Homeಮುಖಪುಟಗೌರಿ ಲಂಕೇಶರಂತೆ ಈಗ ನನ್ನನ್ನೂ ಕೊಲ್ಲಬಹುದು ಎಂದು ಭಯವಾಗಿತ್ತು: ವಕೀಲೆ ದೀಪಿಕಾ ಸಿಂಗ್

ಗೌರಿ ಲಂಕೇಶರಂತೆ ಈಗ ನನ್ನನ್ನೂ ಕೊಲ್ಲಬಹುದು ಎಂದು ಭಯವಾಗಿತ್ತು: ವಕೀಲೆ ದೀಪಿಕಾ ಸಿಂಗ್

ಜನಸಮೂಹವೊಂದು ನನ್ನ ನಿವಾಸದ ಹೊರಗೆ ಜಮಾಯಿಸಿ, ಘೋಷಣೆಗಳನ್ನು ಕೂಗುತ್ತಾ, ದೀಪಿಕಾ ನಿಮ್ಮ ಸಮಾಧಿಯನ್ನು ಜಮ್ಮು ಮತ್ತು ಕಾಶ್ಮೀರದ ಭೂಮಿಯಲ್ಲಿ ಅಗೆಯಲಾಗುವುದು ಎಂದು ಕೂಗುತ್ತಿತ್ತು.

- Advertisement -
- Advertisement -

ಜಮ್ಮುವಿನಲ್ಲಿರುವ ವಕೀಲೆ ದೀಪಿಕಾ ಸಿಂಗ್ ರಾಜಾವತ್, ಮೈಕ್ರೊ ಬ್ಲಾಗಿಂಗ್ ಸೈಟ್ ಟ್ವಿಟ್ಟರ್‌ನಲ್ಲಿ ಕಾರ್ಟೂನ್ ಒಂದನ್ನು ಪೋಸ್ಟ್ ಮಾಡಿದ ನಂತರ, ಪುರುಷರ ಗುಂಪೊಂದು ಮಂಗಳವಾರ ತಡರಾತ್ರಿ ಅವರ ನಿವಾಸದ ಹೊರಗೆ ಘೋಷಣೆಗಳನ್ನು ಕೂಗುತ್ತಾ ಜಮಾಯಿಸಿತ್ತು ಎಂದು ವರದಿಯಾಗಿದೆ.

“ಜನಸಮೂಹವೊಂದು ನನ್ನ ನಿವಾಸದ ಹೊರಗೆ ಜಮಾಯಿಸಿ, ಘೋಷಣೆಗಳನ್ನು ಕೂಗುತ್ತಾ ನನ್ನನ್ನು ಸಾಯಿಸುವುದಾಗಿ ಬೆದರಿಕೆ ಹಾಕಿತು. ದೀಪಿಕಾ ನಿಮ್ಮ ಸಮಾಧಿಯನ್ನು ಜಮ್ಮು ಮತ್ತು ಕಾಶ್ಮೀರದ ಭೂಮಿಯಲ್ಲಿ ಅಗೆಯಲಾಗುವುದು” ಎಂದು ಕೂಗುತ್ತಿದ್ದರು ಎಂದು ದೀಪಿಕಾ ಸಿಂಗ್ ನ್ಯೂಸ್‌ಕ್ಲಿಕ್‌ಗೆ ತಿಳಿಸಿದ್ದಾರೆ.

“ಕೆಲವರು ನನ್ನ ಹೆಸರನ್ನು ಕೂಗಿದಾಗ ರಾತ್ರಿ 12.30 ಆಗಿತ್ತು. ನಾನು ಸಾವಿಗೆ ಹೆದರುತ್ತಿದ್ದೆ. ನಾನು ನನ್ನ ಪಿಎಸ್‌ಒಗಳನ್ನು ಎಚ್ಚರಿಸಿದೆ. ನಂತರ ತಕ್ಷಣ ಪ್ರತಿಕ್ರಿಯಿಸಿದ ಐಜಿಗೆ ಫೋನ್ ಮಾಡಿದೆ. ಆಗ ಕೆಲವು ಪೊಲೀಸರು ಬಂದು ಜನಸಮೂಹವನ್ನು ಚದುರಿಸಿದರು” ಎಂದು ಅವರು ವಿವರಿಸಿದರು.

