Homeಅಂತರಾಷ್ಟ್ರೀಯಅಮೆರಿಕ ಭಯ: 2.2 ಬಿಲಿಯನ್ ಡಾಲರ್ ಮೌಲ್ಯದ ದೈತ್ಯ ಅನಿಲ ಕ್ಷೇತ್ರ ಕೈಚೆಲ್ಲಿದ ಭಾರತ

ಅಮೆರಿಕ ಭಯ: 2.2 ಬಿಲಿಯನ್ ಡಾಲರ್ ಮೌಲ್ಯದ ದೈತ್ಯ ಅನಿಲ ಕ್ಷೇತ್ರ ಕೈಚೆಲ್ಲಿದ ಭಾರತ

ದೈತ್ಯ ಅನಿಲ ಕ್ಷೇತ್ರವು 21.7 ಟ್ರಿಲಿಯನ್ ಘನ ಅಡಿ ಅನಿಲ ನಿಕ್ಷೇಪ ಹೊಂದಿದ್ದು, 12.8 ಟ್ರಿಲಿಯನ್ ಘನ ಅಡಿ ನೈಸರ್ಗಿಕ ಅನಿಲ ಮತ್ತು 212 ಮಿಲಿಯನ್ ಬ್ಯಾರೆಲ್ ಅನಿಲ ಕಂಡೆನ್ಸೇಟ್‌‌ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

- Advertisement -
- Advertisement -

ಪರ್ಷಿಯನ್ ಕೊಲ್ಲಿಯಲ್ಲಿ ಫರ್ಜಾದ್-ಬಿ ಅನಿಲ ಕ್ಷೇತ್ರದ ಅಭಿವೃದ್ಧಿಯಿಂದ ಭಾರತವನ್ನು ಇರಾನ್ ಹೊರಹಾಕಿದೆ ಎಂದು ಟೆಹ್ರಾನ್‌‌ನ ಉನ್ನತ ಸರ್ಕಾರಿ ಮೂಲವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಅನಾಡೋಲು ಏಜೆನ್ಸಿ ವರದಿ ಮಾಡಿದೆ.

ಮೂರು ಭಾರತೀಯ ಕಂಪನಿಗಳಾದ ಒಎನ್‌ಜಿಸಿ, ಆಯಿಲ್ ಇಂಡಿಯಾ ಲಿಮಿಟೆಡ್ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಶನ್‌ನ ಒಕ್ಕೂಟದಿಂದ 2008 ರಲ್ಲಿ ಪರ್ಷಿಯನ್ ಕೊಲ್ಲಿಯ ಫಾರ್ಸಿ ಕಡಲಾಚೆಯ ಪ್ರದೇಶದಲ್ಲಿ ಫರ್ಜಾದ್-ಬಿ ಅನಿಲ ಕ್ಷೇತ್ರವನ್ನು ಕಂಡುಹಿಡಿದಿತ್ತು. ಇರಾನ್ ಮತ್ತು ಭಾರತ ಈ ಕ್ಷೇತ್ರದ ಅಭಿವೃದ್ಧಿಯ ನಿಯಮಗಳನ್ನು ಹಲವು ವರ್ಷಗಳಿಂದ ಮಾತುಕತೆ ನಡೆಸುತ್ತಿದೆ.

ಇದನ್ನೂ ಓದಿ: ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ವರ್ಷಗಳ ಹಿಂದೆ ಇರಾನ್ ಹೊರಡಿಸಿದ “ಬಹು ನಿಯಮಗಳಿಗೆ(ಮಲ್ಟಿಪಲ್ ಅಲ್ಟಿಮೇಟಮ್)” ಪ್ರತಿಕ್ರಿಯಿಸಲು ಭಾರತವು ವಿಫಲವಾದ ಕಾರಣ ಅನಿಲ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಇರಾನ್ ಸ್ಥಳೀಯ ಸಂಸ್ಥೆಗಳನ್ನು ಬಳಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

“ನಾವು ಕಳೆದ ವರ್ಷ ಸೇರಿದಂತೆ ಅನೇಕ ಅಲ್ಟಿಮೇಟಮ್‌ಗಳನ್ನು ನೀಡಿದ್ದೇವೆ, ಆದರೆ ಬಹುಶಃ ಯೋಜನೆಯನ್ನು ಕಳೆದುಕೊಳ್ಳುವಲ್ಲಿ ಮತ್ತು ಅಮೆರಿಕಾ ಅಧೀನರಾಗಿರುವುದರಲ್ಲಿ ಅವರಿಗೆ ಯಾವುದೇ ಸಮಸ್ಯೆ ಇರಲಿಲ್ಲ” ಎಂದು ಮೂಲವೊಂದು ಹೇಳಿದೆ.

 

ಯೋಜನೆಯ ಅಭಿವೃದ್ಧಿಯ ಕುರಿತು ಮಾತುಕತೆಗಾಗಿ ಇರಾನ್ ಭಾರತಕ್ಕೆ ಹಲವಾರು ಆಹ್ವಾನಗಳನ್ನು ಕಳುಹಿಸಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕದ ನಿರ್ಬಂಧದಿಂದಾಗಿ ಭಾರತವು ವಿಳಂಬ ಮಾಡುತ್ತಿರುವುದರಿಂದ ಫರ್ಜಾದ್-ಬಿ ಅನಿಲ ಕ್ಷೇತ್ರ ಯೋಜನೆಯನ್ನು ಕಳೆದುಕೊಳ್ಳಲು ಸಜ್ಜಾಗಿದೆ ಎಂದು ಸುದ್ದಿ ಸಂಸ್ಥೆ ಅನಾಡೋಲು ಏಜೆನ್ಸಿ ಜುಲೈನಲ್ಲಿ ವರದಿ ಮಾಡಿತ್ತು.

