HomeUncategorizedಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಟ್ವೀಟ್ ಮಾಡಿರುವ ಆಮ್ ಆದ್ಮಿ ಪಾರ್ಟಿ, ’ಬಿಜೆಪಿ ಆಡಳಿತದಲ್ಲಿಲ್ಲದ ರಾಜ್ಯಗಳ ಕತೆ ಏನು? ಬಿಜೆಪಿಗೆ ಮತ ಹಾಕದ ಭಾರತೀಯರಿಗೆ ಉಚಿತ ಕೋವಿಡ್ ಲಸಿಕೆ ಸಿಗುವುದಿಲ್ಲವೇ?" ಎಂದು ಕೇಳಿದೆ.

- Advertisement -
- Advertisement -

ಮುಂದಿನ ವಾರ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ “ಎಲ್ಲರಿಗೂ ಉಚಿತ ಕೊರೊನಾ ವೈರಸ್ ಲಸಿಕೆ” ನೀಡುವ ಭರವಸೆಯು ಭಾರಿ ಟೀಕೆಗೆ ಗುರಿಯಾಗಿದೆ. ಆಡಳಿತ ಪಕ್ಷವು ತನ್ನ ರಾಜಕೀಯ ಕಾರ್ಯಕ್ಕೆ ಲಸಿಕೆಯನ್ನು ಬಳಸುವ ಪ್ರಯತ್ನದಲ್ಲಿದೆ ಎಂಬ ಆರೋಪಗಳು ಕೇಳಿಬಂದಿವೆ.

ಇಂದು ಬಿಡುಗಡೆಯಾದ ಬಿಜೆಪಿ ಪ್ರಣಾಳಿಕೆಯಲ್ಲಿ 19 ಲಕ್ಷ ಉದ್ಯೋಗಗಳು ಸೇರಿದಂತೆ ಎಲ್ಲರಿಗೂ ಉಚಿತ ಕೊರೊನಾ ವೈರಸ್ ಲಸಿಕೆ ನೀಡುವ ಭರವಸೆ ನೀಡಿದೆ. ಜೊತೆಗೆ ಮುಂದಿನ ಐದು ವರ್ಷಗಳ ಕಾಲ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಪಕ್ಷ ಒತ್ತಿ ಹೇಳಿದೆ.

“ಕೊರೊನಾ ಲಸಿಕೆ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆಗೆ ಲಭ್ಯವಾದ ತಕ್ಷಣ, ಬಿಹಾರದ ಪ್ರತಿಯೊಬ್ಬ ವ್ಯಕ್ತಿಗೂ ಉಚಿತ ಲಸಿಕೆ ಸಿಗುತ್ತದೆ. ಇದು ನಮ್ಮ ಮತದಾನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾದ ಮೊದಲ ಭರವಸೆ” ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಇಂದು ಹೇಳಿದ್ದರು.

ಪ್ರಣಾಳಿಕೆ ಬಿಡುಗಡೆಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಪಕ್ಷಗಳು, ಸಾರ್ವಜನಿಕರು ಟ್ರೋಲ್ ಮಾಡಲು ಶುರು ಮಾಡಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದ ಲಸಿಕೆಯನ್ನು ರಾಜಕೀಯ ಲಾಭಕ್ಕೆ ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

ಪತ್ರಿಕಾಗೋಷ್ಠಿಯನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಆಮ್ ಆದ್ಮಿ ಪಾರ್ಟಿ, ’ಬಿಜೆಪಿ ಆಡಳಿತದಲ್ಲಿಲ್ಲದ ರಾಜ್ಯಗಳ ಕತೆ ಏನು? ಬಿಜೆಪಿಗೆ ಮತ ಹಾಕದ ಭಾರತೀಯರಿಗೆ ಉಚಿತ ಕೋವಿಡ್ ಲಸಿಕೆ ಸಿಗುವುದಿಲ್ಲವೇ?” ಎಂದು ಕೇಳಿದೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಭಾರತ ಸರ್ಕಾರ ಇದೀಗ ಕೊರೊನಾವನ್ನು ತಂತ್ರವನ್ನಾಗಿಸಿಕೊಂಡಿದೆ. ಲಸಿಕೆ ಪಡೆಯಲು ರಾಜ್ಯವಾರು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿ, ಜೊತೆಗೆ ನಿಮ್ಮ ಸುಳ್ಳು ಭರವಸೆಗಳನ್ನು ಕೂಡ” ಎಂದಿದ್ದಾರೆ.

 

ಕಾಂಗ್ರೆಸ್ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರು ಟ್ವೀಟ್ ಮಾಡಿ, ” ನೀವು ನನಗೆ ಮತಗಳನ್ನು ನೀಡಿ, ನಾನು ನಿಮಗೆ ಲಸಿಕೆ ನೀಡುತ್ತೇನೆ” ಇದು ಭಯಾನಕ ಸಿನಿಕತನ! ಚುನಾವಣಾ ಆಯೋಗವು ಆಕೆಯ ಮೇಲೆ ಮತ್ತು ನಾಚಿಕೆಯಿಲ್ಲದ ಅವರ ಸರ್ಕಾರದ ಮೇಲೆ ಕ್ರಮ ಕೈಗೊಳ್ಳುತ್ತದೇಯೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಿಹಾರ: ಟ್ರಂಪ್ ಬಂದು ವಿಶೇಷ ಸ್ಥಾನಮಾನ ನೀಡುತ್ತಾರಾ?- ನಿತೀಶ್‌ಗೆ ತೇಜಸ್ವಿ ಯಾದವ್ ಪ್ರಶ್ನೆ!

