Homeಮುಖಪುಟಗೌರಿ ಲಂಕೇಶರಂತೆ ಈಗ ನನ್ನನ್ನೂ ಕೊಲ್ಲಬಹುದು ಎಂದು ಭಯವಾಗಿತ್ತು: ವಕೀಲೆ ದೀಪಿಕಾ ಸಿಂಗ್

ಗೌರಿ ಲಂಕೇಶರಂತೆ ಈಗ ನನ್ನನ್ನೂ ಕೊಲ್ಲಬಹುದು ಎಂದು ಭಯವಾಗಿತ್ತು: ವಕೀಲೆ ದೀಪಿಕಾ ಸಿಂಗ್

ಜನಸಮೂಹವೊಂದು ನನ್ನ ನಿವಾಸದ ಹೊರಗೆ ಜಮಾಯಿಸಿ, ಘೋಷಣೆಗಳನ್ನು ಕೂಗುತ್ತಾ, ದೀಪಿಕಾ ನಿಮ್ಮ ಸಮಾಧಿಯನ್ನು ಜಮ್ಮು ಮತ್ತು ಕಾಶ್ಮೀರದ ಭೂಮಿಯಲ್ಲಿ ಅಗೆಯಲಾಗುವುದು ಎಂದು ಕೂಗುತ್ತಿತ್ತು.

- Advertisement -
- Advertisement -

ಜಮ್ಮುವಿನಲ್ಲಿರುವ ವಕೀಲೆ ದೀಪಿಕಾ ಸಿಂಗ್ ರಾಜಾವತ್, ಮೈಕ್ರೊ ಬ್ಲಾಗಿಂಗ್ ಸೈಟ್ ಟ್ವಿಟ್ಟರ್‌ನಲ್ಲಿ ಕಾರ್ಟೂನ್ ಒಂದನ್ನು ಪೋಸ್ಟ್ ಮಾಡಿದ ನಂತರ, ಪುರುಷರ ಗುಂಪೊಂದು ಮಂಗಳವಾರ ತಡರಾತ್ರಿ ಅವರ ನಿವಾಸದ ಹೊರಗೆ ಘೋಷಣೆಗಳನ್ನು ಕೂಗುತ್ತಾ ಜಮಾಯಿಸಿತ್ತು ಎಂದು ವರದಿಯಾಗಿದೆ.

“ಜನಸಮೂಹವೊಂದು ನನ್ನ ನಿವಾಸದ ಹೊರಗೆ ಜಮಾಯಿಸಿ, ಘೋಷಣೆಗಳನ್ನು ಕೂಗುತ್ತಾ ನನ್ನನ್ನು ಸಾಯಿಸುವುದಾಗಿ ಬೆದರಿಕೆ ಹಾಕಿತು. ದೀಪಿಕಾ ನಿಮ್ಮ ಸಮಾಧಿಯನ್ನು ಜಮ್ಮು ಮತ್ತು ಕಾಶ್ಮೀರದ ಭೂಮಿಯಲ್ಲಿ ಅಗೆಯಲಾಗುವುದು” ಎಂದು ಕೂಗುತ್ತಿದ್ದರು ಎಂದು ದೀಪಿಕಾ ಸಿಂಗ್ ನ್ಯೂಸ್‌ಕ್ಲಿಕ್‌ಗೆ ತಿಳಿಸಿದ್ದಾರೆ.

“ಕೆಲವರು ನನ್ನ ಹೆಸರನ್ನು ಕೂಗಿದಾಗ ರಾತ್ರಿ 12.30 ಆಗಿತ್ತು. ನಾನು ಸಾವಿಗೆ ಹೆದರುತ್ತಿದ್ದೆ. ನಾನು ನನ್ನ ಪಿಎಸ್‌ಒಗಳನ್ನು ಎಚ್ಚರಿಸಿದೆ. ನಂತರ ತಕ್ಷಣ ಪ್ರತಿಕ್ರಿಯಿಸಿದ ಐಜಿಗೆ ಫೋನ್ ಮಾಡಿದೆ. ಆಗ ಕೆಲವು ಪೊಲೀಸರು ಬಂದು ಜನಸಮೂಹವನ್ನು ಚದುರಿಸಿದರು” ಎಂದು ಅವರು ವಿವರಿಸಿದರು.

