Homeಅಂಕಣಗಳುರಾಜೇಂದ್ರ ಚೆನ್ನಿಯವರ 'ಲೋಕವಿಮರ್ಶೆ': ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ರಾಜೇಂದ್ರ ಚೆನ್ನಿಯವರ ‘ಲೋಕವಿಮರ್ಶೆ’: ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ - ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು.

- Advertisement -
- Advertisement -

ರಾಜೇಂದ್ರ ಚೆನ್ನಿ ಕನ್ನಡದ ವಿಶಿಷ್ಟ ಸಂಸ್ಕೃತಿ ಚಿಂತಕರು. ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಸಾಹಿತ್ಯ ರಚಿಸಿ ವಿಮರ್ಶೆಗಳನ್ನು ಬರೆದಿರುವುದಲ್ಲದೆ, ಪ್ರಸಕ್ತ ಸಾಮಾಜಿಕ ಸನ್ನಿವೇಶದ ಸವಾಲುಗಳನ್ನು ಜಗತ್ತಿನ ವಿವಿಧ ಭಾಗಗಳಲ್ಲಿ ಮೂಡಿರುವ ಸಾಹಿತ್ಯ ಮತ್ತು ಚಿಂತನೆಗಳಿಗೆ ಒರೆಗಚ್ಚಿ ತಮ್ಮ ಬರಹಗಳ ಮೂಲಕ ಪ್ರತಿಕ್ರಿಯೆ ದಾಖಲಿಸುತ್ತಾ ಬಂದಿರುವವರು.

ರಾಜೇಂದ್ರ ಚೆನ್ನಿ ಅವರ ಬರಹದ ಹರವು ಬಹಳ ವಿಸ್ತಾರವಾದದ್ದು. 2004ರಲ್ಲಿ ಬಂದಿದ್ದ ಅವರ ವಿಮರ್ಶಾ ಪ್ರಬಂಧಗಳ ಸಂಕಲನ ‘ನಡುಹಗಲಿನಲ್ಲಿ ಕಂದೀಲುಗಳು’ವಿನಲ್ಲಿ ಬಾಬಾಬುಡನ್‍ಗಿರಿಯಲ್ಲಿ ಹಿಂದುತ್ವದ ಕೋಮುವಾದಿಗಳು ಸೌಹಾರ್ದವನ್ನು ಕೆಡವಲು ನಡೆಸಿದ್ದ ವಿದ್ಯಮಾನಕ್ಕೆ ಪ್ರತಿರೋಧವನ್ನು ದಾಖಲಿಸುವುದರಿಂದ ಹಿಡಿದು, ಕುವೆಂಪು, ಬೇಂದ್ರೆ, ಕಾರಂತ, ಕುವೆಂಪು, ದೇವನೂರು ಮಹದೇವ, ತೇಜಸ್ವಿ, ಕಂಬಾರ ಮುಂತಾದ ಬರಹಗಾರರ ಸಾಹಿತ್ಯದ ಅವಲೋಕನದೊಂದಿಗೆ, ಚಾಮ್‍ಸ್ಕಿ ರಾಜಕೀಯ ಬರಹಗಳ ವಿರಾಟ್ ಕಥನ, ಅನಂತಮೂರ್ತಿ ಮತ್ತು ಶಶಿ ದೇಶಪಾಂಡೆಯವರ ಸಂದರ್ಶನ ಹೀಗೆ ವೈವಿಧ್ಯಮಯವಾದ ಮತ್ತು ಸಂಸ್ಕೃತಿ ಚಿಂತನೆಯ ಬರಹಗಳಿಂದ ಕೂಡಿತ್ತು.

ಈಗ 2020ರ ಕೊನೆಯ ಭಾಗದಲ್ಲಿ ಮೂಡಿರುವ ‘ಲೋಕವಿಮರ್ಶೆ’ ಕೂಡ ಅಂತಹ ವೈವಿಧ್ಯಮಯ ಬರಹಗಳಿಂದ ಕೂಡಿದೆ. ಹೆಸರೇ ಸೂಚಿಸುವಂತೆ ಇಂದಿನ ವರ್ತಮಾನದ ಬಿಕ್ಕಟ್ಟಿಗೆ ಸ್ಪಂದಿಸುವ ಬರಹಗಳನ್ನು ಹೆಚ್ಚೆಚ್ಚು ಒಳಗೊಂಡ ಸಂಕಲನ ಇದು. ಅವರು ಸಾಮಾಜಿಕ ಕಾರ್ಯಕರ್ತರೂ ಆಗಿ ಕೋಮುಸೌಹಾರ್ದ ವೇದಿಕೆ ಸೇರಿದಂತೆ ಮುಂತಾದ ವೇದಿಕೆಗಳಲ್ಲಿ ಕೆಲಸ ಮಾಡಿದ್ದು ತಮ್ಮ ಹಿಂದಿನ ಕೆಲವು ಸಂಕಲನಗಳ ಬರಹಗಳಲ್ಲಿ ಪ್ರತಿಫಲಿಸಿದ್ದಂತೆ, ದಕ್ಷಿಣಾಯನದ ಸಂಚಾಲಕರಾಗಿ ತೀವ್ರ ಬಲಪಂಥೀಯ ರಾಜಕೀಯಕ್ಕೆ ಬದಲಿ ಸೃಷ್ಟಿಸುವ ವೇದಿಕೆಯಾಗಿ ಚೆನ್ನಿಯವರು ನಡೆಸುತ್ತಿರುವ ಚಿಂತನೆಗಳು ಪ್ರಸಕ್ತ ಸಂಕಲನದಲ್ಲಿ ಪ್ರತಿಫಲಿಸಿವೆ.

