Homeಕರ್ನಾಟಕನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್

ನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್

ಕೆಲವರು ಬಂಡೆನ ಡೈನಮೇಟ್ ಇಟ್ಟು ಪುಡಿ ಪುಡಿ ಮಾಡುತ್ತೇವೆ ಅಂತಿದ್ದಾರೆ. ಬಂಡೆ ಪುಡಿಯಾಗಿ ಜಲ್ಲಿಕಲ್ಲಾದರೆ ಮನೆಕಟ್ಟಲು, ದೇವರ ಗುಡಿಯ ಮುಂದೆ ಗರಡುಗಂಭವಾಗಿ ನಿಲ್ಲಲು, ವಿಗ್ರಹವಾಗಿ, ಚಪ್ಪಡಿ ಕಲ್ಲಾಗಿ ಜನರಿಗೆ ಉಪಯೋಗಲು ಸಾಧ್ಯ.

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣೆಯ ಗಾಳಿ ದಿನೇ ದಿನೇ ರಭಸವಾಗುತ್ತಿದ್ದು, ಪ್ರತಿ ಪಕ್ಷಗಳೂ ಪರಸ್ಪರ ಟೀಕಾಪ್ರಹಾರ ಮಾಡುತ್ತಿವೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, “ನಾನು ಜನವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಈ ರಾಜ್ಯದ ಜನತೆ ಬೀಸುವ ಕಲ್ಲು” ಎಂದು ಹರಿಹಾಯ್ದಿದ್ದಾರೆ.

“ನಾನು ಬಂಡೆಯಾಗಲು ಇಚ್ಚಿಸುವುದಿಲ್ಲ. ರಾಜ್ಯದ ಜನ ವಿಧಾನಸೌಧಕ್ಕೆ ಹತ್ತಿಕೊಂಡು ಹೋಗುವ ಮೆಟ್ಟಿಲಿನ ಚಪ್ಪಡಿಕಲ್ಲಾಗುತ್ತೇನೆ. ಇಲ್ಲವಾದರೆ ಈ ಜನವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು” ಎಂದು ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರದಲ್ಲಿ, ಕ್ಷೇತ್ರದ ಐಡಿಯಲ್ ಹೋಮ್ಸ್ ನಲ್ಲಿ ಒಕ್ಕಲಿಗ ಸಮುದಾಯದ ನಾನಾ ಸಂಘಟನೆಗಳ ಮುಖಂಡರೊಂದಿಗಿನ ಸಭೆಯಲ್ಲಿ ಈ ಮಾತುಗಳನ್ನು ಹೇಳಿದರು.

‘ಕೆಲವರು ಬಂಡೆನ ಡೈನಮೇಟ್ ಇಟ್ಟು ಪುಡಿ ಪುಡಿ ಮಾಡುತ್ತೇವೆ ಅಂತಿದ್ದಾರೆ. ಬಂಡೆ ಪುಡಿಯಾಗಿ ಜಲ್ಲಿಕಲ್ಲಾದರೆ ಮನೆಕಟ್ಟಲು, ದೇವರ ಗುಡಿಯ ಮುಂದೆ ಗರಡುಗಂಭವಾಗಿ ನಿಲ್ಲಲು, ಕಲ್ಲು ವಿಗ್ರಹವಾಗಿ, ಚಪ್ಪಡಿ ಕಲ್ಲಾಗಿ ಜನರಿಗೆ ಉಪಯೋಗಲು ಸಾಧ್ಯ. ಮಿತಿ ಮೀರಿದರೆ, ಈ ಜನ ವಿರೋಧಿ ಸರ್ಕಾರಕ್ಕೆ ಜನ ಬೀಸುವ ಕಲ್ಲಾಗುವೆ. ಹೀಗಾಗಿ ನಾನು ಕೇವಲ ಬಂಡೆಯಾಗಲು ಇಚ್ಚಿಸುವುದಿಲ್ಲ. ಜನರಿಗೆ ನನ್ನಿಂದ ಉಪಯೋಗವಾದರೆ ಸಾಕು” ಎಂದು ಹೇಳಿದರು.

ಇದನ್ನೂ ಓದಿ: ಇದು ಕೇವಲ ಉಪ ಚುನಾವಣೆಯಲ್ಲ, ನೈತಿಕ ರಾಜಕಾರಣ ಉಳಿಸುವ ಗುರುತರ ಜವಾಬ್ಧಾರಿ!

