Homeಅಂತರಾಷ್ಟ್ರೀಯಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಜಾನ್ಸನ್ & ಜಾನ್ಸನ್ ಕಂಪನಿ ಕೂಡ ಅಧ್ಯಯನದಲ್ಲಿ ಭಾಗವಹಿಸಿದ ಒಬ್ಬರಿಗೆ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

- Advertisement -
- Advertisement -

ಇಂಗ್ಲೆಂಡ್​ನ ಔಷಧ ತಯಾರಕ ಸಂಸ್ಥೆ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದ್ದ ಕೊರೊನಾ ಲಸಿಕೆ ಕ್ಲಿನಿಕಲ್ ಪ್ರಯೋಗದ ವೇಳೆಯಲ್ಲಿ ಬ್ರೆಜಿಲ್‌ನ ಸ್ವಯಂ ಸೇವಕರೊಬ್ಬರು ಮೃತಪಟ್ಟಿದ್ದಾರೆ.

ಬ್ರೆಜಿಲಿಯನ್ ಆರೋಗ್ಯ ಪ್ರಾಧಿಕಾರ ಅನ್ವೀಸಾ ಬುಧವಾರ ಸಾವಿನ ಕುರಿತು ತಿಳಿಸಿದೆ. ಅಲ್ಲದೆ, ಪ್ರಕರಣದ ತನಿಖೆಯ ಮಾಹಿತಿಯನ್ನು ಅದು ಪಡೆದುಕೊಂಡಿರುವುದಾಗಿ ಹೇಳಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಕ್ಲಿನಿಕಲ್‌ ಪ್ರಯೋಗದ‌ ವೇಳೆ ಸಂಭವಿಸಿದ ‌ಸಾವಿನ ನಂತರವೂ ಲಸಿಕೆ ಪರೀಕ್ಷೆ ಮುಂದುವರಿಯುತ್ತಿರುವುದಾಗಿ ಪ್ರಾಧಿಕಾರ ತಿಳಿಸಿದೆ.

ಪ್ರಯೋಗದಲ್ಲಿ ಭಾಗಿಯಾದವರ ಮಾಹಿತಿಯನ್ನ ಗೌಪ್ಯವಾಗಿಡಬೇಕೆಂಬ ಕಾರಣ ನೀಡಿ ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಲಾಗಿದೆ. ಲಸಿಕೆಯ 3 ನೇ ಹಂತದ ಕ್ಲಿನಿಕಲ್ ಟ್ರಯಲ್‌ಗೆ ನೆರವಾಗಿರುವ ಸಾವೊ ಪಾಲೊನ ಫೆಡರಲ್ ವಿಶ್ವವಿದ್ಯಾಲಯ ಸಾವಿನ ಕುರಿತು ಪ್ರತಿಕ್ರಿಯಿಸಿದ್ದು, ವಾಲಂಟಿಯರ್‌ ಬ್ರೆಜಿಲ್‌ನವರೇ. ಆದರೆ, ಆ ವ್ಯಕ್ತಿಯ ವಿವರಗಳನ್ನು ಹೇಳಲಾಗದು ಎಂದಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪ್ರಯೋಗ ನಿಲ್ಲಿಸಿದ ಅಸ್ಟ್ರಾಜೆನೆಕಾ ಕಂಪನಿ

ಕೊರೊನಾ ಸೋಂಕಿನಿಂದ ಮೃತಪಟ್ಟ ಸ್ವಯಂಸೇವಕ ಪ್ರಾಯೋಗಿಕ ಲಸಿಕೆ ಪಡೆದಿದ್ದಾನೆಯೇ ಎಂಬುದು ಸ್ಪಷ್ಟವಾಗಿಲ್ಲ, ಆದರೆ ತಜ್ಞರ ಪ್ರಕಾರ, ಪ್ರಾಯೋಗಿಕ ಲಸಿಕೆ ಪಡೆದ ನಂತರ ಸ್ವಯಂಸೇವಕರು ಸಾವನ್ನಪ್ಪಿದ್ದರೆ, ಕಂಪನಿಯು ಸುರಕ್ಷತೆಗೆ ಗಮನಕೊಟ್ಟು ಪ್ರಯೋಗ ನಿಲ್ಲಿಸಬಹುದೆಂದು ಹೇಳಿದ್ದಾರೆ ಎಂದು ಓ ಗ್ಲೋಬೊ ಎಂಬ ಬ್ರೆಜಿಲ್ ಪತ್ರಿಕೆ ವರದಿ ಮಾಡಿದೆ.

