Homeಚಳವಳಿ’ಹೋರಾಟಕ್ಕಾಗಿ ಮತ್ತೆ ಬೀದಿಗೆ ಇಳಿಯಲಿದ್ದೇವೆ’: ಸುಪ್ರೀಂ ತೀರ್ಪಿಗೆ ಖಂಡನೆ

’ಹೋರಾಟಕ್ಕಾಗಿ ಮತ್ತೆ ಬೀದಿಗೆ ಇಳಿಯಲಿದ್ದೇವೆ’: ಸುಪ್ರೀಂ ತೀರ್ಪಿಗೆ ಖಂಡನೆ

- Advertisement -
- Advertisement -

ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್, ಸುಪ್ರೀಂಕೋರ್ಟ್ ವಕೀಲ ಪ್ರಶಾಂತ್‌ ಭೂಷಣ್ ಹಾಗೂ ಲೇಖಕಿ ಅರುಂಧತಿ ರಾಯ್ ಸೇರಿಂದತೆ ಹಲವಾರು ಸಾಮಾಜಿಕ ಹೋರಾಟಗಾರರು “ಹೋರಾಟಕ್ಕಾಗಿ ಮತ್ತೆ ಬೀದಿಗೆ ಇಳಿಯಲಿದ್ದೇವೆ” ಎಂದು ಘೋಷಿಸಿದರು.

ಪ್ರತಿಭಟನೆಗಾಗಿ ಸಾರ್ವಜನಿಕ ಪ್ರದೇಶವನ್ನು ಆಕ್ರಮಿಸಿಕೊಳ್ಳುವಂತಿಲ್ಲ ಹಾಗೂ ಪ್ರತಿಭಟನೆಯನ್ನು ನಿಯೋಜಿತ ಸ್ಥಳದಲ್ಲಿ ನಡೆಸಬೇಕು ಎಂದು ಈ ತಿಂಗಳ ಆರಂಭದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ”ಕನ್ಸರ್ನ್‌ಡ್ ಸಿಟಿಝನ್ಸ್ ಕಲೆಕ್ಟಿವ್” ನಾಗರಿಕರ ತಂಡ ಗುರುವಾರ ಹೊಸದಿಲ್ಲಿಯ ಪ್ರೆಸ್‌ಕ್ಲಬ್‌‌ ಆಫ್‌‌ ಇಂಡಿಯಾದಲ್ಲಿ ನಡೆಸಲಾಗಿದ್ದ ಚರ್ಚೆಯಲ್ಲಿ ಖಂಡಿಸಿದೆ.

ಇದನ್ನೂ ಓದಿ: ಶಾಹೀನ್ ಬಾಗ್: ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಪ್ರತಿಭಟಿಸಬೇಕು ಎಂದ ಸುಪ್ರೀಂ

ಸಾಂಧರ್ಬಿಕ ಚಿತ್ರ

ತಂಡದಲ್ಲಿ ಸಫಾಯಿ ಕರ್ಮಚಾರಿ ಆಂದೋಲನದ ಸ್ಥಾಪಕ ಹಾಗೂ ಸಂಚಾಲಕ ಬೆಜವಾಡ ವಿಲ್ಸನ್, ಸಾಮಾಜಿಕ ಹೋರಾಟಗಾರ್ತಿ, ಜೆಎನ್‌ಯು ಪ್ರಾಧ್ಯಾಪಕಿ ನಿವೇದಿತಾ ಮೆನನ್, ಸುಪ್ರೀಂ ಕೋರ್ಟ್ ವಕೀಲ ಸಂಜಯ್ ಹೆಗ್ಡೆ, ನಾಗರಿಕ ಹಕ್ಕು ಸಂಘಟನೆ ಯುನೈಟೆಡ್ ಎಗೈನ್ಸ್‌ಟ್ ಹೇಟ್‌ನ ಸಹ ಸಂಸ್ಥಾಪಕ ನದೀಮ್ ಖಾನ್ ಮೊದಲಾದವರು ಇದ್ದರು.

