Homeಚಳವಳಿ’ಹೋರಾಟಕ್ಕಾಗಿ ಮತ್ತೆ ಬೀದಿಗೆ ಇಳಿಯಲಿದ್ದೇವೆ’: ಸುಪ್ರೀಂ ತೀರ್ಪಿಗೆ ಖಂಡನೆ

’ಹೋರಾಟಕ್ಕಾಗಿ ಮತ್ತೆ ಬೀದಿಗೆ ಇಳಿಯಲಿದ್ದೇವೆ’: ಸುಪ್ರೀಂ ತೀರ್ಪಿಗೆ ಖಂಡನೆ

- Advertisement -
- Advertisement -

ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್, ಸುಪ್ರೀಂಕೋರ್ಟ್ ವಕೀಲ ಪ್ರಶಾಂತ್‌ ಭೂಷಣ್ ಹಾಗೂ ಲೇಖಕಿ ಅರುಂಧತಿ ರಾಯ್ ಸೇರಿಂದತೆ ಹಲವಾರು ಸಾಮಾಜಿಕ ಹೋರಾಟಗಾರರು “ಹೋರಾಟಕ್ಕಾಗಿ ಮತ್ತೆ ಬೀದಿಗೆ ಇಳಿಯಲಿದ್ದೇವೆ” ಎಂದು ಘೋಷಿಸಿದರು.

ಪ್ರತಿಭಟನೆಗಾಗಿ ಸಾರ್ವಜನಿಕ ಪ್ರದೇಶವನ್ನು ಆಕ್ರಮಿಸಿಕೊಳ್ಳುವಂತಿಲ್ಲ ಹಾಗೂ ಪ್ರತಿಭಟನೆಯನ್ನು ನಿಯೋಜಿತ ಸ್ಥಳದಲ್ಲಿ ನಡೆಸಬೇಕು ಎಂದು ಈ ತಿಂಗಳ ಆರಂಭದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ”ಕನ್ಸರ್ನ್‌ಡ್ ಸಿಟಿಝನ್ಸ್ ಕಲೆಕ್ಟಿವ್” ನಾಗರಿಕರ ತಂಡ ಗುರುವಾರ ಹೊಸದಿಲ್ಲಿಯ ಪ್ರೆಸ್‌ಕ್ಲಬ್‌‌ ಆಫ್‌‌ ಇಂಡಿಯಾದಲ್ಲಿ ನಡೆಸಲಾಗಿದ್ದ ಚರ್ಚೆಯಲ್ಲಿ ಖಂಡಿಸಿದೆ.

ಇದನ್ನೂ ಓದಿ: ಶಾಹೀನ್ ಬಾಗ್: ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಪ್ರತಿಭಟಿಸಬೇಕು ಎಂದ ಸುಪ್ರೀಂ

ಸಾಂಧರ್ಬಿಕ ಚಿತ್ರ

ತಂಡದಲ್ಲಿ ಸಫಾಯಿ ಕರ್ಮಚಾರಿ ಆಂದೋಲನದ ಸ್ಥಾಪಕ ಹಾಗೂ ಸಂಚಾಲಕ ಬೆಜವಾಡ ವಿಲ್ಸನ್, ಸಾಮಾಜಿಕ ಹೋರಾಟಗಾರ್ತಿ, ಜೆಎನ್‌ಯು ಪ್ರಾಧ್ಯಾಪಕಿ ನಿವೇದಿತಾ ಮೆನನ್, ಸುಪ್ರೀಂ ಕೋರ್ಟ್ ವಕೀಲ ಸಂಜಯ್ ಹೆಗ್ಡೆ, ನಾಗರಿಕ ಹಕ್ಕು ಸಂಘಟನೆ ಯುನೈಟೆಡ್ ಎಗೈನ್ಸ್‌ಟ್ ಹೇಟ್‌ನ ಸಹ ಸಂಸ್ಥಾಪಕ ನದೀಮ್ ಖಾನ್ ಮೊದಲಾದವರು ಇದ್ದರು.