ಇದನ್ನೂ ಓದಿ: ಮೋದಿಗೆ 8,400 ಕೋಟಿ ರೂ. ವಿಮಾನ; ಸೈನಿಕರಿಗೆ ಬುಲ್ಲೆಟ್‌ಪ್ರೂಫ್ ರಹಿತ ಟ್ರಕ್!: ರಾಹುಲ್ ಗಾಂಧಿ

ಕಳೆದ ತಿಂಗಳು, ಇರಾನ್‌ನ ಪೆಟ್ರೋಲಿಯಂ ಸಚಿವ ಬಿಜಾನ್ ಜಂಗಾನೆಹ್ ಭಾರತೀಯ ಒಕ್ಕೂಟವಿಲ್ಲದೆ ಅನಿಲ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ದೃಪಡಿಸಿದ್ದರು.

“2.2 ಬಿಲಿಯನ್ ಡಾಲರ್ ಮೌಲ್ಯದ ಫರ್ಜಾದ್-ಬಿ ಅಭಿವೃದ್ಧಿಯ ಮೊದಲ ಹಂತವು ಮುಂದಿನ ದಿನಗಳಲ್ಲಿ ಸಹಿ ಮಾಡಲಾಗುವುದು” ಎಂದು ಅವರು ಸಂಸತ್ತಿನಲ್ಲಿ ಹೇಳಿದ್ದರು.

ಅವಕಾಶವನ್ನು ಕಳೆದುಕೊಂಡ ಭಾರತ

ದೈತ್ಯ ಅನಿಲ ಕ್ಷೇತ್ರವು 21.7 ಟ್ರಿಲಿಯನ್ ಘನ ಅಡಿ ಅನಿಲ ನಿಕ್ಷೇಪ ಹೊಂದಿದ್ದು, 12.8 ಟ್ರಿಲಿಯನ್ ಘನ ಅಡಿ ನೈಸರ್ಗಿಕ ಅನಿಲ ಮತ್ತು 212 ಮಿಲಿಯನ್ ಬ್ಯಾರೆಲ್ ಅನಿಲ ಕಂಡೆನ್ಸೇಟ್ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

ಇರಾನ್ ಭಾರತಕ್ಕೆ ಅನೇಕ ರಿಯಾಯಿತಿಗಳನ್ನು ನೀಡಿದ್ದು, ಯೋಜನೆಗೆ ಸೇರಲು ಬಹಳ ಸಮಯ ಕಾಯುತ್ತಿತ್ತು. ಆದರೆ ಅಮೆರಿಕಾದೊಂದಿಗೆ ದ್ವೇಷ ಕಟ್ಟಿಕೊಳ್ಳಲು ತಯಾರಿರದ ಭಾರತ ಇದನ್ನು ಕಳೆದು ಕೊಂಡಿದೆ ಎನ್ನಲಾಗಿದೆ.

ಮೂಲದ ಪ್ರಕಾರ, ಇರಾನ್ ಕಳೆದ ವರ್ಷ ಭಾರತಕ್ಕೆ ತನ್ನ ಅಂತಿಮ ಅಲ್ಟಿಮೇಟಮ್ ಅನ್ನು ಬಿಡುಗಡೆ ಮಾಡಿದ್ದು, ಇನ್ನು ಮುಂದೆ ಕಾಯಲು ಸಾಧ್ಯವಿಲ್ಲ ಎಂದು ಇರಾನ್ ಹೇಳಿದೆ.

“ಹಲವು ವರ್ಷದಿಂದ ಗ್ಯಾಸ್ ಹೊರತೆಗೆಯುತ್ತಿರುವ ಕತಾರ್‌ನಂತಹ ಇತರ ದೇಶಗಳೊಂದಿಗೆ ಅನಿಲ ಕ್ಷೇತ್ರಗಳನ್ನು (ಪರ್ಷಿಯನ್ ಕೊಲ್ಲಿಯಲ್ಲಿ) ಹಂಚಿಕೊಳ್ಳುತ್ತೇವೆ. ಅಮೆರಿಕಾದ ನಿರ್ಬಂಧಗಳು ಮತ್ತು ಭಯದಿಂದ ಭಾರತವು ಅವಕಾಶವನ್ನು ಕಳೆದುಕೊಂಡಿದೆ ಎಂದು ತಿಳಿಸಿದೆ.

ಈ ದೈತ್ಯ ಗ್ಯಾಸ್ ಕ್ಷೇತ್ರದಲ್ಲಿ ಸುಮಾರು 100 ಮಿಲಿಯನ್ ಆರಂಭಿಕ ಹೂಡಿಕೆಯ ಹೊರತಾಗಿಯೂ, ಅಮೆರಿಕಾದ ನಿರ್ಬಂಧಗಳಿಂದಾಗಿ ಭಾರತ ಹಿಂದೆ ಸರಿದಿದೆ.

ಇದನ್ನೂ ಓದಿ: ಚೀನಿಯರನ್ನು ಭಾರತದಿಂದ ಯಾವಾಗ ಹೊರಹಾಕುತ್ತೀರಿ? ಮೋದಿ ಭಾಷಣಕ್ಕೆ ರಾಹುಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...