Homeಮುಖಪುಟಚೀನಾ ನಮ್ಮ ಭೂಪ್ರದೇಶವನ್ನು ವಶಪಡಿಸಿಕೊಂಡಿದೆ ಎಂಬುದು ಸ್ಪಷ್ಟ: ಮೋಹನ್ ಭಾಗವತ್

ಚೀನಾ ನಮ್ಮ ಭೂಪ್ರದೇಶವನ್ನು ವಶಪಡಿಸಿಕೊಂಡಿದೆ ಎಂಬುದು ಸ್ಪಷ್ಟ: ಮೋಹನ್ ಭಾಗವತ್

ಈಗಲೂ ಚೀನಾ ದೇಶವು ತನ್ನ ವಿಸ್ತರಣೆಯನ್ನು ಮುಂದುವರೆಸುತ್ತಿದೆ. ಹಲವು ದೇಶಗಳು ಅದರ ಪರ ಇವೆ. ಇಂತಹ ಸಂದರ್ಭದಲ್ಲಿ ಭಾರತವು ಶಕ್ತಿ ಮತ್ತು ವ್ಯಾಪ್ತಿಯಲ್ಲಿ ಚೀನಾವನ್ನು ಮೀರಿಸಬೇಕಾಗಿದೆ.

- Advertisement -
- Advertisement -

ಸಾಂಕ್ರಾಮಿಕ ಸಮಯದಲ್ಲಿ ಚೀನಾ ನಮ್ಮ ಭೂಪ್ರದೇಶವನ್ನು ವಶಪಡಿಸಿಕೊಂಡಿದೆ ಎಂಬುದು ಸ್ಪಷ್ಟ. ಅದು ಈಗಲೂ ವಿಸ್ತರಣೆಯಲ್ಲಿ ತೊಡಗಿದೆ. ಚೀನಾದ ವಿಸ್ತರಣೆಗೆ ಭಾರತದ ಪ್ರತಿಕ್ರಿಯೆಯು ಅದನ್ನು ತಬ್ಬಿಬ್ಬುಗೊಳಿಸಿದೆ. ಚೀನಾದಾ ವಿಸ್ತರಣಾವಾದಿ ನೀತಿಯನ್ನು ಇಡೀ ಪ್ರಪಂಚವೇ ನೋಡಿದೆ. ಈಗ ಅದು ತೈವಾನ್ ಮತ್ತು ವಿಯೆಟ್ನಾಂ ಮೇಲೆ ದಾಳಿ ಮಾಡುತ್ತಿದೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ.

ಈಗಲೂ ಚೀನಾ ದೇಶವು ತನ್ನ ವಿಸ್ತರಣೆಯನ್ನು ಮುಂದುವರೆಸುತ್ತಿದೆ. ಹಲವು ದೇಶಗಳು ಅದರ ಪರ ಇವೆ. ಇಂತಹ ಸಂದರ್ಭದಲ್ಲಿ ಭಾರತವು ಶಕ್ತಿ ಮತ್ತು ವ್ಯಾಪ್ತಿಯಲ್ಲಿ ಚೀನಾವನ್ನು ಮೀರಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

ವಿಜಯದಶಮಿ ಪ್ರಯುಕ್ತ ದಸರಾ ಭಾಷಣದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷ ವಿಧಿ 370ನ್ನು ರದ್ದುಗೊಳಿಸಲಾಯಿತು. ನಂತರ ರಾಮಮಂದಿರದ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ಬಂದಿತ್ತು. ಸಿಎಎ ಕಾನೂನು ಜಾರಿಗೊಳಿಸಲಾಗಿತ್ತು. ಹಲವು ಅಭಿವೃದ್ದಿಗಳನ್ನು ಸಾಧಿಸಿದ್ದೇವು. ಆದರೆ ಕೊರೊನಾ ಸಾಂಕ್ರಾಮಿಕ ಅವೆಲ್ಲವನ್ನು ಅಳಿಸಿಹಾಕಿಬಿಟ್ಟಿತು ಎಂದರು.

