Homeಮುಖಪುಟಚುನಾವಣೆ ಬಂದರೆ ಒಂದಷ್ಟು ನಾಯಕರು ಕಾಣಿಸುತ್ತಾರೆ; ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ: ಮೋದಿ

ಚುನಾವಣೆ ಬಂದರೆ ಒಂದಷ್ಟು ನಾಯಕರು ಕಾಣಿಸುತ್ತಾರೆ; ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ: ಮೋದಿ

ಬಿಹಾರವನ್ನು ಶಿಲಾಯುಗಕ್ಕೆ ತಳ್ಳಿದವರಿಗೆ ಬಿಹಾರದ ಜನರ ಬಳಿ ಮತ ಕೇಳುವ ಯಾವ ಮುಖವೂ ಇಲ್ಲ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಗರಿಗೆದರಿದ್ದು ಪ್ರಧಾನಿ ನರೇಂದ್ರ ಮೋದಿ ಇಂದು ಬಿಹಾರಕ್ಕೆ ತೆರಳಿ ಎನ್‌‌ಡಿಎ ಪರವಾಗಿ ಪ್ರಚಾರ ಭಾಷಣ ಮಾಡಿದರು. ಸಾಸಾರಾಮ್​ನಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ಚುನಾವಣೆ ಬಂದರೆ ಒಂದಷ್ಟು ಮುಖಂಡರು ಕಾಣಿಸಿಕೊಳ್ಳುತ್ತಾರೆ. ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ” ಎಂದು ಹೇಳಿದ್ದಾರೆ.

“ಮತ್ತೊಮ್ಮ ಎನ್​ಡಿಎ ಸರ್ಕಾರ” ಎಂಬ ಘೋಷಣೆಯೊಂದಿಗೆ ಭಾಷಣ ಪ್ರಾರಂಭಿಸಿದ ಮೋದಿ, ವಿಪಕ್ಷಗಳಾದ ಆರ್​ಜೆಡಿ ಮತ್ತು ಕಾಂಗ್ರೆಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. “ಬಿಹಾರವನ್ನು ಶಿಲಾಯುಗಕ್ಕೆ ತಳ್ಳಿದವರು ಮತ್ತು ಸಂವಿಧಾನಕ್ಕೆ 370ನೇ ಆರ್ಟಿಕಲ್ ಅನ್ನು ಪುನಃ ಸೇರಿಸುತ್ತೇನೆ ಎನ್ನುವವರಿಗೆ ಬಿಹಾರದ ಜನರ ಬಳಿ ಮತ ಕೇಳುವ ಯಾವ ಮುಖವೂ ಇಲ್ಲ ಎಂದು ಮೋದಿ ಟೀಕಿಸಿದರು. ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕಾಶ್ಮೀರಕ್ಕೆ ಸಂವಿಧಾನದಲ್ಲಿನ ವಿಶೇಷ ಸ್ಥಾನಮಾನವನ್ನು ಮತ್ತೇ ನೀಡುತ್ತೇವೆ ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ’ಮೈ ಫ್ರೆಂಡ್ ಭಾರತವನ್ನಷ್ಟೇ ಹೊಲಸು ಎಂದರು; ನನ್ನನ್ನು ಇನ್ನೂ ಪ್ರೀತಿಸುತ್ತಿದ್ದಾರೆ’

“ಆರ್ಟಿಕಲ್ 370 ಅನ್ನು ರದ್ದುಗೊಳಿಸುವ ನಿರ್ಧಾರವನ್ನು ಹಿಂಪಡೆಯುತ್ತೇವೆ ಎಂದು ಹೇಳುತ್ತಿದ್ದಾರೆ. ಆಶ್ಚರ್ಯ ಎಂದರೆ ಅಂಥ ಹೇಳಿಕೆಗಳನ್ನ ನೀಡಿಯೂ ಬಿಹಾರದ ಜನರ ಬಳಿ ಮತ ಕೇಳುವ ಧೈರ್ಯ ಇದೆಯಲ್ಲಾ” ಎಂದು ಮೋದಿ ಆಶ್ಚರ್ಯ ವ್ಯಕ್ತಪಡಿಸಿದರು.