ಇದನ್ನೂ ಓದಿ: ಡಿಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿ ನವೀನ್‌ಗೆ ಜಾಮೀನು

“ವ್ಯಂಗ್ಯ” ಎಂಬ ಶೀರ್ಷಿಕೆಯೊಂದಿಗೆ ದೀಪಿಕಾ ಸಿಂಗ್ ಪೋಸ್ಟ್ ಮಾಡಿದ ವ್ಯಂಗ್ಯ ಚಿತ್ರವು ಎರಡು ವಿರೋಧಾಭಾಸದ ದೃಶ್ಯಗಳನ್ನು ಸಾರಾಸಗಟಾಗಿ ತೋರಿಸಿದೆ. ಒಂದು ಚಿತ್ರದಲ್ಲಿ, ನವರಾತ್ರಿಯ ಒಂಬತ್ತು ದಿನಗಳ ಹಿಂದೂ ಹಬ್ಬದ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ಸ್ತ್ರೀ ಹಿಂದೂ ದೇವತೆಯ ಪಾದಗಳನ್ನು ಸ್ಪರ್ಶಿಸುತ್ತಾನೆ. ಇತರದ  ಚಿತ್ರದಲ್ಲಿ, “ಇತರೆ ದಿನಗಳು” ಎಂಬ ಶೀರ್ಷಿಕೆಯೊಂದಿಗೆ, ಅದೇ ಪುರುಷನು ಮಹಿಳೆಯ ಎರಡೂ ಕಾಲುಗಳನ್ನು ಆಕ್ರಮಣಕಾರಿಯಾಗಿ ಹಿಡಿದುಕೊಂಡಿರುತ್ತಾನೆ. ಇದು ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯವನ್ನು ಧ್ವನಿಸುತ್ತದೆ.

ಇದನ್ನೂ ಓದಿ: ಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ಈ ಕಾರ್ಟೂನ್ ಹಿಂದೂ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಆರೋಪಿಸಿ, ಇದರ ಪರಿಣಾಮವಾಗಿ ಸಾಮಾಜಿಕ ಮಾಧ್ಯಮದಲ್ಲಿ ಕೆಲವರು ದೀಪಿಕಾ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಅಂದಿನಿಂದ, ಅವರು ಮತ್ತು ಅವರ ಕುಟುಂಬವು ಕಾರ್ಟೂನ್ ತೆಗೆದುಹಾಕಿ ಮತ್ತು ಕ್ಷಮೆಯಾಚಿಸುವಂತೆ ಬೆದರಿಕೆ ಹಾಕುವ ಕರೆಗಳನ್ನು ಸ್ವೀಕರಿಸುತ್ತಿದೆ ಎಂದು ದೀಪಿಕಾ ಸಿಂಗ್ ಹೇಳಿದ್ದಾರೆ.

ಇವುಗಳಿಗೆ ಪ್ರತಿಕ್ರಿಯಿಸಿದ ಅವರು “ಇಲ್ಲಿ ಅತ್ಯಾಚಾರಗಳು ನಡೆಯುವುದಿಲ್ಲವೇ? ಭಾರತದಲ್ಲಿ ಅತ್ಯಾಚಾರಗಳು ನಡೆಯುವುದಿಲ್ಲ ಎಂದು ಸಾಬೀತುಪಡಿಸಿದರೆ ನಾನು ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತೇನೆ. ನಾನು ವ್ಯಂಗ್ಯಚಿತ್ರವನ್ನು ತೆಗೆದುಹಾಕಿಲ್ಲ. ಏಕೆಂದರೆ ಅದು ಧಾರ್ಮಿಕ ಭಾವನೆಗಳನ್ನು ನೋಯಿಸುವುದಿಲ್ಲ. ಆದರೆ ಮಹಿಳೆಯರ ಬಗ್ಗೆ ಸಮಾಜದ ಬೂಟಾಟಿಕೆಗಳನ್ನು ಎತ್ತಿ ತೋರಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