ನಾವು ಎಲ್ಲರೊಂದಿಗೆ ಸ್ನೇಹದಿಂದ ಇದ್ದೇವೆ. ಇದು ನಮ್ಮ ಸ್ವಭಾವ. ಈ ನಮ್ಮ ನಡೆಯನ್ನು ದೌರ್ಬಲ್ಯ ಎಂದು ಭಾವಿಸಿ ಚೀನಾ ನಮ್ಮ ಮೇಲೆ ದಾಳಿ ಮಾಡುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಹಾಗಾಗಿ ನಾವು ಶಕ್ತಿ ಮತ್ತು ವ್ಯಾಪ್ತಿಯಲ್ಲಿ ಚೀನಾವನ್ನು ಮೀರಿಸಿ ಬೆಳೆಯಬೇಕಾಗಿದೆ. ನೆರೆ ಹೊರೆಯ ದೇಶಗಳೊಂದಿಗೆ ಸ್ನೇಹ ಸಂಪಾದಿಸಬೇಕಾಗಿದೆ ಎಂದು ಹೇಳಿದ್ದಾರೆ.

ಸಿಎಎ ಯಾವುದೇ ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ವಿರೋಧಿಸುವುದಿಲ್ಲ. ಆದರೆ ಕೆಲವರು ಇದು ಮುಸ್ಲಿಂ ಸಮುದಾಯದ ವಿರುದ್ಧವಿದೆ ಎಂಬ ಸುಳ್ಳು ಕಲ್ಪನೆಯನ್ನು ಪ್ರಚಾರ ಮಾಡುವ ಮೂಲಕ ನಮ್ಮ ಮುಸ್ಲಿಂ ಸಹೋದರರನ್ನು ದಾರಿ ತಪ್ಪಿಸಿದರು. ಸಿಎಎ ಬಳಸಿ, ಅವಕಾಶವಾದಿಗಳು ಪ್ರತಿಭಟನೆಯ ಹೆಸರಿನಲ್ಲಿ ಸಂಘಟಿತ ಹಿಂಸಾಚಾರವನ್ನು ಬಿಚ್ಚಿಟ್ಟರು. ಸಿಎಎ ವಿರೋಧಿ ಪ್ರತಿಭಟನೆಗಳನ್ನು ಪುನರುಜ್ಜೀವನಗೊಳಿಸುವ ಪ್ರಯತ್ನಗಳು ಇನ್ನೂ ಮುಂದುವರೆದಿದೆ ಎಂದಿದ್ದಾರೆ.

ಭಾಗವತ್ ಹೇಳಿಕೆ ಬೆನ್ನಲ್ಲೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಜೆಪಿ, ಆರ್‌ಎಸ್‌ಎಸ್‌ ಮೇಲೆ ವಾಗ್ದಾಳಿ ನಡೆಸಿದ್ದಾರೆ. “ಬಹಳ ಆಳವಾಗಿ ಮೋಹನ್ ಭಾಗವತ್ ಸತ್ಯವನ್ನು ಅರ್ಥ ಮಾಡಿಕೊಂಡಿದ್ದಾರೆ. ಆದರೆ ಅವರಿಗೆ ಅದನ್ನು ಎದುರಿಸಲು ಭಯವಾಗುತ್ತಿದೆ. ಸತ್ಯವೆಂದರೆ ಚೀನಾ ನಮ್ಮ ಭೂಪ್ರದೇಶವನ್ನು ಆಕ್ರಮಿಸಿಕೊಂಡಿದೆ ಮತ್ತು ಮೋದಿ ಹಾಗೂ ಆರ್‌ಎಸ್‌ಎಸ್‌ ಅದಕ್ಕೆ ಅವಕಾಶ ನೀಡಿವೆ” ಎಂದು ಟ್ವೀಟ್‌ ಮಾಡಿದ್ದಾರೆ.

ಚೀನಾ ಭಾರತದ ಒಂದಿಂಚು ಭೂಮಿಯನ್ನು ವಶಪಡಿಸಿಕೊಂಡಿಲ್ಲ ಎಂಬ ಪ್ರಧಾನಿ ಮೋದಿಯವರ ಹೇಳಿಕೆಯನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, ಮೋಹನ್ ಭಾಗವತ್ ಚೀನಾ ನಮ್ಮ ಭೂಮಿ ವಶಪಡಿಸಿಕೊಂಡಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.


ಇದನ್ನೂ ಓದಿ: ಚೀನಾ ಯಾವುದೇ ಭಾರತೀಯ ಭೂಪ್ರದೇಶ ವಶಪಡಿಸಿಕೊಂಡಿಲ್ಲ, ಗಡಿಯೊಳಗೆ ಕಾಲಿಟ್ಟಿಲ್ಲ: ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...