“ಕಳೆದ ಕೆಲವು ವರ್ಷಗಳಿಂದ ಭಿನ್ನಾಭಿಪ್ರಾಯವನ್ನು ದಮನಗೊಳಿಸಲಾಗುತ್ತಿದೆ. ಆದರೆ ನನ್ನ ಭರವಸೆ, ನಮ್ಮ ಪೀಳಿಗೆಯವರು ಹೋರಾಡಿದರು, ಭವಿಷ್ಯದ ಪೀಳಿಗೆಗಳು ಸಹ ಇದನ್ನು ಅನುಸರಿಸುತ್ತವೆ ಎಂಬುದಾಗಿದೆ” ಎಂದು ಸಂಜಯ್ ಹೆಗ್ಡೆ ಹೇಳಿದರು.

ಇದನ್ನೂ ಓದಿ: ಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

ಲೇಖಕಿ ಅರುಂಧತಿ ರಾಯ್ ಮಾತನಾಡಿ, “ಜನರು ನಿರಂತರವಾಗಿ ದ್ವೇಷದಿಂದ ತುಂಬಿದ ವಾತಾವರಣದಲ್ಲಿ ವಾಸಿಸುವುದು ಅವಮಾನಕರವಾಗಿದೆ” ಎಂದರು.

ಸಾಂಧರ್ಬಿಕ ಚಿತ್ರ

ಜೆಎನ್‌ಯುನಲ್ಲಿ ನಜೀಬ್ ಅಹ್ಮದ್ ಅವರ ನಾಪತ್ತೆ ಪ್ರಕರಣದಲ್ಲಿ ಆರೋಪಿಗಳ ಮೊಬೈಲ್ ಪ್ಯಾಟರ್ನ್ ಲಾಕ್ ತೆರೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡ ಅದೇ ಪೊಲೀಸರು ಈಗ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನೂರಾರು ಸಾಮಾಜಿಕ ಕಾರ್ಯಕರ್ತರ ಫೋನ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದಾರೆ ಎಂದು ನದೀಂ ಖಾನ್ ಹೇಳಿದರು.

ಜನರು ಶಾಂತಿಯುತವಾಗಿ ನಡೆಸುತ್ತಿದ್ದ ಪ್ರತಿಭಟನೆಯನ್ನು ನಿಲ್ಲಿಸಲು ಪ್ರಯತ್ನಿಸಿದ ಪೊಲೀಸರು ಹಾಗೂ ಸರಕಾರದ ಕ್ರಮವನ್ನು ತಂಡವು ತೀವ್ರವಾಗಿ ಟೀಕಿಸಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ಸಾಂಧರ್ಬಿಕ ಚಿತ್ರ

‘‘ಪ್ರಜಾಪ್ರಭುತ್ವ ಹಾಗೂ ಭಿನ್ನಾಭಿಪ್ರಾಯ ಜೊತೆ ಜೊತೆಯಲ್ಲಿ ಸಾಗಬೇಕು. ಆದರೆ, ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವ ಪ್ರತಿಭಟನೆ ನಿಯೋಜಿತ ಪ್ರದೇಶದಲ್ಲಿ ಮಾತ್ರ ನಡೆಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ದಂಡಿ ಯಾತ್ರೆ ನಿಯೋಜಿತ ಪ್ರದೇಶದಲ್ಲಿ ನಡೆದಿದೆಯೇ ? ಜಲಿಯನ್ ವಾಲಾಬಾಗ್ ಪ್ರತಿಭಟನೆ ನಿಯೋಜಿತ ಪ್ರದೇಶದಲ್ಲಿ ನಡೆದಿದೆಯೇ ?’’ ಎಂದು ತಂಡ ಬಿಡುಗಡೆ ಮಾಡಿದ ಜಂಟಿ ಹೇಳಿಕೆ ತಿಳಿಸಿದೆ.

ಪ್ರತಿಭಟನೆ ಪ್ರಜಾಪ್ರಭುತ್ವದ ತಿರುಳು. ಈ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕನ್ನು ಅಪರಾಧೀಕರಣಗೊಳಿಸುವ ಮೂಲಕ ನಮ್ಮ ಹಕ್ಕನ್ನು ನಿಗ್ರಹಿಸುವ ಎಲ್ಲ ಪ್ರಯತ್ನದ ವಿರುದ್ಧ ನಾವು ಹೋರಾಟ ನಡೆಸಲಿದ್ದೇವೆ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಹಕ್ಕೆ ಕಬ್ಬಿಣದ ಮುಳ್ಳುತಂತಿ ಸುತ್ತಿಕೊಂಡು ಅತ್ಯಾಚಾರದ ವಿರುದ್ಧ ಪ್ರತಿಭಟನೆ?- ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...