Homeಕರ್ನಾಟಕನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್

ನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್

ಕೆಲವರು ಬಂಡೆನ ಡೈನಮೇಟ್ ಇಟ್ಟು ಪುಡಿ ಪುಡಿ ಮಾಡುತ್ತೇವೆ ಅಂತಿದ್ದಾರೆ. ಬಂಡೆ ಪುಡಿಯಾಗಿ ಜಲ್ಲಿಕಲ್ಲಾದರೆ ಮನೆಕಟ್ಟಲು, ದೇವರ ಗುಡಿಯ ಮುಂದೆ ಗರಡುಗಂಭವಾಗಿ ನಿಲ್ಲಲು, ವಿಗ್ರಹವಾಗಿ, ಚಪ್ಪಡಿ ಕಲ್ಲಾಗಿ ಜನರಿಗೆ ಉಪಯೋಗಲು ಸಾಧ್ಯ.

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣೆಯ ಗಾಳಿ ದಿನೇ ದಿನೇ ರಭಸವಾಗುತ್ತಿದ್ದು, ಪ್ರತಿ ಪಕ್ಷಗಳೂ ಪರಸ್ಪರ ಟೀಕಾಪ್ರಹಾರ ಮಾಡುತ್ತಿವೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, “ನಾನು ಜನವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಈ ರಾಜ್ಯದ ಜನತೆ ಬೀಸುವ ಕಲ್ಲು” ಎಂದು ಹರಿಹಾಯ್ದಿದ್ದಾರೆ.

“ನಾನು ಬಂಡೆಯಾಗಲು ಇಚ್ಚಿಸುವುದಿಲ್ಲ. ರಾಜ್ಯದ ಜನ ವಿಧಾನಸೌಧಕ್ಕೆ ಹತ್ತಿಕೊಂಡು ಹೋಗುವ ಮೆಟ್ಟಿಲಿನ ಚಪ್ಪಡಿಕಲ್ಲಾಗುತ್ತೇನೆ. ಇಲ್ಲವಾದರೆ ಈ ಜನವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು” ಎಂದು ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರದಲ್ಲಿ, ಕ್ಷೇತ್ರದ ಐಡಿಯಲ್ ಹೋಮ್ಸ್ ನಲ್ಲಿ ಒಕ್ಕಲಿಗ ಸಮುದಾಯದ ನಾನಾ ಸಂಘಟನೆಗಳ ಮುಖಂಡರೊಂದಿಗಿನ ಸಭೆಯಲ್ಲಿ ಈ ಮಾತುಗಳನ್ನು ಹೇಳಿದರು.

‘ಕೆಲವರು ಬಂಡೆನ ಡೈನಮೇಟ್ ಇಟ್ಟು ಪುಡಿ ಪುಡಿ ಮಾಡುತ್ತೇವೆ ಅಂತಿದ್ದಾರೆ. ಬಂಡೆ ಪುಡಿಯಾಗಿ ಜಲ್ಲಿಕಲ್ಲಾದರೆ ಮನೆಕಟ್ಟಲು, ದೇವರ ಗುಡಿಯ ಮುಂದೆ ಗರಡುಗಂಭವಾಗಿ ನಿಲ್ಲಲು, ಕಲ್ಲು ವಿಗ್ರಹವಾಗಿ, ಚಪ್ಪಡಿ ಕಲ್ಲಾಗಿ ಜನರಿಗೆ ಉಪಯೋಗಲು ಸಾಧ್ಯ. ಮಿತಿ ಮೀರಿದರೆ, ಈ ಜನ ವಿರೋಧಿ ಸರ್ಕಾರಕ್ಕೆ ಜನ ಬೀಸುವ ಕಲ್ಲಾಗುವೆ. ಹೀಗಾಗಿ ನಾನು ಕೇವಲ ಬಂಡೆಯಾಗಲು ಇಚ್ಚಿಸುವುದಿಲ್ಲ. ಜನರಿಗೆ ನನ್ನಿಂದ ಉಪಯೋಗವಾದರೆ ಸಾಕು” ಎಂದು ಹೇಳಿದರು.

ಇದನ್ನೂ ಓದಿ: ಇದು ಕೇವಲ ಉಪ ಚುನಾವಣೆಯಲ್ಲ, ನೈತಿಕ ರಾಜಕಾರಣ ಉಳಿಸುವ ಗುರುತರ ಜವಾಬ್ಧಾರಿ!

