Homeಅಂತರಾಷ್ಟ್ರೀಯವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ಭಾರತ ಮತ್ತು ಆಫ್ರಿಕಾದಲ್ಲಿ ಸುಮಾರು 476,000 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ದೇಶಗಳು ಜಗತ್ತಿನ ಅತಿದೊಡ್ಡ ಹಾಟ್‌ಸ್ಪಾಟ್‌ಗಳಾಗಿವೆ

- Advertisement -
- Advertisement -

ಅತಿ ಹೆಚ್ಚಿನ ವಾಯುಮಾಲಿನ್ಯ ಸಮಸ್ಯೆಯಿಂದ 2019 ರಲ್ಲಿ, ಭಾರತ ಮತ್ತು ಆಫ್ರಿಕಾದಲ್ಲಿ ಸುಮಾರು 476,000 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ದೇಶಗಳು ಜಗತ್ತಿನ ಅತಿದೊಡ್ಡ ಹಾಟ್‌ಸ್ಪಾಟ್‌ಗಳಾಗಿವೆ ಎಂದು ಅಮೇರಿಕಾ ಮೂಲದ ಅಧ್ಯಯನದ ವರದಿಯೊಂದು ಬಹಿರಂಗಪಡಿಸಿದೆ.

ಇದರಲ್ಲಿ ಸುಮಾರು 2/3 ರಷ್ಟು ಮಕ್ಕಳು ಅಡುಗೆ ಇಂಧನಗಳಿಂದ ಉಂಟಾಗುವ ಹಾನಿಕಾರಕ ಹೊಗೆಯಿಂದಾಗಿ ಮರಣಹೊಂದಿವೆ.

ಸ್ಟೇಟ್ ಆಫ್ ಗ್ಲೋಬಲ್ ಏರ್ 2020 ರ ಅಧ್ಯಯನ ಪ್ರಕಾರ, ಭಾರತದಲ್ಲಿ 116,000 ಕ್ಕೂ ಹೆಚ್ಚು ಶಿಶುಗಳು ವಾಯುಮಾಲಿನ್ಯದಿಂದ ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಇದು ಆಫ್ರಿಕಾದಲ್ಲಿ 236,000 ರಷ್ಟಿದೆ.

ಅಮೇರಿಕಾ ಮೂಲದ ಹೆಲ್ತ್ ಎಫೆಕ್ಟ್ಸ್ ಇನ್ಸ್ಟಿಟ್ಯೂಟ್ ಮತ್ತು ಇನ್ಸ್ಟಿಟ್ಯೂಟ್ ಫಾರ್ ಹೆಲ್ತ್ ಮೆಟ್ರಿಕ್ಸ್ ಮತ್ತು ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ ಪ್ರಾಜೆಕ್ಟ್ ಈ ಅಂದಾಜುಗಳನ್ನು ಊಹಿಸಿದೆ.

ಗರ್ಭಾವಸ್ಥೆಯಲ್ಲಿದ್ದಾಗ ತಾಯಂದಿರು ಉಸಿರಾಡುವ ಗಾಳಿಯು ಮಾಲಿನ್ಯಪೂರಿತವಾಗಿದ್ದರೆ, ಅದು ಬೆಳೆಯುತ್ತಿರುವ ಭ್ರೂಣಗಳ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಕಡಿಮೆ ಜನನ ತೂಕ, ಅವಧಿಪೂರ್ವ ಜನನದಂತಹ ಅಪಾಯಗಳು ಸಂಭವಿಸಬಹುದು ನ್‌ಡಿಟಿವಿ ವರದಿ ಮಾಡಿದೆ.

ಈ ಪರಿಸ್ಥಿತಿಗಳು ಗಂಭೀರ ತೊಡಕುಗಳಿಗೆ ಸಂಬಂಧಿಸಿದ್ದು, ಈಗಾಗಲೇ ಎರಡೂ ಪ್ರದೇಶಗಳಲ್ಲಿನ ನವಜಾತ ಶಿಶುಗಳ ಸಾವುಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ‘ಐಟಂ’ ಹೇಳಿಕೆಗೆ ಕಮಲನಾಥ್ ವಿವರಣೆ ನೀಡಬೇಕು ಎಂದ ಚುನಾವಣಾ ಆಯೋಗ!

