Homeಅಂತರಾಷ್ಟ್ರೀಯಚಿಲಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

ಚಿಲಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

- Advertisement -
- Advertisement -

ಚಿಲಿ ರಾಜಧಾನಿ ಸ್ಯಾಂಟಿಯಾಗೋದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಿಭಟನಾಕಾರರು 19 ನೇ ಶತಮಾನದ ಹಳೆಯ ಚರ್ಚು ಸೇರಿದಂತೆ ಎರಡು ಚರ್ಚುಗಳನ್ನು ಸುಟ್ಟುಹಾಕಿದ್ದಾರೆ. ಭಾನುವಾರ ಶಾಂತಿಯುತವಾಗಿ ರ್‍ಯಾಲಿಗಳು ನಡೆದಿದ್ದು, ನಂತರ ಈ ಪ್ರತಿಭಟನೆ ಗಲಭೆಗೆ ತಿರುಗಿದೆ. ಕಳೆದ ವರ್ಷ ನಡೆದ ಪ್ರತಿಭಟನೆಯಲ್ಲಿ 30 ಜನರು ಮೃತಪಟ್ಟಿದ್ದು ಸಾವಿರಾರು ಜನರು ಗಾಯಗೊಂಡಿದ್ದರು. ಈಗ ಈ ಪ್ರತಿಭಟನೆಯ ವರ್ಷಾಚರಣೆಯಲ್ಲಿ ಮತ್ತೆ ಗಲಭೆ ಭುಗಿಲೆದ್ದಿದೆ.

2019 ರ ಪ್ರತಿಭಟನೆಯ ಪ್ರಮುಖ ಬೇಡಿಕೆಯಾದ ದೇಶದ ಸರ್ವಾಧಿಕಾರ-ಯುಗದ ಸಂವಿಧಾನವನ್ನು ರದ್ದುಗೊಳಿಸಬೇಕೆ ಎಂಬ ಜನಾಭಿಪ್ರಾಯ ಸಂಗ್ರಹಣೆಯಲ್ಲಿ “ಹೌದು” ಎಂದು ಮತ ಚಲಾಯಿಸುಂತೆ ಕರೆ ಕೊಡುವ ಘೋಷಣಾ ಪತ್ರವನ್ನು ಪ್ರತಿಭಟನಾಗಾರರು ಹಿಡಿದಿದ್ದರು. ಅಕ್ಟೋಬರ್ 25 ರ ರಂದು ಅಲ್ಲಿ ಜನಾಭಿಪ್ರಾಯ ಸಂಗ್ರಹಣೆ ನಡೆಯಲಿದೆ.

ಇದನ್ನೂ ಓದಿ: ಬೊಲಿವಿಯಾ ಚುನಾವಣೆ: ಅಮೆರಿಕಾ ಪ್ರೇರಿತ ದಂಗೆಯ ಹೊರತಾಗಿಯೂ ಎಡಪಕ್ಷಕ್ಕೆ ಭರ್ಜರಿ ಜಯ!

PC: AFP

ಪ್ರತಿಭಟನೆಗಳು ಆರಂಭದಲ್ಲಿ ಶಾಂತಿಯುತವಾಗಿದ್ದರೂ ನಂತರ ಹಿಂಸಾಚಾರ ಘಟನೆಗಳು ನಡೆದವು, ಸೂಪರ್‌ರ್ಮಾರ್ಕೆಟ್‌‌ಗಳನ್ನು ಲೂಟಿ ಮಾಡುವುದು ಸೇರಿದಂತೆ ರಾಜಧಾನಿಯಾದ್ಯಂತ ಪೊಲೀಸರೊಂದಿಗೆ ಘರ್ಷಣೆಗಳು ಸಂಭವಿಸಿದವು.

ಹಿಂಸಾಚಾರಗಳು ಭುಗಿಲೇಳುವ ಮೊದಲು ಮಾತನಾಡಿದ ಆಂತರಿಕ ವ್ಯವಹಾರಗಳ ಸಚಿವ ವಿಕ್ಟರ್ ಪೆರೆಜ್ ಮಾತನಾಡಿ, ಶಾಂತಿಯುತ ರ್‍ಯಾಲಿಗಳನ್ನು ಶ್ಲಾಘಿಸಿದ್ದರು. ಮುಂಬರುವ ಅಕ್ಟೋಬರ್ 25 ರ ಸಾಂವಿಧಾನಿಕ ಜನಾಭಿಪ್ರಾಯ ಸಂಗ್ರಹಣೆಯಲ್ಲಿ ಮತದಾನ ಮಾಡುವ ಮೂಲಕ ತಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಬೇಕೆಂದು ಅವರು ಚಿಲಿಯನ್ನರಿಗೆ ಕರೆ ನೀಡಿದ್ದರು.

PC: Getty

“ಹಿಂಸಾಚಾರ ನಡೆಸುವವರು ಚಿಲಿಯ ಸಮಸ್ಯೆಗಳನ್ನು ಪ್ರಜಾಪ್ರಭುತ್ವದ ವಿಧಾನಗಳ ಮೂಲಕ ಪರಿಹರಿಸುವುದನ್ನು ಬಯಸುವುದಿಲ್ಲ” ಎಂದು ಪೆರೆಜ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದು, ಭಾನುವಾರ ನಡೆಯುವ ಜನಾಭಿಪ್ರಾಯ ಸಂಗ್ರಹಣಾ ಸಮಯದಲ್ಲಿ ಕಾನೂನು ಉಲ್ಲಂಘಿಸಿದರೆ ಶಿಕ್ಷೆ ವಿಧಿಸುವುದಾಗಿ ಹೇಳಿದರು.

