Homeಮುಖಪುಟಗೌರಿ ಲಂಕೇಶರಂತೆ ಈಗ ನನ್ನನ್ನೂ ಕೊಲ್ಲಬಹುದು ಎಂದು ಭಯವಾಗಿತ್ತು: ವಕೀಲೆ ದೀಪಿಕಾ ಸಿಂಗ್

ಗೌರಿ ಲಂಕೇಶರಂತೆ ಈಗ ನನ್ನನ್ನೂ ಕೊಲ್ಲಬಹುದು ಎಂದು ಭಯವಾಗಿತ್ತು: ವಕೀಲೆ ದೀಪಿಕಾ ಸಿಂಗ್

ಜನಸಮೂಹವೊಂದು ನನ್ನ ನಿವಾಸದ ಹೊರಗೆ ಜಮಾಯಿಸಿ, ಘೋಷಣೆಗಳನ್ನು ಕೂಗುತ್ತಾ, ದೀಪಿಕಾ ನಿಮ್ಮ ಸಮಾಧಿಯನ್ನು ಜಮ್ಮು ಮತ್ತು ಕಾಶ್ಮೀರದ ಭೂಮಿಯಲ್ಲಿ ಅಗೆಯಲಾಗುವುದು ಎಂದು ಕೂಗುತ್ತಿತ್ತು.

- Advertisement -
- Advertisement -

ಜಮ್ಮುವಿನಲ್ಲಿರುವ ವಕೀಲೆ ದೀಪಿಕಾ ಸಿಂಗ್ ರಾಜಾವತ್, ಮೈಕ್ರೊ ಬ್ಲಾಗಿಂಗ್ ಸೈಟ್ ಟ್ವಿಟ್ಟರ್‌ನಲ್ಲಿ ಕಾರ್ಟೂನ್ ಒಂದನ್ನು ಪೋಸ್ಟ್ ಮಾಡಿದ ನಂತರ, ಪುರುಷರ ಗುಂಪೊಂದು ಮಂಗಳವಾರ ತಡರಾತ್ರಿ ಅವರ ನಿವಾಸದ ಹೊರಗೆ ಘೋಷಣೆಗಳನ್ನು ಕೂಗುತ್ತಾ ಜಮಾಯಿಸಿತ್ತು ಎಂದು ವರದಿಯಾಗಿದೆ.

“ಜನಸಮೂಹವೊಂದು ನನ್ನ ನಿವಾಸದ ಹೊರಗೆ ಜಮಾಯಿಸಿ, ಘೋಷಣೆಗಳನ್ನು ಕೂಗುತ್ತಾ ನನ್ನನ್ನು ಸಾಯಿಸುವುದಾಗಿ ಬೆದರಿಕೆ ಹಾಕಿತು. ದೀಪಿಕಾ ನಿಮ್ಮ ಸಮಾಧಿಯನ್ನು ಜಮ್ಮು ಮತ್ತು ಕಾಶ್ಮೀರದ ಭೂಮಿಯಲ್ಲಿ ಅಗೆಯಲಾಗುವುದು” ಎಂದು ಕೂಗುತ್ತಿದ್ದರು ಎಂದು ದೀಪಿಕಾ ಸಿಂಗ್ ನ್ಯೂಸ್‌ಕ್ಲಿಕ್‌ಗೆ ತಿಳಿಸಿದ್ದಾರೆ.

“ಕೆಲವರು ನನ್ನ ಹೆಸರನ್ನು ಕೂಗಿದಾಗ ರಾತ್ರಿ 12.30 ಆಗಿತ್ತು. ನಾನು ಸಾವಿಗೆ ಹೆದರುತ್ತಿದ್ದೆ. ನಾನು ನನ್ನ ಪಿಎಸ್‌ಒಗಳನ್ನು ಎಚ್ಚರಿಸಿದೆ. ನಂತರ ತಕ್ಷಣ ಪ್ರತಿಕ್ರಿಯಿಸಿದ ಐಜಿಗೆ ಫೋನ್ ಮಾಡಿದೆ. ಆಗ ಕೆಲವು ಪೊಲೀಸರು ಬಂದು ಜನಸಮೂಹವನ್ನು ಚದುರಿಸಿದರು” ಎಂದು ಅವರು ವಿವರಿಸಿದರು.

