Homeಅಂತರಾಷ್ಟ್ರೀಯಅಮೆರಿಕ ಭಯ: 2.2 ಬಿಲಿಯನ್ ಡಾಲರ್ ಮೌಲ್ಯದ ದೈತ್ಯ ಅನಿಲ ಕ್ಷೇತ್ರ ಕೈಚೆಲ್ಲಿದ ಭಾರತ

ಅಮೆರಿಕ ಭಯ: 2.2 ಬಿಲಿಯನ್ ಡಾಲರ್ ಮೌಲ್ಯದ ದೈತ್ಯ ಅನಿಲ ಕ್ಷೇತ್ರ ಕೈಚೆಲ್ಲಿದ ಭಾರತ

ದೈತ್ಯ ಅನಿಲ ಕ್ಷೇತ್ರವು 21.7 ಟ್ರಿಲಿಯನ್ ಘನ ಅಡಿ ಅನಿಲ ನಿಕ್ಷೇಪ ಹೊಂದಿದ್ದು, 12.8 ಟ್ರಿಲಿಯನ್ ಘನ ಅಡಿ ನೈಸರ್ಗಿಕ ಅನಿಲ ಮತ್ತು 212 ಮಿಲಿಯನ್ ಬ್ಯಾರೆಲ್ ಅನಿಲ ಕಂಡೆನ್ಸೇಟ್‌‌ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

- Advertisement -
- Advertisement -

ಪರ್ಷಿಯನ್ ಕೊಲ್ಲಿಯಲ್ಲಿ ಫರ್ಜಾದ್-ಬಿ ಅನಿಲ ಕ್ಷೇತ್ರದ ಅಭಿವೃದ್ಧಿಯಿಂದ ಭಾರತವನ್ನು ಇರಾನ್ ಹೊರಹಾಕಿದೆ ಎಂದು ಟೆಹ್ರಾನ್‌‌ನ ಉನ್ನತ ಸರ್ಕಾರಿ ಮೂಲವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಅನಾಡೋಲು ಏಜೆನ್ಸಿ ವರದಿ ಮಾಡಿದೆ.

ಮೂರು ಭಾರತೀಯ ಕಂಪನಿಗಳಾದ ಒಎನ್‌ಜಿಸಿ, ಆಯಿಲ್ ಇಂಡಿಯಾ ಲಿಮಿಟೆಡ್ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಶನ್‌ನ ಒಕ್ಕೂಟದಿಂದ 2008 ರಲ್ಲಿ ಪರ್ಷಿಯನ್ ಕೊಲ್ಲಿಯ ಫಾರ್ಸಿ ಕಡಲಾಚೆಯ ಪ್ರದೇಶದಲ್ಲಿ ಫರ್ಜಾದ್-ಬಿ ಅನಿಲ ಕ್ಷೇತ್ರವನ್ನು ಕಂಡುಹಿಡಿದಿತ್ತು. ಇರಾನ್ ಮತ್ತು ಭಾರತ ಈ ಕ್ಷೇತ್ರದ ಅಭಿವೃದ್ಧಿಯ ನಿಯಮಗಳನ್ನು ಹಲವು ವರ್ಷಗಳಿಂದ ಮಾತುಕತೆ ನಡೆಸುತ್ತಿದೆ.

ಇದನ್ನೂ ಓದಿ: ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ವರ್ಷಗಳ ಹಿಂದೆ ಇರಾನ್ ಹೊರಡಿಸಿದ “ಬಹು ನಿಯಮಗಳಿಗೆ(ಮಲ್ಟಿಪಲ್ ಅಲ್ಟಿಮೇಟಮ್)” ಪ್ರತಿಕ್ರಿಯಿಸಲು ಭಾರತವು ವಿಫಲವಾದ ಕಾರಣ ಅನಿಲ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಇರಾನ್ ಸ್ಥಳೀಯ ಸಂಸ್ಥೆಗಳನ್ನು ಬಳಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

“ನಾವು ಕಳೆದ ವರ್ಷ ಸೇರಿದಂತೆ ಅನೇಕ ಅಲ್ಟಿಮೇಟಮ್‌ಗಳನ್ನು ನೀಡಿದ್ದೇವೆ, ಆದರೆ ಬಹುಶಃ ಯೋಜನೆಯನ್ನು ಕಳೆದುಕೊಳ್ಳುವಲ್ಲಿ ಮತ್ತು ಅಮೆರಿಕಾ ಅಧೀನರಾಗಿರುವುದರಲ್ಲಿ ಅವರಿಗೆ ಯಾವುದೇ ಸಮಸ್ಯೆ ಇರಲಿಲ್ಲ” ಎಂದು ಮೂಲವೊಂದು ಹೇಳಿದೆ.

 

ಯೋಜನೆಯ ಅಭಿವೃದ್ಧಿಯ ಕುರಿತು ಮಾತುಕತೆಗಾಗಿ ಇರಾನ್ ಭಾರತಕ್ಕೆ ಹಲವಾರು ಆಹ್ವಾನಗಳನ್ನು ಕಳುಹಿಸಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕದ ನಿರ್ಬಂಧದಿಂದಾಗಿ ಭಾರತವು ವಿಳಂಬ ಮಾಡುತ್ತಿರುವುದರಿಂದ ಫರ್ಜಾದ್-ಬಿ ಅನಿಲ ಕ್ಷೇತ್ರ ಯೋಜನೆಯನ್ನು ಕಳೆದುಕೊಳ್ಳಲು ಸಜ್ಜಾಗಿದೆ ಎಂದು ಸುದ್ದಿ ಸಂಸ್ಥೆ ಅನಾಡೋಲು ಏಜೆನ್ಸಿ ಜುಲೈನಲ್ಲಿ ವರದಿ ಮಾಡಿತ್ತು.

