Homeಮುಖಪುಟಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

"ಪ್ರಕರಣವು ಹತ್ಯೆಯೇ ಅಥವಾ ಆತ್ಮಹತ್ಯೆ ಎಂಬ ತನಿಖೆಯಲ್ಲಿದ್ದಾಗ, ಒಂದು ಚಾನೆಲ್ ಇದು ಕೊಲೆ ಎಂದು ಹೇಳುತ್ತಿರುವುದು ತನಿಖಾ ಪತ್ರಿಕೋದ್ಯಮವೇ?" ಎಂದು ನ್ಯಾಯಪೀಠ ಕೇಳಿದೆ.

- Advertisement -
- Advertisement -

ಪ್ರಕರಣವೊಂದರಲ್ಲಿ ಯಾರನ್ನು ಬಂಧಿಸಬೇಕು ಎಂದು ಸಾರ್ವಜನಿಕರನ್ನು ಕೇಳುವುದು ತನಿಖಾ ಪತ್ರಿಕೋದ್ಯಮದ ಭಾಗವೇ ಎಂದು ಬಾಂಬೆ ಹೈಕೋರ್ಟ್ ರಿಪಬ್ಲಿಕ್ ಟಿವಿ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿದೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ನಿಧನದ ನಂತರ ಟ್ವಿಟ್ಟರ್‌ನಲ್ಲಿ ರಿಪಬ್ಲಿಕ್ ಚಾನೆಲ್ ನಡೆಸುತ್ತಿರುವ ‘#ಅರೆಸ್ಟ್ ರಿಯಾ’ ಎಂಬ ಹ್ಯಾಶ್‌ಟ್ಯಾಗ್ ಅಭಿಯಾನವನ್ನು ಉಲ್ಲೇಖಿಸಿ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಜಿ.ಎಸ್.ಕುಲಕರ್ಣಿ ಅವರನ್ನೊಳಗೊಂಡ ನ್ಯಾಯಪೀಠ ಈ ಪ್ರಶ್ನೆಯನ್ನು ಮುಂದಿಟ್ಟಿದೆ.

“ಇದು ತನಿಖಾ ಪತ್ರಿಕೋದ್ಯಮದ ಭಾಗವೇ? ಯಾರನ್ನು ಬಂಧಿಸಬೇಕು ಎಂಬ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಕೇಳುತ್ತೀರಾ?” ಎಂದು ನ್ಯಾಯಪೀಠವು ಚಾನೆಲ್‌ನ ವಕೀಲ ಅಡ್ವೊಕೇಟ್ ಮಾಳ್ವಿಕಾ ತ್ರಿವೇದಿ ಅವರನ್ನು ಪ್ರಶ್ನಿಸಿದೆ.

ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ಸಂಗತಿಗಳನ್ನು ಬಹಿರಂಗಪಡಿಸಲು ಚಾನೆಲ್ ತನಿಖಾ ಪತ್ರಿಕೋದ್ಯಮವನ್ನು ನಡೆಸುತ್ತಿದೆ ಎಂದು ಈ ಹಿಂದೆ ವಕೀಲರು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಅರ್ನಾಬ್ ರಿಪಬ್ಲಿಕ್ ಚಾನೆಲ್ ವಿರುದ್ಧ PIL: ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

“ಒಂದು ಪ್ರಕರಣವು ಹತ್ಯೆಯೇ ಅಥವಾ ಆತ್ಮಹತ್ಯೆ ಎಂಬ ತನಿಖೆಯಲ್ಲಿದ್ದಾಗ, ಒಂದು ಚಾನೆಲ್ ಇದು ಕೊಲೆ ಎಂದು ಹೇಳುತ್ತಿರುವುದು ತನಿಖಾ ಪತ್ರಿಕೋದ್ಯಮವೇ? ತನಿಖಾ ಅಧಿಕಾರವನ್ನು ಸಿಆರ್‌ಪಿಸಿ ಅಡಿಯಲ್ಲಿ ಪೊಲೀಸರಿಗೆ ನೀಡಲಾಗುತ್ತದೆ” ಎಂದು ನ್ಯಾಯಪೀಠ ಚಾನೆಲ್‌ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿದೆ.

