Homeಅಂತರಾಷ್ಟ್ರೀಯಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಜಾನ್ಸನ್ & ಜಾನ್ಸನ್ ಕಂಪನಿ ಕೂಡ ಅಧ್ಯಯನದಲ್ಲಿ ಭಾಗವಹಿಸಿದ ಒಬ್ಬರಿಗೆ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

- Advertisement -
- Advertisement -

ಇಂಗ್ಲೆಂಡ್​ನ ಔಷಧ ತಯಾರಕ ಸಂಸ್ಥೆ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದ್ದ ಕೊರೊನಾ ಲಸಿಕೆ ಕ್ಲಿನಿಕಲ್ ಪ್ರಯೋಗದ ವೇಳೆಯಲ್ಲಿ ಬ್ರೆಜಿಲ್‌ನ ಸ್ವಯಂ ಸೇವಕರೊಬ್ಬರು ಮೃತಪಟ್ಟಿದ್ದಾರೆ.

ಬ್ರೆಜಿಲಿಯನ್ ಆರೋಗ್ಯ ಪ್ರಾಧಿಕಾರ ಅನ್ವೀಸಾ ಬುಧವಾರ ಸಾವಿನ ಕುರಿತು ತಿಳಿಸಿದೆ. ಅಲ್ಲದೆ, ಪ್ರಕರಣದ ತನಿಖೆಯ ಮಾಹಿತಿಯನ್ನು ಅದು ಪಡೆದುಕೊಂಡಿರುವುದಾಗಿ ಹೇಳಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಕ್ಲಿನಿಕಲ್‌ ಪ್ರಯೋಗದ‌ ವೇಳೆ ಸಂಭವಿಸಿದ ‌ಸಾವಿನ ನಂತರವೂ ಲಸಿಕೆ ಪರೀಕ್ಷೆ ಮುಂದುವರಿಯುತ್ತಿರುವುದಾಗಿ ಪ್ರಾಧಿಕಾರ ತಿಳಿಸಿದೆ.

ಪ್ರಯೋಗದಲ್ಲಿ ಭಾಗಿಯಾದವರ ಮಾಹಿತಿಯನ್ನ ಗೌಪ್ಯವಾಗಿಡಬೇಕೆಂಬ ಕಾರಣ ನೀಡಿ ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಲಾಗಿದೆ. ಲಸಿಕೆಯ 3 ನೇ ಹಂತದ ಕ್ಲಿನಿಕಲ್ ಟ್ರಯಲ್‌ಗೆ ನೆರವಾಗಿರುವ ಸಾವೊ ಪಾಲೊನ ಫೆಡರಲ್ ವಿಶ್ವವಿದ್ಯಾಲಯ ಸಾವಿನ ಕುರಿತು ಪ್ರತಿಕ್ರಿಯಿಸಿದ್ದು, ವಾಲಂಟಿಯರ್‌ ಬ್ರೆಜಿಲ್‌ನವರೇ. ಆದರೆ, ಆ ವ್ಯಕ್ತಿಯ ವಿವರಗಳನ್ನು ಹೇಳಲಾಗದು ಎಂದಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜೆನೆಕಾ ಕಂಪನಿ

ಕೊರೊನಾ ಸೋಂಕಿನಿಂದ ಮೃತಪಟ್ಟ ಸ್ವಯಂಸೇವಕ ಪ್ರಾಯೋಗಿಕ ಲಸಿಕೆ ಪಡೆದಿದ್ದಾನೆಯೇ ಎಂಬುದು ಸ್ಪಷ್ಟವಾಗಿಲ್ಲ, ಆದರೆ ತಜ್ಞರ ಪ್ರಕಾರ, ಪ್ರಾಯೋಗಿಕ ಲಸಿಕೆ ಪಡೆದ ನಂತರ ಸ್ವಯಂಸೇವಕರು ಸಾವನ್ನಪ್ಪಿದ್ದರೆ, ಕಂಪನಿಯು ಸುರಕ್ಷತೆಗೆ ಗಮನಕೊಟ್ಟು ಪ್ರಯೋಗ ನಿಲ್ಲಿಸಬಹುದೆಂದು ಹೇಳಿದ್ದಾರೆ ಎಂದು ಓ ಗ್ಲೋಬೊ ಎಂಬ ಬ್ರೆಜಿಲ್ ಪತ್ರಿಕೆ ವರದಿ ಮಾಡಿದೆ.

