Homeಅಂಕಣಗಳುರಾಜೇಂದ್ರ ಚೆನ್ನಿಯವರ 'ಲೋಕವಿಮರ್ಶೆ': ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ರಾಜೇಂದ್ರ ಚೆನ್ನಿಯವರ ‘ಲೋಕವಿಮರ್ಶೆ’: ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ - ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು.

- Advertisement -
- Advertisement -

ರಾಜೇಂದ್ರ ಚೆನ್ನಿ ಕನ್ನಡದ ವಿಶಿಷ್ಟ ಸಂಸ್ಕೃತಿ ಚಿಂತಕರು. ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಸಾಹಿತ್ಯ ರಚಿಸಿ ವಿಮರ್ಶೆಗಳನ್ನು ಬರೆದಿರುವುದಲ್ಲದೆ, ಪ್ರಸಕ್ತ ಸಾಮಾಜಿಕ ಸನ್ನಿವೇಶದ ಸವಾಲುಗಳನ್ನು ಜಗತ್ತಿನ ವಿವಿಧ ಭಾಗಗಳಲ್ಲಿ ಮೂಡಿರುವ ಸಾಹಿತ್ಯ ಮತ್ತು ಚಿಂತನೆಗಳಿಗೆ ಒರೆಗಚ್ಚಿ ತಮ್ಮ ಬರಹಗಳ ಮೂಲಕ ಪ್ರತಿಕ್ರಿಯೆ ದಾಖಲಿಸುತ್ತಾ ಬಂದಿರುವವರು.

ರಾಜೇಂದ್ರ ಚೆನ್ನಿ ಅವರ ಬರಹದ ಹರವು ಬಹಳ ವಿಸ್ತಾರವಾದದ್ದು. 2004ರಲ್ಲಿ ಬಂದಿದ್ದ ಅವರ ವಿಮರ್ಶಾ ಪ್ರಬಂಧಗಳ ಸಂಕಲನ ‘ನಡುಹಗಲಿನಲ್ಲಿ ಕಂದೀಲುಗಳು’ವಿನಲ್ಲಿ ಬಾಬಾಬುಡನ್‍ಗಿರಿಯಲ್ಲಿ ಹಿಂದುತ್ವದ ಕೋಮುವಾದಿಗಳು ಸೌಹಾರ್ದವನ್ನು ಕೆಡವಲು ನಡೆಸಿದ್ದ ವಿದ್ಯಮಾನಕ್ಕೆ ಪ್ರತಿರೋಧವನ್ನು ದಾಖಲಿಸುವುದರಿಂದ ಹಿಡಿದು, ಕುವೆಂಪು, ಬೇಂದ್ರೆ, ಕಾರಂತ, ಕುವೆಂಪು, ದೇವನೂರು ಮಹದೇವ, ತೇಜಸ್ವಿ, ಕಂಬಾರ ಮುಂತಾದ ಬರಹಗಾರರ ಸಾಹಿತ್ಯದ ಅವಲೋಕನದೊಂದಿಗೆ, ಚಾಮ್‍ಸ್ಕಿ ರಾಜಕೀಯ ಬರಹಗಳ ವಿರಾಟ್ ಕಥನ, ಅನಂತಮೂರ್ತಿ ಮತ್ತು ಶಶಿ ದೇಶಪಾಂಡೆಯವರ ಸಂದರ್ಶನ ಹೀಗೆ ವೈವಿಧ್ಯಮಯವಾದ ಮತ್ತು ಸಂಸ್ಕೃತಿ ಚಿಂತನೆಯ ಬರಹಗಳಿಂದ ಕೂಡಿತ್ತು.

ಈಗ 2020ರ ಕೊನೆಯ ಭಾಗದಲ್ಲಿ ಮೂಡಿರುವ ‘ಲೋಕವಿಮರ್ಶೆ’ ಕೂಡ ಅಂತಹ ವೈವಿಧ್ಯಮಯ ಬರಹಗಳಿಂದ ಕೂಡಿದೆ. ಹೆಸರೇ ಸೂಚಿಸುವಂತೆ ಇಂದಿನ ವರ್ತಮಾನದ ಬಿಕ್ಕಟ್ಟಿಗೆ ಸ್ಪಂದಿಸುವ ಬರಹಗಳನ್ನು ಹೆಚ್ಚೆಚ್ಚು ಒಳಗೊಂಡ ಸಂಕಲನ ಇದು. ಅವರು ಸಾಮಾಜಿಕ ಕಾರ್ಯಕರ್ತರೂ ಆಗಿ ಕೋಮುಸೌಹಾರ್ದ ವೇದಿಕೆ ಸೇರಿದಂತೆ ಮುಂತಾದ ವೇದಿಕೆಗಳಲ್ಲಿ ಕೆಲಸ ಮಾಡಿದ್ದು ತಮ್ಮ ಹಿಂದಿನ ಕೆಲವು ಸಂಕಲನಗಳ ಬರಹಗಳಲ್ಲಿ ಪ್ರತಿಫಲಿಸಿದ್ದಂತೆ, ದಕ್ಷಿಣಾಯನದ ಸಂಚಾಲಕರಾಗಿ ತೀವ್ರ ಬಲಪಂಥೀಯ ರಾಜಕೀಯಕ್ಕೆ ಬದಲಿ ಸೃಷ್ಟಿಸುವ ವೇದಿಕೆಯಾಗಿ ಚೆನ್ನಿಯವರು ನಡೆಸುತ್ತಿರುವ ಚಿಂತನೆಗಳು ಪ್ರಸಕ್ತ ಸಂಕಲನದಲ್ಲಿ ಪ್ರತಿಫಲಿಸಿವೆ.

