Homeಅಂತರಾಷ್ಟ್ರೀಯಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ಟೈಮ್ಸ್ ನೌ, ಜೀ ನ್ಯೂಸ್, ದಿ ಪ್ರಿಂಟ್.ಇನ್ ಮತ್ತು ಇಂಡಿಯಾ. ಕಾಮ್ ಸೇರಿದಂತೆ ಪ್ರಮುಖ ಟಿವಿ ಮತ್ತು ಆನ್‌ಲೈನ್ ನ್ಯೂಸ್ ಪೋರ್ಟಲ್‌ಗಳು 'ನಾಗರಿಕ ಯುದ್ಧದಂತಹ ಪರಿಸ್ಥಿತಿಯನ್ನು' ವರದಿ ಮಾಡುತ್ತಿವೆ.

- Advertisement -
- Advertisement -

ಅಕ್ಟೋಬರ್‌ 21 ರಂದು ಪಾಕಿಸ್ತಾನದ ಕರಾಚಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಸ್ಫೋಟದ ಕುರಿತು ಭಾರತೀಯ ಮಾಧ್ಯಮಗಳು ಮಾಡಿದ ವರದಿ ಈಗ ಪಾಕಿಸ್ತಾನದಲ್ಲಿ ಟ್ರೋಲ್ ಆಗಿದೆ. ಮಾಧ್ಯಮಗಳು ಸಿವಿಲ್ ವಾರ್ ಎಂಬ ಪದ ಬಳಸಿರುವುದು ಇದಕ್ಕೆ ಕಾರಣವಾಗಿದೆ.

ಮೊನ್ನೆ ನಡೆದ ಸ್ಫೋಟದಲ್ಲಿ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿತ್ತು. ಇದು ಸಿಲಿಂಡರ್‌ ಸ್ಫೋಟವೂ ಆಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಆದರೆ ಅದಕ್ಕೂ ಮುನ್ನವೇ ಭಾರತೀಯ ಮಾಧ್ಯಮಗಳು ಇದು ಸಿವಿಲ್ ವಾರ್ ಎಂದು ಸುದ್ದಿ ಮಾಡಿದ್ದವು.

ಇದನ್ನೂ ವಿರೋಧಿಸಿ, ಭಾರತೀಯ ಮಾಧ್ಯಮಗಳನ್ನು ಟ್ರೋಲ್ ಮಾಡಿರುವ ಪಾಕಿಸ್ತಾನದ ಸಾಮಾಜಿಕ ಜಾಲತಾಣ ಬಳಕೆದಾರರು ಸಿವಿಲ್ ವಾರ್ ಎಂಬ ಪದ ಬಳಕೆ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ಕರಾಚಿಯನ್ನು ಭಾರತೀಯ ಮಾಧ್ಯಮಗಳು ತೋರಿಸಿರುವ ರೀತಿ ಮತ್ತು ಕರಾಚಿ ಇರುವ ನಿಜ ಸ್ಥಿತಿಗಳನ್ನು ಹಲವು ಆಯಾಮಗಳಲ್ಲಿ ಚಿತ್ರಿಸಿ ಟ್ರೋಲ್ ಮಾಡುತ್ತಿದ್ದಾರೆ.

ಚಲನಚಿತ್ರಗಳ ದೃಶ್ಯಗಳನ್ನು ಹಂಚಿಕೊಳ್ಳುತ್ತಾ, ಭಾರತೀಯ ಮಾಧ್ಯಮಗಳ ಪ್ರಕಾರ ಇಂದು ಕರಾಚಿಯಲ್ಲಿ ನಡೆದ ಸಿವಿಲ್ ವಾರ್‌ ದೃಶ್ಯಗಳು ಎಂದು ಕೀಟಲ್ ಮಾಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಪತ್ರಕರ್ತರಿಗೆ ಕಿರುಕುಳ: ಮೋದಿಗೆ ಪತ್ರ ಬರೆದ ಅಂತರಾಷ್ಟ್ರೀಯ ಪತ್ರಿಕಾ ಸಂಘಗಳು!

“ಕರಾಚಿಯಲ್ಲಿ ನಾಗರಿಕ ಯುದ್ಧ(ಸಿವಿಲ್ ವಾರ್) ನಡೆದ ಮೇಲೆ, ಲಾಹೋರ್ ಮೇಲೆ ಗಾಡ್ಜಿಲ್ಲಾ ದಾಳಿ ಮಾಡಿದೆ” ಎಂದು ಟ್ವಿಟ್ಟರ್‌ ಬಳಕೆದಾರರೊಬ್ಬರು ಪೋಸ್ಟ್ ಮಡಿದ್ದು, ಚಿತ್ರಕ್ಕೆ ಭಾರತೀಯ ಸುದ್ದಿ ಚಾನೆಲ್‌ಗಳ ಕೃಪೆ ಹಾಕಿದ್ದಾರೆ.

