Homeಮುಖಪುಟನ.9ರಂದು ಲಾಲೂ ಜೈಲಿನಿಂದ ಹೊರಗೆ; ಮರುದಿನ ನಿತೀಶ್‌ಗೆ ಬೀಳ್ಕೊಡುಗೆ: ತೇಜಸ್ವಿ ಯಾದವ್

ನ.9ರಂದು ಲಾಲೂ ಜೈಲಿನಿಂದ ಹೊರಗೆ; ಮರುದಿನ ನಿತೀಶ್‌ಗೆ ಬೀಳ್ಕೊಡುಗೆ: ತೇಜಸ್ವಿ ಯಾದವ್

ನಿತೀಶ್ ಜೀ, ನೀವು ದಣಿದಿದ್ದೀರಿ, ನಿಮಗೆ ಬಿಹಾರವನ್ನು ನೋಡಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು 69 ವರ್ಷದ ನಿತೀಶ್ ಕುಮಾರ್ ಅವರಿಗೆ 30 ವರ್ಷದ ಆರ್‌ಜೆಡಿ ನಾಯಕ ಹೇಳಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ನವೆಂಬರ್‌ 9 ರಂದು ಜೈಲಿನಿಂದ ಹೊರಬರಲಿದ್ದು, ಮಾರನೇ ದಿನವೇ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಬೀಳ್ಕೊಡುಗೆ ಸಿಗಲಿದೆ ಎಂದು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌ ಹೇಳಿದ್ದಾರೆ.

ಬಿಹಾರದ ವಿಧಾನಸಭೆಗೆ ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ. ಅಂದೇ ಮುಖ್ಯಮಂತ್ರಿ ನಿತೀಶ್ ಕುಮಾರ್‌ಗೆ ವಿದಾಯ ಸಿಗಲಿದೆ ಎಂದು ವ್ಯಂಗ್ಯವಾಡಿದ್ದಾರೆ.

ಸದ್ಯ ತೇಜಶ್ವಿ ಯಾದವ್ ಅವರ ತಂದೆ ಲಾಲೂ ಯಾದವ್ ಮೇವು ಹಗರಣ ಭ್ರಷ್ಟಾಚಾರ ಪ್ರಕರಣದಲ್ಲಿ ಜಾರ್ಖಂಡ್‌ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೇವು ಹಗರಣದ ಚಾಯ್‌ಬಾಸಾ ಖಜಾನೆ ಸಂಬಂಧಿಸಿದ ಪ್ರಕರಣದಲ್ಲಿ ಜಾರ್ಖಂಡ್‌ ಹೈಕೋರ್ಟ್‌ ಲಾಲೂ ಅವರಿಗೆ ಇತ್ತೀಚೆಗೆ ಜಾಮೀನು ನೀಡಿದೆ. ಆದರೆ ದುಮಕಾ ಖಜಾನೆ ಹಣ ವಂಚನೆ ಪ್ರಕರಣದಲ್ಲಿ ಜಾಮೀನು ವಿಚಾರಣೆ ನಡೆಯುತ್ತಿದ್ದು, ನ್ಯಾಯಾಂಗ ಬಂಧನದಲ್ಲೇ ಇದ್ದಾರೆ.

ಇದನ್ನೂ ಓದಿ: ವರ್ಷಕ್ಕೆ 10 ಲಕ್ಷ ಉದ್ಯೋಗ ಸೃಷ್ಟಿ: ತೇಜಸ್ವಿ ಯಾದವ್ ಭರವಸೆ; ನಿತೀಶ್ ಕಂಗಾಲು!

‘ಲಾಲೂ ಜೀ ಅವರಿಗೆ ಆಗಲೇ ಒಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದು, ನವೆಂಬರ್‌ 9ರಂದು ಮತ್ತೊಂದು ಜಾಮೀನು ಪಡೆದು, ನವೆಂಬರ್‌ 9ರಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಅಂದು ನನ್ನ ಜನ್ಮದಿನ ಕೂಡ. ಮಾರನೆಯ ದಿನ (ನವೆಂಬರ್‌ 10) ನಿತೀಶ್‌ಜಿ ಅವರಿಗೆ ಬೀಳ್ಕೊಡುಗೆ ಸಿಗಲಿದೆ’ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಬಿಹಾರದ ಹಿಸುವಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ನಡೆದ ಚುನಾವಣಾ ರ್‍ಯಾಲಿಯಲ್ಲಿ ಚುನಾವಣೆಯನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಭ್ರಷ್ಟಾಚಾರವನ್ನು ತೊಡೆದುಹಾಕಲು, ಉದ್ಯೋಗ ಸೃಷ್ಟಿಸಲು ಮತ್ತು ಇತರ ರಾಜ್ಯಗಳಿಗೆ ಹೋಗುವ ಕಾರ್ಮಿಕರ ವಲಸೆಯನ್ನು ತಡೆಯಲು ವಿಫಲವಾಗಿದೆ ಎಂದು ತೇಜಸ್ವಿ ಯಾದವ್ ತಮ್ಮ ಭಾಷಣದಲ್ಲಿ ಆರೋಪಿಸಿದರು.

“ನಿತೀಶ್ ಜೀ, ನೀವು ದಣಿದಿದ್ದೀರಿ. ನಿಮಗೆ ಬಿಹಾರವನ್ನು ನೋಡಿಕೊಳ್ಳಲು ಸಾಧ್ಯವಾಗುವುದಿಲ್ಲ” ಎಂದು 69 ವರ್ಷದ ನಿತೀಶ್ ಕುಮಾರ್ ಅವರನ್ನು30 ವರ್ಷದ ಆರ್‌ಜೆಡಿ ನಾಯಕ ಮೂದಲಿಸಿದ್ದಾರೆ.

“15 ವರ್ಷಗಳಲ್ಲಿ ನಿಮಗೆ ಉದ್ಯೋಗ, ಶಿಕ್ಷಣ, ಆರೋಗ್ಯ ಸೌಲಭ್ಯಗಳು ಮತ್ತು ಕೈಗಾರಿಕೆಗಳನ್ನು ನೀಡದವರು ಮುಂದಿನ ಐದು ವರ್ಷಗಳಲ್ಲಿ ನೀಡುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ. ಜೊತೆಗೆ 10 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆಯನ್ನು ಮತ್ತೊಮ್ಮೆ ನೀಡಿದ್ದಾರೆ.


ಇದನ್ನೂ ಓದಿ: ಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...