ಇದನ್ನೂ ಓದಿ: ಸೋಶಿಯಲಿಸಂ-ಕಮ್ಯುನಿಸಂ ವಿರುದ್ಧದ ಹೋರಾಟದಲ್ಲಿ ಭಾರತ-ಅಮೇರಿಕಾ ಒಂದಾಗಬೇಕು: Jr. ಟ್ರಂಪ್

ಮುಂಜಾನೆ ಉದ್ರಿಕ್ತ ಜನರ ಗುಂಪು ಕಮ್ಯುನಿಸ್ಟ್ ಪಕ್ಷದ ಮೇಯರ್‌ಗೆ ಬೆದರಿಕೆ ಹಾಕಿದ್ದರು. ನಂತರ ಮುಖವಾಡ ಧರಿಸಿದ ವ್ಯಕ್ತಿಗಳು ಪೊಲೀಸ್ ಪ್ರಧಾನ ಕಚೇರಿ ಮತ್ತು ಚರ್ಚ್‌ಗೆ ಬೆಂಕಿ ಹಚ್ಚಿದರು. ಈ ಅಶಾಂತಿಯಿಂದಾಗಿ 15 ಕ್ಕೂ ಹೆಚ್ಚು ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಕಳೆದ ವರ್ಷ ಅಕ್ಟೋಬರ್ 18 ರಿಂದ ಪ್ರಾರಂಭವಾದ ಪ್ರತಿಭಟನೆಗಳು ಡಿಸೆಂಬರ್ ಮಧ್ಯಭಾಗದವರೆಗೆ ಚಿಲಿ ದೇಶಾದ್ಯಂತ ಪಿಂಚಣಿ, ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಗಳಲ್ಲಿ ಸುಧಾರಣೆಗಳನ್ನು ತರಲು ಒತ್ತಾಯಿಸುತ್ತಿದ್ದವು. ಅಂದು ನಡೆದಿದ್ದ ಗಲಭೆ ಮತ್ತು ಲೂಟಿಯಿಂದಾಗಿ ದೇಶದ ವ್ಯವಹಾರಗಳು ಮತ್ತು ಮೂಲಸೌಕರ್ಯಗಳಿಗೆ ಶತಕೋಟಿ ಡಾಲರ್ ನಷ್ಟ ಉಂಟಾಗಿತ್ತು.

ಸ್ಯಾಂಟಿಯಾಗೊದಲ್ಲಿ ನಡೆದ ಭಾನುವಾರದ ರ್‍ಯಾಲಿಯಲ್ಲಿ ಸಂಜೆ 6 ರ ಹೊತ್ತಿಗೆ ಸುಮಾರು 25 ಸಾವಿರ ಜನರು ಸೇರಿದ್ದರು ಎಂದು ಪೊಲೀಸರು ಅಂದಾಜಿಸಿದ್ದಾರೆ. ಇದು 2019 ರ ಪ್ರತಿಭಟನೆಗಿಂತ ಚಿಕ್ಕ ಪ್ರತಿಭಟನೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ಇದನ್ನೂ ಓದಿ: ನ್ಯೂಜಿಲೆಂಡ್ ಚುನಾವಣೆ: ಪ್ರಧಾನಿ ಜಸಿಂಡಾ ಅರ್ಡೆರ್ನ್‌ರ ಲೇಬರ್ ಪಕ್ಷಕ್ಕೆ ಭರ್ಜರಿ ಜಯ!

ಕಳೆದ ಕೆಲವು ದಿನಗಳಿಂದ ಸಣ್ಣಪುಟ್ಟ ಪ್ರತಿಭಟನೆಗಳು ಸೇರಿದಂತೆ ಹಲವು ಹಿಂಸಾಚಾರಗಳು ಚಿಲಿಯಲ್ಲಿ ಪ್ರಾರಂಭವಾಗಿದೆ. 60 ಲಕ್ಷ ಜನಸಂಖ್ಯೆಯಿರುವ ರಾಜಧಾನಿಯು ಕೊರೊನಾದಿಂದ ತಿಂಗಳುಗಳ ಕಾಲ ಲಾಕ್‌ಡೌನ್ ಆಗಿತ್ತು. ಭಾನುವಾರದ ಪ್ರತಿಭಟನೆಯಲ್ಲಿ ಹೆಚ್ಚಿನ ಪ್ರತಿಭಟನಾಕಾರರು ಮುಖವಾಡಗಳನ್ನು ಧರಿಸಿದ್ದರು ಎಂದು ಟೆಲಿಗ್ರಾಫ್ ಬರೆದಿದೆ.

ಇದನ್ನೂ ಓದಿ: ಪೋಲೆಂಡ್: 2ನೇ ಮಹಾಯುದ್ಧದ ಅತಿದೊಡ್ಡ ಬಾಂಬ್ ಸ್ಫೋಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...