ಇದನ್ನೂ ಓದಿ: ಡಿಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿ ನವೀನ್‌ಗೆ ಜಾಮೀನು

“ವ್ಯಂಗ್ಯ” ಎಂಬ ಶೀರ್ಷಿಕೆಯೊಂದಿಗೆ ದೀಪಿಕಾ ಸಿಂಗ್ ಪೋಸ್ಟ್ ಮಾಡಿದ ವ್ಯಂಗ್ಯ ಚಿತ್ರವು ಎರಡು ವಿರೋಧಾಭಾಸದ ದೃಶ್ಯಗಳನ್ನು ಸಾರಾಸಗಟಾಗಿ ತೋರಿಸಿದೆ. ಒಂದು ಚಿತ್ರದಲ್ಲಿ, ನವರಾತ್ರಿಯ ಒಂಬತ್ತು ದಿನಗಳ ಹಿಂದೂ ಹಬ್ಬದ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ಸ್ತ್ರೀ ಹಿಂದೂ ದೇವತೆಯ ಪಾದಗಳನ್ನು ಸ್ಪರ್ಶಿಸುತ್ತಾನೆ. ಇತರದ  ಚಿತ್ರದಲ್ಲಿ, “ಇತರೆ ದಿನಗಳು” ಎಂಬ ಶೀರ್ಷಿಕೆಯೊಂದಿಗೆ, ಅದೇ ಪುರುಷನು ಮಹಿಳೆಯ ಎರಡೂ ಕಾಲುಗಳನ್ನು ಆಕ್ರಮಣಕಾರಿಯಾಗಿ ಹಿಡಿದುಕೊಂಡಿರುತ್ತಾನೆ. ಇದು ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯವನ್ನು ಧ್ವನಿಸುತ್ತದೆ.

ಇದನ್ನೂ ಓದಿ: ಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ಈ ಕಾರ್ಟೂನ್ ಹಿಂದೂ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಆರೋಪಿಸಿ, ಇದರ ಪರಿಣಾಮವಾಗಿ ಸಾಮಾಜಿಕ ಮಾಧ್ಯಮದಲ್ಲಿ ಕೆಲವರು ದೀಪಿಕಾ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಅಂದಿನಿಂದ, ಅವರು ಮತ್ತು ಅವರ ಕುಟುಂಬವು ಕಾರ್ಟೂನ್ ತೆಗೆದುಹಾಕಿ ಮತ್ತು ಕ್ಷಮೆಯಾಚಿಸುವಂತೆ ಬೆದರಿಕೆ ಹಾಕುವ ಕರೆಗಳನ್ನು ಸ್ವೀಕರಿಸುತ್ತಿದೆ ಎಂದು ದೀಪಿಕಾ ಸಿಂಗ್ ಹೇಳಿದ್ದಾರೆ.

ಇವುಗಳಿಗೆ ಪ್ರತಿಕ್ರಿಯಿಸಿದ ಅವರು “ಇಲ್ಲಿ ಅತ್ಯಾಚಾರಗಳು ನಡೆಯುವುದಿಲ್ಲವೇ? ಭಾರತದಲ್ಲಿ ಅತ್ಯಾಚಾರಗಳು ನಡೆಯುವುದಿಲ್ಲ ಎಂದು ಸಾಬೀತುಪಡಿಸಿದರೆ ನಾನು ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತೇನೆ. ನಾನು ವ್ಯಂಗ್ಯಚಿತ್ರವನ್ನು ತೆಗೆದುಹಾಕಿಲ್ಲ. ಏಕೆಂದರೆ ಅದು ಧಾರ್ಮಿಕ ಭಾವನೆಗಳನ್ನು ನೋಯಿಸುವುದಿಲ್ಲ. ಆದರೆ ಮಹಿಳೆಯರ ಬಗ್ಗೆ ಸಮಾಜದ ಬೂಟಾಟಿಕೆಗಳನ್ನು ಎತ್ತಿ ತೋರಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

