Homeಮುಖಪುಟಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ

- Advertisement -
- Advertisement -

ಭಾರತದಲ್ಲಿ ನಾವು ಬಳಸುವ ಇಂಟರ್ನೆಟ್ ಸ್ಪೀಡ್ ಜಗತ್ತಿನ ಉಳಿದ ದೇಶಗಳಿಗಿಂತ ಅತ್ಯಂತ ಕೆಳಮಟ್ಟದಲ್ಲಿದ್ದು, ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ ಎಂಬುದು ಅಧ್ಯಯನದ ವರದಿಯೊಂದರ ಫಲಿತಾಂಶದಿಂದ ತಿಳಿದುಬಂದಿದೆ.

ಮೊಬೈಲ್ ಇಂಟರ್ನೆಟ್/ಡಾಟಾ ಸ್ಪೀಡ್‍ನಲ್ಲಿ ಭಾರತಕ್ಕೆ ವಿಶ್ವದಲ್ಲಿ 131 ನೇ ಸ್ಥಾನ ಲಭಿಸಿದ್ದು, ಈ ಸಲದ Ranking ಗಣನೆಗೆ  ಒಟ್ಟು 138 ದೇಶಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ವರ್ಷ 145 ದೇಶಗಳ ಪೈಕಿ 128ನೇ ಸ್ಥಾನದಲ್ಲಿದ್ದ ಭಾರತ, ಅದಕ್ಕಿಂತ ಹಿಂದಿನ ವರ್ಷ 110 ನೇ ಸ್ಥಾನದಲ್ಲಿತ್ತು. ಸದ್ಯಕ್ಕೆ, ಶ್ರೀಲಂಕಾ, ಪಾಕೀಸ್ಥಾನ ಹಾಗೂ ನೇಪಾಳ ಕೂಡಾ ಭಾರತಕ್ಕಿಂತ ಮೇಲಿನ ಸ್ಥಾನಗಳನ್ನು ಪಡೆದಿವೆ ಎಂದು ಗೆಜೆಟ್ ನೌ ವರದಿ ಮಾಡಿದೆ.

ವಿಶ್ವದ ಸರಾಸರಿ ಡೌನ್‍ಲೋಡ್ ಸ್ಪೀಡ್ 35.26 Mbps (megabit per second) ಆಗಿದ್ದರೆ, ಭಾರತದ ಸರಾಸರಿ ಡೌನ್‍ಲೋಡ್ ಸ್ಪೀಡ್ 12.07 Mbps. ಇನ್ನು ಗಣನೆಗೆ ತೆಗೆದುಕೊಂಡಿರುವ ಎಲ್ಲಾ ದೇಶಗಳ ಸರಾಸರಿ ಅಪ್‍ಲೋಡ್ ಸ್ಪೀಡ್ 11.22 Mbps ಆಗಿದ್ದರೆ, ಭಾರತದ್ದು, 4.31 Mbps.

ಇದನ್ನೂ ಓದಿ: ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಇದನ್ನೂ ಓದಿ: ಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಮೊದಲನೆಯ ಸ್ಥಾನದಲ್ಲಿರುವ ದಕ್ಷಿಣ ಕೊರಿಯಾದ ಸರಾಸರಿ ಇಂಟರ್ನೆಟ್ ವೇಗ 121.00 Mbps. ಇದು ಭಾರತದ ಸರಾಸರಿ ಬ್ರಾಡ್‍ಬ್ಯಾಂಡ್ ಸ್ಪೀಡ್‍ 46.47 Mbps ಗಿಂತಾ ಸುಮಾರು ಎರಡೂವರೆ ಪಟ್ಟು ಹೆಚ್ಚು. ಶ್ರೀಲಂಕಾ 19.95 Mbps ಹೊಂದಿದ್ದು 102ನೆಯ ಸ್ಥಾನ ಪಡೆದಿದ್ದರೆ, ಪಾಕೀಸ್ಥಾನ 17.13 Mbps ಸ್ಪೀಡ್‍ನೊಂದಿಗೆ 116ನೆಯ ಸ್ಥಾನದಲ್ಲಿದೆ. ನೇಪಾಳ ಕೂಡಾ 17.12 Mbps ಸ್ಪೀಡ್ ಸರಸಾರಿ ಇಂಟರ್ನೆಟ್‍ನೊಂದಿಗೆ 117ನೆಯ ಸ್ಥಾನದಲ್ಲಿದೆ.

ಭಾರತವನ್ನು ವಿಶ್ವಗುರು ಮಾಡುತ್ತೇವೆ ಎಂದು ಆರ್ಥಿಕತೆ, ಹಸಿವು, ಕೊರನಾ ಸೇರಿದಂತೆ ಕೊನೆಗೆ ಇಂಟರ್ನೆಟ್‌ ಸ್ಪೀಡ್‌ನಲ್ಲೂ ಕಳಪೆ ಪ್ರದರ್ಶನ ನೀಡುತ್ತಿರುವುದಕ್ಕೆ ವಿಮರ್ಶಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಡಿಜಿಟಲ್ ಇಂಡಿಯಾ ಮಾಡುತ್ತೇವೆ ಎಂದು ಇಂಟರ್ನೆಟ್ ಬಳಕೆಯ ಸ್ವೀಡ್‌ನಲ್ಲಿ ಜಗತ್ತಿನಲ್ಲಿಯೇ ಅತ್ಯಂತ ಅಗ್ಗದ ಸ್ಪೀಡ್ ಹೊಂದಿರುವ ದೇಶವನ್ನಾಗಿ ಮಾಡಲಾಗಿದೆ. ಪ್ರತಿಯೊಂದನ್ನೂ ಆನ್ಲೈನ್ ಮಾಡುತ್ತೇವೆ ಎಂದು ಹೊರಟಿರುವ ಸರ್ಕಾರ ಭಾರತದ ವಾಸ್ತವವನ್ನು ಅರಿತಂತೆ ಕಾಣುತ್ತಿಲ್ಲ.

ಕೊರೊನಾ ಕಾರಣದಿಂದ ಆನ್ಲೈನ್ ತರಗತಿಗಳಿಗಾಗಿ ಪರದಾಡುತ್ತಿರುವ ಹಳ್ಳಿಯ ಮಕ್ಕಳನ್ನು ನೆನೆಸಿಕೊಂಡರೆ ನಮ್ಮ ಡಿಜಿಟಲ್ ಇಂಡಿಯಾದ ಕಲ್ಪನೆ ಕಣ್ಣಮುಂದೆ ಬರುತ್ತದೆ. ಎಷ್ಟೋ ಬಾರಿ ಸರ್ಕಾರಿ ಕಛೇರಿಗಳಲ್ಲಿಯೇ ಇಂಟರ್ನೆಟ್ ಸ್ಪೀಡ್ ಕಡಿಮೆಯಾಗಿ ಕಛೇರಿಯ ಕೆಲಸಗಳು ನಿಂತುಹೋಗಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಿರುವಾಗ ಎಲ್ಲವನ್ನೂ ಡಿಜಿಟಲ್ ಮಾಡುತ್ತೇವೆ ಎನ್ನುವ ಸರ್ಕಾರಕ್ಕೆ ವಾಸ್ತವದ ಅರಿವಿಲ್ಲ ಎಂದೇ ಹೇಳಬೇಕಿದೆ.


ಇದನ್ನೂ ಓದಿ: ಮೋಡಿಯ ಮಾಡಿದವರ ಪರಸಂಗ: ಡಿಜಿಟಲ್ ಕಾಲದಲ್ಲೊಂದು ತಾರತಮ್ಯದ ತಕರಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...