Homeಅಂತರಾಷ್ಟ್ರೀಯ1 ವರ್ಷದಿಂದ ಫ್ರೀಜರ್​ನಲ್ಲಿ ಇಟ್ಟಿದ್ದ ನೂಡಲ್ಸ್ ತಿಂದು 9 ಮಂದಿ ಸಾವು!

1 ವರ್ಷದಿಂದ ಫ್ರೀಜರ್​ನಲ್ಲಿ ಇಟ್ಟಿದ್ದ ನೂಡಲ್ಸ್ ತಿಂದು 9 ಮಂದಿ ಸಾವು!

- Advertisement -
- Advertisement -

ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಫ್ರೀಜರ್‌ನಲ್ಲಿ ಇರಿಸಿದ್ದ ನೂಡಲ್ಸ್ ತಿಂದು ಫುಡ್​ ಪಾಯ್ಸನಿಂಗ್​ನಿಂದ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿರುವ ಘಟನೆ ಚೀನಾದಲ್ಲಿ ನಡೆದಿದೆ. ಈ ನೂಡಲ್ಸ್ ಅನ್ನು ಜೋಳದ ಹಿಟ್ಟಿನೊಳಗೆ ಇರಿಸಲಾಗಿತ್ತು. ಕಲುಷಿತಗೊಂಡಿದ್ದ ಹಿಟ್ಟು, ವಿಷವಾಗಿ ಪರಿವರ್ತನೆಯಾಗಿತ್ತು.

ಚೀನಾದ ಈಶಾನ್ಯ ಭಾಗದ ಹೀಲಾಂಗ್‌ಜಿಯಾಂಗ್‌ ಪ್ರಾಂತ್ಯದ ಜಿಕ್ಸಿ ನಗರದಲ್ಲಿ ಕುಟುಂಬವೊಂದು, ಕಳೆದ ಒಂದು ವರ್ಷದಿಂದ ಫ್ರೀಜರ್​ನಲ್ಲಿ ನೂಡಲ್ಸ್ ಸೂಪ್ ಇಟ್ಟಿತ್ತು. ಅಕ್ಟೋಬರ್ 5ರಂದು ಈ ತಿನಿಸು ಸೇವಿಸಿದ್ದ ಕುಟುಂಬದವರು, ಅಕ್ಟೋಬರ್ 10ರಂದು ಮೃತಪಟ್ಟಿದ್ದಾರೆ. ಬಾಂಗ್​​ಕ್ರೆಕ್​ ಆ್ಯಸಿಡ್​ ಪಾಯ್ಸನಿಂಗ್ ಉಂಟಾಗಿ ಏಳು ಮಂದಿ ವಯಸ್ಕರು ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕುಟುಂಬಸ್ಥರು ಸೇವಿಸಿದ ಈ ನೂಡಲ್ಸ್ ಸೂಪ್​ ಸ್ಥಳೀಯ ಚೀನಿ ಅಡುಗೆಯಾಗಿತ್ತು. ಅದೃಷ್ಟವಶಾತ್ ಕುಟುಂಬದ ಮೂವರು ಮಕ್ಕಳು ರುಚಿ ಹಿಡಿಸಿದ ಕಾರಣ ನೂಡಲ್ಸ್ ತಿನ್ನಲು ನಿರಾಕರಿಸಿದ್ದರಿಂದ ಬದುಕುಳಿದಿದ್ದಾರೆ ಎಂದು  ಡೈಲಿಸ್ಟಾರ್.ಕೊ.ಯು ವರದಿ ಮಾಡಿದೆ.

ಇದನ್ನೂ ಓದಿ: ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ಹೀಲೋಂಗ್​ಜಾಂಗ್ ಸೆಂಟರ್ ಫಾರ್ ಡಿಸೀಸ್​ ಕಂಟ್ರೋಲ್ ಆ್ಯಂಡ್​ ಪ್ರಿವೆನ್ಷನ್​​ನ ಆಹಾರ ಸುರಕ್ಷತೆ ನಿರ್ದೇಶಕ ಗಾವೋ ಫೀ, ಬಾಂಗ್​​ಕ್ರೆಕ್​ ಆ್ಯಸಿಡ್​ ವಿಷವು ಹೆಚ್ಚಾಗಿ ಮಾರಕವಾಗಿದೆ ಎಂದು ಹೇಳಿದರು. “ಇದು ಯಕೃತ್ತು, ಮೂತ್ರಪಿಂಡಗಳು, ಹೃದಯ ಮತ್ತು ಮೆದುಳು ಸೇರಿದಂತೆ ಮಾನವನ ಅನೇಕ ಅಂಗಗಳಿಗೆ ಗಂಭೀರ ಹಾನಿಯನ್ನುಂಟುಮಾಡುತ್ತದೆ” ಎಂದು ಹೇಳಿದ್ದಾರೆ.

’ಈ ಪಾಯ್ಸನಿಂಗ್​ ನಿವಾರಣೆಗೆ ಯಾವುದೇ ಔಷಧಿ ಇಲ್ಲ. ಒಮ್ಮೆ ಪಾಯ್ಸನಿಂಗ್ ಉಂಟಾದರೆ, ಸಾವಿನ ಪ್ರಮಾಣವು ಶೇ.40ರಿಂದ 100ರಷ್ಟು ಇರುತ್ತದೆ. ಬಾಂಗ್​​ಕ್ರೆಕ್​ ಆ್ಯಸಿಡ್ ಒಂದು ಅಪಾಯಕಾರಿ ವಿಷವಾಗಿದ್ದು, ಕಳಿತ ತೆಂಗಿನಕಾಯಿಯಿಂದ ಇದು ಉತ್ಪಾದನೆಯಾಗುತ್ತದೆ’ ಎಂದು ಗಾವೊ ಫೀ ತಿಳಿಸಿದ್ದಾರೆ ಎಂದು ಡೈಲಿಸ್ಟಾರ್.ಕೊ.ಯು ಉಲ್ಲೇಖಿಸಿದೆ.

ಇಂಡೋನೇಷ್ಯಾದ ಸಾಂಪ್ರದಾಯಿಕ ತಿನಿಸು ‘ಟೆಂಪೆ ಬೊಂಗ್‌ಕ್ರ್ಯಾಕ್’, ಡಿಜೆನ್ಕೋಲ್​ ಬೀನ್ಸ್​ ಅನ್ನು ನಿಷೇಧಿಸಲಾಗಿದೆ. ಏಕೆಂದರೆ ಇವುಗಳು ಕೂಡ ಅನೇಕ ಸಾವುಗಳಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. 1951ರಿಂದ 1975ರವರೆಗೆ ಇಂಡೋನೇಷ್ಯಾದಲ್ಲಿ ಬಾಂಗ್​​ಕ್ರೆಕ್​ ಆ್ಯಸಿಡ್​​ನಿಂದ ಪ್ರತಿ ವರ್ಷ ಸರಾಸರಿ 288 ಜನರಿಗೆ ಪಾಯ್ಸನಿಂಗ್ ಉಂಟಾಗಿದ್ದು, 34 ಜನರು ಸಾವನ್ನಪ್ಪಿದ್ದರು.


ಇದನ್ನೂ ಓದಿ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...