“ಶಿಶುವಿನ ಆರೋಗ್ಯವು ಪ್ರತಿ ಸಮಾಜದ ಭವಿಷ್ಯಕ್ಕೆ ನಿರ್ಣಾಯಕವಾಗಿದ್ದು, ಈ ಹೊಸ ಫಲಿತಾಂಶವು ದಕ್ಷಿಣ ಏಷ್ಯಾ ಮತ್ತು ಉಪ ಸಹರಾದ ಆಫ್ರಿಕಾದಲ್ಲಿ ಜನಿಸಿದ ಶಿಶುಗಳಿಗೆ ಹೆಚ್ಚಿನ ಅಪಾಯವನ್ನು ಸೂಚಿಸುತ್ತದೆ. ಕಳಪೆ-ಗುಣಮಟ್ಟದ ಅಡುಗೆ ಇಂಧನಗಳಿಂದ ಉಂಟಾಗುವ ವಾಯುಮಾಲಿನ್ಯವು ನವಜಾತ ಶಿಶುಗಳ ಸಾವಿಗೆ ಪ್ರಮುಖ ಕಾರಣವಾಗಿದೆ” ಎಂದು ಎಚ್‌ಇಐ ಅಧ್ಯಕ್ಷ ಡಾನ್ ಗ್ರೀನ್‌ಬಾಮ್ ಹೇಳಿದ್ದಾರೆ.

ಒಟ್ಟಾರೆಯಾಗಿ, 2019 ರಲ್ಲಿ ವಿಶ್ವದಾದ್ಯಂತ 6.7 ಮಿಲಿಯನ್ ನವಜಾತ ಶಿಶುಗಳ ಸಾವುಗಳಿಗೆ ವಾಯುಮಾಲಿನ್ಯ ಕಾರಣವಾಗಿದೆ ಎಂದು ವರದಿಯು ಹೇಳಿದೆ.

ಪ್ರತಿ ವರ್ಷವೂ ಜಾಗತಿಕ ತಾಪಮಾನ ಏರುತ್ತಲೇ ಇದ್ದು, ಜಗತ್ತಿನ ಪರಿಸರ ತಜ್ಞರಲ್ಲಿ ಆತಂಕ ಮೂಡಿಸುತ್ತಿತ್ತು. ಪರಿಸರ ನಾಶದಿಂದ ಹಿಡಿದು ವಾಯುಮಾಲಿನ್ಯದವರೆಗಿನ ಅಂಶಗಳು ಪ್ರತಿಯೊಂದಕ್ಕೂ ಸಂಬಂಧಿಸಿವೆ.

ಆದರೆ ಕೆಲವು ಅಧ್ಯಯನದ ವರದಿಗಳ ಪ್ರಕಾರ, ಕೊರೊನಾ ರೋಗವನ್ನು ನಿಯಂತ್ರಿಸುವ ಸಲುವಾಗಿ ಲಾಕ್‌ಡೌನ್ ಹೇರಿದ್ದರ ಪರಿಣಾಮವಾಗಿ ಮಹಾನಗರಗಳಲ್ಲಿ ವಾಹನಗಳ ದಟ್ಟಣೆ ಕಡಿಮೆಯಾಗಿದ್ದು, ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವೂ ಕಡಿಮೆಯಾಗಿತ್ತು. ಹಾಗಾಗಿ ದೆಹಲಿಯಂತಹ ನಗರಗಳಲ್ಲಿಯೂ ತಿಳಿಯಾದ ಆಕಾಶ ಮತ್ತು ಚಂದ್ರ ತಾರೆಗಳನ್ನು ನೋಡಲು ಸಾಧ್ಯವಾಗಿತ್ತು. ಆದರೆ ಈ ಸಂತೋಷ ತುಂಬಾ ದಿನ ಉಳಿಯುವುದಿಲ್ಲ ಎಂಬುದನ್ನು ಪ್ರಸ್ತುತ ವಿದ್ಯಮಾನಗಳು ತೋರಿಸಿಕೊಟ್ಟಿವೆ.

ಆದರೆ ಈಗ ಈ ಅಧ್ಯಯನದ ವರದಿಯನ್ನು ಗಮನಿಸಿದರೆ, ಇಡೀ ಜಗತ್ತು ದೊಡ್ಡ ಅಪಾಯದ ಅಂಚಿನಲ್ಲಿದೆ ಎಂಬುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ.


ಇದನ್ನೂ ಓದಿ: ಹತ್ರಾಸ್ ಪ್ರಕರಣ: ವಿಧಿವಿಜ್ಞಾನ ವರದಿ ಪ್ರಶ್ನಿಸಿದ್ದ ವೈದ್ಯರ ಅಮಾನತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...