Homeಮುಖಪುಟಮಹಾರಾಷ್ಟ್ರದಲ್ಲಿ CBI ಗೆ ನೀಡಿದ್ದ ತನಿಖಾ ’ಒಪ್ಪಿಗೆ’ಯನ್ನು ಹಿಂತೆಗೆದುಕೊಂಡ ಸರ್ಕಾರ

ಮಹಾರಾಷ್ಟ್ರದಲ್ಲಿ CBI ಗೆ ನೀಡಿದ್ದ ತನಿಖಾ ’ಒಪ್ಪಿಗೆ’ಯನ್ನು ಹಿಂತೆಗೆದುಕೊಂಡ ಸರ್ಕಾರ

TRP ಪ್ರಕರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರ FIR ದಾಖಲಿಸಿ ಸಿಬಿಐಗೆ ಹಸ್ತಾಂತರಿಸುತ್ತಿದ್ದಂತೆ, ಮಹಾರಾಷ್ಟ್ರದ ಗೃಹ ಇಲಾಖೆ ಈ ಆದೇಶವನ್ನು ಹೊರಡಿಸಿದೆ, ಇದರಿಂದಾಗಿ ಹಗರಣದಲ್ಲಿ ಸಿಲುಕಿರುವ ಅರ್ನಾಬ್‌ ಗೋಸ್ವಾಮಿಗೆ ಮತ್ತೇ ಕಂಟಕ ಎದುರಾಗಿದೆ

- Advertisement -
- Advertisement -

ರಾಜ್ಯದಲ್ಲಿ ಪ್ರಕರಣಗಳ ತನಿಖೆಗಾಗಿ ಮಹಾರಾಷ್ಟ್ರ ಸರ್ಕಾರವು ಕೇಂದ್ರ ತನಿಖಾ ದಳ(CBI) ಕ್ಕೆ ನೀಡಿದ್ದ ’ಸಾಮಾನ್ಯ ಒಪ್ಪಿಗೆ’ಯನ್ನು ಬುಧವಾರ ಹಿಂತೆಗೆದುಕೊಂಡಿದೆ. ರಾಜ್ಯ ಸರ್ಕಾರದ ಈ ನಡೆಯಿಂದಾಗಿ ಮುಂದೆ ಯಾವುದೇ ತನಿಖೆಯನ್ನು ನಡೆಸಲು ಸಿಬಿಐಗೆ ರಾಜ್ಯದ ಅನುಮತಿ ಪಡೆಯಬೇಕಾಗುತ್ತದೆ.

ಈಗಾಗಲೆ ಮೂರು ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಾದ ರಾಜಸ್ಥಾನ, ಛತ್ತೀಸ್‌ಗಡ ಮತ್ತು ಪಶ್ಚಿಮ ಬಂಗಾಳ ಸಿಬಿಐ ತಮ್ಮ ವ್ಯಾಪ್ತಿಯಲ್ಲಿನ ಪ್ರಕರಣಗಳನ್ನು ತನಿಖೆ ಮಾಡಲು ಅವಕಾಶ ನೀಡುವ ಸಾಮಾನ್ಯ ಒಪ್ಪಿಗೆಯನ್ನು ಹಿಂತೆಗೆದುಕೊಂಡಿದೆ.

ಇದನ್ನೂ ಓದಿ: TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

ಮಹಾರಾಷ್ಟ್ರ ಸರ್ಕಾರದ ನಿರ್ಧಾರವು ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ಸಿಬಿಐ ತನಿಖೆಯ ಮೇಲೆ ಪರಿಣಾಮ ಬೀರುವುದಿಲ್ಲ, ಯಾಕೆಂದರೆ ಈ ತನಿಖೆ ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ನಡೆಯುತ್ತಿದೆಯೆ ಹೊರತು ರಾಜ್ಯವು ತನ್ನ ಒಪ್ಪಿಗೆಯನ್ನು ನೀಡುವ ಅಗತ್ಯವಿರುವ ನಿಬಂಧನೆಗಳ ಅಡಿಯಲ್ಲಿ ಅಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