ಇದನ್ನೂ ಓದಿ: ಡಿಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿ ನವೀನ್‌ಗೆ ಜಾಮೀನು

“ವ್ಯಂಗ್ಯ” ಎಂಬ ಶೀರ್ಷಿಕೆಯೊಂದಿಗೆ ದೀಪಿಕಾ ಸಿಂಗ್ ಪೋಸ್ಟ್ ಮಾಡಿದ ವ್ಯಂಗ್ಯ ಚಿತ್ರವು ಎರಡು ವಿರೋಧಾಭಾಸದ ದೃಶ್ಯಗಳನ್ನು ಸಾರಾಸಗಟಾಗಿ ತೋರಿಸಿದೆ. ಒಂದು ಚಿತ್ರದಲ್ಲಿ, ನವರಾತ್ರಿಯ ಒಂಬತ್ತು ದಿನಗಳ ಹಿಂದೂ ಹಬ್ಬದ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ಸ್ತ್ರೀ ಹಿಂದೂ ದೇವತೆಯ ಪಾದಗಳನ್ನು ಸ್ಪರ್ಶಿಸುತ್ತಾನೆ. ಇತರದ  ಚಿತ್ರದಲ್ಲಿ, “ಇತರೆ ದಿನಗಳು” ಎಂಬ ಶೀರ್ಷಿಕೆಯೊಂದಿಗೆ, ಅದೇ ಪುರುಷನು ಮಹಿಳೆಯ ಎರಡೂ ಕಾಲುಗಳನ್ನು ಆಕ್ರಮಣಕಾರಿಯಾಗಿ ಹಿಡಿದುಕೊಂಡಿರುತ್ತಾನೆ. ಇದು ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯವನ್ನು ಧ್ವನಿಸುತ್ತದೆ.

ಇದನ್ನೂ ಓದಿ: ಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ಈ ಕಾರ್ಟೂನ್ ಹಿಂದೂ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಆರೋಪಿಸಿ, ಇದರ ಪರಿಣಾಮವಾಗಿ ಸಾಮಾಜಿಕ ಮಾಧ್ಯಮದಲ್ಲಿ ಕೆಲವರು ದೀಪಿಕಾ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಅಂದಿನಿಂದ, ಅವರು ಮತ್ತು ಅವರ ಕುಟುಂಬವು ಕಾರ್ಟೂನ್ ತೆಗೆದುಹಾಕಿ ಮತ್ತು ಕ್ಷಮೆಯಾಚಿಸುವಂತೆ ಬೆದರಿಕೆ ಹಾಕುವ ಕರೆಗಳನ್ನು ಸ್ವೀಕರಿಸುತ್ತಿದೆ ಎಂದು ದೀಪಿಕಾ ಸಿಂಗ್ ಹೇಳಿದ್ದಾರೆ.

ಇವುಗಳಿಗೆ ಪ್ರತಿಕ್ರಿಯಿಸಿದ ಅವರು “ಇಲ್ಲಿ ಅತ್ಯಾಚಾರಗಳು ನಡೆಯುವುದಿಲ್ಲವೇ? ಭಾರತದಲ್ಲಿ ಅತ್ಯಾಚಾರಗಳು ನಡೆಯುವುದಿಲ್ಲ ಎಂದು ಸಾಬೀತುಪಡಿಸಿದರೆ ನಾನು ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತೇನೆ. ನಾನು ವ್ಯಂಗ್ಯಚಿತ್ರವನ್ನು ತೆಗೆದುಹಾಕಿಲ್ಲ. ಏಕೆಂದರೆ ಅದು ಧಾರ್ಮಿಕ ಭಾವನೆಗಳನ್ನು ನೋಯಿಸುವುದಿಲ್ಲ. ಆದರೆ ಮಹಿಳೆಯರ ಬಗ್ಗೆ ಸಮಾಜದ ಬೂಟಾಟಿಕೆಗಳನ್ನು ಎತ್ತಿ ತೋರಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

