Homeಕರ್ನಾಟಕಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ

- Advertisement -
- Advertisement -

ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣೆ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಬ್ಬರೂ ತೆರೆಮರೆಗೆ ಸರಿಯುತ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನಿನ್ನೆ(ಅ.21) ರಾಜರಾಜೇಶ್ವರಿ ನಗರದ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾಗಿಯಾಗಿ, ಅಲ್ಲಿನ ಮಾಜಿ ಕಾರ್ಪೋರೇಟರ್‌ಗಳನ್ನು ಬಿಜೆಪಿಗೆ ಸೇರ್ಪಡೆ ಮಾಡಿದ ಬಳಿಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರನ್ನು ಲೇವಡಿ ಮಾಡಿದ್ದರು.

ಹುಲಿಯಾ ಕಾಡಿಗೆ ಹೋಗಬೇಕಾಗುತ್ತದೆ, ಬಂಡೆ ಛಿಧ್ರವಾಗುತ್ತದೆ ಎಂಬ ಮಾತುಗಳಿಗೆ ವಿರೋಧ ಪಕ್ಷದ ನಾಯಕ ಸಿದ್ದಯಾಮಯ್ಯ ಕಿಡಿಕಾರಿದ್ದು, ಸರಣಿ ಟ್ವೀಟ್‌ಗಳ ಮೂಲಕ ತರಾಟೆ ತೆಗೆದುಕೊಂಡಿದ್ದಾರೆ.

“ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ” ಎಂದು ಟ್ವೀಟ್ ಒಂದರಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಯಡಿಯೂರಪ್ಪ ಪ್ರಶ್ನಾತೀತ ನಾಯಕ – ಸಚಿವ ಸೋಮಣ್ಣ

 

“ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳೀನ್ ಕುಮಾರ್‌‍ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ” ಎಂದು ಕಿಡಿ ಕಾರಿದ್ದಾರೆ.

ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ ಎಂದಿದ್ದಾರೆ.

ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ! ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ

ಮತ್ತೊಂದು ಟ್ವೀಟ್‌ನಲ್ಲಿ ಈ ಹಿಂದೆ ಸಚಿವ ಕೆ.ಈಶ್ವರಪ್ಪ ಹೇಳಿಕೆ ನೀಡಿದ್ದನ್ನು ಉಲ್ಲೇಖಿಸಿ. ’ಬಿಜೆಪಿ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನೂ ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ” ಎಂದು ಲೇವಡಿ ಮಾಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಬಗ್ಗೆ ಬಿಜೆಪಿ ನಾಯಕರೇ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್‌ ಕಟೀಲ್‌ಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ತು ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ” ಎಂದಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಿಎಂ ಸ್ಥಾನದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, “ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ” ಎಂದು ಹೇಳಿದ್ದರು. ಈಗ ಇದು ವಿವಾದಕ್ಕೆ ಕಾರಣವಾಗಿದ್ದು, ಯಡಿಯೂರಪ್ಪ ಕೂಡ ಯತ್ನಾಳ್ ಜೊತೆ ಮಾತನಾಡುವುದಾಗಿ ಹೇಳಿದ್ದರು.


ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...