“ನಾವು ಬೀಜ ಬಿತ್ತುವಾಗ ಅದು ಮರವಾಗಿ ಹಣ್ಣಾದರೂ ನೀಡಲಿ, ನೆರಳಾದರು ನೀಡಲಿ ಎಂಬ ಒಳ್ಳೆ ಭಾವನೆಯಿಂದ ಬಿತ್ತುತ್ತೇವೆ. ಎಲ್ಲ ಬೀಜಗಳು ಹಣ್ಣನ್ನೇ ನೀಡಬೇಕು ಎಂದು ಬಯಸುವುದಿಲ್ಲ. ಕೆಲವೊಮ್ಮೆ ಮರ ಬೆಳೆಸುವವರು ಒಬ್ಬರಾದರೆ, ಮತ್ತೊಬ್ಬರು ಹಣ್ಣು ತಿನ್ನುತ್ತಾರೆ. ಯಾರೋ ಕಟ್ಟಿದ ಹುತ್ತದಲ್ಲಿ ವಿಷ ಸರ್ಪ ಬಂದು ಸೇರುತ್ತದೆ. ಇದು ಪ್ರಕೃತಿ ನಿಯಮ” ಎಂದು ವಿವರಿಸಿದರು.

“ನಮ್ಮ ರವಿ ಪತ್ನಿ ಕುಸುಮಾ ಮತ್ತು ಅವರ ಕುಟುಂಬ ನನಗೆ ಮುಂಚೆಯಿಂದಲೂ ಗೊತ್ತಿದೆ. ಪಾಪ ಆತ ಯಾವುದೋ ಕಾರಣಕ್ಕೆ ಹೇಡಿತನ ತೋರಿಬಿಟ್ಟ. ಆತ ಯಾವುದೇ ಪರಿಸ್ಥಿತಿ ಇದ್ದರೂ ಧೈರ್ಯದಿಂದ ಎದುರಿಸಿ ತನ್ನ ತಂದೆ-ತಾಯಿ, ಕಟ್ಟಿಕೊಂಡ ಹೆಂಡತಿಯನ್ನು ನೋಡಿಕೊಳ್ಳಬೇಕಿತ್ತು. ನಮ್ಮ ಸಮಾಜ ಅವರನ್ನು ಎಷ್ಟು ಪ್ರೀತಿ, ಗೌರವದಿಂದ ನೋಡುತ್ತಿತ್ತು. ಆದರೆ ನಷ್ಟ ಆಗಿದ್ದು ಯಾರಿಗೆ? ಆತನ ಅಸಹಜ ಸಾವನ್ನು, ಅನೇಕರು ಕೊಲೆಯಾಯ್ತು ಅಂತಾ ಧರಣಿ ಮಾಡಿದ್ದನ್ನು ನೋಡಿದ್ದೇವೆ. ನಮ್ಮದೇ ಸರ್ಕಾರ ಸಿಬಿಐ ತನಿಖೆಗೆ ಕೊಟ್ಟೆವು. ಯಾವ ಯಾವ ಹೇಳಿಕೆ ಕೊಡಿಸಿದ್ದಾರೆ ಎಂಬ ದಾಖಲೆಯೂ ನಮ್ಮ ಬಳಿ ಇದೆ. ಆದರೆ ನಾವು ಈ ವಿಚಾರವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವುದು ಬೇಡ. ನಮ್ಮ ಹೆಣ್ಣು ಮಗಳು ಎಲ್ಲರ ಸಾಕ್ಷಿಯಾಗಿ ತಾಳಿ ಕಟ್ಟಿಸಿಕೊಂಡು, ಸಪ್ತಪದಿ ತುಳಿದು ಮದುವೆಯಾಗಿದ್ದಾಳೆ. ಆದರೆ ನಮ್ಮ ಶೋಭಕ್ಕ ಚುನಾವಣೆ ವೇಳೆ ಗಂಡನ ಹೆಸರು ಬಳಸಿಕೊಳ್ಳಬೇಡ ಅಂತಾರಲ್ಲ ಹೇಗೆ ಸಾಧ್ಯ? ಶೋಭಕ್ಕ ನೀನು, ನಿನ್ನ ಮಗಳೋ, ತಂಗಿನೋ ಆ ಸ್ಥಾನದಲ್ಲಿ ಇದ್ದಿದ್ದರೆ ಏನು ಹೇಳುತ್ತಿದ್ದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

“ಈಗ ನವರಾತ್ರಿ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ರಕ್ಷಣೆ ನೀಡಲು ದುರ್ಗಾದೇವಿ, ರಾಜರಾಜೇಶ್ವರಿ ಆಶೀರ್ವಾದ ಬೇಕಿದೆ. ಈ ದೇವತೆಗಳ ಆಶೀರ್ವಾದದೊಂದಿಗೆ ನಾವು ಕ್ಷೇತ್ರದ ಹಿತ ಕಾಯಲು ನೊಂದು ಬೆಂದಿರುವ ಹೆಣ್ಣು ಮಗಳನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದೇವೆ” ಎಂದರು.