“ನಾವು ಬೀಜ ಬಿತ್ತುವಾಗ ಅದು ಮರವಾಗಿ ಹಣ್ಣಾದರೂ ನೀಡಲಿ, ನೆರಳಾದರು ನೀಡಲಿ ಎಂಬ ಒಳ್ಳೆ ಭಾವನೆಯಿಂದ ಬಿತ್ತುತ್ತೇವೆ. ಎಲ್ಲ ಬೀಜಗಳು ಹಣ್ಣನ್ನೇ ನೀಡಬೇಕು ಎಂದು ಬಯಸುವುದಿಲ್ಲ. ಕೆಲವೊಮ್ಮೆ ಮರ ಬೆಳೆಸುವವರು ಒಬ್ಬರಾದರೆ, ಮತ್ತೊಬ್ಬರು ಹಣ್ಣು ತಿನ್ನುತ್ತಾರೆ. ಯಾರೋ ಕಟ್ಟಿದ ಹುತ್ತದಲ್ಲಿ ವಿಷ ಸರ್ಪ ಬಂದು ಸೇರುತ್ತದೆ. ಇದು ಪ್ರಕೃತಿ ನಿಯಮ” ಎಂದು ವಿವರಿಸಿದರು.

“ನಮ್ಮ ರವಿ ಪತ್ನಿ ಕುಸುಮಾ ಮತ್ತು ಅವರ ಕುಟುಂಬ ನನಗೆ ಮುಂಚೆಯಿಂದಲೂ ಗೊತ್ತಿದೆ. ಪಾಪ ಆತ ಯಾವುದೋ ಕಾರಣಕ್ಕೆ ಹೇಡಿತನ ತೋರಿಬಿಟ್ಟ. ಆತ ಯಾವುದೇ ಪರಿಸ್ಥಿತಿ ಇದ್ದರೂ ಧೈರ್ಯದಿಂದ ಎದುರಿಸಿ ತನ್ನ ತಂದೆ-ತಾಯಿ, ಕಟ್ಟಿಕೊಂಡ ಹೆಂಡತಿಯನ್ನು ನೋಡಿಕೊಳ್ಳಬೇಕಿತ್ತು. ನಮ್ಮ ಸಮಾಜ ಅವರನ್ನು ಎಷ್ಟು ಪ್ರೀತಿ, ಗೌರವದಿಂದ ನೋಡುತ್ತಿತ್ತು. ಆದರೆ ನಷ್ಟ ಆಗಿದ್ದು ಯಾರಿಗೆ? ಆತನ ಅಸಹಜ ಸಾವನ್ನು, ಅನೇಕರು ಕೊಲೆಯಾಯ್ತು ಅಂತಾ ಧರಣಿ ಮಾಡಿದ್ದನ್ನು ನೋಡಿದ್ದೇವೆ. ನಮ್ಮದೇ ಸರ್ಕಾರ ಸಿಬಿಐ ತನಿಖೆಗೆ ಕೊಟ್ಟೆವು. ಯಾವ ಯಾವ ಹೇಳಿಕೆ ಕೊಡಿಸಿದ್ದಾರೆ ಎಂಬ ದಾಖಲೆಯೂ ನಮ್ಮ ಬಳಿ ಇದೆ. ಆದರೆ ನಾವು ಈ ವಿಚಾರವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವುದು ಬೇಡ. ನಮ್ಮ ಹೆಣ್ಣು ಮಗಳು ಎಲ್ಲರ ಸಾಕ್ಷಿಯಾಗಿ ತಾಳಿ ಕಟ್ಟಿಸಿಕೊಂಡು, ಸಪ್ತಪದಿ ತುಳಿದು ಮದುವೆಯಾಗಿದ್ದಾಳೆ. ಆದರೆ ನಮ್ಮ ಶೋಭಕ್ಕ ಚುನಾವಣೆ ವೇಳೆ ಗಂಡನ ಹೆಸರು ಬಳಸಿಕೊಳ್ಳಬೇಡ ಅಂತಾರಲ್ಲ ಹೇಗೆ ಸಾಧ್ಯ? ಶೋಭಕ್ಕ ನೀನು, ನಿನ್ನ ಮಗಳೋ, ತಂಗಿನೋ ಆ ಸ್ಥಾನದಲ್ಲಿ ಇದ್ದಿದ್ದರೆ ಏನು ಹೇಳುತ್ತಿದ್ದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

“ಈಗ ನವರಾತ್ರಿ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ರಕ್ಷಣೆ ನೀಡಲು ದುರ್ಗಾದೇವಿ, ರಾಜರಾಜೇಶ್ವರಿ ಆಶೀರ್ವಾದ ಬೇಕಿದೆ. ಈ ದೇವತೆಗಳ ಆಶೀರ್ವಾದದೊಂದಿಗೆ ನಾವು ಕ್ಷೇತ್ರದ ಹಿತ ಕಾಯಲು ನೊಂದು ಬೆಂದಿರುವ ಹೆಣ್ಣು ಮಗಳನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದೇವೆ” ಎಂದರು.