“ಈ ಜನಸಮೂಹ ಬಲಪಂಥೀಯ ಹಿಂದೂ ಗುಂಪುಗಳಿಗೆ ಸಂಬಂಧಿಸಿದವರು ಎಂದು ದೀಪಿಕಾ ಸಿಂಗ್ ಗುರುತಿಸಿದ್ದು, ಇದು ನನ್ನನ್ನು ಶಮನಗೊಳಿಸುವ ಪ್ರಯತ್ನವಾಗಿದ್ದು, ಆ ಸಮಯದಲ್ಲಿ, ನನಗೆ ಗೌರಿ ಲಂಕೇಶ್ ನೆನಪಾದರು. ಅವರ ಚಿತ್ರ ನನ್ನ ಮನಸ್ಸಿನಲ್ಲಿ ಸುಳಿಯುತ್ತಲೇ ಇತ್ತು. ನಾನು ನಡುಗುತ್ತಿದ್ದೆ. ಪತ್ರಕರ್ತೆ ಗೌರಿ ಲಂಕೇಶ್ ಅವರು ಬಲಪಂಥೀಯರನ್ನು ಟೀಕಿಸಿದ್ದರು ಎಂಬ ಆರೋಪದ ಮೇಲೆ ಅವರನ್ನು ಸೆಪ್ಟೆಂಬರ್ 5, 2017 ರಂದು ಗುಂಡಿಕ್ಕಿ ಕೊಲ್ಲಲಾಯಿತು. ಮೋದಿ ಸರ್ಕಾರ ಮತ್ತು ಅದರ ನೀತಿಗಳ ವಿರುದ್ಧ ನಾನು ಧ್ವನಿ ಎತ್ತಿದ್ದರಿಂದ ನನ್ನ ಮೇಲೆ ಇಂತಹ ಬೆದರಿಕೆಗಳು ಸಹಜವಾಗಿವೆ” ಎಂದು ಹೇಳಿದರು.

#IStandWithDeepikaRajawat ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡುತ್ತಿರುವ ಬಾಲಿವುಡ್ ನಟರು, ನಿರ್ದೇಶಕರು, ವಕೀಲರು ಮತ್ತು ವಿರೋಧ ಪಕ್ಷದ ನಾಯಕರು ಸೇರಿದಂತೆ ಹಲವಾರು ವಿಭಾಗಗಳಿಂದ ದೀಪಿಕಾ ಸಿಂಗ್ ಅವರಿಗೆ ಹೆಚ್ಚಿನ ಬೆಂಬಲ ಸೂಚಿಸಲಾಗಿದೆ.

ಈ ಹಿಂದೆಯೂ ಕೂಡ ಅತ್ಯಾಚಾರ ಪ್ರಕರಣವೊಂದರಲ್ಲಿ ಸಂತ್ರಸ್ತರ ಪರವಾಗಿ ಹಾಜರಾಗಿದ್ದಕ್ಕೆ ಇದೇ ರೀತಿಯ ತೊಂದರೆಗಳನ್ನು ಇವರು ಅನುಭವಿಸಬೇಕಾಯಿತು.


ಇದನ್ನೂ ಓದಿ: ಇನ್ನೂ ಆವಿಷ್ಕಾರವಾಗದ ಕೊರೊನಾ ಲಸಿಕೆಯನ್ನು ಉಚಿತ ನೀಡುತ್ತೇವೆಂದ BJP!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...