ಇದನ್ನೂ ಓದಿ: ಮೋದಿಗೆ 8,400 ಕೋಟಿ ರೂ. ವಿಮಾನ; ಸೈನಿಕರಿಗೆ ಬುಲ್ಲೆಟ್‌ಪ್ರೂಫ್ ರಹಿತ ಟ್ರಕ್!: ರಾಹುಲ್ ಗಾಂಧಿ

ಕಳೆದ ತಿಂಗಳು, ಇರಾನ್‌ನ ಪೆಟ್ರೋಲಿಯಂ ಸಚಿವ ಬಿಜಾನ್ ಜಂಗಾನೆಹ್ ಭಾರತೀಯ ಒಕ್ಕೂಟವಿಲ್ಲದೆ ಅನಿಲ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ದೃಪಡಿಸಿದ್ದರು.

“2.2 ಬಿಲಿಯನ್ ಡಾಲರ್ ಮೌಲ್ಯದ ಫರ್ಜಾದ್-ಬಿ ಅಭಿವೃದ್ಧಿಯ ಮೊದಲ ಹಂತವು ಮುಂದಿನ ದಿನಗಳಲ್ಲಿ ಸಹಿ ಮಾಡಲಾಗುವುದು” ಎಂದು ಅವರು ಸಂಸತ್ತಿನಲ್ಲಿ ಹೇಳಿದ್ದರು.

ಅವಕಾಶವನ್ನು ಕಳೆದುಕೊಂಡ ಭಾರತ

ದೈತ್ಯ ಅನಿಲ ಕ್ಷೇತ್ರವು 21.7 ಟ್ರಿಲಿಯನ್ ಘನ ಅಡಿ ಅನಿಲ ನಿಕ್ಷೇಪ ಹೊಂದಿದ್ದು, 12.8 ಟ್ರಿಲಿಯನ್ ಘನ ಅಡಿ ನೈಸರ್ಗಿಕ ಅನಿಲ ಮತ್ತು 212 ಮಿಲಿಯನ್ ಬ್ಯಾರೆಲ್ ಅನಿಲ ಕಂಡೆನ್ಸೇಟ್ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

ಇರಾನ್ ಭಾರತಕ್ಕೆ ಅನೇಕ ರಿಯಾಯಿತಿಗಳನ್ನು ನೀಡಿದ್ದು, ಯೋಜನೆಗೆ ಸೇರಲು ಬಹಳ ಸಮಯ ಕಾಯುತ್ತಿತ್ತು. ಆದರೆ ಅಮೆರಿಕಾದೊಂದಿಗೆ ದ್ವೇಷ ಕಟ್ಟಿಕೊಳ್ಳಲು ತಯಾರಿರದ ಭಾರತ ಇದನ್ನು ಕಳೆದು ಕೊಂಡಿದೆ ಎನ್ನಲಾಗಿದೆ.

ಮೂಲದ ಪ್ರಕಾರ, ಇರಾನ್ ಕಳೆದ ವರ್ಷ ಭಾರತಕ್ಕೆ ತನ್ನ ಅಂತಿಮ ಅಲ್ಟಿಮೇಟಮ್ ಅನ್ನು ಬಿಡುಗಡೆ ಮಾಡಿದ್ದು, ಇನ್ನು ಮುಂದೆ ಕಾಯಲು ಸಾಧ್ಯವಿಲ್ಲ ಎಂದು ಇರಾನ್ ಹೇಳಿದೆ.

“ಹಲವು ವರ್ಷದಿಂದ ಗ್ಯಾಸ್ ಹೊರತೆಗೆಯುತ್ತಿರುವ ಕತಾರ್‌ನಂತಹ ಇತರ ದೇಶಗಳೊಂದಿಗೆ ಅನಿಲ ಕ್ಷೇತ್ರಗಳನ್ನು (ಪರ್ಷಿಯನ್ ಕೊಲ್ಲಿಯಲ್ಲಿ) ಹಂಚಿಕೊಳ್ಳುತ್ತೇವೆ. ಅಮೆರಿಕಾದ ನಿರ್ಬಂಧಗಳು ಮತ್ತು ಭಯದಿಂದ ಭಾರತವು ಅವಕಾಶವನ್ನು ಕಳೆದುಕೊಂಡಿದೆ ಎಂದು ತಿಳಿಸಿದೆ.

ಈ ದೈತ್ಯ ಗ್ಯಾಸ್ ಕ್ಷೇತ್ರದಲ್ಲಿ ಸುಮಾರು 100 ಮಿಲಿಯನ್ ಆರಂಭಿಕ ಹೂಡಿಕೆಯ ಹೊರತಾಗಿಯೂ, ಅಮೆರಿಕಾದ ನಿರ್ಬಂಧಗಳಿಂದಾಗಿ ಭಾರತ ಹಿಂದೆ ಸರಿದಿದೆ.

ಇದನ್ನೂ ಓದಿ: ಚೀನಿಯರನ್ನು ಭಾರತದಿಂದ ಯಾವಾಗ ಹೊರಹಾಕುತ್ತೀರಿ? ಮೋದಿ ಭಾಷಣಕ್ಕೆ ರಾಹುಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...