“ಈ ಜನಸಮೂಹ ಬಲಪಂಥೀಯ ಹಿಂದೂ ಗುಂಪುಗಳಿಗೆ ಸಂಬಂಧಿಸಿದವರು ಎಂದು ದೀಪಿಕಾ ಸಿಂಗ್ ಗುರುತಿಸಿದ್ದು, ಇದು ನನ್ನನ್ನು ಶಮನಗೊಳಿಸುವ ಪ್ರಯತ್ನವಾಗಿದ್ದು, ಆ ಸಮಯದಲ್ಲಿ, ನನಗೆ ಗೌರಿ ಲಂಕೇಶ್ ನೆನಪಾದರು. ಅವರ ಚಿತ್ರ ನನ್ನ ಮನಸ್ಸಿನಲ್ಲಿ ಸುಳಿಯುತ್ತಲೇ ಇತ್ತು. ನಾನು ನಡುಗುತ್ತಿದ್ದೆ. ಪತ್ರಕರ್ತೆ ಗೌರಿ ಲಂಕೇಶ್ ಅವರು ಬಲಪಂಥೀಯರನ್ನು ಟೀಕಿಸಿದ್ದರು ಎಂಬ ಆರೋಪದ ಮೇಲೆ ಅವರನ್ನು ಸೆಪ್ಟೆಂಬರ್ 5, 2017 ರಂದು ಗುಂಡಿಕ್ಕಿ ಕೊಲ್ಲಲಾಯಿತು. ಮೋದಿ ಸರ್ಕಾರ ಮತ್ತು ಅದರ ನೀತಿಗಳ ವಿರುದ್ಧ ನಾನು ಧ್ವನಿ ಎತ್ತಿದ್ದರಿಂದ ನನ್ನ ಮೇಲೆ ಇಂತಹ ಬೆದರಿಕೆಗಳು ಸಹಜವಾಗಿವೆ” ಎಂದು ಹೇಳಿದರು.

#IStandWithDeepikaRajawat ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡುತ್ತಿರುವ ಬಾಲಿವುಡ್ ನಟರು, ನಿರ್ದೇಶಕರು, ವಕೀಲರು ಮತ್ತು ವಿರೋಧ ಪಕ್ಷದ ನಾಯಕರು ಸೇರಿದಂತೆ ಹಲವಾರು ವಿಭಾಗಗಳಿಂದ ದೀಪಿಕಾ ಸಿಂಗ್ ಅವರಿಗೆ ಹೆಚ್ಚಿನ ಬೆಂಬಲ ಸೂಚಿಸಲಾಗಿದೆ.

ಈ ಹಿಂದೆಯೂ ಕೂಡ ಅತ್ಯಾಚಾರ ಪ್ರಕರಣವೊಂದರಲ್ಲಿ ಸಂತ್ರಸ್ತರ ಪರವಾಗಿ ಹಾಜರಾಗಿದ್ದಕ್ಕೆ ಇದೇ ರೀತಿಯ ತೊಂದರೆಗಳನ್ನು ಇವರು ಅನುಭವಿಸಬೇಕಾಯಿತು.


ಇದನ್ನೂ ಓದಿ: ಇನ್ನೂ ಆವಿಷ್ಕಾರವಾಗದ ಕೊರೊನಾ ಲಸಿಕೆಯನ್ನು ಉಚಿತ ನೀಡುತ್ತೇವೆಂದ BJP!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...