ಲಾಲೂ ಪ್ರಸಾದ್ ಯಾದವ್ ನೇತೃತ್ವದ ಆರ್​ಜೆಡಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ನರೇಂದ್ರ ಮೋದಿ, ಬಿಹಾರವನ್ನು ರೋಗಗ್ರಸ್ತ ರಾಜ್ಯವನ್ನಾಗಿ ಮಾಡಿದವರಿಗೆ ಜನರು ಮತ್ತೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.

ಆರ್​ಜೆಡಿ ಆಡಳಿತದಲ್ಲಿ “ಸೂರ್ಯಾಸ್ತ ಆಯಿತೆಂದರೆ ಎಲ್ಲವೂ ನಿಂತೇ ಹೋಯಿತು ಎಂದರ್ಥ. ಯಾವ ಕಾನೂನೂ ಬಳಕೆಯಲ್ಲಿರಲಿಲ್ಲ. ಸುಲಿಗೆ, ಕೊಲೆ, ಅಪಹರಣ ಸಾಮಾನ್ಯವಾಗಿದ್ದವು. ಬಿಹಾರದ ಈಗಿನ ತಲೆಮಾರಿನ ಜನರು ಮತ ಹಾಕುವ ಮುನ್ನ ಆ ಕತ್ತಲ ಯುಗವನ್ನೊಮ್ಮೆ ನೆನಪಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಇದನ್ನೂ ಓದಿ: ನಮ್ಮ ಜನತೆಗೆ ಉಚಿತ ಕೊರೊನಾ ಲಸಿಕೆ ಕೊಡಿಸುವ ಧಮ್ ಇದೆಯೇ ನಳಿನ್ ಕುಮಾರ್?- ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಕೃಷಿ ಮಸೂದೆಗಳಿಗೆ ವಿರೋಧ ಪಕ್ಷಗಳು ಮಾಡುತ್ತಿರುವ ವಿರೋಧಗಳನ್ನು ಅಲ್ಲಗಳೆದ ಮೋದಿ “ಮಂಡಿ (ಎಪಿಎಂಸಿ ಮಾರುಕಟ್ಟೆ) ಮತ್ತು ಎಂಎಸ್​ಪಿ ಇವರಿಗೆ ಟೀಕಿಸಲು ಒಂದು ನೆಪ ಮಾತ್ರ. ಇವರಿಗೆ ಮಧ್ಯವರ್ತಿಗಳನ್ನ ಕಾಪಾಡುವ ಉದ್ದೇಶ ಮಾತ್ರ ಇದೆ” ಎಂದು ಆರೋಪಿಸಿದರು.

ಬಿಹಾರದ ಎನ್​ಡಿಎ ಮೈತ್ರಿಕೂಟದಿಂದ ಹೊರಬಂದು ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಎಲ್​ಜೆಪಿಯ ಕುರಿತು ಮಾತನಾಡಿದ ಮೋದಿ, “ಚುನಾವಣೆ ಬಂದರೆ ಒಂದಷ್ಟು ಮುಖಂಡರು ಕಾಣಿಸಿಕೊಳ್ಳುತ್ತಾರೆ. ವಾಸ್ತವದಲ್ಲಿರುವುದಕ್ಕಿಂತ ಅವರನ್ನು ದೊಡ್ಡವರನ್ನಾಗಿ ಬಿಂಬಿಸಲಾಗುತ್ತದೆ. ಪ್ರತೀ ಚುನಾವಣೆಯಲ್ಲೂ ಇದು ಸಾಮಾನ್ಯ. ಇಂಥ ವದಂತಿ ಮತ್ತು ಮಿಥ್ಯೆಗಳನ್ನ ಬಿಹಾರದ ಬುದ್ಧಿವಂತ ಮತದಾರರು ನಂಬುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...