HomeUncategorizedಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಟ್ವೀಟ್ ಮಾಡಿರುವ ಆಮ್ ಆದ್ಮಿ ಪಾರ್ಟಿ, ’ಬಿಜೆಪಿ ಆಡಳಿತದಲ್ಲಿಲ್ಲದ ರಾಜ್ಯಗಳ ಕತೆ ಏನು? ಬಿಜೆಪಿಗೆ ಮತ ಹಾಕದ ಭಾರತೀಯರಿಗೆ ಉಚಿತ ಕೋವಿಡ್ ಲಸಿಕೆ ಸಿಗುವುದಿಲ್ಲವೇ?" ಎಂದು ಕೇಳಿದೆ.

- Advertisement -
- Advertisement -

ಮುಂದಿನ ವಾರ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ “ಎಲ್ಲರಿಗೂ ಉಚಿತ ಕೊರೊನಾ ವೈರಸ್ ಲಸಿಕೆ” ನೀಡುವ ಭರವಸೆಯು ಭಾರಿ ಟೀಕೆಗೆ ಗುರಿಯಾಗಿದೆ. ಆಡಳಿತ ಪಕ್ಷವು ತನ್ನ ರಾಜಕೀಯ ಕಾರ್ಯಕ್ಕೆ ಲಸಿಕೆಯನ್ನು ಬಳಸುವ ಪ್ರಯತ್ನದಲ್ಲಿದೆ ಎಂಬ ಆರೋಪಗಳು ಕೇಳಿಬಂದಿವೆ.

ಇಂದು ಬಿಡುಗಡೆಯಾದ ಬಿಜೆಪಿ ಪ್ರಣಾಳಿಕೆಯಲ್ಲಿ 19 ಲಕ್ಷ ಉದ್ಯೋಗಗಳು ಸೇರಿದಂತೆ ಎಲ್ಲರಿಗೂ ಉಚಿತ ಕೊರೊನಾ ವೈರಸ್ ಲಸಿಕೆ ನೀಡುವ ಭರವಸೆ ನೀಡಿದೆ. ಜೊತೆಗೆ ಮುಂದಿನ ಐದು ವರ್ಷಗಳ ಕಾಲ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಪಕ್ಷ ಒತ್ತಿ ಹೇಳಿದೆ.

“ಕೊರೊನಾ ಲಸಿಕೆ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆಗೆ ಲಭ್ಯವಾದ ತಕ್ಷಣ, ಬಿಹಾರದ ಪ್ರತಿಯೊಬ್ಬ ವ್ಯಕ್ತಿಗೂ ಉಚಿತ ಲಸಿಕೆ ಸಿಗುತ್ತದೆ. ಇದು ನಮ್ಮ ಮತದಾನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾದ ಮೊದಲ ಭರವಸೆ” ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಇಂದು ಹೇಳಿದ್ದರು.

ಪ್ರಣಾಳಿಕೆ ಬಿಡುಗಡೆಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಪಕ್ಷಗಳು, ಸಾರ್ವಜನಿಕರು ಟ್ರೋಲ್ ಮಾಡಲು ಶುರು ಮಾಡಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದ ಲಸಿಕೆಯನ್ನು ರಾಜಕೀಯ ಲಾಭಕ್ಕೆ ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

ಪತ್ರಿಕಾಗೋಷ್ಠಿಯನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಆಮ್ ಆದ್ಮಿ ಪಾರ್ಟಿ, ’ಬಿಜೆಪಿ ಆಡಳಿತದಲ್ಲಿಲ್ಲದ ರಾಜ್ಯಗಳ ಕತೆ ಏನು? ಬಿಜೆಪಿಗೆ ಮತ ಹಾಕದ ಭಾರತೀಯರಿಗೆ ಉಚಿತ ಕೋವಿಡ್ ಲಸಿಕೆ ಸಿಗುವುದಿಲ್ಲವೇ?” ಎಂದು ಕೇಳಿದೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಭಾರತ ಸರ್ಕಾರ ಇದೀಗ ಕೊರೊನಾವನ್ನು ತಂತ್ರವನ್ನಾಗಿಸಿಕೊಂಡಿದೆ. ಲಸಿಕೆ ಪಡೆಯಲು ರಾಜ್ಯವಾರು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿ, ಜೊತೆಗೆ ನಿಮ್ಮ ಸುಳ್ಳು ಭರವಸೆಗಳನ್ನು ಕೂಡ” ಎಂದಿದ್ದಾರೆ.

 

ಕಾಂಗ್ರೆಸ್ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರು ಟ್ವೀಟ್ ಮಾಡಿ, ” ನೀವು ನನಗೆ ಮತಗಳನ್ನು ನೀಡಿ, ನಾನು ನಿಮಗೆ ಲಸಿಕೆ ನೀಡುತ್ತೇನೆ” ಇದು ಭಯಾನಕ ಸಿನಿಕತನ! ಚುನಾವಣಾ ಆಯೋಗವು ಆಕೆಯ ಮೇಲೆ ಮತ್ತು ನಾಚಿಕೆಯಿಲ್ಲದ ಅವರ ಸರ್ಕಾರದ ಮೇಲೆ ಕ್ರಮ ಕೈಗೊಳ್ಳುತ್ತದೇಯೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಿಹಾರ: ಟ್ರಂಪ್ ಬಂದು ವಿಶೇಷ ಸ್ಥಾನಮಾನ ನೀಡುತ್ತಾರಾ?- ನಿತೀಶ್‌ಗೆ ತೇಜಸ್ವಿ ಯಾದವ್ ಪ್ರಶ್ನೆ!

