HomeUncategorizedಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; 6 ವರ್ಷದ ನಂತರ ಅಪರಾಧಿಗೆ ಮರಣದಂಡನೆ!

ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; 6 ವರ್ಷದ ನಂತರ ಅಪರಾಧಿಗೆ ಮರಣದಂಡನೆ!

2014 ರಲ್ಲಿ ನಡೆದ ಅತ್ಯಾಚಾರಕ್ಕೆ 2020ರಲ್ಲಿ ಶಿಕ್ಷೆಯಾಗಿರುವುದನ್ನು ನೋಡಿದರೆ ನಮ್ಮ ನ್ಯಾಯಾಂಗ ವ್ಯವಸ್ಥೆಯ ವಿಳಂಬಿತ ಕಾರ್ಯವೈಖರಿ ಕಂಡುಬರುತ್ತದೆ.

- Advertisement -
- Advertisement -

2014 ರಲ್ಲಿ ಒಂದೂವರೆ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ರಾಯ್‌ಬರೇಲಿಯ ವ್ಯಕ್ತಿಯೊಬ್ಬನಿಗೆ ಮರಣದಂಡನೆ ವಿಧಿಸಲಾಗಿದೆ.

ಪೋಕ್ಸೊ ವಿಶೇಷ ನ್ಯಾಯಾಧೀಶರಾದ ವಿಜಯ್ ಪಾಲ್ ಅವರು ಜಿತೇಂದ್ರ ಸಿಂಗ್‌ಗೆ ಶುಕ್ರವಾರ ಮರಣದಂಡನೆ ವಿಧಿಸಿದ್ದಾರೆ ಎಂದು ಸರ್ಕಾರದ ವಕೀಲ ವೇದಪಾಲ್ ಸಿಂಗ್ ತಿಳಿಸಿದ್ದಾರೆ.

ಮೇ 3, 2014 ರಂದು, ಮಗುವಿನ ತಂದೆ ನೀಡಿದ ದೂರಿನ ಮೇರೆಗೆ ಸಲೋನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ಅವರ ಸಂಬಂಧಿಯೇ ಅತ್ಯಾಚಾರ ಎಸಗಿ ಒಂದೂವರೆ ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್

ಸಾಕ್ಷ್ಯಾಧಾರಗಳನ್ನು ನಾಶಮಾಡಲು ಜಿತೇಂದ್ರ ಸಿಂಗ್ ಮಗುವಿನ ಶವವನ್ನು ಗ್ರಾಮದ ಹೊರಗಿನ ಕೊಳವೆಯ ಬಾವಿಯಲ್ಲಿ ಹೂಳಿದ್ದನು ಎಂದು ವಕೀಲರು ತಿಳಿಸಿದ್ದಾರೆ.

ನ್ಯಾಯಾಲಯವು ಒಟ್ಟಾರೆ 2.20 ಲಕ್ಷ ರೂ.ಗಳ ದಂಡವನ್ನು ವಿಧಿಸಿದ್ದು, ಅದರಲ್ಲಿ ಅರ್ಧವನ್ನು ಮಗುವಿನ ತಂದೆಗೆ ನೀಡುವಂತೆ ಆದೇಶಿಸಿದೆ ಎಂದು ವೇದಪಾಲ್ ಸಿಂಗ್ ಹೇಳಿದರು.

ದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ನಡುವೆ ಇಂತಹ ಘಟನೆಗಳು ಸಮಾಧನಕರವಾಗಿ ಕಂಡರೂ, ಅತ್ಯಾಚಾರಕ್ಕೆ ಶಾಶ್ವತ ಪರಿಹಾರ ಏನು ಎಂಬುದು ಯಾರಿಗೂ ತಿಳಿಯದಾಗಿದೆ. ಮರಣದಂಡನೆ ನೀಡಿರುವ ಘಟನೆಗಳು ದೇಶದಾದ್ಯಂತ ಕಾಣಬಹುದಾದರೂ, ಅಪರಾಧ ನಡೆದ ಮತ್ತು ಅವುಗಳಿಗೆ ಶಿಕ್ಷೆ ವಿಧಿಸಿದ ದಿನಗಳ ನಡುವಿನ ಅಂತರವನ್ನು ಗಮನಿಸಿದಾಗ ತೀರಾ ಹೆಚ್ಚಾಗಿರುವುದು ಕಂಡುಬರುತ್ತದೆ. ಇದು ನಮ್ಮ ನ್ಯಾಯಾಂಗ ವ್ಯವಸ್ಥೆ ಮತ್ತು ಸರ್ಕಾರದ ನಿರ್ಲಕ್ಷ್ಯತೆಯನ್ನು ಎತ್ತಿತೋರಿಸುತ್ತದೆ. ಯಾವುದೇ ರಾಜಕಾರಣಿಯೋ ಅಥವಾ ಸಿನಿಮಾದವರೋ ಅಥವಾ ಉದ್ಯಮಪತಿಗಳೋ ಆದರೆ ಅವರ ಪ್ರಕರಣವನ್ನು ಅತಿಬೇಗನೆ ಕೈಗೆತ್ತಿಕೊಂಡು ಇತ್ಯರ್ಥಪಡಿಸುವ ನ್ಯಾಯಾಲಯ ಇಂತಹ ಜನಸಾಮಾನ್ಯರ ಪ್ರಕರಣಗಳ ಬಗ್ಗೆ ನಿರ್ಲಕ್ಷ್ಯತೆ ವಹಿಸುತ್ತದೆ.

2014 ರಲ್ಲಿ ನಡೆದ ಅತ್ಯಾಚಾರಕ್ಕೆ 2020ರಲ್ಲಿ ಶಿಕ್ಷೆಯಾಗಿರುವುದನ್ನು ನೋಡಿದರೆ ನಮ್ಮ ನ್ಯಾಯಾಂಗ ವ್ಯವಸ್ಥೆಯ ವಿಳಂಬಿತ ಕಾರ್ಯವೈಖರಿ ಕಂಡುಬರುತ್ತದೆ. ಬಹುಶಃ ಅತ್ಯಾಚಾರಗಳು ಹೆಚ್ಚಾಗುತ್ತಿರುವುದಕ್ಕೆ ಇದೂ ಒಂದು ಕಾರಣವಾಗಿರಬಹುದು ಎನ್ನುವುದು ಹಲವರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ರಾಜ್ಯದಲ್ಲಿ ನವೆಂಬರ್‌ 17ರಿಂದ ಪದವಿ ಕಾಲೇಜುಗಳ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...