Homeಅಂಕಣಗಳುರಾಜೇಂದ್ರ ಚೆನ್ನಿಯವರ 'ಲೋಕವಿಮರ್ಶೆ': ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ರಾಜೇಂದ್ರ ಚೆನ್ನಿಯವರ ‘ಲೋಕವಿಮರ್ಶೆ’: ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ - ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು.

- Advertisement -
- Advertisement -

ರಾಜೇಂದ್ರ ಚೆನ್ನಿ ಕನ್ನಡದ ವಿಶಿಷ್ಟ ಸಂಸ್ಕೃತಿ ಚಿಂತಕರು. ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಸಾಹಿತ್ಯ ರಚಿಸಿ ವಿಮರ್ಶೆಗಳನ್ನು ಬರೆದಿರುವುದಲ್ಲದೆ, ಪ್ರಸಕ್ತ ಸಾಮಾಜಿಕ ಸನ್ನಿವೇಶದ ಸವಾಲುಗಳನ್ನು ಜಗತ್ತಿನ ವಿವಿಧ ಭಾಗಗಳಲ್ಲಿ ಮೂಡಿರುವ ಸಾಹಿತ್ಯ ಮತ್ತು ಚಿಂತನೆಗಳಿಗೆ ಒರೆಗಚ್ಚಿ ತಮ್ಮ ಬರಹಗಳ ಮೂಲಕ ಪ್ರತಿಕ್ರಿಯೆ ದಾಖಲಿಸುತ್ತಾ ಬಂದಿರುವವರು.

ರಾಜೇಂದ್ರ ಚೆನ್ನಿ ಅವರ ಬರಹದ ಹರವು ಬಹಳ ವಿಸ್ತಾರವಾದದ್ದು. 2004ರಲ್ಲಿ ಬಂದಿದ್ದ ಅವರ ವಿಮರ್ಶಾ ಪ್ರಬಂಧಗಳ ಸಂಕಲನ ‘ನಡುಹಗಲಿನಲ್ಲಿ ಕಂದೀಲುಗಳು’ವಿನಲ್ಲಿ ಬಾಬಾಬುಡನ್‍ಗಿರಿಯಲ್ಲಿ ಹಿಂದುತ್ವದ ಕೋಮುವಾದಿಗಳು ಸೌಹಾರ್ದವನ್ನು ಕೆಡವಲು ನಡೆಸಿದ್ದ ವಿದ್ಯಮಾನಕ್ಕೆ ಪ್ರತಿರೋಧವನ್ನು ದಾಖಲಿಸುವುದರಿಂದ ಹಿಡಿದು, ಕುವೆಂಪು, ಬೇಂದ್ರೆ, ಕಾರಂತ, ಕುವೆಂಪು, ದೇವನೂರು ಮಹದೇವ, ತೇಜಸ್ವಿ, ಕಂಬಾರ ಮುಂತಾದ ಬರಹಗಾರರ ಸಾಹಿತ್ಯದ ಅವಲೋಕನದೊಂದಿಗೆ, ಚಾಮ್‍ಸ್ಕಿ ರಾಜಕೀಯ ಬರಹಗಳ ವಿರಾಟ್ ಕಥನ, ಅನಂತಮೂರ್ತಿ ಮತ್ತು ಶಶಿ ದೇಶಪಾಂಡೆಯವರ ಸಂದರ್ಶನ ಹೀಗೆ ವೈವಿಧ್ಯಮಯವಾದ ಮತ್ತು ಸಂಸ್ಕೃತಿ ಚಿಂತನೆಯ ಬರಹಗಳಿಂದ ಕೂಡಿತ್ತು.

ಈಗ 2020ರ ಕೊನೆಯ ಭಾಗದಲ್ಲಿ ಮೂಡಿರುವ ‘ಲೋಕವಿಮರ್ಶೆ’ ಕೂಡ ಅಂತಹ ವೈವಿಧ್ಯಮಯ ಬರಹಗಳಿಂದ ಕೂಡಿದೆ. ಹೆಸರೇ ಸೂಚಿಸುವಂತೆ ಇಂದಿನ ವರ್ತಮಾನದ ಬಿಕ್ಕಟ್ಟಿಗೆ ಸ್ಪಂದಿಸುವ ಬರಹಗಳನ್ನು ಹೆಚ್ಚೆಚ್ಚು ಒಳಗೊಂಡ ಸಂಕಲನ ಇದು. ಅವರು ಸಾಮಾಜಿಕ ಕಾರ್ಯಕರ್ತರೂ ಆಗಿ ಕೋಮುಸೌಹಾರ್ದ ವೇದಿಕೆ ಸೇರಿದಂತೆ ಮುಂತಾದ ವೇದಿಕೆಗಳಲ್ಲಿ ಕೆಲಸ ಮಾಡಿದ್ದು ತಮ್ಮ ಹಿಂದಿನ ಕೆಲವು ಸಂಕಲನಗಳ ಬರಹಗಳಲ್ಲಿ ಪ್ರತಿಫಲಿಸಿದ್ದಂತೆ, ದಕ್ಷಿಣಾಯನದ ಸಂಚಾಲಕರಾಗಿ ತೀವ್ರ ಬಲಪಂಥೀಯ ರಾಜಕೀಯಕ್ಕೆ ಬದಲಿ ಸೃಷ್ಟಿಸುವ ವೇದಿಕೆಯಾಗಿ ಚೆನ್ನಿಯವರು ನಡೆಸುತ್ತಿರುವ ಚಿಂತನೆಗಳು ಪ್ರಸಕ್ತ ಸಂಕಲನದಲ್ಲಿ ಪ್ರತಿಫಲಿಸಿವೆ.