ಲಂಕೇಶ್, ಮೊಗಳ್ಳಿ ಗಣೇಶ್, ಮೂಡ್ನಾಕೂಡು ಚಿನ್ನಸ್ವಾಮಿ, ಎ ಕೆ ರಾಮಾನುಜನ್ ಮುಂತಾದ ಸಾಹಿತಿಗಳ ಬಗೆಗಿನ ವಿಮರ್ಶಾ ಲೇಖನಗಳ ಜೊತೆಗೆ ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ – ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು. ಬ್ರೆಕ್ಟ್ ಕಾವ್ಯ, ಎರಿಕ್ ಫಾರ್ಮ್, ಟಾಲ್‍ಸ್ಟಾಯ್, ಪ್ರತಿಮಾ ರಾಜಕೀಯ, ರಾಷ್ಟ್ರ, ರಾಷ್ಟ್ರೀಯತೆ ಮತ್ತು ನಾಗರಿಕರು, ಗಾಂಧಿ ಕಟ್ಟಿಕೊಟ್ಟ ರಾಷ್ಟ್ರೀಯತೆ, ಹಿಂಸೆಯ ವ್ಯಾಖ್ಯಾನಗಳು, ಫ್ಯಾಸಿಸಂನ ನೈಜಮುಖ ಹೀಗೆ ಹಲವು ಪ್ರಬಂಧಗಳಲ್ಲಿ ಇಂದು ಜಗತ್ತಿನೆಲ್ಲೆಡೆ ಬೀಡುಬಿಡುತ್ತಿರುವ ತೀವ್ರ ಬಲಪಂಥೀಯ ಮತ್ತು ಸರ್ವಾಧಿಕಾರಿ ಧೋರಣೆಯ ಸರ್ಕಾರಗಳು ಮತ್ತು ಅದನ್ನು ಒಪ್ಪಿಕೊಳ್ಳುತ್ತಿರುವ ಜನಸಾಮಾನ್ಯರ ಮನಸ್ಥಿತಿಗೆ ರಾಜೇಂದ್ರ ಚೆನ್ನಿ ಮುಖಾಮುಖಿಯಾಗುತ್ತಾರೆ.

ಅಧಿಕಾರ ಕೇಂದ್ರಗಳನ್ನು ಸದಾ ಪ್ರಶ್ನಿಸಿ ಜನಸಾಮಾನ್ಯರ ಮತ್ತು ಶೋಷಿತರ ಪರವಾಗಿ ನಿಲ್ಲುವ ನಿಜ ಅರ್ಥದ ಲೋಕವಿರೋಧಿಗಳು, ಕಲಾವಿದರ, ಬರಹಗಾರರ ವಲಯದಲ್ಲಿ ಕ್ಷೀಣಿಸುತ್ತಿರುವ ಸಮಯದಲ್ಲಿ ರಾಜೇಂದ್ರ ಚೆನ್ನಿ ಅವರು ದಿಟ್ಟತನದಿಂದ ಯುವಜನತೆಗೆ ತಮ್ಮ ಚಿಂತನೆಗಳ ಮೂಲಕ ಎಚ್ಚರಿಸುತ್ತಿರುವ ಕಾರಣಕ್ಕೆ ಅವರ ಬರಹಗಳನ್ನು ಓದುವ ಮೂಲಕ ನಾವು ಅವರನ್ನು ಅಭಿನಂದಿಸಬೇಕಿದೆ.

ಲೋಕವಿಮರ್ಶೆ
(ಪ್ರಬಂಧಗಳ ಸಂಕಲನ)
ರಾಜೇಂದ್ರ ಚೆನ್ನಿ
ಮುದ್ರಣ: 2020 ಪುಟ: 344 ಬೆಲೆ: 300/-
ಪ್ರಕಾಶನ: ಅಭಿರುಚಿ, ಮೈಸೂರು


ಇದನ್ನೂ ಓದಿ: ಗಾಂಧಿ ಅನ್ನೋ ಪತ್ರಕರ್ತ : ಗಾಂಧಿಯಿಂದ ಪತ್ರಕರ್ತರು ಕಲಿಯಬೇಕಾದುದ್ದೇನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...