“ಈ ಜನಸಮೂಹ ಬಲಪಂಥೀಯ ಹಿಂದೂ ಗುಂಪುಗಳಿಗೆ ಸಂಬಂಧಿಸಿದವರು ಎಂದು ದೀಪಿಕಾ ಸಿಂಗ್ ಗುರುತಿಸಿದ್ದು, ಇದು ನನ್ನನ್ನು ಶಮನಗೊಳಿಸುವ ಪ್ರಯತ್ನವಾಗಿದ್ದು, ಆ ಸಮಯದಲ್ಲಿ, ನನಗೆ ಗೌರಿ ಲಂಕೇಶ್ ನೆನಪಾದರು. ಅವರ ಚಿತ್ರ ನನ್ನ ಮನಸ್ಸಿನಲ್ಲಿ ಸುಳಿಯುತ್ತಲೇ ಇತ್ತು. ನಾನು ನಡುಗುತ್ತಿದ್ದೆ. ಪತ್ರಕರ್ತೆ ಗೌರಿ ಲಂಕೇಶ್ ಅವರು ಬಲಪಂಥೀಯರನ್ನು ಟೀಕಿಸಿದ್ದರು ಎಂಬ ಆರೋಪದ ಮೇಲೆ ಅವರನ್ನು ಸೆಪ್ಟೆಂಬರ್ 5, 2017 ರಂದು ಗುಂಡಿಕ್ಕಿ ಕೊಲ್ಲಲಾಯಿತು. ಮೋದಿ ಸರ್ಕಾರ ಮತ್ತು ಅದರ ನೀತಿಗಳ ವಿರುದ್ಧ ನಾನು ಧ್ವನಿ ಎತ್ತಿದ್ದರಿಂದ ನನ್ನ ಮೇಲೆ ಇಂತಹ ಬೆದರಿಕೆಗಳು ಸಹಜವಾಗಿವೆ” ಎಂದು ಹೇಳಿದರು.

#IStandWithDeepikaRajawat ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡುತ್ತಿರುವ ಬಾಲಿವುಡ್ ನಟರು, ನಿರ್ದೇಶಕರು, ವಕೀಲರು ಮತ್ತು ವಿರೋಧ ಪಕ್ಷದ ನಾಯಕರು ಸೇರಿದಂತೆ ಹಲವಾರು ವಿಭಾಗಗಳಿಂದ ದೀಪಿಕಾ ಸಿಂಗ್ ಅವರಿಗೆ ಹೆಚ್ಚಿನ ಬೆಂಬಲ ಸೂಚಿಸಲಾಗಿದೆ.

ಈ ಹಿಂದೆಯೂ ಕೂಡ ಅತ್ಯಾಚಾರ ಪ್ರಕರಣವೊಂದರಲ್ಲಿ ಸಂತ್ರಸ್ತರ ಪರವಾಗಿ ಹಾಜರಾಗಿದ್ದಕ್ಕೆ ಇದೇ ರೀತಿಯ ತೊಂದರೆಗಳನ್ನು ಇವರು ಅನುಭವಿಸಬೇಕಾಯಿತು.


ಇದನ್ನೂ ಓದಿ: ಇನ್ನೂ ಆವಿಷ್ಕಾರವಾಗದ ಕೊರೊನಾ ಲಸಿಕೆಯನ್ನು ಉಚಿತ ನೀಡುತ್ತೇವೆಂದ BJP!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...