“ಕಳೆದ ಕೆಲವು ವರ್ಷಗಳಿಂದ ಭಿನ್ನಾಭಿಪ್ರಾಯವನ್ನು ದಮನಗೊಳಿಸಲಾಗುತ್ತಿದೆ. ಆದರೆ ನನ್ನ ಭರವಸೆ, ನಮ್ಮ ಪೀಳಿಗೆಯವರು ಹೋರಾಡಿದರು, ಭವಿಷ್ಯದ ಪೀಳಿಗೆಗಳು ಸಹ ಇದನ್ನು ಅನುಸರಿಸುತ್ತವೆ ಎಂಬುದಾಗಿದೆ” ಎಂದು ಸಂಜಯ್ ಹೆಗ್ಡೆ ಹೇಳಿದರು.

ಇದನ್ನೂ ಓದಿ: ಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

ಲೇಖಕಿ ಅರುಂಧತಿ ರಾಯ್ ಮಾತನಾಡಿ, “ಜನರು ನಿರಂತರವಾಗಿ ದ್ವೇಷದಿಂದ ತುಂಬಿದ ವಾತಾವರಣದಲ್ಲಿ ವಾಸಿಸುವುದು ಅವಮಾನಕರವಾಗಿದೆ” ಎಂದರು.

ಸಾಂಧರ್ಬಿಕ ಚಿತ್ರ

ಜೆಎನ್‌ಯುನಲ್ಲಿ ನಜೀಬ್ ಅಹ್ಮದ್ ಅವರ ನಾಪತ್ತೆ ಪ್ರಕರಣದಲ್ಲಿ ಆರೋಪಿಗಳ ಮೊಬೈಲ್ ಪ್ಯಾಟರ್ನ್ ಲಾಕ್ ತೆರೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡ ಅದೇ ಪೊಲೀಸರು ಈಗ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನೂರಾರು ಸಾಮಾಜಿಕ ಕಾರ್ಯಕರ್ತರ ಫೋನ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದಾರೆ ಎಂದು ನದೀಂ ಖಾನ್ ಹೇಳಿದರು.

ಜನರು ಶಾಂತಿಯುತವಾಗಿ ನಡೆಸುತ್ತಿದ್ದ ಪ್ರತಿಭಟನೆಯನ್ನು ನಿಲ್ಲಿಸಲು ಪ್ರಯತ್ನಿಸಿದ ಪೊಲೀಸರು ಹಾಗೂ ಸರಕಾರದ ಕ್ರಮವನ್ನು ತಂಡವು ತೀವ್ರವಾಗಿ ಟೀಕಿಸಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ಸಾಂಧರ್ಬಿಕ ಚಿತ್ರ

‘‘ಪ್ರಜಾಪ್ರಭುತ್ವ ಹಾಗೂ ಭಿನ್ನಾಭಿಪ್ರಾಯ ಜೊತೆ ಜೊತೆಯಲ್ಲಿ ಸಾಗಬೇಕು. ಆದರೆ, ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವ ಪ್ರತಿಭಟನೆ ನಿಯೋಜಿತ ಪ್ರದೇಶದಲ್ಲಿ ಮಾತ್ರ ನಡೆಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ದಂಡಿ ಯಾತ್ರೆ ನಿಯೋಜಿತ ಪ್ರದೇಶದಲ್ಲಿ ನಡೆದಿದೆಯೇ ? ಜಲಿಯನ್ ವಾಲಾಬಾಗ್ ಪ್ರತಿಭಟನೆ ನಿಯೋಜಿತ ಪ್ರದೇಶದಲ್ಲಿ ನಡೆದಿದೆಯೇ ?’’ ಎಂದು ತಂಡ ಬಿಡುಗಡೆ ಮಾಡಿದ ಜಂಟಿ ಹೇಳಿಕೆ ತಿಳಿಸಿದೆ.

ಪ್ರತಿಭಟನೆ ಪ್ರಜಾಪ್ರಭುತ್ವದ ತಿರುಳು. ಈ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕನ್ನು ಅಪರಾಧೀಕರಣಗೊಳಿಸುವ ಮೂಲಕ ನಮ್ಮ ಹಕ್ಕನ್ನು ನಿಗ್ರಹಿಸುವ ಎಲ್ಲ ಪ್ರಯತ್ನದ ವಿರುದ್ಧ ನಾವು ಹೋರಾಟ ನಡೆಸಲಿದ್ದೇವೆ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಹಕ್ಕೆ ಕಬ್ಬಿಣದ ಮುಳ್ಳುತಂತಿ ಸುತ್ತಿಕೊಂಡು ಅತ್ಯಾಚಾರದ ವಿರುದ್ಧ ಪ್ರತಿಭಟನೆ?- ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...