Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನೈಜೀರಿಯಾದಲ್ಲಿ ನಟ ಸುಶಾಂತ್‌ಗೆ ನ್ಯಾಯ ಕೋರಿ ನಡೆಯಿತೆ ಪ್ರತಿಭಟನೆ?

ಫ್ಯಾಕ್ಟ್‌ಚೆಕ್: ನೈಜೀರಿಯಾದಲ್ಲಿ ನಟ ಸುಶಾಂತ್‌ಗೆ ನ್ಯಾಯ ಕೋರಿ ನಡೆಯಿತೆ ಪ್ರತಿಭಟನೆ?

ಈ ಚಿತ್ರ ಅಕ್ಟೋಬರ್ 13ರ ಸಿಎನ್ಎನ್ ವರದಿಯಲ್ಲಿ ಪತ್ತೆಯಾಗಿದೆ. ಇದು ನೈಜೀರಿಯಾದಲ್ಲಿ ಪೊಲೀಸ್ ದೌರ್ಜನ್ಯದ ವಿರುದ್ಧ ನಡೆದ ಪ್ರತಿಭಟನೆಯ ಚಿತ್ರ.

- Advertisement -
- Advertisement -

ದಿವಂಗತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ನ್ಯಾಯ ನೀಡಿ ಎಂದು ನೈಜೀರಿಯಾದಲ್ಲಿ ಪ್ರತಿಭಟನೆ ನಡೆದಿದೆ. ರ್‍ಯಾಲಿಯಲ್ಲಿ ‘ಜಸ್ಟೀಸ್ ಫಾರ್ ಸುಶಾಂತ್’  ಎನ್ನುವ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಒಂದು ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಈ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಚಿತ್ರವನ್ನು ಫೋಟೋಶಾಪ್ ಮಾಡಲಾಗಿದ್ದು, ಇದು ನೈಜೀರಿಯಾದಲ್ಲಿ ಪೊಲೀಸ್ ದೌರ್ಜನ್ಯದ ವಿರುದ್ಧ ನಡೆದ ಪ್ರತಿಭಟನೆಯ ಚಿತ್ರ ಎಂಬುದು ತಿಳಿದುಬಂದಿದೆ.

An archived version of the post can be accessed <a href="https://archive.is/heGbs">here</a>.

ಚಿತ್ರದಲ್ಲಿ ಮೂವರು ಪ್ರತಿಭಟನಾಕಾರರು ಕುರ್ಚಿಗಳ ಮೇಲೆ ಕುಳಿತು, ಸುಶಾಂತ್ ಸಿಂಗ್ ರಜಪೂತ್ ಅವರ ಫೋಟೋಗಳನ್ನು ಹಿಡಿದುಕೊಂಡು ಜೊತೆಗೆ ಸುಶಾಂತ್‌ಗೆ ನ್ಯಾಯ ಬೇಕು ಎಂದು ಪ್ರತಿಭಟಿಸುತ್ತಿದ್ದಾರೆ. ಚಿತ್ರದ ಜೊತೆಗೆ  “ಎಸ್‌ಎಸ್‌ಆರ್‌ಗೆ ನ್ಯಾಯಕ್ಕಾಗಿ ಜಗತ್ತು ಒತ್ತಾಯಿಸುತ್ತಿದೆ. ನಮಗೆ ನ್ಯಾಯ ಬೇಕು, ಜಗತ್ತು ಸುಶಾಂತ್ ಸಿಂಗ್ ರಜಪೂತ್‌ಗೆ ನ್ಯಾಯವನ್ನು ಬಯಸುತ್ತದೆ. ಧನ್ಯವಾದಗಳು, ನೈಜೀರಿಯಾ” ಎಂದು ಶೀರ್ಷಿಕೆ ನೀಡಲಾಗಿದೆ.

An archived version of the tweet can be accessed <a href="https://archive.is/oqAVM">here</a>.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ರಿಪಬ್ಲಿಕ್ ಟಿವಿಯಿಂದ 200 ಕೋಟಿ ಮಾನನಷ್ಟ ಪರಿಹಾರ ಕೇಳಿದ ಸುಶಾಂತ್ ಗೆಳೆಯ!

An archived version of the tweet can be accessed <a href="https://archive.is/koqGD">here</a>.