 

ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯಚಿತ್ರಗಳು ವೈರಲ್ ಆಗುತ್ತಿವೆ. ಸತೀಶ್ ಆಚಾರ್‍ಯ ಅವರ ’ಲಸಿಕೆ ರಾಜಕೀಯ’ ವ್ಯಂಗ್ಯಚಿತ್ರ ಸಾಕಷ್ಟು ಸದ್ದು ಮಾಡುತ್ತಿದೆ.

ಬಿಜೆಪಿಯೇತರ ರಾಜ್ಯಗಳಲ್ಲಿ ಕೊರೊನಾ ಲಸಿಕೆ ಸಿಗುವುದಿಲ್ಲವೆ ಎಂದು ಹಲವು ಮಂದಿ ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.

ಫೇಸ್‌ಬುಕ್‌ನಲ್ಲಿ “ಬಿಹಾರದ ಜನರೇ, ಬಿಜೆಪಿಗೆ ವೋಟ್ ಹಾಕಿದ್ರೆ, 1.25 ಲಕ್ಷ ಕೋಟಿ ರೂಪಾಯಿಯ ಪ್ಯಾಕೇಜ್ ಕೊಟ್ಟ ಹಾಗೆ ಫ್ರೀ ಕೋವಿಡ್ ಲಸಿಕೆಯನ್ನೂ ಕೊಡ್ತಾರೆ” ಎಂಬ ಫೋಸ್ಟ್‌ಗಳು ಶೇರ್ ಆಗುತ್ತಿವೆ.

ಇದನ್ನೂ ಓದಿ: ಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ಬಿಹಾರದವರೆ -ಬಿಜೆಪಿಗೆ ವೋಟ್ ಹಾಕಿದ್ರೆ,₹1.25 ಲಕ್ಷ ಕೋಟಿ ಪ್ಯಾಕೇಜ್ ಕೊಟ್ಟ ಹಾಗೆ ಫ್ರೀ ಕೋವಿಡ್ ಲಸಿಕೆಯನ್ನೂ ಕೊಡ್ತಾರೆ ??‍♂️

Posted by Sharath Chandra on Thursday, October 22, 2020

 

ಕರ್ನಾಟಕ ವಿದ್ಯಾರ್ಥಿ ಸಂಘದ (ಕೆವಿಎಸ್‌) ಸಂಚಾಲಕರಾದ ಸರೋವರ್ ಬೆಂಕಿಕೆರೆ ಕರ್ನಾಟಕದವರಿಗೆ ಕರೋನಾ ಲಸಿಕೆ ಬೇಕು ಅಂದ್ರೆ ಚುನಾವಣೆ ಬರಬೇಕು ಅಂತಾನ? ಔಷಧ ಲಸಿಕೆಯನ್ನೂ ರಾಜಕೀಯಗೊಳಿಸಿಬಿಟ್ರಲ್ಲ ಗ್ರೇಟ್, ಗ್ರೇಟರ್, ಗ್ರೇಟೆಸ್ಟ್ ಕಣ್ರಿ ನೀವು ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರಣಾಳಿಕೆಯಲ್ಲಿ ನೀಡಲಾಗಿರುವ ಭರವಸೆಯ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಐಟಿ ವಿಭಾಗದ ಅಮಿತ್ ಮಾಳವಿಯಾ,”ಬಿಜೆಪಿಯ ಪ್ರಣಾಳಿಕೆ ಉಚಿತ ಕೋವಿಡ್ ಲಸಿಕೆಯ ಭರವಸೆ ನೀಡುತ್ತದೆ. ಎಲ್ಲಾ ಕಾರ್ಯಕ್ರಮಗಳಂತೆ ಕೇಂದ್ರವು ರಾಜ್ಯಗಳಿಗೆ ಅತ್ಯಲ್ಪ ದರದಲ್ಲಿ ಲಸಿಕೆಗಳನ್ನು ನೀಡುತ್ತದೆ. ಆರೋಗ್ಯವು ರಾಜ್ಯ ವಿಷಯವಾಗಿರುವುದರಿಂದ ಲಸಿಕೆ ಉಚಿತವಾಗಿ ನೀಡಬೇಕೆ ಅಥವಾ ಬೇಡವೇ ಎಂದು ರಾಜ್ಯಕ್ಕೆ ಸರ್ಕಾರಗಳು ಅದನ್ನು ನಿರ್ಧರಿಸಬೇಕು. ಬಿಜೆಪಿ ಬಿಹಾರದಲ್ಲಿ ಅದನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ” ಎಂದಿದ್ದಾರೆ.

ಲಸಿಕೆ ವಿತರಣೆ ಮತ್ತು ಬೆಲೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಸರ್ಕಾರ ಈವರೆಗೆ ಉತ್ತರಿಸಿಲ್ಲ. ಲಸಿಕೆಗಳ ಸಂಗ್ರಹಣೆ ಮತ್ತು ವಿತರಣೆಗಾಗಿ ಸರ್ಕಾರದ ಸಿದ್ಧತೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಹಲವಾರು ಸಭೆಗಳಲ್ಲಿ ಭಾಗವಹಿಸಿದ್ದಾರೆ.


ಇದನ್ನೂ ಓದಿ: ಬಿಹಾರ: ನಿಯಮಗಳ ಉಲ್ಲಂಘನೆ, ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...