Homeಮುಖಪುಟಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ

- Advertisement -
- Advertisement -

ಭಾರತದಲ್ಲಿ ನಾವು ಬಳಸುವ ಇಂಟರ್ನೆಟ್ ಸ್ಪೀಡ್ ಜಗತ್ತಿನ ಉಳಿದ ದೇಶಗಳಿಗಿಂತ ಅತ್ಯಂತ ಕೆಳಮಟ್ಟದಲ್ಲಿದ್ದು, ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ ಎಂಬುದು ಅಧ್ಯಯನದ ವರದಿಯೊಂದರ ಫಲಿತಾಂಶದಿಂದ ತಿಳಿದುಬಂದಿದೆ.

ಮೊಬೈಲ್ ಇಂಟರ್ನೆಟ್/ಡಾಟಾ ಸ್ಪೀಡ್‍ನಲ್ಲಿ ಭಾರತಕ್ಕೆ ವಿಶ್ವದಲ್ಲಿ 131 ನೇ ಸ್ಥಾನ ಲಭಿಸಿದ್ದು, ಈ ಸಲದ Ranking ಗಣನೆಗೆ  ಒಟ್ಟು 138 ದೇಶಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ವರ್ಷ 145 ದೇಶಗಳ ಪೈಕಿ 128ನೇ ಸ್ಥಾನದಲ್ಲಿದ್ದ ಭಾರತ, ಅದಕ್ಕಿಂತ ಹಿಂದಿನ ವರ್ಷ 110 ನೇ ಸ್ಥಾನದಲ್ಲಿತ್ತು. ಸದ್ಯಕ್ಕೆ, ಶ್ರೀಲಂಕಾ, ಪಾಕೀಸ್ಥಾನ ಹಾಗೂ ನೇಪಾಳ ಕೂಡಾ ಭಾರತಕ್ಕಿಂತ ಮೇಲಿನ ಸ್ಥಾನಗಳನ್ನು ಪಡೆದಿವೆ ಎಂದು ಗೆಜೆಟ್ ನೌ ವರದಿ ಮಾಡಿದೆ.

ವಿಶ್ವದ ಸರಾಸರಿ ಡೌನ್‍ಲೋಡ್ ಸ್ಪೀಡ್ 35.26 Mbps (megabit per second) ಆಗಿದ್ದರೆ, ಭಾರತದ ಸರಾಸರಿ ಡೌನ್‍ಲೋಡ್ ಸ್ಪೀಡ್ 12.07 Mbps. ಇನ್ನು ಗಣನೆಗೆ ತೆಗೆದುಕೊಂಡಿರುವ ಎಲ್ಲಾ ದೇಶಗಳ ಸರಾಸರಿ ಅಪ್‍ಲೋಡ್ ಸ್ಪೀಡ್ 11.22 Mbps ಆಗಿದ್ದರೆ, ಭಾರತದ್ದು, 4.31 Mbps.

ಇದನ್ನೂ ಓದಿ: ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಇದನ್ನೂ ಓದಿ: ಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಮೊದಲನೆಯ ಸ್ಥಾನದಲ್ಲಿರುವ ದಕ್ಷಿಣ ಕೊರಿಯಾದ ಸರಾಸರಿ ಇಂಟರ್ನೆಟ್ ವೇಗ 121.00 Mbps. ಇದು ಭಾರತದ ಸರಾಸರಿ ಬ್ರಾಡ್‍ಬ್ಯಾಂಡ್ ಸ್ಪೀಡ್‍ 46.47 Mbps ಗಿಂತಾ ಸುಮಾರು ಎರಡೂವರೆ ಪಟ್ಟು ಹೆಚ್ಚು. ಶ್ರೀಲಂಕಾ 19.95 Mbps ಹೊಂದಿದ್ದು 102ನೆಯ ಸ್ಥಾನ ಪಡೆದಿದ್ದರೆ, ಪಾಕೀಸ್ಥಾನ 17.13 Mbps ಸ್ಪೀಡ್‍ನೊಂದಿಗೆ 116ನೆಯ ಸ್ಥಾನದಲ್ಲಿದೆ. ನೇಪಾಳ ಕೂಡಾ 17.12 Mbps ಸ್ಪೀಡ್ ಸರಸಾರಿ ಇಂಟರ್ನೆಟ್‍ನೊಂದಿಗೆ 117ನೆಯ ಸ್ಥಾನದಲ್ಲಿದೆ.

ಭಾರತವನ್ನು ವಿಶ್ವಗುರು ಮಾಡುತ್ತೇವೆ ಎಂದು ಆರ್ಥಿಕತೆ, ಹಸಿವು, ಕೊರನಾ ಸೇರಿದಂತೆ ಕೊನೆಗೆ ಇಂಟರ್ನೆಟ್‌ ಸ್ಪೀಡ್‌ನಲ್ಲೂ ಕಳಪೆ ಪ್ರದರ್ಶನ ನೀಡುತ್ತಿರುವುದಕ್ಕೆ ವಿಮರ್ಶಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಡಿಜಿಟಲ್ ಇಂಡಿಯಾ ಮಾಡುತ್ತೇವೆ ಎಂದು ಇಂಟರ್ನೆಟ್ ಬಳಕೆಯ ಸ್ವೀಡ್‌ನಲ್ಲಿ ಜಗತ್ತಿನಲ್ಲಿಯೇ ಅತ್ಯಂತ ಅಗ್ಗದ ಸ್ಪೀಡ್ ಹೊಂದಿರುವ ದೇಶವನ್ನಾಗಿ ಮಾಡಲಾಗಿದೆ. ಪ್ರತಿಯೊಂದನ್ನೂ ಆನ್ಲೈನ್ ಮಾಡುತ್ತೇವೆ ಎಂದು ಹೊರಟಿರುವ ಸರ್ಕಾರ ಭಾರತದ ವಾಸ್ತವವನ್ನು ಅರಿತಂತೆ ಕಾಣುತ್ತಿಲ್ಲ.

ಕೊರೊನಾ ಕಾರಣದಿಂದ ಆನ್ಲೈನ್ ತರಗತಿಗಳಿಗಾಗಿ ಪರದಾಡುತ್ತಿರುವ ಹಳ್ಳಿಯ ಮಕ್ಕಳನ್ನು ನೆನೆಸಿಕೊಂಡರೆ ನಮ್ಮ ಡಿಜಿಟಲ್ ಇಂಡಿಯಾದ ಕಲ್ಪನೆ ಕಣ್ಣಮುಂದೆ ಬರುತ್ತದೆ. ಎಷ್ಟೋ ಬಾರಿ ಸರ್ಕಾರಿ ಕಛೇರಿಗಳಲ್ಲಿಯೇ ಇಂಟರ್ನೆಟ್ ಸ್ಪೀಡ್ ಕಡಿಮೆಯಾಗಿ ಕಛೇರಿಯ ಕೆಲಸಗಳು ನಿಂತುಹೋಗಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಿರುವಾಗ ಎಲ್ಲವನ್ನೂ ಡಿಜಿಟಲ್ ಮಾಡುತ್ತೇವೆ ಎನ್ನುವ ಸರ್ಕಾರಕ್ಕೆ ವಾಸ್ತವದ ಅರಿವಿಲ್ಲ ಎಂದೇ ಹೇಳಬೇಕಿದೆ.


ಇದನ್ನೂ ಓದಿ: ಮೋಡಿಯ ಮಾಡಿದವರ ಪರಸಂಗ: ಡಿಜಿಟಲ್ ಕಾಲದಲ್ಲೊಂದು ತಾರತಮ್ಯದ ತಕರಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...