ಲಂಕೇಶ್, ಮೊಗಳ್ಳಿ ಗಣೇಶ್, ಮೂಡ್ನಾಕೂಡು ಚಿನ್ನಸ್ವಾಮಿ, ಎ ಕೆ ರಾಮಾನುಜನ್ ಮುಂತಾದ ಸಾಹಿತಿಗಳ ಬಗೆಗಿನ ವಿಮರ್ಶಾ ಲೇಖನಗಳ ಜೊತೆಗೆ ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ – ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು. ಬ್ರೆಕ್ಟ್ ಕಾವ್ಯ, ಎರಿಕ್ ಫಾರ್ಮ್, ಟಾಲ್‍ಸ್ಟಾಯ್, ಪ್ರತಿಮಾ ರಾಜಕೀಯ, ರಾಷ್ಟ್ರ, ರಾಷ್ಟ್ರೀಯತೆ ಮತ್ತು ನಾಗರಿಕರು, ಗಾಂಧಿ ಕಟ್ಟಿಕೊಟ್ಟ ರಾಷ್ಟ್ರೀಯತೆ, ಹಿಂಸೆಯ ವ್ಯಾಖ್ಯಾನಗಳು, ಫ್ಯಾಸಿಸಂನ ನೈಜಮುಖ ಹೀಗೆ ಹಲವು ಪ್ರಬಂಧಗಳಲ್ಲಿ ಇಂದು ಜಗತ್ತಿನೆಲ್ಲೆಡೆ ಬೀಡುಬಿಡುತ್ತಿರುವ ತೀವ್ರ ಬಲಪಂಥೀಯ ಮತ್ತು ಸರ್ವಾಧಿಕಾರಿ ಧೋರಣೆಯ ಸರ್ಕಾರಗಳು ಮತ್ತು ಅದನ್ನು ಒಪ್ಪಿಕೊಳ್ಳುತ್ತಿರುವ ಜನಸಾಮಾನ್ಯರ ಮನಸ್ಥಿತಿಗೆ ರಾಜೇಂದ್ರ ಚೆನ್ನಿ ಮುಖಾಮುಖಿಯಾಗುತ್ತಾರೆ.

ಅಧಿಕಾರ ಕೇಂದ್ರಗಳನ್ನು ಸದಾ ಪ್ರಶ್ನಿಸಿ ಜನಸಾಮಾನ್ಯರ ಮತ್ತು ಶೋಷಿತರ ಪರವಾಗಿ ನಿಲ್ಲುವ ನಿಜ ಅರ್ಥದ ಲೋಕವಿರೋಧಿಗಳು, ಕಲಾವಿದರ, ಬರಹಗಾರರ ವಲಯದಲ್ಲಿ ಕ್ಷೀಣಿಸುತ್ತಿರುವ ಸಮಯದಲ್ಲಿ ರಾಜೇಂದ್ರ ಚೆನ್ನಿ ಅವರು ದಿಟ್ಟತನದಿಂದ ಯುವಜನತೆಗೆ ತಮ್ಮ ಚಿಂತನೆಗಳ ಮೂಲಕ ಎಚ್ಚರಿಸುತ್ತಿರುವ ಕಾರಣಕ್ಕೆ ಅವರ ಬರಹಗಳನ್ನು ಓದುವ ಮೂಲಕ ನಾವು ಅವರನ್ನು ಅಭಿನಂದಿಸಬೇಕಿದೆ.

ಲೋಕವಿಮರ್ಶೆ
(ಪ್ರಬಂಧಗಳ ಸಂಕಲನ)
ರಾಜೇಂದ್ರ ಚೆನ್ನಿ
ಮುದ್ರಣ: 2020 ಪುಟ: 344 ಬೆಲೆ: 300/-
ಪ್ರಕಾಶನ: ಅಭಿರುಚಿ, ಮೈಸೂರು


ಇದನ್ನೂ ಓದಿ: ಗಾಂಧಿ ಅನ್ನೋ ಪತ್ರಕರ್ತ : ಗಾಂಧಿಯಿಂದ ಪತ್ರಕರ್ತರು ಕಲಿಯಬೇಕಾದುದ್ದೇನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...