TRP ಪ್ರಕರಣದ ಬಗ್ಗೆ ಉತ್ತರ ಪ್ರದೇಶ ಸರ್ಕಾರ FIR ದಾಖಲಿಸಿ CBI ಗೆ ಹಸ್ತಾಂತರಿಸುತ್ತಿದ್ದಂತೆ, ಮಹಾರಾಷ್ಟ್ರದ ಗೃಹ ಇಲಾಖೆ ಈ ಆದೇಶವನ್ನು ಹೊರಡಿಸಿದೆ. ಉತ್ತರ ಪ್ರದೇಶ ಸರ್ಕಾರದ ಈ ನಡೆಯು ರಿಪಬ್ಲಿಕ್ ಟಿವಿ ವಿರುದ್ಧ ಮುಂಬೈ ಪೊಲೀಸರು ನಡೆಸುತ್ತಿರುವ ತನಿಖೆಯನ್ನು ಯುಪಿ ಸರ್ಕಾರವು ಸಿಬಿಐಗೆ ವಹಿಸುವ ಪ್ರಯತ್ನವಾಗಿದೆ ಎಂದು ಮಹರಾಷ್ಟ್ರ ಸರ್ಕಾರ ಭಾವಿಸಿದೆ.  ಹೆಚ್ಚಿನ ಓದಿಗೆ; TRP ಹಗರಣ: ಉತ್ತರಪ್ರದೇಶ ಸರ್ಕಾರದ ಶಿಫಾರಸ್ಸಿನ ಮೇರೆಗೆ ತನಿಖೆ ವಹಿಸಿಕೊಂಡ ಸಿಬಿಐ

ಪ್ರಸ್ತುತ ಸಾಮಾನ್ಯ ಒಪ್ಪಿಗೆಯನ್ನು ಹಿಂತೆಗೆದುಕೊಂಡಿರುವುದರಿಂದ ಯುಪಿ ಸರ್ಕಾರದ ಪ್ರಯತ್ನಕ್ಕೆ ಅಡ್ಡಿಯಾಗಲಿದೆ. ರಿಪಬ್ಲಿಕ್ ಟಿವಿ ವಿರುದ್ಧದ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ಸಿಬಿಐಗೆ ವಹಿಸಿರುವುದು ಪ್ರಕರಣವನ್ನು “ದುರ್ಬಲಗೊಳಿಸುವ” ಪ್ರಯತ್ನ ಎಂದು ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿಕೂಟದ ನಾಯಕರು ಕರೆದಿದ್ದಾರೆ.

ಈ ತಿಂಗಳ ಆರಂಭದಲ್ಲಿ ರಿಪಬ್ಲಿಕ್ ಟಿವಿ ವಿರುದ್ಧ ಮುಂಬೈ ಪೊಲೀಸ್ ತನಿಖೆ ಪ್ರಾರಂಭಿಸಿದ್ದು, ರಿಪಬ್ಲಿಕ್ ಟಿವಿ ಸೇರಿದಂತೆ ಒಟ್ಟು ಮೂರು ಚಾನೆಲ್‌ಗಳು ತನ್ನ TRP ಯನ್ನು ತಿರುಚಿದೆ ಎಂದು ಆರೋಪಿಸಿದ್ದಾರೆ. ಆದರೆ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ಈ ಆರೋಪಗಳನ್ನು ನಿರಾಕರಿಸಿದ್ದಾರೆ. ಪ್ರಕರಣದಲ್ಲಿ ಎಂಟು ಜನರನ್ನು ಮುಂಬೈ ಪೊಲೀಸರು ಇದುವರೆಗೂ ಬಂಧಿಸಿದ್ದಾರೆ.

ಇದನ್ನೂ ಓದಿ: TRP ಹಗರಣ: 3 ತಿಂಗಳು TRP ರೇಟಿಂಗ್ ಸ್ಥಗಿತಗೊಳಿಸಿದ BARC!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...