‘ಕೊರೋನಾ ಹರಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರವೇ ನೇರ ಕಾರಣವಾಗಿದ್ದು, ಮೊದಲು ಲಸಿಕೆಯನ್ನು ತರಲಿ. ಆಮೇಲೆ ಅದನ್ನು ಉಚಿತವಾಗಿ ನೀಡುವ ಬಗ್ಗೆ ಘೋಷಣೆ ಮಾಡಲಿ. ಚುನಾವಣೆಗೋಸ್ಕರ ಸುಖಾಸುಮ್ಮನೆ ಆಶ್ವಾಸನೆ ನೀಡುವುದು ಬೇಡ’ ಎಂದು ಟೀಕಿಸಿದ್ದಾರೆ.

“ಸರ್ಕಾರ ಲಾಕ್ ಡೌನ್ ಮಾಡಿದ್ದಕ್ಕೆ ಚಾಲಕರಿಗೆ, ನೇಕಾರರಿಗೆ, ಸವಿತಾ ಸಮಾಜದವರಿಗೆ 5 ಸಾವಿರ ಕೊಡುತ್ತೇನೆ ಎಂದು ಹೇಳಿದರು. ಆದರೆ ಈವರೆಗೂ ಕೊಟ್ಟಿಲ್ಲ. ಒಬ್ಬ ಕಾರ್ಮಿಕ, ರೈತನಿಗೆ ಸಹಾಯ ಮಾಡಿಲ್ಲ. ನಗರ ಪ್ರದೇಶಗಳಲ್ಲಿ ಕಟ್ಟಡಗಳು ಖಾಲಿ ಬಿದ್ದಿದೆ. ಪಾಲಿಕೆಗಳಿಗೆ ಸೂಚನೆ ನೀಡಿ ಅವರಿಗೆ ತೆರಿಗೆ ವಿನಾಯಿತಿ ಕೊಡಲು ಇವರಿಂದ ಸಾಧ್ಯವಾಗುವುದಿಲ್ಲವೇ? ಬ್ಯಾಂಕ್ ಸಾಲದ ಬಡ್ಡಿ ಮನ್ನಾ ಮಾಡಿದ್ದಾರಾ? ಇವರೇನು ಲಸಿಕೆ ಕೊಡುತ್ತಾರೆ? ಕೋರೊನಾದಿಂದ ಮೃತಪಟ್ಟವರ ಹೆಣವನ್ನು ಬಿಸಾಡಿದರು. ಕೇಂದ್ರ ಸರ್ಕಾರ ನಮ್ಮ ಕೇಂದ್ರ ಸಚಿವರ ಪಾರ್ಥಿವ ಶರೀರವನ್ನು ಅವರ ಕುಟುಂಬದವರಿಗೆ ತೋರಿಸಲಿಲ್ಲ. ಸೇನಾ ವಿಮಾನ ಸೌಲಭ್ಯ ಕಲ್ಪಿಸಿ ಅವರ ಶವವನ್ನು ಇಲ್ಲಿಗೆ ತಲುಪಿಸಿದ್ದರೆ ಅವರ ಕುಟುಂಬದವರು, ಜನರು ಅವರ ಮುಖ ನೋಡಿಕೊಳ್ಳುತ್ತಿದ್ದರು. ಇಚ್ಛೆ ಇದ್ದರೆ ಅದನ್ನು ಮಾಡುವ ಧೃಢ ನಿರ್ಧಾರ ಇರುತ್ತದೆ. ಇದರಲ್ಲೇ ಸರ್ಕಾರಕ್ಕೆ ಯಾವುದೇ ದೂರದೃಷ್ಟಿ ಇಲ್ಲ ಎಂಬುದು ತಿಳಿಯುತ್ತದೆ” ಎಂದರು.


ಇದನ್ನೂ ಓದಿ: ಈ ಉಪಚುನಾವಣೆ ಜನರ ತೀರ್ಪು ಮಾರಿಕೊಂಡವರಿಗೆ ಪಾಠವಾಗಲಿ- ಡಿ.ಕೆ.ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....