‘ಕೊರೋನಾ ಹರಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರವೇ ನೇರ ಕಾರಣವಾಗಿದ್ದು, ಮೊದಲು ಲಸಿಕೆಯನ್ನು ತರಲಿ. ಆಮೇಲೆ ಅದನ್ನು ಉಚಿತವಾಗಿ ನೀಡುವ ಬಗ್ಗೆ ಘೋಷಣೆ ಮಾಡಲಿ. ಚುನಾವಣೆಗೋಸ್ಕರ ಸುಖಾಸುಮ್ಮನೆ ಆಶ್ವಾಸನೆ ನೀಡುವುದು ಬೇಡ’ ಎಂದು ಟೀಕಿಸಿದ್ದಾರೆ.

“ಸರ್ಕಾರ ಲಾಕ್ ಡೌನ್ ಮಾಡಿದ್ದಕ್ಕೆ ಚಾಲಕರಿಗೆ, ನೇಕಾರರಿಗೆ, ಸವಿತಾ ಸಮಾಜದವರಿಗೆ 5 ಸಾವಿರ ಕೊಡುತ್ತೇನೆ ಎಂದು ಹೇಳಿದರು. ಆದರೆ ಈವರೆಗೂ ಕೊಟ್ಟಿಲ್ಲ. ಒಬ್ಬ ಕಾರ್ಮಿಕ, ರೈತನಿಗೆ ಸಹಾಯ ಮಾಡಿಲ್ಲ. ನಗರ ಪ್ರದೇಶಗಳಲ್ಲಿ ಕಟ್ಟಡಗಳು ಖಾಲಿ ಬಿದ್ದಿದೆ. ಪಾಲಿಕೆಗಳಿಗೆ ಸೂಚನೆ ನೀಡಿ ಅವರಿಗೆ ತೆರಿಗೆ ವಿನಾಯಿತಿ ಕೊಡಲು ಇವರಿಂದ ಸಾಧ್ಯವಾಗುವುದಿಲ್ಲವೇ? ಬ್ಯಾಂಕ್ ಸಾಲದ ಬಡ್ಡಿ ಮನ್ನಾ ಮಾಡಿದ್ದಾರಾ? ಇವರೇನು ಲಸಿಕೆ ಕೊಡುತ್ತಾರೆ? ಕೋರೊನಾದಿಂದ ಮೃತಪಟ್ಟವರ ಹೆಣವನ್ನು ಬಿಸಾಡಿದರು. ಕೇಂದ್ರ ಸರ್ಕಾರ ನಮ್ಮ ಕೇಂದ್ರ ಸಚಿವರ ಪಾರ್ಥಿವ ಶರೀರವನ್ನು ಅವರ ಕುಟುಂಬದವರಿಗೆ ತೋರಿಸಲಿಲ್ಲ. ಸೇನಾ ವಿಮಾನ ಸೌಲಭ್ಯ ಕಲ್ಪಿಸಿ ಅವರ ಶವವನ್ನು ಇಲ್ಲಿಗೆ ತಲುಪಿಸಿದ್ದರೆ ಅವರ ಕುಟುಂಬದವರು, ಜನರು ಅವರ ಮುಖ ನೋಡಿಕೊಳ್ಳುತ್ತಿದ್ದರು. ಇಚ್ಛೆ ಇದ್ದರೆ ಅದನ್ನು ಮಾಡುವ ಧೃಢ ನಿರ್ಧಾರ ಇರುತ್ತದೆ. ಇದರಲ್ಲೇ ಸರ್ಕಾರಕ್ಕೆ ಯಾವುದೇ ದೂರದೃಷ್ಟಿ ಇಲ್ಲ ಎಂಬುದು ತಿಳಿಯುತ್ತದೆ” ಎಂದರು.


ಇದನ್ನೂ ಓದಿ: ಈ ಉಪಚುನಾವಣೆ ಜನರ ತೀರ್ಪು ಮಾರಿಕೊಂಡವರಿಗೆ ಪಾಠವಾಗಲಿ- ಡಿ.ಕೆ.ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...