HomeUncategorizedಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಟ್ವೀಟ್ ಮಾಡಿರುವ ಆಮ್ ಆದ್ಮಿ ಪಾರ್ಟಿ, ’ಬಿಜೆಪಿ ಆಡಳಿತದಲ್ಲಿಲ್ಲದ ರಾಜ್ಯಗಳ ಕತೆ ಏನು? ಬಿಜೆಪಿಗೆ ಮತ ಹಾಕದ ಭಾರತೀಯರಿಗೆ ಉಚಿತ ಕೋವಿಡ್ ಲಸಿಕೆ ಸಿಗುವುದಿಲ್ಲವೇ?" ಎಂದು ಕೇಳಿದೆ.

- Advertisement -
- Advertisement -

ಮುಂದಿನ ವಾರ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ “ಎಲ್ಲರಿಗೂ ಉಚಿತ ಕೊರೊನಾ ವೈರಸ್ ಲಸಿಕೆ” ನೀಡುವ ಭರವಸೆಯು ಭಾರಿ ಟೀಕೆಗೆ ಗುರಿಯಾಗಿದೆ. ಆಡಳಿತ ಪಕ್ಷವು ತನ್ನ ರಾಜಕೀಯ ಕಾರ್ಯಕ್ಕೆ ಲಸಿಕೆಯನ್ನು ಬಳಸುವ ಪ್ರಯತ್ನದಲ್ಲಿದೆ ಎಂಬ ಆರೋಪಗಳು ಕೇಳಿಬಂದಿವೆ.

ಇಂದು ಬಿಡುಗಡೆಯಾದ ಬಿಜೆಪಿ ಪ್ರಣಾಳಿಕೆಯಲ್ಲಿ 19 ಲಕ್ಷ ಉದ್ಯೋಗಗಳು ಸೇರಿದಂತೆ ಎಲ್ಲರಿಗೂ ಉಚಿತ ಕೊರೊನಾ ವೈರಸ್ ಲಸಿಕೆ ನೀಡುವ ಭರವಸೆ ನೀಡಿದೆ. ಜೊತೆಗೆ ಮುಂದಿನ ಐದು ವರ್ಷಗಳ ಕಾಲ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಪಕ್ಷ ಒತ್ತಿ ಹೇಳಿದೆ.

“ಕೊರೊನಾ ಲಸಿಕೆ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆಗೆ ಲಭ್ಯವಾದ ತಕ್ಷಣ, ಬಿಹಾರದ ಪ್ರತಿಯೊಬ್ಬ ವ್ಯಕ್ತಿಗೂ ಉಚಿತ ಲಸಿಕೆ ಸಿಗುತ್ತದೆ. ಇದು ನಮ್ಮ ಮತದಾನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾದ ಮೊದಲ ಭರವಸೆ” ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಇಂದು ಹೇಳಿದ್ದರು.

ಪ್ರಣಾಳಿಕೆ ಬಿಡುಗಡೆಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಪಕ್ಷಗಳು, ಸಾರ್ವಜನಿಕರು ಟ್ರೋಲ್ ಮಾಡಲು ಶುರು ಮಾಡಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದ ಲಸಿಕೆಯನ್ನು ರಾಜಕೀಯ ಲಾಭಕ್ಕೆ ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

ಪತ್ರಿಕಾಗೋಷ್ಠಿಯನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಆಮ್ ಆದ್ಮಿ ಪಾರ್ಟಿ, ’ಬಿಜೆಪಿ ಆಡಳಿತದಲ್ಲಿಲ್ಲದ ರಾಜ್ಯಗಳ ಕತೆ ಏನು? ಬಿಜೆಪಿಗೆ ಮತ ಹಾಕದ ಭಾರತೀಯರಿಗೆ ಉಚಿತ ಕೋವಿಡ್ ಲಸಿಕೆ ಸಿಗುವುದಿಲ್ಲವೇ?” ಎಂದು ಕೇಳಿದೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಭಾರತ ಸರ್ಕಾರ ಇದೀಗ ಕೊರೊನಾವನ್ನು ತಂತ್ರವನ್ನಾಗಿಸಿಕೊಂಡಿದೆ. ಲಸಿಕೆ ಪಡೆಯಲು ರಾಜ್ಯವಾರು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿ, ಜೊತೆಗೆ ನಿಮ್ಮ ಸುಳ್ಳು ಭರವಸೆಗಳನ್ನು ಕೂಡ” ಎಂದಿದ್ದಾರೆ.

 

ಕಾಂಗ್ರೆಸ್ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರು ಟ್ವೀಟ್ ಮಾಡಿ, ” ನೀವು ನನಗೆ ಮತಗಳನ್ನು ನೀಡಿ, ನಾನು ನಿಮಗೆ ಲಸಿಕೆ ನೀಡುತ್ತೇನೆ” ಇದು ಭಯಾನಕ ಸಿನಿಕತನ! ಚುನಾವಣಾ ಆಯೋಗವು ಆಕೆಯ ಮೇಲೆ ಮತ್ತು ನಾಚಿಕೆಯಿಲ್ಲದ ಅವರ ಸರ್ಕಾರದ ಮೇಲೆ ಕ್ರಮ ಕೈಗೊಳ್ಳುತ್ತದೇಯೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಿಹಾರ: ಟ್ರಂಪ್ ಬಂದು ವಿಶೇಷ ಸ್ಥಾನಮಾನ ನೀಡುತ್ತಾರಾ?- ನಿತೀಶ್‌ಗೆ ತೇಜಸ್ವಿ ಯಾದವ್ ಪ್ರಶ್ನೆ!

