನೇ ಮಹಾಯುದ್ಧದ ಅತಿದೊಡ್ಡ ಬಾಂಬ್ ಸ್ಫೋಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...