 

ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯಚಿತ್ರಗಳು ವೈರಲ್ ಆಗುತ್ತಿವೆ. ಸತೀಶ್ ಆಚಾರ್‍ಯ ಅವರ ’ಲಸಿಕೆ ರಾಜಕೀಯ’ ವ್ಯಂಗ್ಯಚಿತ್ರ ಸಾಕಷ್ಟು ಸದ್ದು ಮಾಡುತ್ತಿದೆ.

ಬಿಜೆಪಿಯೇತರ ರಾಜ್ಯಗಳಲ್ಲಿ ಕೊರೊನಾ ಲಸಿಕೆ ಸಿಗುವುದಿಲ್ಲವೆ ಎಂದು ಹಲವು ಮಂದಿ ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.

ಫೇಸ್‌ಬುಕ್‌ನಲ್ಲಿ “ಬಿಹಾರದ ಜನರೇ, ಬಿಜೆಪಿಗೆ ವೋಟ್ ಹಾಕಿದ್ರೆ, 1.25 ಲಕ್ಷ ಕೋಟಿ ರೂಪಾಯಿಯ ಪ್ಯಾಕೇಜ್ ಕೊಟ್ಟ ಹಾಗೆ ಫ್ರೀ ಕೋವಿಡ್ ಲಸಿಕೆಯನ್ನೂ ಕೊಡ್ತಾರೆ” ಎಂಬ ಫೋಸ್ಟ್‌ಗಳು ಶೇರ್ ಆಗುತ್ತಿವೆ.

ಇದನ್ನೂ ಓದಿ: ಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ಬಿಹಾರದವರೆ -ಬಿಜೆಪಿಗೆ ವೋಟ್ ಹಾಕಿದ್ರೆ,₹1.25 ಲಕ್ಷ ಕೋಟಿ ಪ್ಯಾಕೇಜ್ ಕೊಟ್ಟ ಹಾಗೆ ಫ್ರೀ ಕೋವಿಡ್ ಲಸಿಕೆಯನ್ನೂ ಕೊಡ್ತಾರೆ ??‍♂️

Posted by Sharath Chandra on Thursday, October 22, 2020

 

ಕರ್ನಾಟಕ ವಿದ್ಯಾರ್ಥಿ ಸಂಘದ (ಕೆವಿಎಸ್‌) ಸಂಚಾಲಕರಾದ ಸರೋವರ್ ಬೆಂಕಿಕೆರೆ ಕರ್ನಾಟಕದವರಿಗೆ ಕರೋನಾ ಲಸಿಕೆ ಬೇಕು ಅಂದ್ರೆ ಚುನಾವಣೆ ಬರಬೇಕು ಅಂತಾನ? ಔಷಧ ಲಸಿಕೆಯನ್ನೂ ರಾಜಕೀಯಗೊಳಿಸಿಬಿಟ್ರಲ್ಲ ಗ್ರೇಟ್, ಗ್ರೇಟರ್, ಗ್ರೇಟೆಸ್ಟ್ ಕಣ್ರಿ ನೀವು ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರಣಾಳಿಕೆಯಲ್ಲಿ ನೀಡಲಾಗಿರುವ ಭರವಸೆಯ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಐಟಿ ವಿಭಾಗದ ಅಮಿತ್ ಮಾಳವಿಯಾ,”ಬಿಜೆಪಿಯ ಪ್ರಣಾಳಿಕೆ ಉಚಿತ ಕೋವಿಡ್ ಲಸಿಕೆಯ ಭರವಸೆ ನೀಡುತ್ತದೆ. ಎಲ್ಲಾ ಕಾರ್ಯಕ್ರಮಗಳಂತೆ ಕೇಂದ್ರವು ರಾಜ್ಯಗಳಿಗೆ ಅತ್ಯಲ್ಪ ದರದಲ್ಲಿ ಲಸಿಕೆಗಳನ್ನು ನೀಡುತ್ತದೆ. ಆರೋಗ್ಯವು ರಾಜ್ಯ ವಿಷಯವಾಗಿರುವುದರಿಂದ ಲಸಿಕೆ ಉಚಿತವಾಗಿ ನೀಡಬೇಕೆ ಅಥವಾ ಬೇಡವೇ ಎಂದು ರಾಜ್ಯಕ್ಕೆ ಸರ್ಕಾರಗಳು ಅದನ್ನು ನಿರ್ಧರಿಸಬೇಕು. ಬಿಜೆಪಿ ಬಿಹಾರದಲ್ಲಿ ಅದನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ” ಎಂದಿದ್ದಾರೆ.

ಲಸಿಕೆ ವಿತರಣೆ ಮತ್ತು ಬೆಲೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಸರ್ಕಾರ ಈವರೆಗೆ ಉತ್ತರಿಸಿಲ್ಲ. ಲಸಿಕೆಗಳ ಸಂಗ್ರಹಣೆ ಮತ್ತು ವಿತರಣೆಗಾಗಿ ಸರ್ಕಾರದ ಸಿದ್ಧತೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಹಲವಾರು ಸಭೆಗಳಲ್ಲಿ ಭಾಗವಹಿಸಿದ್ದಾರೆ.


ಇದನ್ನೂ ಓದಿ: ಬಿಹಾರ: ನಿಯಮಗಳ ಉಲ್ಲಂಘನೆ, ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...