Homeಮುಖಪುಟಮಹಾರಾಷ್ಟ್ರ: ಬಿಜೆಪಿ ತೊರೆದ ಏಕನಾಥ್ ಖಾಡ್ಸೆ; ಶುಕ್ರವಾರ ಎನ್‌ಸಿಪಿಗೆ ಸೇರ್ಪಡೆ

ಮಹಾರಾಷ್ಟ್ರ: ಬಿಜೆಪಿ ತೊರೆದ ಏಕನಾಥ್ ಖಾಡ್ಸೆ; ಶುಕ್ರವಾರ ಎನ್‌ಸಿಪಿಗೆ ಸೇರ್ಪಡೆ

ನಾವು ಅವರೊಂದಿಗೆ ಸಂವಾದದ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೇವೆ. ಆದರೆ ಅದು ಸಫಲವಾಗಲಿಲ್ಲ. ಅವರಿಗೆ ಶುಭವಾಗಲಿ. ಪಕ್ಷದ ಸಣ್ಣ ಕಾರ್ಯಕರ್ತರೂ ಬಿಜೆಪಿಯನ್ನು ತೊರೆಯುವುದು ಪಕ್ಷಕ್ಕೆ ನಷ್ಟ- ಬಿಜೆಪಿಯ ಕೇಶವ್ ಉಪಾಧ್ಯಾಯ

- Advertisement -
- Advertisement -

ಮಹಾರಾಷ್ಟ್ರ ಬಿಜೆಪಿಯ ಹಿರಿಯ ನಾಯಕ ಏಕನಾಥ್ ಖಾಡ್ಸೆ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಶುಕ್ರವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಈ ಬಗ್ಗೆ ಎನ್​ಸಿಪಿ ನಾಯಕ ಜಯಂತ್ ಪಾಟೀಲ್ ಮಾಹಿತಿ ನೀಡಿದ್ದಾರೆ.

“ಮಹಾರಾಷ್ಟ್ರದ ಬಿಜೆಪಿಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ಹಿರಿಯ ಬಿಜೆಪಿ ನಾಯಕ ಏಕನಾಥ್ ಖಾಡ್ಸೆ ತಮ್ಮ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದಾರೆ. ಸ್ವಲ್ಪ ಸಮಯದ ಹಿಂದೆ ಅವರು ತಮ್ಮ ನಿರ್ಧಾರದ ಬಗ್ಗೆ ನನಗೆ ಮಾಹಿತಿ ನೀಡಿದ್ದಾರೆ. ಇದು ಎನ್‌ಸಿಪಿಯಲ್ಲಿ ಅವರ ಪ್ರವೇಶಕ್ಕೆ ದಾರಿ ಮಾಡಿಕೊಟ್ಟಿದೆ. ಶುಕ್ರವಾರ ಮಧ್ಯಾಹ್ನ ಖಾಡ್ಸೆ ಪಕ್ಷಕ್ಕೆ ಸೇರುತ್ತಾರೆ ”ಎಂದು ಪಾಟೀಲ್ ಹೇಳಿದ್ದಾರೆ.

 

ಬುಧವಾರ ರಾಜೀನಾಮೆ ನೀಡಿದ ನಂತರ ಖಾಡ್ಸೆ, ತಾವು ಪಕ್ಷವನ್ನು ತೊರೆಯಲು ಪ್ರಮುಖ ಕಾರಣ ಮಾಜಿ ಮುಖ್ಯಮಂತ್ರಿ ಮತ್ತು ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಎಂದು ಹೇಳಿದ್ದಾರೆ. ತಾವು ಮಾತ್ರ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದು, ಬೇರೆ ಯಾವುದೇ ಪಕ್ಷದ ಶಾಸಕರು ಅಥವಾ ಸಂಸದರು ಅವರೊಂದಿಗೆ ಎನ್‌ಸಿಪಿಗೆ ಸೇರ್ಪಡೆಯಾಗುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ರಾಜ್ಯಪಾಲರ ಮಾತಿನಲ್ಲಿ ನಿಯಂತ್ರಣ ಇರಬೇಕಿತ್ತು: ಅಮಿತ್ ಶಾ!

