Homeಮುಖಪುಟಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ

- Advertisement -
- Advertisement -

ಭಾರತದಲ್ಲಿ ನಾವು ಬಳಸುವ ಇಂಟರ್ನೆಟ್ ಸ್ಪೀಡ್ ಜಗತ್ತಿನ ಉಳಿದ ದೇಶಗಳಿಗಿಂತ ಅತ್ಯಂತ ಕೆಳಮಟ್ಟದಲ್ಲಿದ್ದು, ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ ಎಂಬುದು ಅಧ್ಯಯನದ ವರದಿಯೊಂದರ ಫಲಿತಾಂಶದಿಂದ ತಿಳಿದುಬಂದಿದೆ.

ಮೊಬೈಲ್ ಇಂಟರ್ನೆಟ್/ಡಾಟಾ ಸ್ಪೀಡ್‍ನಲ್ಲಿ ಭಾರತಕ್ಕೆ ವಿಶ್ವದಲ್ಲಿ 131 ನೇ ಸ್ಥಾನ ಲಭಿಸಿದ್ದು, ಈ ಸಲದ Ranking ಗಣನೆಗೆ  ಒಟ್ಟು 138 ದೇಶಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ವರ್ಷ 145 ದೇಶಗಳ ಪೈಕಿ 128ನೇ ಸ್ಥಾನದಲ್ಲಿದ್ದ ಭಾರತ, ಅದಕ್ಕಿಂತ ಹಿಂದಿನ ವರ್ಷ 110 ನೇ ಸ್ಥಾನದಲ್ಲಿತ್ತು. ಸದ್ಯಕ್ಕೆ, ಶ್ರೀಲಂಕಾ, ಪಾಕೀಸ್ಥಾನ ಹಾಗೂ ನೇಪಾಳ ಕೂಡಾ ಭಾರತಕ್ಕಿಂತ ಮೇಲಿನ ಸ್ಥಾನಗಳನ್ನು ಪಡೆದಿವೆ ಎಂದು ಗೆಜೆಟ್ ನೌ ವರದಿ ಮಾಡಿದೆ.

ವಿಶ್ವದ ಸರಾಸರಿ ಡೌನ್‍ಲೋಡ್ ಸ್ಪೀಡ್ 35.26 Mbps (megabit per second) ಆಗಿದ್ದರೆ, ಭಾರತದ ಸರಾಸರಿ ಡೌನ್‍ಲೋಡ್ ಸ್ಪೀಡ್ 12.07 Mbps. ಇನ್ನು ಗಣನೆಗೆ ತೆಗೆದುಕೊಂಡಿರುವ ಎಲ್ಲಾ ದೇಶಗಳ ಸರಾಸರಿ ಅಪ್‍ಲೋಡ್ ಸ್ಪೀಡ್ 11.22 Mbps ಆಗಿದ್ದರೆ, ಭಾರತದ್ದು, 4.31 Mbps.

ಇದನ್ನೂ ಓದಿ: ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಇದನ್ನೂ ಓದಿ: ಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಮೊದಲನೆಯ ಸ್ಥಾನದಲ್ಲಿರುವ ದಕ್ಷಿಣ ಕೊರಿಯಾದ ಸರಾಸರಿ ಇಂಟರ್ನೆಟ್ ವೇಗ 121.00 Mbps. ಇದು ಭಾರತದ ಸರಾಸರಿ ಬ್ರಾಡ್‍ಬ್ಯಾಂಡ್ ಸ್ಪೀಡ್‍ 46.47 Mbps ಗಿಂತಾ ಸುಮಾರು ಎರಡೂವರೆ ಪಟ್ಟು ಹೆಚ್ಚು. ಶ್ರೀಲಂಕಾ 19.95 Mbps ಹೊಂದಿದ್ದು 102ನೆಯ ಸ್ಥಾನ ಪಡೆದಿದ್ದರೆ, ಪಾಕೀಸ್ಥಾನ 17.13 Mbps ಸ್ಪೀಡ್‍ನೊಂದಿಗೆ 116ನೆಯ ಸ್ಥಾನದಲ್ಲಿದೆ. ನೇಪಾಳ ಕೂಡಾ 17.12 Mbps ಸ್ಪೀಡ್ ಸರಸಾರಿ ಇಂಟರ್ನೆಟ್‍ನೊಂದಿಗೆ 117ನೆಯ ಸ್ಥಾನದಲ್ಲಿದೆ.

ಭಾರತವನ್ನು ವಿಶ್ವಗುರು ಮಾಡುತ್ತೇವೆ ಎಂದು ಆರ್ಥಿಕತೆ, ಹಸಿವು, ಕೊರನಾ ಸೇರಿದಂತೆ ಕೊನೆಗೆ ಇಂಟರ್ನೆಟ್‌ ಸ್ಪೀಡ್‌ನಲ್ಲೂ ಕಳಪೆ ಪ್ರದರ್ಶನ ನೀಡುತ್ತಿರುವುದಕ್ಕೆ ವಿಮರ್ಶಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಡಿಜಿಟಲ್ ಇಂಡಿಯಾ ಮಾಡುತ್ತೇವೆ ಎಂದು ಇಂಟರ್ನೆಟ್ ಬಳಕೆಯ ಸ್ವೀಡ್‌ನಲ್ಲಿ ಜಗತ್ತಿನಲ್ಲಿಯೇ ಅತ್ಯಂತ ಅಗ್ಗದ ಸ್ಪೀಡ್ ಹೊಂದಿರುವ ದೇಶವನ್ನಾಗಿ ಮಾಡಲಾಗಿದೆ. ಪ್ರತಿಯೊಂದನ್ನೂ ಆನ್ಲೈನ್ ಮಾಡುತ್ತೇವೆ ಎಂದು ಹೊರಟಿರುವ ಸರ್ಕಾರ ಭಾರತದ ವಾಸ್ತವವನ್ನು ಅರಿತಂತೆ ಕಾಣುತ್ತಿಲ್ಲ.

ಕೊರೊನಾ ಕಾರಣದಿಂದ ಆನ್ಲೈನ್ ತರಗತಿಗಳಿಗಾಗಿ ಪರದಾಡುತ್ತಿರುವ ಹಳ್ಳಿಯ ಮಕ್ಕಳನ್ನು ನೆನೆಸಿಕೊಂಡರೆ ನಮ್ಮ ಡಿಜಿಟಲ್ ಇಂಡಿಯಾದ ಕಲ್ಪನೆ ಕಣ್ಣಮುಂದೆ ಬರುತ್ತದೆ. ಎಷ್ಟೋ ಬಾರಿ ಸರ್ಕಾರಿ ಕಛೇರಿಗಳಲ್ಲಿಯೇ ಇಂಟರ್ನೆಟ್ ಸ್ಪೀಡ್ ಕಡಿಮೆಯಾಗಿ ಕಛೇರಿಯ ಕೆಲಸಗಳು ನಿಂತುಹೋಗಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಿರುವಾಗ ಎಲ್ಲವನ್ನೂ ಡಿಜಿಟಲ್ ಮಾಡುತ್ತೇವೆ ಎನ್ನುವ ಸರ್ಕಾರಕ್ಕೆ ವಾಸ್ತವದ ಅರಿವಿಲ್ಲ ಎಂದೇ ಹೇಳಬೇಕಿದೆ.


ಇದನ್ನೂ ಓದಿ: ಮೋಡಿಯ ಮಾಡಿದವರ ಪರಸಂಗ: ಡಿಜಿಟಲ್ ಕಾಲದಲ್ಲೊಂದು ತಾರತಮ್ಯದ ತಕರಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...