“ಮುಂಬೈ ಪೊಲೀಸ್ ತನಿಖೆಯಲ್ಲಿ ಏನೋ ತಪ್ಪಾಗಿದೆ ಹಾಗಾಗಿ ತನಿಖೆಯನ್ನು ಸುಪ್ರೀಂ ಕೋರ್ಟ್ ಕೇಂದ್ರೀಯ ತನಿಖಾ ದಳಕ್ಕೆ ಒಪ್ಪಿಸಿದೆ. ಸುಶಾಂತ್ ಅವರ ಕುಟುಂಬ ಕೂಡ ನ್ಯಾಯ ಕೋರಿದೆ” ಎಂದು ವಕೀಲರು ತಿಳಿಸಿದರು. ಮೃತ ವ್ಯಕ್ತಿ ಸೆಲಬ್ರಿಟಿ ಆಗಿದ್ದ ಕಾರಣ ಸಾರ್ವಜನಿಕರಿಗೆ ನೈಜ ಸಂಗತಿಗಳನ್ನು ತಿಳಿಯುವ ಕುತೂಹಲವಿದೆ ಎಂದು ನ್ಯಾಯಪೀಠಕ್ಕೆ ಹೇಳಿದರು.

ರಿಪಬ್ಲಿಕ್ ಟಿವಿಯ ತನಿಖಾ ವರದಿಗಳೇ ಶೀನಾ ಬೋರಾ ಕೊಲೆ ಪ್ರಕರಣ ಮತ್ತು ಸುನಂದ ಪುಷ್ಕರ್ ಪ್ರಕರಣದ ನೈಜ ಸಂಗತಿಗಳನ್ನು ಬೆಳಕಿಗೆ ತಂದಿದೆ. ರಿಪಬ್ಲಿಕ್ ಟಿವಿ ತನ್ನದೆ ಚೌಕಟ್ಟಿನೊಳಗೆ ವರದಿಗಳನ್ನು ಮಾಡುತ್ತಿದೆ ಎಂದು ತ್ರಿವೇದಿ ಹೇಳಿದ್ದಾರೆ.

ಆದರೆ, ಸುಶಾಂತ್ ಸಾವು ವರದಿಯಾದ ರೀತಿಗೆ ನ್ಯಾಯಪೀಠ ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಿತು. “ಕೆಲವು ಆತ್ಮಹತ್ಯೆ ವರದಿಗಳನ್ನು ಮಾಡುವ ಮಾರ್ಗಸೂಚಿಗಳಿವೆ. ಮೃತಪಟ್ಟವರ ಬಗ್ಗೆ ನಿಮಗೆ ಗೌರವವಿಲ್ಲವೇ? ಇಂತಹ ವರದಿಗಳು ತುಂಬಾ ದುರದೃಷ್ಟಕರ” ಎಂದು ನ್ಯಾಯಪೀಠ ಟೀಕಿಸಿತು.

ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ವರದಿಯ ಹಿನ್ನೆಲೆಯಲ್ಲಿ ಮಾಧ್ಯಮ ವಿಚಾರಣೆಯ ಬಗ್ಗೆ ನಿಯಮಗಳನ್ನು ಕೋರಿದ್ದ ಪಿಐಎಲ್‌ಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಪತ್ರಕರ್ತ ಅರ್ನಾಬ್ ಗೋಸ್ವಾಮಿ ಮತ್ತು ಅವರ ಚಾನೆಲ್ “ವಿಕೃತ ಮತ್ತು ದಾರಿತಪ್ಪಿಸುವ ಸಂಗತಿಗಳನ್ನು” ವರದಿ ಮಾಡುತ್ತಿದೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲೂ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.


ಇದನ್ನೂ ಓದಿ:  ರಿಪಬ್ಲಿಕ್ ಟಿವಿಯಲ್ಲಿ TRP ಹಗರಣದ ಸುದ್ದಿ ಪ್ರಸಾರವನ್ನು ತಡೆಯುವಂತೆ ಕೋರ್ಟ್‌ಗೆ‌‌ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...