ಅಸ್ಟ್ರಾಜೆನೆಕಾ ಕಂಪನಿಯ ವಕ್ತಾರ ಬ್ರೆಂಡನ್ ಮೆಕ್‌ವೊಯ್, ವೈದ್ಯಕೀಯ ಗೌಪ್ಯತೆಯನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಲು ನಿರಾಕರಿಸಿದರು. ಆದರೆ ಅಗತ್ಯವಿರುವ ಎಲ್ಲ ಪರಿಶೀಲನಾ ಕಾರ್ಯವಿಧಾನಗಳನ್ನು ಅನುಸರಿಸಲಾಗಿದೆ ಎಂದು ಹೇಳಿದರು. “ಪ್ರಯೋಗದಲ್ಲಿ ಭಾಗವಹಿಸುವ ಸ್ವಯಂಸೇವಕರನ್ನು ಒಳಗೊಂಡು, ಲಸಿಕೆ-ಸಂಬಂಧಿತ ಯಾವುದೇ ತೊಡಕುಗಳ ಕಳವಳವಿಲ್ಲದೆ, ಎಲ್ಲವೂ ನಿರೀಕ್ಷೆಯಂತೆ ಮುಂದುವರಿಯುತ್ತಿದೆ” ಎಂದು ತಿಳಿಸಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಈ ಅಧ್ಯಯನಕ್ಕೆ ಸ್ಥಳೀಯ ಪಾಲುದಾರರಾಗಿ ಸೇವೆ ಸಲ್ಲಿಸಿದ ಬ್ರೆಜಿಲ್‌ನ ವೈದ್ಯಕೀಯ ಸಂಶೋಧನಾ ಕೇಂದ್ರವಾದ ಇನ್‌ಸ್ಟಿಟ್ಯೂಟೊ ಡಿ’ಓರ್ ತನ್ನ ಹೇಳಿಕೆಯಲ್ಲಿ, ’ಸುಮಾರು 8,000 ಬ್ರೆಜಿಲಿಯನ್ನರು ಪ್ರಯೋಗದಲ್ಲಿ ಭಾಗವಹಿಸಿದ್ದಾರೆ. ಯಾವುದೇ ಸುರಕ್ಷತಾ ಸಮಸ್ಯೆಗಳು ವರದಿಯಾಗಿಲ್ಲ’ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ಅಸ್ಟ್ರಾಜೆನೆಕಾ ಲಸಿಕೆಯನ್ನು ಖರೀದಿಸಿ, ಬ್ರೆಜಿಲ್‌ನ ಬಯೋಮೆಡಿಕಲ್ ಸಂಶೋಧನಾ ಕೇಂದ್ರ ಫಿಯೋಕ್ರೂಜ್​ನಲ್ಲಿ ಉತ್ಪಾದನೆ ಮಾಡಲು ಬ್ರೆಜಿಲ್ ಸರ್ಕಾರ ಯೋಜನೆ ಮಾಡಿದೆ. ಇನ್ನೊಂದೆಡೆ, ಚೀನಾದ ಸಿನೋವ್ಯಾಕ್ ಲಸಿಕೆಯನ್ನು ಸಾವೊ ಪಾಲೊದ ಸಂಶೋಧನಾ ಕೇಂದ್ರ ಬುಟಾಂಟನ್‌ನಲ್ಲಿ ಪರೀಕ್ಷಿಸಲಾಗುತ್ತಿದೆ.

ಪ್ರಾಯೋಗಿಕ ಲಸಿಕೆ ಪಡೆದವರಲ್ಲಿ ಕೆಲವರು ಅನಾರೋಗ್ಯದಿಂದ ಅನಾರೋಗ್ಯಕ್ಕೆ ಒಳಗಾದ ನಂತರ ಅಸ್ಟ್ರಾಜೆನೆಕಾ ತನ್ನ ಜಾಗತಿಕ ಪ್ರಯೋಗಗಳನ್ನು ನಿಲ್ಲಿಸಿದ ಕೆಲವೇ ವಾರಗಳ ನಂತರ ಈ ಸಾವು ಸಂಭವಿಸಿದೆ. ಆದರೆ, ಕೆಲವೇ ದಿನಗಳಲ್ಲಿ, ಅಸ್ಟ್ರಾಜೆನೆಕಾ ಯುನೈಟೆಡ್ ಕಿಂಗ್‌ಡಂನಲ್ಲಿ ತನ್ನ ಪ್ರಯೋಗಗಳನ್ನು ಪುನರಾರಂಭಿಸಿತ್ತು.

ಜಾನ್ಸನ್ & ಜಾನ್ಸನ್ ಕಂಪನಿ ಕೂಡ ಅಧ್ಯಯನದಲ್ಲಿ ಭಾಗವಹಿಸಿದವರಲ್ಲಿ ವಿವರಿಸಲಾಗದ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ಕಾರಣ ಮೂರನೇ ಮತ್ತು ಅಂತಿಮ ಹಂತದ ಕ್ಲಿನಿಕಲ್ ಪ್ರಯೋಗವನ್ನು ಅ.12ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.


ಇದನ್ನೂ ಓದಿ: ಕೊರೊನಾ ನಂತರ 1.10 ಕೋಟಿ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ- ಯುನೆಸ್ಕೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...