ಲಂಕೇಶ್, ಮೊಗಳ್ಳಿ ಗಣೇಶ್, ಮೂಡ್ನಾಕೂಡು ಚಿನ್ನಸ್ವಾಮಿ, ಎ ಕೆ ರಾಮಾನುಜನ್ ಮುಂತಾದ ಸಾಹಿತಿಗಳ ಬಗೆಗಿನ ವಿಮರ್ಶಾ ಲೇಖನಗಳ ಜೊತೆಗೆ ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ – ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು. ಬ್ರೆಕ್ಟ್ ಕಾವ್ಯ, ಎರಿಕ್ ಫಾರ್ಮ್, ಟಾಲ್‍ಸ್ಟಾಯ್, ಪ್ರತಿಮಾ ರಾಜಕೀಯ, ರಾಷ್ಟ್ರ, ರಾಷ್ಟ್ರೀಯತೆ ಮತ್ತು ನಾಗರಿಕರು, ಗಾಂಧಿ ಕಟ್ಟಿಕೊಟ್ಟ ರಾಷ್ಟ್ರೀಯತೆ, ಹಿಂಸೆಯ ವ್ಯಾಖ್ಯಾನಗಳು, ಫ್ಯಾಸಿಸಂನ ನೈಜಮುಖ ಹೀಗೆ ಹಲವು ಪ್ರಬಂಧಗಳಲ್ಲಿ ಇಂದು ಜಗತ್ತಿನೆಲ್ಲೆಡೆ ಬೀಡುಬಿಡುತ್ತಿರುವ ತೀವ್ರ ಬಲಪಂಥೀಯ ಮತ್ತು ಸರ್ವಾಧಿಕಾರಿ ಧೋರಣೆಯ ಸರ್ಕಾರಗಳು ಮತ್ತು ಅದನ್ನು ಒಪ್ಪಿಕೊಳ್ಳುತ್ತಿರುವ ಜನಸಾಮಾನ್ಯರ ಮನಸ್ಥಿತಿಗೆ ರಾಜೇಂದ್ರ ಚೆನ್ನಿ ಮುಖಾಮುಖಿಯಾಗುತ್ತಾರೆ.

ಅಧಿಕಾರ ಕೇಂದ್ರಗಳನ್ನು ಸದಾ ಪ್ರಶ್ನಿಸಿ ಜನಸಾಮಾನ್ಯರ ಮತ್ತು ಶೋಷಿತರ ಪರವಾಗಿ ನಿಲ್ಲುವ ನಿಜ ಅರ್ಥದ ಲೋಕವಿರೋಧಿಗಳು, ಕಲಾವಿದರ, ಬರಹಗಾರರ ವಲಯದಲ್ಲಿ ಕ್ಷೀಣಿಸುತ್ತಿರುವ ಸಮಯದಲ್ಲಿ ರಾಜೇಂದ್ರ ಚೆನ್ನಿ ಅವರು ದಿಟ್ಟತನದಿಂದ ಯುವಜನತೆಗೆ ತಮ್ಮ ಚಿಂತನೆಗಳ ಮೂಲಕ ಎಚ್ಚರಿಸುತ್ತಿರುವ ಕಾರಣಕ್ಕೆ ಅವರ ಬರಹಗಳನ್ನು ಓದುವ ಮೂಲಕ ನಾವು ಅವರನ್ನು ಅಭಿನಂದಿಸಬೇಕಿದೆ.

ಲೋಕವಿಮರ್ಶೆ
(ಪ್ರಬಂಧಗಳ ಸಂಕಲನ)
ರಾಜೇಂದ್ರ ಚೆನ್ನಿ
ಮುದ್ರಣ: 2020 ಪುಟ: 344 ಬೆಲೆ: 300/-
ಪ್ರಕಾಶನ: ಅಭಿರುಚಿ, ಮೈಸೂರು


ಇದನ್ನೂ ಓದಿ: ಗಾಂಧಿ ಅನ್ನೋ ಪತ್ರಕರ್ತ : ಗಾಂಧಿಯಿಂದ ಪತ್ರಕರ್ತರು ಕಲಿಯಬೇಕಾದುದ್ದೇನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...