ಕಂದಾಯ ಸಚಿವ ಮತ್ತು ಇತರ 11 ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿದ್ದ ಖಾಡ್ಸೆ, 2016 ರ ಜೂನ್‌ನಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸಿದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಾಲ್ಕು ದಶಕಗಳ ಕಾಲ ಪಕ್ಷದೊಂದಿಗೆ ಕೆಲಸ ಮಾಡಿ, ಇಂದು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಫಡ್ನವೀಸ್ ಹೊರತುಪಡಿಸಿ ಪಕ್ಷದ ಬೇರೆ ಯಾವುದೇ ಮುಖಂಡರೊಂದಿಗೆ ಅಸಮಾಧಾನ ಹೊಂದಿಲ್ಲ ಎಂದು ಖಾಡ್ಸೆ ಹೇಳಿದ್ದಾರೆ. “ರಾಷ್ಟ್ರೀಯ ಅಥವಾ ರಾಜ್ಯ ನಾಯಕತ್ವದಿಂದ ಬೇರೆ ಯಾವುದೇ ನಾಯಕರ ವಿರುದ್ಧ ನನಗೆ ಯಾವುದೇ ಸಮಸ್ಯೆಯಿಲ್ಲ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬಗ್ಗೆ ಅಸಮಾಧಾನವಿದೆ. ಅವರು ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದರು. ಎಷ್ಟೂ ಪ್ರಕರಣಗಳಿಂದ ನಾನಿನ್ನು ಹೊರ ಬಂದಿಲ್ಲ. ಈ ರೀತಿಯ ಶಿಕ್ಷೆಗೆ ಕಾರಣ ನೀಡುವಂತೆ ಫಡ್ನವೀಸ್ ಅವರನ್ನು ವಿವಿಧ ವೇದಿಕೆಗಳಲ್ಲಿ ಒತ್ತಾಯಿಸಿದ್ದೇನೆ. ಆದರೆ ನನಗೆ ಯಾವತ್ತೂ ಉತ್ತರ ಸಿಕ್ಕಿಲ್ಲ” ಎಂದು ಅವರು ಹೇಳಿದರು.

ಕಳೆದ ವರ್ಷ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ಏಕನಾಥ್ ಖಾಡ್ಸೆ ಅವರಿಗೆ ಚುನಾವಣಾ ಟಿಕೆಟ್ ನಿರಾಕರಿಸಲಾಗಿತ್ತು.

ರಾಜ್ಯ ಬಿಜೆಪಿಯ ವಕ್ತಾರ ಕೇಶವ್ ಉಪಾಧ್ಯಾಯ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಅವರು ರಾಜೀನಾಮೆಯನ್ನು ಸ್ವೀಕರಿಸಿದ್ದಾರೆ. ನಾವು ಅವರೊಂದಿಗೆ ಸಂವಾದದ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೇವೆ. ಆದರೆ ಅದು ಸಫಲವಾಗಲಿಲ್ಲ. ಅವರಿಗೆ ಶುಭವಾಗಲಿ. ಪಕ್ಷದ ಸಣ್ಣ ಕಾರ್ಯಕರ್ತರೂ ಬಿಜೆಪಿಯನ್ನು ತೊರೆಯುವುದು ಪಕ್ಷಕ್ಕೆ ನಷ್ಟ” ಎಂದಿದ್ದಾರೆ.

ಫಡ್ನವೀಸ್ ವಿರುದ್ಧ ಏಕನಾಥ್ ಖಾಡ್ಸೆ ಅವರ ಆರೋಪಗಳು ಆಧಾರ ರಹಿತವಾಗಿವೆ ಎಂದು ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ. ಈ ನಿರ್ಧಾರ ದುರದೃಷ್ಟಕರ, ಆದರೆ ಖಾಡ್ಸೆ ರಾಜೀನಾಮೆ ನೀಡುವ ಅಗತ್ಯವಿರಲಿಲ್ಲ ಎಂದಿದ್ದಾರೆ.


ಇದನ್ನೂ ಓದಿ:  ಮಹಾರಾಷ್ಟ್ರ ರಾಜ್ಯಪಾಲರ ಪತ್ರ ವಿವಾದ; ಸ್ವಾಭಿಮಾನಿಗಳು ಹುದ್ದೆಯಲ್ಲಿ ಮುಂದುವರಿಯುವುದಿಲ್ಲ: ಶರದ್ ಪವಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...