Homeಮುಖಪುಟಮಹಾರಾಷ್ಟ್ರ: ಬಿಜೆಪಿ ತೊರೆದ ಏಕನಾಥ್ ಖಾಡ್ಸೆ; ಶುಕ್ರವಾರ ಎನ್‌ಸಿಪಿಗೆ ಸೇರ್ಪಡೆ

ಮಹಾರಾಷ್ಟ್ರ: ಬಿಜೆಪಿ ತೊರೆದ ಏಕನಾಥ್ ಖಾಡ್ಸೆ; ಶುಕ್ರವಾರ ಎನ್‌ಸಿಪಿಗೆ ಸೇರ್ಪಡೆ

ನಾವು ಅವರೊಂದಿಗೆ ಸಂವಾದದ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೇವೆ. ಆದರೆ ಅದು ಸಫಲವಾಗಲಿಲ್ಲ. ಅವರಿಗೆ ಶುಭವಾಗಲಿ. ಪಕ್ಷದ ಸಣ್ಣ ಕಾರ್ಯಕರ್ತರೂ ಬಿಜೆಪಿಯನ್ನು ತೊರೆಯುವುದು ಪಕ್ಷಕ್ಕೆ ನಷ್ಟ- ಬಿಜೆಪಿಯ ಕೇಶವ್ ಉಪಾಧ್ಯಾಯ

- Advertisement -
- Advertisement -

ಮಹಾರಾಷ್ಟ್ರ ಬಿಜೆಪಿಯ ಹಿರಿಯ ನಾಯಕ ಏಕನಾಥ್ ಖಾಡ್ಸೆ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಶುಕ್ರವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಈ ಬಗ್ಗೆ ಎನ್​ಸಿಪಿ ನಾಯಕ ಜಯಂತ್ ಪಾಟೀಲ್ ಮಾಹಿತಿ ನೀಡಿದ್ದಾರೆ.

“ಮಹಾರಾಷ್ಟ್ರದ ಬಿಜೆಪಿಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ಹಿರಿಯ ಬಿಜೆಪಿ ನಾಯಕ ಏಕನಾಥ್ ಖಾಡ್ಸೆ ತಮ್ಮ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದಾರೆ. ಸ್ವಲ್ಪ ಸಮಯದ ಹಿಂದೆ ಅವರು ತಮ್ಮ ನಿರ್ಧಾರದ ಬಗ್ಗೆ ನನಗೆ ಮಾಹಿತಿ ನೀಡಿದ್ದಾರೆ. ಇದು ಎನ್‌ಸಿಪಿಯಲ್ಲಿ ಅವರ ಪ್ರವೇಶಕ್ಕೆ ದಾರಿ ಮಾಡಿಕೊಟ್ಟಿದೆ. ಶುಕ್ರವಾರ ಮಧ್ಯಾಹ್ನ ಖಾಡ್ಸೆ ಪಕ್ಷಕ್ಕೆ ಸೇರುತ್ತಾರೆ ”ಎಂದು ಪಾಟೀಲ್ ಹೇಳಿದ್ದಾರೆ.

 

ಬುಧವಾರ ರಾಜೀನಾಮೆ ನೀಡಿದ ನಂತರ ಖಾಡ್ಸೆ, ತಾವು ಪಕ್ಷವನ್ನು ತೊರೆಯಲು ಪ್ರಮುಖ ಕಾರಣ ಮಾಜಿ ಮುಖ್ಯಮಂತ್ರಿ ಮತ್ತು ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಎಂದು ಹೇಳಿದ್ದಾರೆ. ತಾವು ಮಾತ್ರ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದು, ಬೇರೆ ಯಾವುದೇ ಪಕ್ಷದ ಶಾಸಕರು ಅಥವಾ ಸಂಸದರು ಅವರೊಂದಿಗೆ ಎನ್‌ಸಿಪಿಗೆ ಸೇರ್ಪಡೆಯಾಗುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ರಾಜ್ಯಪಾಲರ ಮಾತಿನಲ್ಲಿ ನಿಯಂತ್ರಣ ಇರಬೇಕಿತ್ತು: ಅಮಿತ್ ಶಾ!