ಈ ಚಿತ್ರಗಳನ್ನು ರಿವರ್ಸ್ ಇಮೇಜ್ ಹುಡುಕಾಡಿದಾಗ, ಚಿತ್ರವು ಅಕ್ಟೋಬರ್ 13ರ ಸಿಎನ್ಎನ್ ವರದಿಯಲ್ಲಿ ಪತ್ತೆಯಾಗಿದೆ.

No, This Isn’t a Protest in Nigeria Demanding ‘Justice for SSR’

ಈ ವರದಿಯಲ್ಲಿ, “ವಿಶೇಷ ದರೋಡೆ ವಿರೋಧಿ ದಳ (SARS) ಎಂದು ಕರೆಯಲ್ಪಡುವ ಪೊಲೀಸ್ ಘಟಕದಿಂದ ಅಪಹರಣ, ಕಿರುಕುಳ ಮತ್ತು ಸುಲಿಗೆ ಆರೋಪದ ಬಗ್ಗೆ ದೇಶದ ಯುವಜನರು ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ನಂತರ, ನೈಜೀರಿಯಾದಲ್ಲಿ ಪ್ರತಿಭಟನೆಗಳು ಭುಗಿಲೆದ್ದವು.” ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಚಿತ್ರ ಮತ್ತು ಮೂಲ ಚಿತ್ರದ ಹೋಲಿಕೆ ಇಲ್ಲಿದೆ.

No, This Isn’t a Protest in Nigeria Demanding ‘Justice for SSR’

ನೈಜೀರಿಯಾದಲ್ಲಿ ನಡೆದ ರ್‍ಯಾಲಿಯಲ್ಲಿನ ಪ್ರತಿಭಟನಾಕಾರರ ಫೋಟೋಶಾಪ್ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಮೂಲಕ ಸುಶಾಂತ್ ಸಿಂಗ್ ರಜಪೂತ್‌ಗೆ ನ್ಯಾಯ ಕೋರಿ ಪ್ರತಿಭಟನೆಗಳು ವಿಶ್ವದಾದ್ಯಂತ ಆಯೋಜಿಸಲಾಗುತ್ತಿದೆ ಎಂದು ಜನರನ್ನು ಪ್ರಚೋದಿಸಲಾಗುತ್ತಿದೆ.

ಈ ವರ್ಷದ ಜೂನ್‌ನಲ್ಲಿ ಸುಶಾಂತ್ ಸಿಂಗ್ ರಜಪೂತ್ ಅವರ ಅಸಹಜ ಸಾವು ಸಾಮಾಜಿಕ ಮಾಧ್ಯಮ ಸೇರಿದಂತೆ ಮುಖ್ಯವಾಹಿನಿಯ ಮಾಧ್ಯಮಗಳಲ್ಲಿ ಕೂಡಾ ಹಲವಾರು ನಕಲಿ ಸುದ್ದಿ ಮತ್ತು ಪಿತೂರಿಗಳನ್ನು ಹರಡಲಾಗುತ್ತಿದೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ ನಂತರ ಟ್ವಿಟ್ಟರ್‌ನಲ್ಲಿ ರಿಪಬ್ಲಿಕ್ ಚಾನೆಲ್ ನಡೆಸುತ್ತಿರುವ ‘#ಅರೆಸ್ಟ್ ರಿಯಾ’ ಎಂಬ ಹ್ಯಾಶ್‌ಟ್ಯಾಗ್ ಅಭಿಯಾನವನ್ನು ಬಾಂಬೆ ಹೈಕೋರ್ಟ್ ರಿಪಬ್ಲಿಕ್ ಟಿವಿ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿತ್ತು.

ಸುಶಾಂತ್ ಸಿಂಗ್ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡುತ್ತಿದ್ದ ದೆಹಲಿ ಮೂಲದ ವ್ಯಕ್ತಿಯನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಟನಿಗೆ ಸಂಬಂಧಿಸಿದ ನಕಲಿ ಟ್ವೀಟ್‌ಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿಯು ನ್ಯೂಸ್ ಚಾನೆಲ್ ಆಜ್‌ತಕ್ ಸುದ್ದಿ ವಾಹಿನಿಗೆ 1 ಲಕ್ಷ ರೂಪಾಯಿಗಳ ದಂಡ ವಿಧಿಸಿತ್ತು.


ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...