ಅಸ್ಟ್ರಾಜೆನೆಕಾ ಕಂಪನಿಯ ವಕ್ತಾರ ಬ್ರೆಂಡನ್ ಮೆಕ್‌ವೊಯ್, ವೈದ್ಯಕೀಯ ಗೌಪ್ಯತೆಯನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಲು ನಿರಾಕರಿಸಿದರು. ಆದರೆ ಅಗತ್ಯವಿರುವ ಎಲ್ಲ ಪರಿಶೀಲನಾ ಕಾರ್ಯವಿಧಾನಗಳನ್ನು ಅನುಸರಿಸಲಾಗಿದೆ ಎಂದು ಹೇಳಿದರು. “ಪ್ರಯೋಗದಲ್ಲಿ ಭಾಗವಹಿಸುವ ಸ್ವಯಂಸೇವಕರನ್ನು ಒಳಗೊಂಡು, ಲಸಿಕೆ-ಸಂಬಂಧಿತ ಯಾವುದೇ ತೊಡಕುಗಳ ಕಳವಳವಿಲ್ಲದೆ, ಎಲ್ಲವೂ ನಿರೀಕ್ಷೆಯಂತೆ ಮುಂದುವರಿಯುತ್ತಿದೆ” ಎಂದು ತಿಳಿಸಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಈ ಅಧ್ಯಯನಕ್ಕೆ ಸ್ಥಳೀಯ ಪಾಲುದಾರರಾಗಿ ಸೇವೆ ಸಲ್ಲಿಸಿದ ಬ್ರೆಜಿಲ್‌ನ ವೈದ್ಯಕೀಯ ಸಂಶೋಧನಾ ಕೇಂದ್ರವಾದ ಇನ್‌ಸ್ಟಿಟ್ಯೂಟೊ ಡಿ’ಓರ್ ತನ್ನ ಹೇಳಿಕೆಯಲ್ಲಿ, ’ಸುಮಾರು 8,000 ಬ್ರೆಜಿಲಿಯನ್ನರು ಪ್ರಯೋಗದಲ್ಲಿ ಭಾಗವಹಿಸಿದ್ದಾರೆ. ಯಾವುದೇ ಸುರಕ್ಷತಾ ಸಮಸ್ಯೆಗಳು ವರದಿಯಾಗಿಲ್ಲ’ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಇಂದಿನ ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಸಂಖ್ಯೆ ಮರೆಮಾಚಿದ ಬಿಜೆಪಿ

ಅಸ್ಟ್ರಾಜೆನೆಕಾ ಲಸಿಕೆಯನ್ನು ಖರೀದಿಸಿ, ಬ್ರೆಜಿಲ್‌ನ ಬಯೋಮೆಡಿಕಲ್ ಸಂಶೋಧನಾ ಕೇಂದ್ರ ಫಿಯೋಕ್ರೂಜ್​ನಲ್ಲಿ ಉತ್ಪಾದನೆ ಮಾಡಲು ಬ್ರೆಜಿಲ್ ಸರ್ಕಾರ ಯೋಜನೆ ಮಾಡಿದೆ. ಇನ್ನೊಂದೆಡೆ, ಚೀನಾದ ಸಿನೋವ್ಯಾಕ್ ಲಸಿಕೆಯನ್ನು ಸಾವೊ ಪಾಲೊದ ಸಂಶೋಧನಾ ಕೇಂದ್ರ ಬುಟಾಂಟನ್‌ನಲ್ಲಿ ಪರೀಕ್ಷಿಸಲಾಗುತ್ತಿದೆ.

ಪ್ರಾಯೋಗಿಕ ಲಸಿಕೆ ಪಡೆದವರಲ್ಲಿ ಕೆಲವರು ಅನಾರೋಗ್ಯದಿಂದ ಅನಾರೋಗ್ಯಕ್ಕೆ ಒಳಗಾದ ನಂತರ ಅಸ್ಟ್ರಾಜೆನೆಕಾ ತನ್ನ ಜಾಗತಿಕ ಪ್ರಯೋಗಗಳನ್ನು ನಿಲ್ಲಿಸಿದ ಕೆಲವೇ ವಾರಗಳ ನಂತರ ಈ ಸಾವು ಸಂಭವಿಸಿದೆ. ಆದರೆ, ಕೆಲವೇ ದಿನಗಳಲ್ಲಿ, ಅಸ್ಟ್ರಾಜೆನೆಕಾ ಯುನೈಟೆಡ್ ಕಿಂಗ್‌ಡಂನಲ್ಲಿ ತನ್ನ ಪ್ರಯೋಗಗಳನ್ನು ಪುನರಾರಂಭಿಸಿತ್ತು.

ಜಾನ್ಸನ್ & ಜಾನ್ಸನ್ ಕಂಪನಿ ಕೂಡ ಅಧ್ಯಯನದಲ್ಲಿ ಭಾಗವಹಿಸಿದವರಲ್ಲಿ ವಿವರಿಸಲಾಗದ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ಕಾರಣ ಮೂರನೇ ಮತ್ತು ಅಂತಿಮ ಹಂತದ ಕ್ಲಿನಿಕಲ್ ಪ್ರಯೋಗವನ್ನು ಅ.12ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.


ಇದನ್ನೂ ಓದಿ: ಕೊರೊನಾ ನಂತರ 1.10 ಕೋಟಿ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ- ಯುನೆಸ್ಕೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...