ಕಂದಾಯ ಸಚಿವ ಮತ್ತು ಇತರ 11 ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿದ್ದ ಖಾಡ್ಸೆ, 2016 ರ ಜೂನ್‌ನಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸಿದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಾಲ್ಕು ದಶಕಗಳ ಕಾಲ ಪಕ್ಷದೊಂದಿಗೆ ಕೆಲಸ ಮಾಡಿ, ಇಂದು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಫಡ್ನವೀಸ್ ಹೊರತುಪಡಿಸಿ ಪಕ್ಷದ ಬೇರೆ ಯಾವುದೇ ಮುಖಂಡರೊಂದಿಗೆ ಅಸಮಾಧಾನ ಹೊಂದಿಲ್ಲ ಎಂದು ಖಾಡ್ಸೆ ಹೇಳಿದ್ದಾರೆ. “ರಾಷ್ಟ್ರೀಯ ಅಥವಾ ರಾಜ್ಯ ನಾಯಕತ್ವದಿಂದ ಬೇರೆ ಯಾವುದೇ ನಾಯಕರ ವಿರುದ್ಧ ನನಗೆ ಯಾವುದೇ ಸಮಸ್ಯೆಯಿಲ್ಲ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬಗ್ಗೆ ಅಸಮಾಧಾನವಿದೆ. ಅವರು ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದರು. ಎಷ್ಟೂ ಪ್ರಕರಣಗಳಿಂದ ನಾನಿನ್ನು ಹೊರ ಬಂದಿಲ್ಲ. ಈ ರೀತಿಯ ಶಿಕ್ಷೆಗೆ ಕಾರಣ ನೀಡುವಂತೆ ಫಡ್ನವೀಸ್ ಅವರನ್ನು ವಿವಿಧ ವೇದಿಕೆಗಳಲ್ಲಿ ಒತ್ತಾಯಿಸಿದ್ದೇನೆ. ಆದರೆ ನನಗೆ ಯಾವತ್ತೂ ಉತ್ತರ ಸಿಕ್ಕಿಲ್ಲ” ಎಂದು ಅವರು ಹೇಳಿದರು.

ಕಳೆದ ವರ್ಷ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ಏಕನಾಥ್ ಖಾಡ್ಸೆ ಅವರಿಗೆ ಚುನಾವಣಾ ಟಿಕೆಟ್ ನಿರಾಕರಿಸಲಾಗಿತ್ತು.

ರಾಜ್ಯ ಬಿಜೆಪಿಯ ವಕ್ತಾರ ಕೇಶವ್ ಉಪಾಧ್ಯಾಯ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಅವರು ರಾಜೀನಾಮೆಯನ್ನು ಸ್ವೀಕರಿಸಿದ್ದಾರೆ. ನಾವು ಅವರೊಂದಿಗೆ ಸಂವಾದದ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೇವೆ. ಆದರೆ ಅದು ಸಫಲವಾಗಲಿಲ್ಲ. ಅವರಿಗೆ ಶುಭವಾಗಲಿ. ಪಕ್ಷದ ಸಣ್ಣ ಕಾರ್ಯಕರ್ತರೂ ಬಿಜೆಪಿಯನ್ನು ತೊರೆಯುವುದು ಪಕ್ಷಕ್ಕೆ ನಷ್ಟ” ಎಂದಿದ್ದಾರೆ.

ಫಡ್ನವೀಸ್ ವಿರುದ್ಧ ಏಕನಾಥ್ ಖಾಡ್ಸೆ ಅವರ ಆರೋಪಗಳು ಆಧಾರ ರಹಿತವಾಗಿವೆ ಎಂದು ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ. ಈ ನಿರ್ಧಾರ ದುರದೃಷ್ಟಕರ, ಆದರೆ ಖಾಡ್ಸೆ ರಾಜೀನಾಮೆ ನೀಡುವ ಅಗತ್ಯವಿರಲಿಲ್ಲ ಎಂದಿದ್ದಾರೆ.


ಇದನ್ನೂ ಓದಿ:  ಮಹಾರಾಷ್ಟ್ರ ರಾಜ್ಯಪಾಲರ ಪತ್ರ ವಿವಾದ; ಸ್ವಾಭಿಮಾನಿಗಳು ಹುದ್ದೆಯಲ್ಲಿ ಮುಂದುವರಿಯುವುದಿಲ್ಲ: ಶರದ್ ಪವಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...