ಇನ್ನೂ ಕೆಲವರು, ಬ್ರೇಕಿಂಗ್ ನ್ಯೂಸ್‌ಗಳನ್ನು ಹೇಳುವ ದಾಟಿಯಲ್ಲಿ, ವ್ಯಂಗ್ಯವಾಡಿ ತಮ್ಮ ಪೋಸ್ಟ್‌ಗಳನ್ನು ಶೇರ್‌ ಮಾಡಿದ್ದಾರೆ.

ಬಾಲಿವುಡ್ ಚಿತ್ರದ ಪೋಸ್ಟರ್ ಹಂಚಿಕೊಂಡ ಮತ್ತೊಬ್ಬ ಟ್ವಿಟರ್ ಬಳಕೆದಾರ, ’ನಾನು ಗುಲ್ಶನ್-ಇ-ಭಾಗ್‌ ಕರಾಚಿಯಿಂದ ಲೈವ್ ನೀಡುತ್ತಿದ್ದೇನೆ. ಇಲ್ಲಿ ಪೊಲೀಸ್ ವ್ಯಕ್ತಿಯೊಬ್ಬ ಸಿವಿಲ್ ವಾರ್‌ ನಡೆಯುವಾಗ,‌ ಸಿವಿಲ್ ಡ್ರೆಸ್‌ನಲ್ಲಿ ಇದ್ದಾರೆ ಎಂದು ವಿಶ್ವಯುದ್ಧ3 ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಶೇರ್ ಮಾಡಿದ್ದಾರೆ.

ಇದನ್ನೂ ಓದಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಪ್ರಯೋಗ: ಸ್ವಯಂಸೇವಕ ಸಾವು

ಇನ್ನೂ ಕೆಲವರು ಸಿವಿಲ್ ವಾರ್‌ ನಡೆಯಲು ಬಿರಿಯಾನಿ ಮತ್ತು ಪಲಾವ್ ಕಾರಣ ಎಂಬಂತ ಪೋಸ್ಟ್‌ಗಳನ್ನು ಹಾಕಿ ಗೇಲಿ ಮಾಡಿದ್ದಾರೆ.

ಟೈಮ್ಸ್ ನೌ, ಜೀ ನ್ಯೂಸ್, ದಿ ಪ್ರಿಂಟ್.ಇನ್ ಮತ್ತು ಇಂಡಿಯಾ. ಕಾಮ್ ಸೇರಿದಂತೆ ಪ್ರಮುಖ ಟಿವಿ ಮತ್ತು ಆನ್‌ಲೈನ್ ನ್ಯೂಸ್ ಪೋರ್ಟಲ್‌ಗಳು ಪಾಕಿಸ್ತಾನದಲ್ಲಿ ‘ನಾಗರಿಕ ಯುದ್ಧದಂತಹ ಪರಿಸ್ಥಿತಿ’ ಇದೆ ಎಂದು ವರದಿ ಮಾಡುತ್ತಿದ್ದು, ಸ್ಥಳೀಯ ಪೊಲೀಸ್ ಪಡೆಗಳು ಸೇನಾ ಬೆಟಾಲಿಯನ್‌ಗಳೊಂದಿಗೆ ಹೋರಾಡಿ ಸಿಂಧ್‌ನ ಪ್ರಾಂತೀಯ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿವೆ ಎಂದಿದ್ದವು.

ಆದರೆ ಅಂತಹ ಯಾವುದೇ ವಿಷಯ ನಡೆಯುತ್ತಿಲ್ಲ. ಪಲಾಯನಗೈದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಅಳಿಯ ಮೊಹಮ್ಮದ್ ಸಫ್ದಾರ್ ಅವರನ್ನು ಬಂಧಿಸುವಂತೆ ಒತ್ತಡ ಹೇರಿದ್ದ, ಸಿಂಧ್ ಪೊಲೀಸ್ ಮುಖ್ಯಸ್ಥ ಮುಷ್ತಾಕ್ ಮೆಹರ್ ಅವರನ್ನು ಬಂಧಿಸಿರುವ ಸೈನ್ಯದ ನಿರ್ಧಾರದಲ್ಲಿ ಸ್ವಲ್ಪ ಗೊಂದಲ ಉಂಟಾಗಿದೆ ಎಂದು ತಿಳಿದು ಬಂದಿದೆ.

ಆದರೆ ಭಾರತೀಯ ಮಾಧ್ಯಮಗಳು, ಸಿಂಧಿ ಮತ್ತು ಫೆಡರಲ್ ಪಡೆಗಳ ನಡುವೆ ನಾಗರಿಕ ಯುದ್ಧ ನಡೆಯುತ್ತಿದ್ದು, ನಗರವನ್ನು ಬೆಚ್ಚಿಬೀಳಿದೆ. ಕರಾಚಿಯು ಯುದ್ಧ ವಲಯವಾಗಿ ಮಾರ್ಪಟ್ಟಿದೆ ಎಂಬ ನಕಲಿ ಸುದ್ದಿ ಹರಡಿತ್ತು. ಇದನ್ನು ಪಾಕಿಸ್ತಾನದ ಸಾಮಾಜಿಕ ಜಾಲತಾಣದ ಖಾತೆಗಳು ಅಪಹಾಸ್ಯ ಮಾಡಲು ಪ್ರಾರಂಭಿಸಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...