 

ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯಚಿತ್ರಗಳು ವೈರಲ್ ಆಗುತ್ತಿವೆ. ಸತೀಶ್ ಆಚಾರ್‍ಯ ಅವರ ’ಲಸಿಕೆ ರಾಜಕೀಯ’ ವ್ಯಂಗ್ಯಚಿತ್ರ ಸಾಕಷ್ಟು ಸದ್ದು ಮಾಡುತ್ತಿದೆ.

ಬಿಜೆಪಿಯೇತರ ರಾಜ್ಯಗಳಲ್ಲಿ ಕೊರೊನಾ ಲಸಿಕೆ ಸಿಗುವುದಿಲ್ಲವೆ ಎಂದು ಹಲವು ಮಂದಿ ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.

ಫೇಸ್‌ಬುಕ್‌ನಲ್ಲಿ “ಬಿಹಾರದ ಜನರೇ, ಬಿಜೆಪಿಗೆ ವೋಟ್ ಹಾಕಿದ್ರೆ, 1.25 ಲಕ್ಷ ಕೋಟಿ ರೂಪಾಯಿಯ ಪ್ಯಾಕೇಜ್ ಕೊಟ್ಟ ಹಾಗೆ ಫ್ರೀ ಕೋವಿಡ್ ಲಸಿಕೆಯನ್ನೂ ಕೊಡ್ತಾರೆ” ಎಂಬ ಫೋಸ್ಟ್‌ಗಳು ಶೇರ್ ಆಗುತ್ತಿವೆ.

ಇದನ್ನೂ ಓದಿ: ಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ಬಿಹಾರದವರೆ -ಬಿಜೆಪಿಗೆ ವೋಟ್ ಹಾಕಿದ್ರೆ,₹1.25 ಲಕ್ಷ ಕೋಟಿ ಪ್ಯಾಕೇಜ್ ಕೊಟ್ಟ ಹಾಗೆ ಫ್ರೀ ಕೋವಿಡ್ ಲಸಿಕೆಯನ್ನೂ ಕೊಡ್ತಾರೆ ??‍♂️

Posted by Sharath Chandra on Thursday, October 22, 2020

 

ಕರ್ನಾಟಕ ವಿದ್ಯಾರ್ಥಿ ಸಂಘದ (ಕೆವಿಎಸ್‌) ಸಂಚಾಲಕರಾದ ಸರೋವರ್ ಬೆಂಕಿಕೆರೆ ಕರ್ನಾಟಕದವರಿಗೆ ಕರೋನಾ ಲಸಿಕೆ ಬೇಕು ಅಂದ್ರೆ ಚುನಾವಣೆ ಬರಬೇಕು ಅಂತಾನ? ಔಷಧ ಲಸಿಕೆಯನ್ನೂ ರಾಜಕೀಯಗೊಳಿಸಿಬಿಟ್ರಲ್ಲ ಗ್ರೇಟ್, ಗ್ರೇಟರ್, ಗ್ರೇಟೆಸ್ಟ್ ಕಣ್ರಿ ನೀವು ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರಣಾಳಿಕೆಯಲ್ಲಿ ನೀಡಲಾಗಿರುವ ಭರವಸೆಯ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಐಟಿ ವಿಭಾಗದ ಅಮಿತ್ ಮಾಳವಿಯಾ,”ಬಿಜೆಪಿಯ ಪ್ರಣಾಳಿಕೆ ಉಚಿತ ಕೋವಿಡ್ ಲಸಿಕೆಯ ಭರವಸೆ ನೀಡುತ್ತದೆ. ಎಲ್ಲಾ ಕಾರ್ಯಕ್ರಮಗಳಂತೆ ಕೇಂದ್ರವು ರಾಜ್ಯಗಳಿಗೆ ಅತ್ಯಲ್ಪ ದರದಲ್ಲಿ ಲಸಿಕೆಗಳನ್ನು ನೀಡುತ್ತದೆ. ಆರೋಗ್ಯವು ರಾಜ್ಯ ವಿಷಯವಾಗಿರುವುದರಿಂದ ಲಸಿಕೆ ಉಚಿತವಾಗಿ ನೀಡಬೇಕೆ ಅಥವಾ ಬೇಡವೇ ಎಂದು ರಾಜ್ಯಕ್ಕೆ ಸರ್ಕಾರಗಳು ಅದನ್ನು ನಿರ್ಧರಿಸಬೇಕು. ಬಿಜೆಪಿ ಬಿಹಾರದಲ್ಲಿ ಅದನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ” ಎಂದಿದ್ದಾರೆ.

ಲಸಿಕೆ ವಿತರಣೆ ಮತ್ತು ಬೆಲೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಸರ್ಕಾರ ಈವರೆಗೆ ಉತ್ತರಿಸಿಲ್ಲ. ಲಸಿಕೆಗಳ ಸಂಗ್ರಹಣೆ ಮತ್ತು ವಿತರಣೆಗಾಗಿ ಸರ್ಕಾರದ ಸಿದ್ಧತೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಹಲವಾರು ಸಭೆಗಳಲ್ಲಿ ಭಾಗವಹಿಸಿದ್ದಾರೆ.


ಇದನ್ನೂ ಓದಿ: ಬಿಹಾರ: ನಿಯಮಗಳ ಉಲ್ಲಂಘನೆ, ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...