Homeಕರ್ನಾಟಕಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ

- Advertisement -
- Advertisement -

ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣೆ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಬ್ಬರೂ ತೆರೆಮರೆಗೆ ಸರಿಯುತ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನಿನ್ನೆ(ಅ.21) ರಾಜರಾಜೇಶ್ವರಿ ನಗರದ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾಗಿಯಾಗಿ, ಅಲ್ಲಿನ ಮಾಜಿ ಕಾರ್ಪೋರೇಟರ್‌ಗಳನ್ನು ಬಿಜೆಪಿಗೆ ಸೇರ್ಪಡೆ ಮಾಡಿದ ಬಳಿಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರನ್ನು ಲೇವಡಿ ಮಾಡಿದ್ದರು.

ಹುಲಿಯಾ ಕಾಡಿಗೆ ಹೋಗಬೇಕಾಗುತ್ತದೆ, ಬಂಡೆ ಛಿಧ್ರವಾಗುತ್ತದೆ ಎಂಬ ಮಾತುಗಳಿಗೆ ವಿರೋಧ ಪಕ್ಷದ ನಾಯಕ ಸಿದ್ದಯಾಮಯ್ಯ ಕಿಡಿಕಾರಿದ್ದು, ಸರಣಿ ಟ್ವೀಟ್‌ಗಳ ಮೂಲಕ ತರಾಟೆ ತೆಗೆದುಕೊಂಡಿದ್ದಾರೆ.

“ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ” ಎಂದು ಟ್ವೀಟ್ ಒಂದರಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಯಡಿಯೂರಪ್ಪ ಪ್ರಶ್ನಾತೀತ ನಾಯಕ – ಸಚಿವ ಸೋಮಣ್ಣ

 

“ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳೀನ್ ಕುಮಾರ್‌‍ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ” ಎಂದು ಕಿಡಿ ಕಾರಿದ್ದಾರೆ.

ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ ಎಂದಿದ್ದಾರೆ.

ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ! ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ

ಮತ್ತೊಂದು ಟ್ವೀಟ್‌ನಲ್ಲಿ ಈ ಹಿಂದೆ ಸಚಿವ ಕೆ.ಈಶ್ವರಪ್ಪ ಹೇಳಿಕೆ ನೀಡಿದ್ದನ್ನು ಉಲ್ಲೇಖಿಸಿ. ’ಬಿಜೆಪಿ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನೂ ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ” ಎಂದು ಲೇವಡಿ ಮಾಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಬಗ್ಗೆ ಬಿಜೆಪಿ ನಾಯಕರೇ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್‌ ಕಟೀಲ್‌ಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ತು ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ” ಎಂದಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಿಎಂ ಸ್ಥಾನದ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, “ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ” ಎಂದು ಹೇಳಿದ್ದರು. ಈಗ ಇದು ವಿವಾದಕ್ಕೆ ಕಾರಣವಾಗಿದ್ದು, ಯಡಿಯೂರಪ್ಪ ಕೂಡ ಯತ್ನಾಳ್ ಜೊತೆ ಮಾತನಾಡುವುದಾಗಿ ಹೇಳಿದ್ದರು.


ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...